AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ 263 ಕೋಟಿ ಕಲೆಕ್ಷನ್ ಮಾಡಿದ ‘ಸ್ಪೈಡರ್​ ಮ್ಯಾನ್​’ ಒಟಿಟಿಗೆ ಬರೋದು ಯಾವಾಗ? ಇಲ್ಲಿದೆ ಉತ್ತರ

‘ಸ್ಪೈಡರ್​ ಮ್ಯಾನ್: ನೋ ವೇ ಹೋಮ್​’ ಚಿತ್ರ ಈ ಸರಣಿಯ ಫೇವರಿಟ್​ ಸಿನಿಮಾ ಎಂದು ಮೆಚ್ಚುಗೆಯ ಮಾತುಗಳನ್ನು ಆಡುತ್ತಿದ್ದಾರೆ. ಈ ಚಿತ್ರಕ್ಕೆ ಎಲ್ಲ ಕಡೆಗಳಿಂದ ಅದ್ಭುತ ಪ್ರತಿಕ್ರಿಯೆ ಸಿಗುತ್ತಿದೆ. ಹೀಗಾಗಿ, ಈ ಸಿನಿಮಾ ಈವರೆಗೆ 263 ಕೋಟಿ ರೂಪಾಯಿ ಬಾಚಿಕೊಂಡಿದೆ.

ಭಾರತದಲ್ಲಿ 263 ಕೋಟಿ ಕಲೆಕ್ಷನ್ ಮಾಡಿದ ‘ಸ್ಪೈಡರ್​ ಮ್ಯಾನ್​’ ಒಟಿಟಿಗೆ ಬರೋದು ಯಾವಾಗ? ಇಲ್ಲಿದೆ ಉತ್ತರ
ಸ್ಪೈಡರ್​ ಮ್ಯಾನ್​
TV9 Web
| Edited By: |

Updated on: Jan 09, 2022 | 6:06 PM

Share

ಟಾಮ್ ಹಾಲೆಂಡ್ (Tom Holland)​ ನಟನೆಯ ‘ಸ್ಪೈಡರ್​ ಮ್ಯಾನ್​’ (Spider Man) ಸರಣಿಯ ಹೊಸ ಸಿನಿಮಾ ‘ಸ್ಪೈಡರ್​ ಮ್ಯಾನ್: ನೋ ವೇ ಹೋಮ್​’ (Spider-Man: No Way Home) ಡಿಸೆಂಬರ್​ 16ರಂದು ಬಿಡುಗಡೆಯಾಗಿ ಬಾಕ್ಸ್​ಆಫೀಸ್​ನಲ್ಲಿ ಒಳ್ಳೆಯ ಕಲೆಕ್ಷನ್​ ಮಾಡುತ್ತಿದೆ. ಈ ಸಿನಿಮಾ ಈಗಾಗಲೇ ಭಾರತದಲ್ಲಿ 263 ಕೋಟಿ ರೂಪಾಯಿ ಗಳಿಸಿದೆ. ಈ ಸಿನಿಮಾವನ್ನು ಶೀಘ್ರದಲ್ಲೇ ಒಟಿಟಿಯಲ್ಲಿ ನೋಡಬೇಕು ಎಂದು ಕಾದು ಕೂತಿದ್ದವರಿಗೆ ನಿರಾಸೆ ಆಗಿದೆ. ಒಟಿಟಿ ರಿಲೀಸ್​ ಬಗ್ಗೆ ಚಿತ್ರತಂಡದವರು ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

‘ಸ್ಪೈಡರ್​ ಮ್ಯಾನ್: ನೋ ವೇ ಹೋಮ್​’ ಚಿತ್ರ ಈ ಸರಣಿಯ ಫೇವರಿಟ್​ ಸಿನಿಮಾ ಎಂದು ಮೆಚ್ಚುಗೆಯ ಮಾತುಗಳನ್ನು ಆಡುತ್ತಿದ್ದಾರೆ. ಈ ಚಿತ್ರಕ್ಕೆ ಎಲ್ಲ ಕಡೆಗಳಿಂದ ಅದ್ಭುತ ಪ್ರತಿಕ್ರಿಯೆ ಸಿಗುತ್ತಿದೆ. ಹೀಗಾಗಿ, ಈ ಸಿನಿಮಾ ಈವರೆಗೆ 263 ಕೋಟಿ ರೂಪಾಯಿ ಬಾಚಿಕೊಂಡಿದೆ. ಈಗ ಕೊವಿಡ್​ ಹೆಚ್ಚುತ್ತಿರುವ ಕಾರಣ ಯಾರೂ ಅಷ್ಟಾಗಿ ಚಿತ್ರಮಂದಿರದತ್ತ ಮುಖ ಮಾಡುತ್ತಿಲ್ಲ. ದೇಶದ ಬಹುತೇಕ ಚಿತ್ರಮಂದಿರಗಳಲ್ಲಿ ಶೇ.50 ಆಸನ ವ್ಯವಸ್ಥೆ ನಿಯಮ ಜಾರಿಗೆ ಬಂದಿದೆ. ಈ ಕಾರಣಕ್ಕೆ ಈ ಸಿನಿಮಾ ಶೀಘ್ರವೇ ಒಟಿಟಿಯಲ್ಲಿ ಬರಬಹುದು ಎಂದು ಭಾವಿಸಲಾಗಿತ್ತು. ಆದರೆ, ಅದು ಸುಳ್ಳಾಗಿದೆ.

ಮುಂದಿನ ಎರಡು ತಿಂಗಳಕಾಲ ಈ ಸಿನಿಮಾ ಪ್ರದರ್ಶನ ಕಾಣಲಿದೆ. ಚಿತ್ರ ನೋಡೋಕೆ ಈಗಲೂ ಜನರು ಬರುತ್ತಿದ್ದಾರೆ. ಹೀಗಾಗಿ, ಮಲ್ಟಿಪ್ಲೆಕ್ಸ್​ಗಳು ಈ ಸಿನಿಮಾವನ್ನು ಮುಂದಿನ ಎರಡು ತಿಂಗಳು ಪ್ರದರ್ಶನ ಮಾಡಲು ನಿರ್ಧರಿಸಿವೆ. ಆ ಬಳಿಕವೇ ಚಿತ್ರ ಒಟಿಟಿಗೆ ಕಾಲಿಡಲಿದೆ. ಹೀಗಾಗಿ, ಇನ್ನೂ ಕೆಲವು ಸಮಯ ಈ ಚಿತ್ರಕ್ಕಾಗಿ ಕಾಯಬೇಕು.

ವಿಶ್ವಾದ್ಯಂತ ಮತ್ತೆ ಕೊವಿಡ್​ ಭಯ ಕಾಡುತ್ತಿದೆ. ನಿಧಾನವಾಗಿ ಕೊವಿಡ್​ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದರಿಂದ ಸಾಕಷ್ಟು ಕಡೆಗಳಲ್ಲಿ ಚಿತ್ರಮಂದಿರಗಳನ್ನು ಮುಚ್ಚಲಾಗಿದೆ. ಕೆಲ ರಾಷ್ಟ್ರಗಳಲ್ಲಿ ರಾತ್ರಿ ಕರ್ಫ್ಯೂ ಹೇರಲಾಗಿದೆ. ಈ ಎಲ್ಲಾ ಕಾರಣಗಳಿಂದ ಈ ಚಿತ್ರಕ್ಕೆ ಕೊಂಚ ಹಿನ್ನಡೆ ಆಗಿದೆ. ಆದಾಗ್ಯೂ, ಸಿನಿಮಾ ಉತ್ತಮ ಗಳಿಕೆ ಮಾಡುತ್ತಿದೆ. ಈ ಚಿತ್ರ ವಿಶ್ವಾದ್ಯಂತ 10,361 ಕೋಟಿ ಕಲೆಕ್ಷನ್​ ಮಾಡಿದೆ.

ಇದನ್ನೂ ಓದಿ: ಭಾರತೀಯ ಬಾಕ್ಸಾಫೀಸ್​​ನಲ್ಲಿ ಹೊಸ ಮೈಲಿಗಲ್ಲು ಮುಟ್ಟಿದ ‘ಸ್ಪೈಡರ್​ಮ್ಯಾನ್ ನೋ ವೇ ಹೋಮ್’; ವಿಶ್ವದಾದ್ಯಂತ ಕಲೆಕ್ಷನ್ ಎಷ್ಟು ಗೊತ್ತಾ? 

Yash: ಯಶ್​ ಇಂಗ್ಲಿಷ್​ನಲ್ಲಿ ಟ್ವೀಟ್​ ಮಾಡಿದ್ದಕ್ಕೆ ಟ್ರೋಲ್; ಸರಿಯಾಗಿ ಉತ್ತರ ಕೊಟ್ಟ ಅಭಿಮಾನಿಗಳು

 

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್