AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajamouli: ‘ಸ್ಟಾರ್​ ವಾರ್ಸ್​’ ನಿರ್ದೇಶಕನ ಭೇಟಿ ಆದ ರಾಜಮೌಳಿ; ಹಾಲಿವುಡ್​ ಅಂಗಳದಲ್ಲೂ ಭರ್ಜರಿ ಹವಾ

Governors Awards | SS Rajamouli: ದಿಗ್ಗಜ ನಿರ್ದೇಶಕ ಜೆಜೆ ಎಬ್ರಮ್ಸ್​ ಜೊತೆ ರಾಜಮೌಳಿ ಅವರು ನಗುನಗುತ್ತ ಪೋಸ್​ ನೀಡಿದ್ದಾರೆ. ಅಭಿಮಾನಿಗಳ ವಲಯದಲ್ಲಿ ಈ ಫೋಟೋ ಸಖತ್​ ವೈರಲ್​ ಆಗಿದೆ.

Rajamouli: ‘ಸ್ಟಾರ್​ ವಾರ್ಸ್​’ ನಿರ್ದೇಶಕನ ಭೇಟಿ ಆದ ರಾಜಮೌಳಿ; ಹಾಲಿವುಡ್​ ಅಂಗಳದಲ್ಲೂ ಭರ್ಜರಿ ಹವಾ
ರಾಜಮೌಳಿ, ಜೆಜೆ ಎಬ್ರಮ್ಸ್
TV9 Web
| Edited By: |

Updated on:Nov 21, 2022 | 2:44 PM

Share

ನಿರ್ದೇಶಕ ಎಸ್​.ಎಸ್.​ ರಾಜಮೌಳಿ (SS Rajamouli) ಅವರು ವಿಶ್ವಾದ್ಯಂತ ಕೀರ್ತಿ ಗಳಿಸಿದ್ದಾರೆ. ತಾಂತ್ರಿಕವಾಗಿ ಶ್ರೀಮಂತವಾಗಿರುವ ಸಿನಿಮಾಗಳನ್ನು ಮಾಡುವ ಮೂಲಕ ಅವರು ಸಾಕಷ್ಟು ಜನಪ್ರಿಯತೆ ಪಡೆದಿದ್ದಾರೆ. ಹಾಲಿವುಡ್​ ಮಂದಿಗೂ ರಾಜಮೌಳಿ ಅವರ ಸಾಮರ್ಥ್ಯ ಏನು ಎಂಬುದು ತಿಳಿದಿದೆ. ಸದ್ಯ ರಾಜಮೌಳಿ ವಿದೇಶಿ ಪ್ರವಾಸದಲ್ಲಿ ಇದ್ದಾರೆ. ಆಸ್ಕರ್​ ಪ್ರಶಸ್ತಿಯ ಒಂದು ಭಾಗವಾಗಿರುವ ‘ಗವರ್ನರ್ಸ್​ ಅವಾರ್ಡ್ಸ್​’ (Governors Awards) ಸಮಾರಂಭದಲ್ಲಿ ಅವರು ಭಾಗಿ ಆಗಿದ್ದಾರೆ. ಈ ವೇಳೆ ಅವರು ಖ್ಯಾತ ಹಾಲಿವುಡ್​ ನಿರ್ದೇಶಕ ಜೆಜೆ ಎಬ್ರಮ್ಸ್​ (JJ Abrams) ಜೊತೆ ಫೋಟೋಗೆ ಪೋಸ್​ ನೀಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಈ ಫೋಟೋ ವೈರಲ್​ ಆಗಿದೆ. ರಾಜಮೌಳಿ ಅವರ ಬಗ್ಗೆ ಅಭಿಮಾನಿಗಳಿಗೆ ಇನ್ನಷ್ಟು ಹೆಮ್ಮೆ ಎನಿಸುತ್ತಿದೆ. ‘ಆರ್​ಆರ್​ಆರ್’ ಚಿತ್ರದ ಗೆಲುವಿನ ಬಳಿಕ ಈ ಸ್ಟಾರ್​ ನಿರ್ದೇಶಕನ ಚಾರ್ಮ್​ ಹೆಚ್ಚಿದೆ.

ಜೆಜೆ ಎಬ್ರಮ್ಸ್​ ಅವರು ಹಾಲಿವುಡ್​ನಲ್ಲಿ ಸೂಪರ್​ ಹಿಟ್​ ಸಿನಿಮಾಗಳ ಮೂಲಕ ಹೆಸರು ಮಾಡಿದ್ದಾರೆ. ‘ಮಿಷನ್​ ಇಂಪಾಸಿಬಲ್​ 3’ ಹಾಗೂ ‘ಸ್ಟಾರ್​ ವಾರ್ಸ್​’ ಸರಣಿ ಸಿನಿಮಾಗಳ ಮೂಲಕ ಅವರು ಜಗತ್ತಿನಾದ್ಯಂತ ಅಭಿಮಾನಿಗಳನ್ನು ಹೊಂದಿದ್ದಾರೆ. ದಿಗ್ಗಜ ನಿರ್ದೇಶಕನ ಜೊತೆಗೆ ರಾಜಮೌಳಿ ಅವರು ನಗುನಗುತ್ತ ಪೋಸ್​ ನೀಡಿದ್ದಾರೆ. ಈ ಫೋಟೋವನ್ನು ‘ಆರ್​ಆರ್​ಆರ್​’ ಸಿನಿಮಾದ ಅಧಿಕೃತ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ
Image
‘ಆರ್​ಆರ್​ಆರ್​’ ಸಿನಿಮಾ ಹೊಸ ದಾಖಲೆ; ಹಾಲಿವುಡ್ ಅವಾರ್ಡ್​ ಕಾರ್ಯಕ್ರಮದಲ್ಲಿ ರನ್ನರ್ ಅಪ್ ಆದ ರಾಜಮೌಳಿ ಚಿತ್ರ
Image
ಪವನ್​​ ಕಲ್ಯಾಣ್​ ಜತೆ ಸಿನಿಮಾ ಮಾಡಲಿದ್ದಾರೆ ರಾಜಮೌಳಿ; ಸೆಟ್ಟೇರೋದು ಯಾವಾಗ?
Image
ರಾಜಮೌಳಿ ಜತೆ ಕೆಲಸ ಮಾಡಿದ್ದಕ್ಕೆ ರಾಮ್​ಚರಣ್ ಹೊಸ​ ಚಿತ್ರಕ್ಕೆ ಸೋಲು?; ಆತಂಕದಲ್ಲಿ ಜ್ಯೂ.ಎನ್​ಟಿಆರ್​ ಫ್ಯಾನ್ಸ್
Image
‘ಆರ್​ಆರ್​ಆರ್​’ ನಿರ್ದೇಶಕ ರಾಜಮೌಳಿ ಮನೆಗೆ ಬಂತು ಹೊಸ ಕಾರು; ಇದರ ಬೆಲೆ ಎಷ್ಟು?

‘ಆರ್​ಆರ್​ಆರ್​’ ಸಿನಿಮಾದಲ್ಲಿ ರಾಮ್​ ಚರಣ್​ ಮತ್ತು ಜೂನಿಯರ್​ ಎನ್​ಟಿಆರ್​ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ಭಾರತದ ಬಾಕ್ಸ್​ ಆಫೀಸ್​ನಲ್ಲಿ ಧೂಳೆಬ್ಬಿಸಿದ ಈ ಸಿನಿಮಾ, ವಿದೇಶದಲ್ಲೂ ಬಹುಕೋಟಿ ರೂಪಾಯಿ ಕಲೆಕ್ಷನ್​ ಮಾಡಿತು. ಈಗ ಆಸ್ಕರ್​ ಕಣದಲ್ಲಿ ಸ್ಪರ್ಧಿಸಲು ಸಕಲ ಪ್ರಯತ್ನ ಮಾಡುತ್ತಿದೆ. ಭಾರತದಿಂದ ಅಧಿಕೃತವಾಗಿ ಆಸ್ಕರ್​ ಸ್ಪರ್ಧೆಗೆ ಆಯ್ಕೆ ಆಗದಿದ್ದರೂ ಕೂಡ ಬೇರೆ ಮಾರ್ಗದ ಮೂಲಕ ಈ ಚಿತ್ರ ಪೈಪೋಟಿ ನೀಡುವ ಪ್ರಯತ್ನದಲ್ಲಿದೆ.

‘For Your Consideration’ ಎಂಬ ಕ್ಯಾಂಪೇನ್​ ಮೂಲಕ ‘ಆರ್​ಆರ್​ಆರ್​’ ಸಿನಿಮಾವನ್ನು ಆಸ್ಕರ್​ ಕಣಕ್ಕೆ ಕಳಿಸಲು ಪ್ರಯತ್ನ ನಡೆದಿದೆ. ಆಸ್ಕರ್​ ಕಮಿಟಿಯ ಗಮನ ಸೆಳೆಯಲು ಈ ಕ್ಯಾಂಪೇನ್​ ​ಮಾಡಲಾಗುತ್ತದೆ. ಇದಕ್ಕೆ ಬಹುಕೋಟಿ ರೂಪಾಯಿ ಹಣ ಖರ್ಚಾಗುತ್ತದೆ. ಎಲ್ಲ ಸಿನಿಮಾಗಳಿಗೂ ಈ ಪರಿ ಹಣ ಖರ್ಚು ಮಾಡಲು ಸಾಧ್ಯವಾಗುವುದಿಲ್ಲ. ಆದರೆ ‘ಆರ್​ಆರ್​ಆರ್​’ ನಿರ್ಮಾಪಕರು ಸಾಕಷ್ಟು ಲಾಭ ಕಂಡಿರುವುದರಿಂದ ಈ ಕ್ಯಾಂಪೇನ್​ಗೆ ಖರ್ಚು ಮಾಡುತ್ತಿದ್ದಾರೆ.

ಅತ್ಯುತ್ತಮ ಸಿನಿಮಾ, ಅತ್ಯುತ್ತಮ ನಟ-ನಟಿ, ಅತ್ಯುತ್ತಮ ಪೋಷಕ ಕಲಾವಿದರು, ಅತ್ಯುತ್ತಮ ಚಿತ್ರಕಥೆ, ಅತ್ಯುತ್ತಮ ಹಾಡು ಮುಂತಾದ ವಿಭಾಗಗಳಲ್ಲಿ ನಾಮನಿರ್ದೇಶನಗೊಳ್ಳಲು ‘ಆರ್​ಆರ್​ಆರ್​’ ಚಿತ್ರ ಪ್ರಯತ್ನಿಸುತ್ತಿದೆ. ಹೀಗೆ ಸ್ವತಂತ್ರವಾಗಿ ಆಸ್ಕರ್​ಗೆ ಎಂಟ್ರಿ ನೀಡುವ ಸಾಹಸಕ್ಕೆ ಮುಂದಾಗಿದೆ.

​ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:44 pm, Mon, 21 November 22

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು