AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

The Batman: ಆಕ್ಷನ್ ಪ್ರಿಯರ ಮನಸೆಳೆಯುತ್ತಿದೆ ‘ದಿ ಬ್ಯಾಟ್​ಮ್ಯಾನ್’ ಟ್ರೈಲರ್; ಚಿತ್ರದ ಬಿಡುಗಡೆ ಯಾವಾಗ?

The Batman Trailer: ಹಾಲಿವುಡ್​ನ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ‘ದಿ ಬ್ಯಾಟ್​ಮ್ಯಾನ್’ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಇದರೊಂದಿಗೆ ಚಿತ್ರದ ಬಿಡುಗಡೆ ದಿನಾಂಕವನ್ನೂ ಘೋಷಿಸಲಾಗಿದೆ.

The Batman: ಆಕ್ಷನ್ ಪ್ರಿಯರ ಮನಸೆಳೆಯುತ್ತಿದೆ ‘ದಿ ಬ್ಯಾಟ್​ಮ್ಯಾನ್’ ಟ್ರೈಲರ್; ಚಿತ್ರದ ಬಿಡುಗಡೆ ಯಾವಾಗ?
‘ದಿ ಬ್ಯಾಟ್​​ಮ್ಯಾನ್’ ಚಿತ್ರದ ಒಂದು ದೃಶ್ಯ
TV9 Web
| Edited By: |

Updated on: Oct 17, 2021 | 10:45 PM

Share

ಬಹಳಷ್ಟು ಜನ ಹಾಲಿವುಡ್ ಸಿನಿಮಾ ಪ್ರೇಮಿಗಳಿಗೆ ಕ್ರಿಸ್ಟಫರ್ ನೋಲಾನ್ ನಿರ್ದೇಶನದ ‘ಬ್ಯಾಟ್​ಮ್ಯಾನ್’ ಸೀರೀಸ್​ ಬಹಳ ಪ್ರಿಯವಾದ ಚಿತ್ರ ಸರಣಿಯಾಗಿದೆ. ಆ ಸರಣಿಗಳಲ್ಲಿ ಕ್ರಿಶ್ಚಿಯನ್ ಬೇಲ್ ಬ್ಯಾಟ್​ಮ್ಯಾನ್ ಪಾತ್ರ ನಿರ್ವಹಿಸಿದ್ದರು. ಪ್ರಸ್ತುತ ‘ದಿ ಬ್ಯಾಟ್​​ಮ್ಯಾನ್’ ಟ್ರೈಲರ್ ಬಿಡುಗಡೆಯಾಗಿದ್ದು, ಅದರಲ್ಲಿ ರಾಬರ್ಟ್ ಪ್ಯಾಟಿನ್​ಸನ್ ಬ್ಯಾಟ್​ಮ್ಯಾನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮೈ ನವಿರೇಳಿಸುವ ಆಕ್ಷನ್ ಚಿತ್ರದ ಸೂಚನೆಯನ್ನು ಟ್ರೈಲರ್ ನೀಡಿದ್ದು, ಹಾಲಿವುಡ್ ಪ್ರೇಮಿಗಳಿಗೆ ಭರ್ಜರಿ ಮನರಂಜನೆಯ ಸೂಚನೆ ನೀಡಿದೆ.

‘ದಿ ಬ್ಯಾಟ್​ಮ್ಯಾನ್’ ಚಿತ್ರವನ್ನು 2022ರ ಮಾರ್ಚ್​ನಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ನಿರ್ಮಾಣ ಸಂಸ್ಥೆ ತಿಳಿಸಿದೆ. ಈ ಚಿತ್ರದಲ್ಲಿ ಕತೆಯ ಹಿನ್ನೆಲೆ ಬೇರೆ ಇರಲಿದೆ ಎಂದು ಈ ಹಿಂದೆ ತಿಳಿಸಲಾಗಿತ್ತು. ಅದರ ಸೂಚನೆ ಟ್ರೈಲರ್​ನಲ್ಲಿ ಸಿಕ್ಕಿದೆ. ಬ್ಯಾಟ್​ಮ್ಯಾನ್​ಗೆ ತನ್ನ ಕೋಪದ ಮೇಲೆ ಹಿಡಿತವಿರುವುದಿಲ್ಲ. ಇದೊಂದು ವಿಭಿನ್ನವಾದ ಪಾತ್ರ ಎಂದು ರಾಬರ್ಟ್ ಈ ಹಿಂದೆ ತಿಳಿಸಿದ್ದರು.

‘ದಿ ಬ್ಯಾಟ್​ಮ್ಯಾನ್’ ಚಿತ್ರದ ಟ್ರೈಲರ್ ಇಲ್ಲಿದೆ:

‘ದಿ ಬ್ಯಾಟ್​ಮ್ಯಾನ್’ ಚಿತ್ರವನ್ನು ಮ್ಯಾಟ್ ರೀವ್ಸ್ ನಿರ್ದೇಶನ ಮಾಡಿದ್ದಾರೆ. ಕಳೆದ ವರ್ಷ ಚಿತ್ರದ ಮೊದಲ ಟೀಸರ್ ಬಿಡುಗಡೆ ಮಾಡಲಾಗಿತ್ತು. ಈ ವರ್ಷ ಚಿತ್ರದ ಬಿಡುಗಡೆಗೂ ಚಿತ್ರತಂಡ ಯೋಜನೆ ರೂಪಿಸಿತ್ತು. ಆದರೆ ಕೊರೊನಾ ಎರಡನೇ ಅಲೆಯ ಕಾರಣ, ಬಿಡುಗಡೆ ಮುಂದೂಡಲ್ಪಟ್ಟಿತ್ತು. ಇದೀಗ ಮುಂದಿನ ವರ್ಷದ ಮಾರ್ಚ್​ನಲ್ಲಿ ಚಿತ್ರವನ್ನು ಬಿಡುಗಡೆಗೊಳಿಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

ಇದನ್ನೂ ಓದಿ:

Yuvraj Singh arrested: ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಬಂಧನ

Vicky Kaushal: ಕತ್ರೀನಾ ಜೊತೆಗಿನ ಎಂಗೇಜ್​ಮೆಂಟ್ ಕುರಿತು ಕೊನೆಗೂ ಮೌನ ಮುರಿದ ವಿಕ್ಕಿ ಕೌಶಲ್

ಶಸ್ತ್ರಚಿಕಿತ್ಸೆಗೆ ಒಳಗಾದ ಮೆಗಾಸ್ಟಾರ್​ ಚಿರಂಜೀವಿ; ಚಿಂತೆಗೊಳಗಾದ ಫ್ಯಾನ್ಸ್​

Follow Us
Web contact
Web contact

TV9 Kannada

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?