AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿ ಕೇರಳ ಸ್ಟೋರಿ ಸಿನಿಮಾ ಪ್ರದರ್ಶನಕ್ಕೆ ಮುಸ್ಲಿಂ ಸಂಘನೆಯಿಂದ ಅಡ್ಡಿ

The Kerala Story: ವಿವಾದ, ಚರ್ಚೆಗಳ ನಡುವೆಯೂ ದಿ ಕೇರಳ ಸ್ಟೋರಿ ಸಿನಿಮಾ ಭಾರತದ ಬಾಕ್ಸ್ ಆಫೀಸ್​ನಲ್ಲಿ ಉತ್ತಮ ಕಲೆಕ್ಷನ್ ಮಾಡುತ್ತಿದೆ.

ದಿ ಕೇರಳ ಸ್ಟೋರಿ ಸಿನಿಮಾ ಪ್ರದರ್ಶನಕ್ಕೆ ಮುಸ್ಲಿಂ ಸಂಘನೆಯಿಂದ ಅಡ್ಡಿ
ದಿ ಕೇರಳ ಸ್ಟೋರಿ
ಮಂಜುನಾಥ ಸಿ.
|

Updated on: May 21, 2023 | 6:29 PM

Share

ದಿ ಕೇರಳ ಸ್ಟೋರಿ (The Kerala Story) ಸಿನಿಮಾ ವಿವಾದ, ಚರ್ಚೆಗಳ ನಡುವೆಯೂ ಭಾರತದಲ್ಲಿ ಉತ್ತಮ ಪ್ರದರ್ಶನ ಮುಂದುವರೆಸಿದೆ. ಕೆಲವೇ ದಿನಗಳಲ್ಲಿ ಸಿನಿಮಾದ ಗಳಿಕ 200 ಕೋಟಿ ದಾಟಿದೆ. ಸಿನಿಮಾವು ವಿದೇಶಗಳಲ್ಲಿಯೂ ಬಿಡುಗಡೆಗೊಂಡಿದ್ದು, ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಬ್ರಿಟನ್​ನಲ್ಲಿ ದಿ ಕೇರಳ ಸ್ಟೋರಿ ಸಿನಿಮಾದ ಪ್ರದರ್ಶನದ ವೇಳೆ ಮುಸ್ಲಿಂ (Muslim) ಸಂಘಟನೆಯೊಂದು ಸಿನಿಮಾ ಪ್ರದರ್ಶನಕ್ಕೆ ಅಡ್ಡಿ ಉಂಟು ಮಾಡಿರುವ ಘಟನೆ ನಡೆದಿದೆ.

ಕಳೆದ ವಾರ ಬ್ರಿಟನ್​ನಲ್ಲಿ ದಿ ಕೇರಳ ಸ್ಟೋರಿ ಸಿನಿಮಾ ಬಿಡುಗಡೆ ಆಗಿತ್ತು. ಸಿನಿಮಾಕ್ಕೆ ಅಲ್ಲಿ 18+ ಪ್ರಮಾಣ ಪತ್ರ ದೊರೆತಿದೆ. ಬರ್ಮಿಂಗ್​ಹ್ಯಾಮ್​ನ ಚಿತ್ರಮಂದಿರವೊಂದರಲ್ಲಿ ದಿ ಕೇರಳ ಸ್ಟೋರಿ ಸಿನಿಮಾ ಪ್ರದರ್ಶಿಸುತ್ತಿರುವ ವೇಳೆ ಮುಸ್ಲಿಂ ಹೋರಾಟಗಾರರ ಗುಂಪೊಂದು ಚಿತ್ರಮಂದಿರಕ್ಕೆ ಪ್ರವೇಶಿಸಿ ಪ್ರದರ್ಶನಕ್ಕೆ ಅಡ್ಡಿ ಉಂಟು ಮಾಡಿರುವುದಲ್ಲದೆ, ಪ್ರೇಕ್ಷಕರೊಟ್ಟಿಗೆ ವಾಗ್ವಾದ ಸಹ ನಡೆಸಿದ್ದಾರೆ. ಈ ಘಟನೆಯ ವಿಡಿಯೋ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ಶಕೀಲ್ ಅಶ್ರಫ್ ಹಾಗೂ ಇನ್ನು ಕೆಲವರು ದಿ ಕೇರಳ ಸ್ಟೋರಿ ಸಿನಿಮಾ ಪ್ರದರ್ಶನಗೊಳ್ಳುತ್ತಿದ್ದ ಚಿತ್ರಮಂದಿರಕ್ಕೆ ನುಗ್ಗಿ ಸಿನಿಮಾ ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ ಆ ಬಳಿಕ ಪ್ರೇಕ್ಷಕರೊಟ್ಟಿಗೆ ಏರು ದನಿಯಲ್ಲಿ ವಾಗ್ವಾದ ನಡೆಸಿದ್ದಾರೆ. ಬಳಿಕ ಪೊಲೀಸರು ಹಾಗೂ ಚಿತ್ರಮಂದಿರದ ಸಿಬ್ಬಂದಿ ಬಂದು ಮುಸ್ಲಿಂ ಯುವಕರನ್ನು ಹೊರಗೆ ಕಳಿಸಿದ್ದಾರೆ. ಈ ವೇಳೆ ಫ್ರೀ ಕಶ್ಮೀರ್ ಘೋಷಣೆಗಳು ಸಹ ಕೇಳಿ ಬಂದಿವೆ. ಆ ಬಳಿಕ ಸಿನಿಮಾ ಪ್ರದರ್ಶನ ಮುಂದುವರೆಸಲಾಗಿದೆ.

ಬ್ರಿಟನ್​ನ 31 ಚಿತ್ರಮಂದಿರಗಳಲ್ಲಿ ಸಿನಿಮಾದ ಪ್ರದರ್ಶನ ಇತ್ತು ಆದರೆ ಹಲವು ಚಿತ್ರಮಂದಿರಗಳಲ್ಲಿ ಸಿನಿಮಾ ಪ್ರದರ್ಶನವನ್ನು ರದ್ದುಗೊಳಿಸಿ ಟಿಕೆಟ್ ಬುಕ್ ಮಾಡಿದ್ದ ಪ್ರೇಕ್ಷಕರಿಗೆ ಹಣ ಮರುಪಾವತಿ ಮಾಡಲಾಗಿದೆ. ಈ ಬಗ್ಗೆ ಬ್ರಿಟನ್​ನ ಕೆಲವು ಭಾರತೀಯರು ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದು ಬಿಬಿಎಫ್​ಸಿಯು ಒಂದು ಸಮುದಾಯದ ಪರವಾಗಿ ನಿಂತಿದೆ ಎಂದು ಆರೋಪಿಸಿದ್ದಾರೆ.

ದಿ ಕೇರಳ ಸ್ಟೋರಿ ಸಿನಿಮಾವು ಕೇರಳದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಮತಾಂತರದ ಕುರಿತ ಕತೆಯನ್ನು ಒಳಗೊಂಡಿದೆ. ದಿ ಕೇರಳ ಸ್ಟೋರಿ ಸಿನಿಮಾದಲ್ಲಿ ಅದಾ ಶರ್ಮಾ ಮುಖ್ಯ ಪಾತ್ರದಲ್ಲಿ ನಟಿಸಿದ್ದು ಸಿನಿಮಾವನ್ನು ಸುದಿಪ್ತೊ ಸೇನ್ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾಕ್ಕೆ ಕೇರಳ ರಾಜ್ಯ ಸರ್ಕಾರ ಹಾಗೂ ವಿಪಕ್ಷಗಳು ವಿರೋಧಿಸಿದ್ದವು. ಸಿನಿಮಾದ ಬಿಡುಗಡೆ ತಡೆಯಲು ಕಾನೂನಾತ್ಮಕ ಪ್ರಯತ್ನ ನಡೆಯಿತಾದರೂ ಅದು ವಿಫಲವಾಯಿತು. ಸಿನಿಮಾದ ಪ್ರದರ್ಶನವನ್ನು ತಮಿಳುನಾಡು ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳು ತಡೆಹಿಡಿದಿವೆ. ಇದೀಗ ಸುಪ್ರೀಂಕೋರ್ಟ್​ನಲ್ಲಿ ಈ ಬಗ್ಗೆ ಚಿತ್ರತಂಡದ ಪರವಾಗಿ ದಾವೆ ಹೂಡಲಾಗಿದ್ದು, ವಿಚಾರಣೆ ಚಾಲ್ತಿಯಲ್ಲಿದೆ.

ದಿ ಕೇರಳ ಸ್ಟೋರಿ ಸಿನಿಮಾವು ಇಸ್ಲಾಂ ಅನ್ನು ಮುಸ್ಲಿಂ ಸಮುದಾಯವನ್ನು ಕೆಟ್ಟದಾಗಿ ಚಿತ್ರಿಸಿದೆ. ಸತ್ಯ ಘಟನೆಯಿಂದ ಬಹಳ ದೂರ ಇದೆ. ಈ ಸಿನಿಮಾ ಇಸ್ಲಾಂ ವಿರುದ್ಧ ದ್ವೇಷ ಹುಟ್ಟಿಸುವಂತಿದೆ ಎಂದು ಆರೋಪಿಸಲಾಗುತ್ತಿದೆ. ಸಿನಿಮಾಕ್ಕೆ ಬಿಜೆಪಿ, ಆರ್​ಎಸ್​ಎಸ್ ಹಾಗೂ ಇನ್ನೂ ಕೆಲವು ಹಿಂದೂಪರ ಸಂಘಟನೆಗಳಿಂದ ಭರಪೂರ ಬೆಂಬಲ ವ್ಯಕ್ತವಾಗಿದೆ. ಸ್ವತಃ ಪ್ರಧಾನಿ ಮೋದಿ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ಬಿಜೆಪಿ ಆಡಳಿತವಿರುವ ಮಧ್ಯ ಪ್ರದೇಶ ಹಾಗೂ ಉತ್ತರ ಪ್ರದೇಶದಲ್ಲಿ ಸಿನಿಮಾಕ್ಕೆ ತೆರಿಗೆ ವಿನಾಯಿತಿ ಘೋಷಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್