AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Priyanka Chopra: ಪ್ರಿಯಾಂಕಾ ಚೋಪ್ರಾ ಬಾಲಿವುಡ್​ ಬಿಟ್ಟು ಹಾಲಿವುಡ್​ಗೆ ಹೋಗಿದ್ದು ಯಾಕೆ? ಕಡೆಗೂ ಬಾಯ್ಬಿಟ್ಟ ನಟಿ

ಹಾಲಿವುಡ್​ ಸೆಲೆಬ್ರಿಟಿಗಳ ವಲಯದಲ್ಲಿ ಪ್ರಿಯಾಂಕಾ ಚೋಪ್ರಾ ಅವರ ಖ್ಯಾತಿ ಹೆಚ್ಚಿದೆ. ಅನೇಕ ಅವಾರ್ಡ್​ ಫಂಕ್ಷನ್​ಗಳಲ್ಲೂ ಅವರು ಮಿಂಚಿದ್ದಾರೆ.

Priyanka Chopra: ಪ್ರಿಯಾಂಕಾ ಚೋಪ್ರಾ ಬಾಲಿವುಡ್​ ಬಿಟ್ಟು ಹಾಲಿವುಡ್​ಗೆ ಹೋಗಿದ್ದು ಯಾಕೆ? ಕಡೆಗೂ ಬಾಯ್ಬಿಟ್ಟ ನಟಿ
ಪ್ರಿಯಾಂಕಾ ಚೋಪ್ರಾ
TV9 Web
| Edited By: |

Updated on: Mar 28, 2023 | 1:03 PM

Share

ಮುಖ್ಯಾಂಶಗಳು

  • ಹಾಲಿವುಡ್​ನಲ್ಲಿ ಬ್ಯುಸಿ ಆಗಿರುವ ಖ್ಯಾತ ನಟಿ ಪ್ರಿಯಾಂಕಾ ಚೋಪ್ರಾ
  • ಹಿಂದಿ ಚಿತ್ರರಂಗದಿಂದ ಅಂತರ ಕಾಯ್ದುಕೊಂಡಿರುವ ದೇಸಿ ಗರ್ಲ್​
  • ಬಾಲಿವುಡ್​ ತೊರೆದಿದ್ದಕ್ಕೆ ಕಾರಣ ಏನೆಂಬುದನ್ನು ವಿವರಿಸಿದ ಪ್ರಿಯಾಂಕಾ ಚೋಪ್ರಾ

ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಅವರು ಈಗ ಅಮೆರಿಕದಲ್ಲಿ ಸೆಟ್ಲ್​ ಆಗಿದ್ದಾರೆ. ಅಮೆರಿಕದ ಗಾಯಕ ನಿಕ್​ ಜೋನಸ್​ ಅವರ ಜೊತೆ ಮದುವೆ ಆದ ಬಳಿಕ ಅವರು ಬಾಲಿವುಡ್ (Bollywood)​ ತೊರೆದು ಹಾಲಿವುಡ್​ನಲ್ಲಿ ಕೆಲಸ ಮಾಡಲು ಆರಂಭಿಸಿದರು. ಈ ಬಗ್ಗೆ ಭಾರತದಲ್ಲಿನ ಅಭಿಮಾನಿಗಳಿಗೆ ಬೇಸರ ಇದೆ. ಅಷ್ಟಕ್ಕೂ ಪ್ರಿಯಾಂಕಾ ಚೋಪ್ರಾ ಅವರು ಹಿಂದಿ ಚಿತ್ರರಂಗವನ್ನು ತೊರೆದಿದ್ದು ಯಾಕೆ? ಈ ವಿಚಾರದ ಬಗ್ಗೆ ಇಷ್ಟು ದಿನಗಳವರೆಗೆ ಅವರು ಮಾತನಾಡಿರಲಿಲ್ಲ. ಈಗ ಇದೇ ಮೊದಲ ಬಾರಿಗೆ ಆ ಕುರಿತು ಪ್ರಿಯಾಂಕಾ ಚೋಪ್ರಾ ಬಾಯ್ಬಿಟ್ಟಿದ್ದಾರೆ. ಬಾಲಿವುಡ್​ನಲ್ಲಿ ಅವರು ಕಷ್ಟದ ದಿನಗಳನ್ನು ಎದುರಿಸಿದ್ದರು. ಆ ಕಾರಣದಿಂದಲೇ ಅವರು ಹಾಲಿವುಡ್​ಗೆ (Hollywood) ಶಿಫ್ಟ್​ ಆಗುವ ನಿರ್ಧಾರಕ್ಕೆ ಬಂದರು.

ಬಾಲಿವುಡ್​ನಲ್ಲಿ ರಾಜಕೀಯ ನಡೆಯುತ್ತಿದೆ ಎಂದು ಈ ಹಿಂದೆ ಅನೇಕರು ಆರೋಪಿಸಿದ್ದುಂಟು. ಈಗ ಪ್ರಿಯಾಂಕಾ ಚೋಪ್ರಾ ಕೂಡ ಅದನ್ನೇ ಹೇಳಿದ್ದಾರೆ. ಹಿಂದಿ ಚಿತ್ರರಂಗದಲ್ಲಿ ಅವರನ್ನು ಕೆಲವರು ಟಾರ್ಗೆಟ್​ ಮಾಡಿದ್ದರು. ಅವಕಾಶ ಸಿಗದಂತೆ ಮಾಡಿದ್ದರು. ಆ ಸಂದರ್ಭದಲ್ಲಿ ಬ್ರೇಕ್​ ತೆಗೆದುಕೊಳ್ಳಬೇಕು ಅಂತ ಪ್ರಿಯಾಂಕಾಗೆ ಅನಿಸಿತ್ತು. ಆಗಲೇ ಅವರಿಗೆ ಅಮೆರಿಕದ ಮ್ಯೂಸಿಕ್​ ಇಂಡಸ್ಟ್ರಿಯಿಂದ ಕರೆ ಬಂತು. ಅಲ್ಲಿಂದ ಪ್ರಿಯಾಂಕಾ ಚೋಪ್ರಾ ಅವರ ಬದುಕು ಬದಲಾಯಿತು.

ಇದನ್ನೂ ಓದಿ: ಹಾಲಿವುಡ್ ಎಂಟ್ರಿ ಬಗ್ಗೆ ಪರ-ವಿರೋಧ ಚರ್ಚೆ; ಶಾರುಖ್ ಹೇಳಿಕೆಗೆ ಉತ್ತರ ಕೊಟ್ಟ ಪ್ರಿಯಾಂಕಾ ಚೋಪ್ರಾ

ಇದನ್ನೂ ಓದಿ
Image
Priyanka Chopra: ಫ್ಯಾನ್ಸ್​ ವಾವ್​ ಎನ್ನುವಂತೆ ಗ್ಲಾಮರ್​ ವೇಷ ಧರಿಸಿದ ಪ್ರಿಯಾಂಕಾ ಚೋಪ್ರಾ; ಇಲ್ಲಿವೆ ಫೋಟೋಗಳು
Image
ಶಾಕಿಂಗ್​ ಸತ್ಯದ ಜತೆ ಮೊದಲ ಬಾರಿ ಮಗು ಫೋಟೋ ತೋರಿಸಿದ ಪ್ರಿಯಾಂಕಾ ಚೋಪ್ರಾ-ನಿಕ್​ ಜೋನಸ್​
Image
ಪ್ರಿಯಾಂಕಾ ಚೋಪ್ರಾ ಮಗಳ ಹೆಸರು ಮಾಲ್ತಿ ಮೇರಿ ಚೋಪ್ರಾ ಜೋನಸ್​; ಏನು ಇದರ ಅರ್ಥ?
Image
ಕಪ್ಪು ಸೀರೆ ಧರಿಸಿ ‘ಪ್ರೀ ಆಸ್ಕರ್​ ಪಾರ್ಟಿ’ಯಲ್ಲಿ ಮಿಂಚಿದ ‘ದೇಸಿ ಗರ್ಲ್​’ ಪ್ರಿಯಾಂಕಾ ಚೋಪ್ರಾ

ಅಮೆರಿಕದ ಮ್ಯೂಸಿಕ್​ ಇಂಡಸ್ಟ್ರಿಯಲ್ಲೂ ಪ್ರಿಯಾಂಕಾ ಚೋಪ್ರಾ ಅವರಿಗೆ ಹೇಳಿಕೊಳ್ಳುವಂತಹ ಯಶಸ್ಸು ಸಿಗಲಿಲ್ಲ. ಆಗ ಅವರು ಅಲ್ಲಿನ ಸಿನಿಮಾಗಳಲ್ಲಿ ಅದೃಷ್ಟ ಪರೀಕ್ಷೆ ಮಾಡಿಕೊಂಡರು. ಆಗ ಅವರಿಗೆ ಹೆಚ್ಚಿನ ಜನಪ್ರಿಯತೆ ಸಿಕ್ಕಿತು. ಹಾಲಿವುಡ್​ ಸೆಲೆಬ್ರಿಟಿಗಳ ವಲಯದಲ್ಲಿ ಪ್ರಿಯಾಂಕಾ ಚೋಪ್ರಾ ಅವರ ಖ್ಯಾತಿ ಹೆಚ್ಚಿತು. ಅನೇಕ ಅವಾರ್ಡ್​ ಫಂಕ್ಷನ್​ಗಳಲ್ಲೂ ಪ್ರಿಯಾಂಕಾ ಚೋಪ್ರಾ ಮಿಂಚಿದರು.

ಇದನ್ನೂ ಓದಿ: ಬಾಲಿವುಡ್​ನಲ್ಲಿ ಪ್ರಿಯಾಂಕಾ ಚೋಪ್ರಾಗೆ ಬಾಡಿ ಶೇಮಿಂಗ್​; ಭಾರತ ತೊರೆದ ಬಳಿಕ ಮೌನ ಮುರಿದ ನಟಿ

ಹಿಂದಿ ಚಿತ್ರರಂಗದಲ್ಲಿ ಪ್ರಿಯಾಂಕಾ ಚೋಪ್ರಾ ಅವರು ಹಲವು ಹಿಟ್​ ಸಿನಿಮಾಗಳನ್ನು ನೀಡಿದ್ದಾರೆ. 2002ರಲ್ಲಿ ಬಾಲಿವುಡ್​ಗೆ ಕಾಲಿಟ್ಟ ಅವರು ಸ್ಟಾರ್​ ನಟಿಯಾಗಿ ಮೆರೆದರು. ‘ಬಾಜಿ ರಾವ್​ ಮಸ್ತಾನಿ’ ರೀತಿಯ ಸೂಪರ್ ಹಿಟ್​ ಸಿನಿಮಾಗಳನ್ನು ನೀಡಿದ ಬಳಿಕವೂ ಅವರಿಗೆ ಬಾಲಿವುಡ್​ನ ಒಳ ರಾಜಕೀಯವನ್ನು ಎದುರಿಸಲು ಸಾಧ್ಯವಾಗಲಿಲ್ಲ.

2016ರಲ್ಲಿ ಬಂದ ‘ಜೈ ಗಂಗಾಜಲ್​’ ಸಿನಿಮಾವೇ ಕೊನೇ. ಆ ಬಳಿಕ ಪ್ರಿಯಾಂಕಾ ಚೋಪ್ರಾ ಅವರು ಹಿಂದಿಯ ಯಾವುದೇ ಸಿನಿಮಾದಲ್ಲೂ ನಟಿಸಿಲ್ಲ. ಅವರು ಮತ್ತೆ ಬಾಲಿವುಡ್​ಗೆ ಕಮ್​ಬ್ಯಾಕ್​ ಮಾಡಲಿ ಎಂದು ಫ್ಯಾನ್ಸ್​ ಬಯಸುತ್ತಿದ್ದಾರೆ. ಆದರೆ ಅಭಿಮಾನಿಗಳ ಆಸೆ ಸದ್ಯಕ್ಕಂತೂ ಈಡೇರುವಂತೆ ಕಾಣುತ್ತಿಲ್ಲ. ಅಷ್ಟಕ್ಕೂ ಪ್ರಿಯಾಂಕಾ ಚೋಪ್ರಾ ಅವರನ್ನು ಬಾಲಿವುಡ್​ನಲ್ಲಿ ಟಾರ್ಗೆಟ್​ ಮಾಡಿದವರು ಯಾರು? ಯಾರ ಹೆಸರನ್ನೂ ಅವರು ಬಹಿರಂಗಪಡಿಸಿಲ್ಲ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ