AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oppenheimer: ಲೈಂಗಿಕ ಕ್ರಿಯೆ ವೇಳೆ ಭಗವದ್ಗೀತೆ ಓದುವ ದೃಶ್ಯ; ‘ಆಪನ್​ಹೈಮರ್​’ ಚಿತ್ರಕ್ಕೆ ಎದುರಾಯ್ತು ವಿರೋಧ

Bhagavad Gita in Oppenheimer Movie: ‘ಆಪನ್​ಹೈಮರ್​’ ಸಿನಿಮಾದಲ್ಲಿನ ಈ ದೃಶ್ಯಕ್ಕೆ ಭಾರತದ ಸೆನ್ಸಾರ್​ ಮಂಡಳಿಯವರು ಹೇಗೆ ಅನುಮತಿ ನೀಡಿದರು ಎಂದು ಕೆಲವರು ತಕರಾರು ತೆಗೆದಿದ್ದಾರೆ. ಆಕ್ಷೇಪಾರ್ಹ ದೃಶ್ಯವನ್ನು ತೆಗೆದುಹಾಕುವಂತೆ ಒತ್ತಾಯಿಸಲಾಗುತ್ತಿದೆ.

Oppenheimer: ಲೈಂಗಿಕ ಕ್ರಿಯೆ ವೇಳೆ ಭಗವದ್ಗೀತೆ ಓದುವ ದೃಶ್ಯ; ‘ಆಪನ್​ಹೈಮರ್​’ ಚಿತ್ರಕ್ಕೆ ಎದುರಾಯ್ತು ವಿರೋಧ
ಕಿಲಿಯನ್​ ಮರ್ಫಿ
ಮದನ್​ ಕುಮಾರ್​
|

Updated on: Jul 23, 2023 | 1:26 PM

Share

ಎಲ್ಲೆಲ್ಲೂ ‘ಆಪನ್​ಹೈಮರ್​’ ಸಿನಿಮಾದ (Oppenheimer Movie) ಬಗ್ಗೆ ಚರ್ಚೆ ಆಗುತ್ತಿದೆ. ಜುಲೈ 21ರಂದು ಬಿಡುಗಡೆ ಆದ ಹಾಲಿವುಡ್​ನ ಈ ಚಿತ್ರಕ್ಕೆ ವಿಮರ್ಶಕರು ಮೆಚ್ಚುಗೆ ಸೂಚಿಸಿದ್ದಾರೆ. ಆದರೆ ಈ ಸಿನಿಮಾದಲ್ಲಿನ ಒಂದು ದೃಶ್ಯಕ್ಕೆ ಈಗ ವಿರೋಧ ವ್ಯಕ್ತವಾಗಿದೆ. ಲೈಂಗಿಕ ಕ್ರಿಯೆ ನಡೆಸುವಾಗ ಕಥಾನಾಯಕ ಭಗವದ್ಗೀತೆ(Bhagavad Gita) ಸಾಲುಗಳನ್ನು ಓದುವ ದೃಶ್ಯ ಈ ಸಿನಿಮಾದಲ್ಲಿದೆ. ಇದಕ್ಕೆ ಭಾರತದಲ್ಲಿ ಆಕ್ಷೇಪ ಎದುರಾಗುತ್ತಿದೆ. ಈ ಬಗ್ಗೆ ಕೇಂದ್ರ ಸರ್ಕಾರದ ಮಾಹಿತಿ ಆಯುಕ್ತ ಉದಯ್​ ಮಹುರ್ಕರ್​ ತಕರಾರು ತೆಗೆದಿದ್ದಾರೆ. ಸೋಶಿಯಲ್​ ಮೀಡಿಯಾ ಮೂಲಕ ಅವರು ‘ಆಪನ್​ಹೈಮರ್​’ ಚಿತ್ರತಂಡವನ್ನು ಪ್ರಶ್ನಿಸಿದ್ದಾರೆ. ಈ ದೃಶ್ಯಕ್ಕೆ ಕತ್ತರಿ ಬೀಳುವ ಸಾಧ್ಯತೆ ಇದೆ. ಕ್ರಿಸ್ಟೋಫರ್​ ನೋಲನ್​ (Christopher Nolan) ನಿರ್ದೇಶನದ ಈ ಸಿನಿಮಾ ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ.

ಅಣುಬಾಂಬ್​ ಕಂಡು ಹಿಡಿದ ಅಮೆರಿಕದ ವಿಜ್ಞಾನಿ ಜೆ. ರಾಬರ್ಟ್​ ಆಪನ್​ಹೈಮರ್​ ಅವರ ಜೀವನದ ಕುರಿತು ‘ಆಪನ್​ಹೈಮರ್​’ ಸಿನಿಮಾ ಮೂಡಿಬಂದಿದೆ. ಆಪನ್​ಹೈಮರ್​ ಪಾತ್ರವನ್ನು ಕಿಲಿಯನ್​ ಮರ್ಫಿ ಮಾಡಿದ್ದಾರೆ. ರಿಯಲ್​ ಲೈಫ್​ನಲ್ಲಿ ಆಪನ್​ಹೈಮರ್​ ಅವರಿಗೆ ಹಿಂದೂ ಪುರಾಣಗಳ ಬಗ್ಗೆ ಆಸಕ್ತಿ ಇತ್ತು. ಅವರು ಸಂಸ್ಕೃತ ಕಲಿತಿದ್ದರು ಮತ್ತು ಭಗವದ್ಗೀತೆ ಓದಿಕೊಂಡಿದ್ದರು. ಅದಕ್ಕೆ ಸಂಬಂಧಿಸಿದಂತೆ ಈ ಸಿನಿಮಾದಲ್ಲಿ ಒಂದು ದೃಶ್ಯ ಇದೆ. ಆ ದೃಶ್ಯವೇ ಈಗ ಕಾಂಟ್ರವರ್ಸಿ ಸೃಷ್ಟಿ ಮಾಡಿದೆ.

ಆಪನ್​ಹೈಮರ್​ ಜೊತೆ ಲೈಂಗಿಕ ಕ್ರಿಯೆ ನಡೆಸುತ್ತಿರುವ ಅವರ ಪ್ರೇಯಸಿಗೆ ಅನೇಕ ಪುಸ್ತಕಗಳು ಕಾಣಿಸುತ್ತವೆ. ಆ ಪೈಕಿ ಒಂದು ಪುಸ್ತಕವನ್ನು ಕೈಗೆತ್ತಿಕೊಂಡು ‘ಇದು ಏನು’ ಅಂತ ಆಕೆ ಪ್ರಶ್ನಿಸುತ್ತಾಳೆ. ‘ಇದು ಭಗವದ್ಗೀತೆ’ ಎಂದು ಆಪನ್​ಹೈಮರ್​ ಹೇಳುತ್ತಾರೆ ಮತ್ತು ಅದರಲ್ಲಿನ ಒಂದೆರಡು ಸಾಲುಗಳನ್ನು ವಿವರಿಸುತ್ತಾರೆ. ಇಂಥ ದೃಶ್ಯಕ್ಕೆ ಭಾರತದಲ್ಲಿ ಸೆನ್ಸಾರ್​ ಮಂಡಳಿಯವರು ಹೇಗೆ ಅನುಮತಿ ನೀಡಿದರು ಎಂದು ಕೆಲವರು ತಕರಾರು ತೆಗೆದಿದ್ದಾರೆ. ಇದು ಹಿಂದೂ ಧರ್ಮದ ಮೇಲೆ ಮಾಡಲಾಗಿರುವ ದಾಳಿ ಎಂದು ಟೀಕೆ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: Oppenheimer Vs Barbie: ‘ಆಪನ್​ಹೈಮರ್​’ ವರ್ಸಸ್​ ‘ಬಾರ್ಬಿ’; ಮೊದಲ ದಿನ ಭಾರತದ ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರಗಳ ಕಲೆಕ್ಷನ್​ ಎಷ್ಟು?

‘ಸೇವ್​ ಕಲ್ಚರ್​ ಸೇವ್​ ಇಂಡಿಯಾ ಪ್ರತಿಷ್ಠಾನ’ದ ವತಿಯಿಂದ ಉದಯ್​ ಮಹುರ್ಕರ್​ ಅವರು ‘ಆಪನ್​ಹೈಮರ್​’ ಸಿನಿಮಾದ ನಿರ್ದೇಶಕ ಕ್ರಿಸ್ಟೋಫರ್​ ನೋಲನ್​ಗೆ ಪತ್ರ ಬರೆದಿದ್ದಾರೆ. ಸಿನಿಮಾದಲ್ಲಿ ಇರುವ ಆಕ್ಷೇಪಾರ್ಹ ದೃಶ್ಯವನ್ನು ತೆಗೆದುಹಾಕುವಂತೆ ಅವರು ಒತ್ತಾಯಿಸಿದ್ದಾರೆ. ಇದಕ್ಕೆ ಕ್ರಿಸ್ಟೋಫರ್​ ನೋಲನ್​ ಅವರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬ ಕೌತುಕ ಮೂಡಿದೆ. ಹಾಲಿವುಡ್​ನಲ್ಲಿ ಗಮನಾರ್ಹ ಸಿನಿಮಾಗಳನ್ನು ಮಾಡಿ ಕ್ರಿಸ್ಟೋಫರ್​ ನೋಲನ್​ ಅವರು ಗುರುತಿಸಿಕೊಂಡಿದ್ದಾರೆ. ಭಾರತದಲ್ಲೂ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಪ್ರಸ್ತುತ ರಿಲೀಸ್​ ಆಗಿರುವ ‘ಆಪನ್​ಹೈಮರ್​’ ಸಿನಿಮಾಗೆ ಭಾರತದ ಬಾಕ್ಸ್​ ಆಫೀಸ್​ನಲ್ಲಿ ಮೊದಲ ದಿನ 13.5 ಕೋಟಿ ರೂಪಾಯಿ ಕಲೆಕ್ಷನ್​ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!