Oppenheimer: ಲೈಂಗಿಕ ಕ್ರಿಯೆ ವೇಳೆ ಭಗವದ್ಗೀತೆ ಓದುವ ದೃಶ್ಯ; ‘ಆಪನ್​ಹೈಮರ್​’ ಚಿತ್ರಕ್ಕೆ ಎದುರಾಯ್ತು ವಿರೋಧ

Bhagavad Gita in Oppenheimer Movie: ‘ಆಪನ್​ಹೈಮರ್​’ ಸಿನಿಮಾದಲ್ಲಿನ ಈ ದೃಶ್ಯಕ್ಕೆ ಭಾರತದ ಸೆನ್ಸಾರ್​ ಮಂಡಳಿಯವರು ಹೇಗೆ ಅನುಮತಿ ನೀಡಿದರು ಎಂದು ಕೆಲವರು ತಕರಾರು ತೆಗೆದಿದ್ದಾರೆ. ಆಕ್ಷೇಪಾರ್ಹ ದೃಶ್ಯವನ್ನು ತೆಗೆದುಹಾಕುವಂತೆ ಒತ್ತಾಯಿಸಲಾಗುತ್ತಿದೆ.

Oppenheimer: ಲೈಂಗಿಕ ಕ್ರಿಯೆ ವೇಳೆ ಭಗವದ್ಗೀತೆ ಓದುವ ದೃಶ್ಯ; ‘ಆಪನ್​ಹೈಮರ್​’ ಚಿತ್ರಕ್ಕೆ ಎದುರಾಯ್ತು ವಿರೋಧ
ಕಿಲಿಯನ್​ ಮರ್ಫಿ
Follow us
|

Updated on: Jul 23, 2023 | 1:26 PM

ಎಲ್ಲೆಲ್ಲೂ ‘ಆಪನ್​ಹೈಮರ್​’ ಸಿನಿಮಾದ (Oppenheimer Movie) ಬಗ್ಗೆ ಚರ್ಚೆ ಆಗುತ್ತಿದೆ. ಜುಲೈ 21ರಂದು ಬಿಡುಗಡೆ ಆದ ಹಾಲಿವುಡ್​ನ ಈ ಚಿತ್ರಕ್ಕೆ ವಿಮರ್ಶಕರು ಮೆಚ್ಚುಗೆ ಸೂಚಿಸಿದ್ದಾರೆ. ಆದರೆ ಈ ಸಿನಿಮಾದಲ್ಲಿನ ಒಂದು ದೃಶ್ಯಕ್ಕೆ ಈಗ ವಿರೋಧ ವ್ಯಕ್ತವಾಗಿದೆ. ಲೈಂಗಿಕ ಕ್ರಿಯೆ ನಡೆಸುವಾಗ ಕಥಾನಾಯಕ ಭಗವದ್ಗೀತೆ(Bhagavad Gita) ಸಾಲುಗಳನ್ನು ಓದುವ ದೃಶ್ಯ ಈ ಸಿನಿಮಾದಲ್ಲಿದೆ. ಇದಕ್ಕೆ ಭಾರತದಲ್ಲಿ ಆಕ್ಷೇಪ ಎದುರಾಗುತ್ತಿದೆ. ಈ ಬಗ್ಗೆ ಕೇಂದ್ರ ಸರ್ಕಾರದ ಮಾಹಿತಿ ಆಯುಕ್ತ ಉದಯ್​ ಮಹುರ್ಕರ್​ ತಕರಾರು ತೆಗೆದಿದ್ದಾರೆ. ಸೋಶಿಯಲ್​ ಮೀಡಿಯಾ ಮೂಲಕ ಅವರು ‘ಆಪನ್​ಹೈಮರ್​’ ಚಿತ್ರತಂಡವನ್ನು ಪ್ರಶ್ನಿಸಿದ್ದಾರೆ. ಈ ದೃಶ್ಯಕ್ಕೆ ಕತ್ತರಿ ಬೀಳುವ ಸಾಧ್ಯತೆ ಇದೆ. ಕ್ರಿಸ್ಟೋಫರ್​ ನೋಲನ್​ (Christopher Nolan) ನಿರ್ದೇಶನದ ಈ ಸಿನಿಮಾ ಅನೇಕ ಕಡೆಗಳಲ್ಲಿ ಹೌಸ್​ಫುಲ್​ ಪ್ರದರ್ಶನ ಕಾಣುತ್ತಿದೆ.

ಅಣುಬಾಂಬ್​ ಕಂಡು ಹಿಡಿದ ಅಮೆರಿಕದ ವಿಜ್ಞಾನಿ ಜೆ. ರಾಬರ್ಟ್​ ಆಪನ್​ಹೈಮರ್​ ಅವರ ಜೀವನದ ಕುರಿತು ‘ಆಪನ್​ಹೈಮರ್​’ ಸಿನಿಮಾ ಮೂಡಿಬಂದಿದೆ. ಆಪನ್​ಹೈಮರ್​ ಪಾತ್ರವನ್ನು ಕಿಲಿಯನ್​ ಮರ್ಫಿ ಮಾಡಿದ್ದಾರೆ. ರಿಯಲ್​ ಲೈಫ್​ನಲ್ಲಿ ಆಪನ್​ಹೈಮರ್​ ಅವರಿಗೆ ಹಿಂದೂ ಪುರಾಣಗಳ ಬಗ್ಗೆ ಆಸಕ್ತಿ ಇತ್ತು. ಅವರು ಸಂಸ್ಕೃತ ಕಲಿತಿದ್ದರು ಮತ್ತು ಭಗವದ್ಗೀತೆ ಓದಿಕೊಂಡಿದ್ದರು. ಅದಕ್ಕೆ ಸಂಬಂಧಿಸಿದಂತೆ ಈ ಸಿನಿಮಾದಲ್ಲಿ ಒಂದು ದೃಶ್ಯ ಇದೆ. ಆ ದೃಶ್ಯವೇ ಈಗ ಕಾಂಟ್ರವರ್ಸಿ ಸೃಷ್ಟಿ ಮಾಡಿದೆ.

ಆಪನ್​ಹೈಮರ್​ ಜೊತೆ ಲೈಂಗಿಕ ಕ್ರಿಯೆ ನಡೆಸುತ್ತಿರುವ ಅವರ ಪ್ರೇಯಸಿಗೆ ಅನೇಕ ಪುಸ್ತಕಗಳು ಕಾಣಿಸುತ್ತವೆ. ಆ ಪೈಕಿ ಒಂದು ಪುಸ್ತಕವನ್ನು ಕೈಗೆತ್ತಿಕೊಂಡು ‘ಇದು ಏನು’ ಅಂತ ಆಕೆ ಪ್ರಶ್ನಿಸುತ್ತಾಳೆ. ‘ಇದು ಭಗವದ್ಗೀತೆ’ ಎಂದು ಆಪನ್​ಹೈಮರ್​ ಹೇಳುತ್ತಾರೆ ಮತ್ತು ಅದರಲ್ಲಿನ ಒಂದೆರಡು ಸಾಲುಗಳನ್ನು ವಿವರಿಸುತ್ತಾರೆ. ಇಂಥ ದೃಶ್ಯಕ್ಕೆ ಭಾರತದಲ್ಲಿ ಸೆನ್ಸಾರ್​ ಮಂಡಳಿಯವರು ಹೇಗೆ ಅನುಮತಿ ನೀಡಿದರು ಎಂದು ಕೆಲವರು ತಕರಾರು ತೆಗೆದಿದ್ದಾರೆ. ಇದು ಹಿಂದೂ ಧರ್ಮದ ಮೇಲೆ ಮಾಡಲಾಗಿರುವ ದಾಳಿ ಎಂದು ಟೀಕೆ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: Oppenheimer Vs Barbie: ‘ಆಪನ್​ಹೈಮರ್​’ ವರ್ಸಸ್​ ‘ಬಾರ್ಬಿ’; ಮೊದಲ ದಿನ ಭಾರತದ ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರಗಳ ಕಲೆಕ್ಷನ್​ ಎಷ್ಟು?

‘ಸೇವ್​ ಕಲ್ಚರ್​ ಸೇವ್​ ಇಂಡಿಯಾ ಪ್ರತಿಷ್ಠಾನ’ದ ವತಿಯಿಂದ ಉದಯ್​ ಮಹುರ್ಕರ್​ ಅವರು ‘ಆಪನ್​ಹೈಮರ್​’ ಸಿನಿಮಾದ ನಿರ್ದೇಶಕ ಕ್ರಿಸ್ಟೋಫರ್​ ನೋಲನ್​ಗೆ ಪತ್ರ ಬರೆದಿದ್ದಾರೆ. ಸಿನಿಮಾದಲ್ಲಿ ಇರುವ ಆಕ್ಷೇಪಾರ್ಹ ದೃಶ್ಯವನ್ನು ತೆಗೆದುಹಾಕುವಂತೆ ಅವರು ಒತ್ತಾಯಿಸಿದ್ದಾರೆ. ಇದಕ್ಕೆ ಕ್ರಿಸ್ಟೋಫರ್​ ನೋಲನ್​ ಅವರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬ ಕೌತುಕ ಮೂಡಿದೆ. ಹಾಲಿವುಡ್​ನಲ್ಲಿ ಗಮನಾರ್ಹ ಸಿನಿಮಾಗಳನ್ನು ಮಾಡಿ ಕ್ರಿಸ್ಟೋಫರ್​ ನೋಲನ್​ ಅವರು ಗುರುತಿಸಿಕೊಂಡಿದ್ದಾರೆ. ಭಾರತದಲ್ಲೂ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಪ್ರಸ್ತುತ ರಿಲೀಸ್​ ಆಗಿರುವ ‘ಆಪನ್​ಹೈಮರ್​’ ಸಿನಿಮಾಗೆ ಭಾರತದ ಬಾಕ್ಸ್​ ಆಫೀಸ್​ನಲ್ಲಿ ಮೊದಲ ದಿನ 13.5 ಕೋಟಿ ರೂಪಾಯಿ ಕಲೆಕ್ಷನ್​ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಮಗನನ್ನು ನೋಡಲು ಜೈಲಿಗೆ ಬಂದ ರೇವಣ್ಣ ಮಾಧ್ಯಮದವರನ್ನು ಕಂಡು ಸಿಡುಕಿದರು!
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಭೂಕುಸಿತದಲ್ಲಿ ಸಿಲುಕಿರುವ ಕಾರ್ಮಿಕನ ಕೈ ಗೋಚರ: ಸುರಂಗದ ಮೂಲಕ ಚಿಕಿತ್ಸೆ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ಮುಡಾ ಹಗರಣ ಸಿಬಿಐ ತನಿಖೆಗೆ ನೀಡಬೇಕೆನ್ನುವ ನೈತಿಕತೆ ಬಿಜೆಪಿಗಿದೆಯಾ? ಸಿಎಂ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆದ ಶಿಕ್ಷಕಿ! ಪೋಷಕರಿಂದ ಶಾಲೆಗೆ ಬೀಗ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ
 ಪವಿತ್ರಾ ಗೌಡರನ್ನು ನೋಡಲು ಬುತ್ತಿಯೊಂದಿಗೆ ಜೈಲಿಗೆ ಬಂದ ತಂದೆ-ತಾಯಿ, ಸಹೋದರ