AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

33ನೇ ವಯಸ್ಸಿಗೆ ಕ್ಯಾನ್ಸರ್​ನಿಂದ ಖ್ಯಾತ ಸಿಂಗರ್​ ನಿಧನ; ಸಂತಾಪ ಸೂಚಿಸಿದ ಯುವರಾಜ್​ ಸಿಂಗ್

ಟಾಮ್​ಗೆ ಮಿದುಳಿನಲ್ಲಿ ಟ್ಯೂಮರ್ ಇರುವ ವಿಚಾರ 2020ರಲ್ಲಿ ತಿಳಿದಿತ್ತು. ಈ ವಿಚಾರವನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹೇಳಿಕೊಂಡಿದ್ದರು. ಕ್ಯಾನ್ಸರ್​ ಪತ್ತೆ ಆದ ನಂತರದಲ್ಲಿ ಅವರು ಸಾಕಷ್ಟು ಕುಗ್ಗಿದ್ದರು.

33ನೇ ವಯಸ್ಸಿಗೆ ಕ್ಯಾನ್ಸರ್​ನಿಂದ ಖ್ಯಾತ ಸಿಂಗರ್​ ನಿಧನ; ಸಂತಾಪ ಸೂಚಿಸಿದ ಯುವರಾಜ್​ ಸಿಂಗ್
TV9 Web
| Edited By: |

Updated on:Apr 01, 2022 | 10:48 AM

Share

ಬ್ರಿಟಿಷ್-ಐರಿಶ್ ಬ್ಯಾಂಡ್​ ‘ದಿ ವಾಂಟೆಡ್​’ನ (The Wanted) ಸದಸ್ಯನಾಗಿದ್ದ ಖ್ಯಾತ ಗಾಯಕ ಟಾಮ್​ ಪಾರ್ಕರ್ (Tom Parker)​ ಅವರು ಮಿದುಳು ಕ್ಯಾನ್ಸರ್​ನಿಂದ ನಿಧನ ಹೊಂದಿದ್ದಾರೆ. ಅವರಿಗೆ ಕೇವಲ 33 ವರ್ಷ ವಯಸ್ಸಾಗಿತ್ತು. ಟಾಮ್​ಗೆ ವಿಶ್ವಾದ್ಯಂತ ಅಭಿಮಾನಿಗಳು ಇದ್ದರು. ಅವರು ನಿಧನ ಹೊಂದಿರುವ ವಿಚಾರವನ್ನು ‘ದಿ ವಾಂಟೆಡ್​’ ಬ್ಯಾಂಡ್ ಘೋಷಣೆ ಮಾಡಿದ್ದು, ಸಾಕಷ್ಟು ದುಃಖ ವ್ಯಕ್ತಪಡಿಸಿದೆ. ಅವರನ್ನು ಕಳೆದುಕೊಂಡಿದ್ದಕ್ಕೆ ಅಭಿಮಾನಿಗಳು ಕೂಡ ಸಂತಾಪ ಸೂಚಿಸಿದ್ದಾರೆ. ಟಾಮ್ ಪಾರ್ಕರ್​ ನಿಧನಕ್ಕೆ ವಿಶ್ವದ ನಾನಾ ಕಡೆಗಳಿಂದ ಸೋಶಿಯಲ್​ ಮೀಡಿಯಾದಲ್ಲಿ ಸಂತಾಪ ಸೂಚಿಸಲಾಗುತ್ತಿದೆ.  ಟೀಂ ಇಂಡಿಯಾ ಮಾಜಿ ಆಟಗಾರ​ ಯುವರಾಜ್​ ಸಿಂಗ್ (Yuvraj Singh ) ಕೂಡ ಈ ಬಗ್ಗೆ ಸಂತಾಪ ಸೂಚಿಸಿದ್ದಾರೆ.

ಟಾಮ್​ಗೆ ಮಿದುಳಿನಲ್ಲಿ ಟ್ಯೂಮರ್ ಇರುವ ವಿಚಾರ 2020ರಲ್ಲಿ ತಿಳಿದಿತ್ತು. ಈ ವಿಚಾರವನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹೇಳಿಕೊಂಡಿದ್ದರು. ಕ್ಯಾನ್ಸರ್​ ಪತ್ತೆ ಆದ ನಂತರದಲ್ಲಿ ಅವರು ಸಾಕಷ್ಟು ಕುಗ್ಗಿದ್ದರು. ವಿಶ್ವದ ಪ್ರತಿಷ್ಠಿತ ಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆ ಪಡೆದಿದ್ದರು. ಕೆಮೋಥೆರಪಿಗೆ ಒಳಗಾಗಿದ್ದರು. ಆದರೆ, ಕ್ಯಾನ್ಸರ್​ನ ಗುಣಮಾಡಲು ಸಾಧ್ಯವಾಗಲೇ ಇಲ್ಲ. ‘ನಮ್ಮ ಹೃದಯ ಒಡೆದು ಹೋಗಿದೆ. ಟಾಮ್ ನನ್ನ ಜಗತ್ತೇ ಆಗಿದ್ದರು. ಅವರಿಲ್ಲದೆ ನಾವು ಜೀವನವನ್ನು ಕಲ್ಪಿಸಿಕೊಳ್ಳಲೂ ಸಾಧ್ಯವಿಲ್ಲ’ ಎಂದು ಟಾಮ್ ಪತ್ನಿ ಕೆಲ್ಸಿ ಹಾರ್ಡ್ವಿಕ್ ದುಃಖ ಹೊರಹಾಕಿದ್ದಾರೆ.

ಕೆಲ್ಸಿ ಹಾಗೂ ಟಾಮ್​ 2018ರಲ್ಲಿ ಮದುವೆ ಆದರು. ಇವರಿಗೆ ಇಬ್ಬರು ಮಕ್ಕಳು. ಕುಟುಂಬದವರು ಹಾಗೂ ಬ್ಯಾಂಡ್​ನ ಸದಸ್ಯರು ಸಮೀಪದಲ್ಲಿರುವಾಗಲೇ ಟಾಮ್​ ಕೊನೆಯುಸಿರು ಎಳೆದಿದ್ದಾರೆ. ಅವರ ಫೋಟೋಗಳನನ್ನು ಹಾಕಿ ಸೋಶಿಯಲ್ ಮೀಡಿಯಾದಲ್ಲಿ ಸಂತಾಪ ಸೂಚಿಸಲಾಗುತ್ತಿದೆ.

2009ರಲ್ಲಿ ‘ದಿ ವಾಂಟೆಡ್​’ ಬ್ಯಾಂಡ್​ ಆರಂಭಗೊಂಡಿತು. ಟಾಮ್​ ಪಾರ್ಜರ್​ ಸೇರಿ ಐದು ಮಂದಿ ಇದನ್ನು ಆರಂಭಿಸಿದರು.  ಇತ್ತೀಚೆಗೆ ತಮ್ಮ ಬ್ಯಾಂಡ್​ ಸದಸ್ಯರ ಜತೆ ಫೋಟೋ ಹಾಕಿದ್ದ ಪಾರ್ಕರ್​, ‘ಕನಸಿನ ತಂಡ’ ಎಂದು ಕ್ಯಾಪ್ಶನ್​ ನೀಡಿದ್ದರು. ಈಗ ಆ ಕನಸಿನ ತಂಡದಿಂದ ಅವರು ದೂರವಾಗಿದ್ದಾರೆ.

ಇದನ್ನೂ ಓದಿ: ತೆರೆಗೆ ಬಂದ ಸಂಚಾರಿ ವಿಜಯ್ ನಟನೆಯ ಕೊನೆಯ ಸಿನಿಮಾ ‘ತಲೆದಂಡ’

ಹೆಲಿಕಾಪ್ಟರ್ ಮೂಲಕ ವಿಜಯ್ ದೇವರಕೊಂಡ ಮಾಸ್​ ಎಂಟ್ರಿ; ಇಲ್ಲಿದೆ ವಿಡಿಯೋ

Published On - 9:17 am, Fri, 1 April 22

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು