AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡು ದೊಡ್ಡ ನಿರ್ಮಾಣ ಸಂಸ್ಥೆಗಳಿಂದ ಪ್ರಶಾಂತ್ ನೀಲ್ ಬರ್ತ್​ಡೇಗೆ ವಿಶ್; ಸಿನಿಮಾ ಬಗ್ಗೆ ಇಲ್ಲ ಅಪ್​ಡೇಟ್

ಮುಂದಿನ ದಿನಗಳಲ್ಲಿ ಮತ್ತಷ್ಟು ಯಶಸ್ಸು ಸಿಗಲಿ, ಒಳ್ಳೆಯದಾಗಲಿ ಎಂದು ಪ್ರಶಾಂತ್ ನೀಲ್​ಗೆ ಹೊಂಬಾಳೆ ವಿಶ್ ಮಾಡಿದೆ. ‘ಕೆಜಿಎಫ್ ಮೂರನೇ ಪಾರ್ಟ್​ ಬಗ್ಗೆ ಅಪ್​ಡೇಟ್ ಸಿಗಲಿ’ ಎಂದು ಕೆಲವರು ಕೋರಿದ್ದಾರೆ. ‘ಅದ್ಭುತ ಸಿನಿಮಾಗಳನ್ನು ನೀಡಿದ ನಿಮಗೆ ಧನ್ಯವಾದ’ ಎಂದು ಕೆಲವರು ಹೇಳಿದ್ದಾರೆ.

ಎರಡು ದೊಡ್ಡ ನಿರ್ಮಾಣ ಸಂಸ್ಥೆಗಳಿಂದ ಪ್ರಶಾಂತ್ ನೀಲ್ ಬರ್ತ್​ಡೇಗೆ ವಿಶ್; ಸಿನಿಮಾ ಬಗ್ಗೆ ಇಲ್ಲ ಅಪ್​ಡೇಟ್
ಪ್ರಶಾಂತ್ ನೀಲ್
ರಾಜೇಶ್ ದುಗ್ಗುಮನೆ
|

Updated on: Jun 04, 2024 | 10:28 AM

Share

ಪ್ರಶಾಂತ್ ನೀಲ್ (Prashanth Neel) ಅವರಿಗೆ ಇಂದು (ಜೂನ್ 4) ಜನ್ಮದಿನ. ಅವರಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ. ಕನ್ನಡ ಚಿತ್ರರಂಗವನ್ನು ಬೇರೆಯದೇ ಹಂತಕ್ಕೆ ಕರೆದುಕೊಂಡು ಹೋದ ಖ್ಯಾತಿ ಅವರಿಗೆ ಇದೆ. ಅವರ ಮುಂದಿನ ಚಿತ್ರದ ಬಗ್ಗೆ ಘೋಷಣೆ ಆಗಿಲ್ಲ. ಈಗ ಅವರ ಜನ್ಮದಿನಕ್ಕೆ ನಿರ್ಮಾಣ ಸಂಸ್ಥೆಗಳಾದ ಹೊಂಬಾಳೆ ಫಿಲ್ಮ್ಸ್ ಹಾಗೂ ಮೈತ್ರಿ ಮೂವೀ ಮೇಕರ್ಸ್ ಕಡೆಯಿಂದ ಶುಭಾಶಯ ಬಂದಿದೆ. ಆದರೆ, ‘ಕೆಜಿಎಫ್ 3’ ಬಗ್ಗೆ ಆಗಲಿ, ಜೂನಿಯರ್ ಎನ್​ಟಿಆರ್ ಕುರಿತ ಸಿನಿಮಾ ಬಗ್ಗೆ ಆಗಲಿ ಯಾವುದೇ ಘೋಷಣೆ ಆಗಿಲ್ಲ. ಇದರ ಬಗ್ಗೆ ಅಭಿಮಾನಿಗಳು ಪ್ರಶ್ನೆ ಮಾಡುತ್ತಿದ್ದಾರೆ.

ಪ್ರಶಾಂತ್ ನೀಲ್ ಅವರು ನಿರ್ದೇಶನ ಮಾಡಿದ್ದು ಕೆಲವೇ ಕೆಲವು ಸಿನಿಮಾಗಳನ್ನು. ‘ಉಗ್ರಂ’ ಸಿನಿಮಾ ಸಾಧಾರಣ ಹಿಟ್ ಎನಿಸಿಕೊಂಡಿತು. ಆದರೆ, ಈ ಚಿತ್ರದಿಂದ ಅವರ ಖ್ಯಾತಿ ಹೆಚ್ಚಿತು. ಆ ಬಳಿಕ ಅವರಿಗೆ ‘ಕೆಜಿಎಫ್’ ಆಫರ್ ಸಿಕ್ಕಿತು. ‘ಕೆಜಿಎಫ್’ ಹಾಗೂ ‘ಕೆಜಿಎಫ್ 2’ ಚಿತ್ರಗಳಿಂದ ಅವರು ದೊಡ್ಡ ಗೆಲುವು ಕಂಡರು. ‘ಕೆಜಿಎಫ್ 3’ ಬರುವ ಸೂಚನೆ ಕೊಟ್ಟ ಬಳಿಕ ಅವರು ‘ಸಲಾರ್’ ಸಿನಿಮಾ ಕೈಗೆತ್ತಿಕೊಂಡರು. ಇದಕ್ಕೆ ಎರಡನೇ ಪಾರ್ಟ್ ಬರಬೇಕಿದೆ. ಈ ಯಾವ ಸಿನಿಮಾ ಬಗ್ಗೆಯೂ ಹೊಂಬಾಳೆ ಅಪ್​​ಡೇಟ್ ನೀಡಿಲ್ಲ.

ಮುಂದಿನ ದಿನಗಳಲ್ಲಿ ಮತ್ತಷ್ಟು ಯಶಸ್ಸು ಸಿಗಲಿ, ಒಳ್ಳೆಯದಾಗಲಿ ಎಂದು ಪ್ರಶಾಂತ್ ನೀಲ್​ಗೆ ಹೊಂಬಾಳೆ ವಿಶ್ ಮಾಡಿದೆ. ‘ಕೆಜಿಎಫ್ ಮೂರನೇ ಪಾರ್ಟ್​ ಬಗ್ಗೆ ಅಪ್​ಡೇಟ್ ಸಿಗಲಿ’ ಎಂದು ಕೆಲವರು ಕೋರಿದ್ದಾರೆ. ‘ಅದ್ಭುತ ಸಿನಿಮಾಗಳನ್ನು ನೀಡಿದ ನಿಮಗೆ ಧನ್ಯವಾದ’ ಎಂದು ಕೆಲವರು ಹೇಳಿದ್ದಾರೆ.

ಇದನ್ನೂ ಓದಿ: ಪ್ರಶಾಂತ್ ನೀಲ್-ಜೂ ಎನ್​ಟಿಆರ್ ಸಿನಿಮಾಕ್ಕೆ ಯುವ ನಾಯಕ ನಟ ಎಂಟ್ರಿ

ಪ್ರಶಾಂತ್ ನೀಲ್ ಹಾಗೂ ಜೂನಿಯರ್​ ಎನ್​ಟಿಆರ್ ಒಟ್ಟಾಗಿ ಸಿನಿಮಾ ಮಾಡಬೇಕಿದೆ. ಈ ಚಿತ್ರಕ್ಕೆ ಮೈತ್ರಿ ಮೂವೀ ಮೇಕರ್ಸ್ ಬಂಡವಾಳ ಹೂಡುತ್ತಿದೆ. ಅವರು ಕೂಡ ಪ್ರಶಾಂತ್ ನೀಲ್​ಗೆ ವಿಶ್ ಮಾಡಿದ್ದಾರೆ. ಇದರಲ್ಲಿ ಪ್ರಶಾಂತ್ ಅವರ ಕೆಲಸವನ್ನು ಹೊಗಳಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!