AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ‘ಎರಡು ದೊಡ್ಡ ಕನಸುಗಳ ಸಮ್ಮಿಲನ’; ಮತ್ತೊಂದು ದೊಡ್ಡ ಹೆಜ್ಜೆ ಇಡಲು ಹೊಂಬಾಳೆ ಫಿಲ್ಮ್ಸ್ ರೆಡಿ

‘ಎರಡು ದೊಡ್ಡ ಕನಸುಗಳ ಸಮ್ಮಿಲನ. ಮನರಂಜನೆಯ ಹೊಸ ಯುಗಕ್ಕೆ ನಾಂದಿ’ ಎಂದು ಹೊಂಬಾಳೆ ಫಿಲ್ಮ್ಸ್ ಬರೆದುಕೊಂಡಿದ್ದು, ಈ ಬಗ್ಗೆ ಭಾನುವಾರ ಬೆಳಗ್ಗೆ 11:15ಕ್ಕೆ ಘೋಷಣೆ ಆಗಲಿದೆ.

 ‘ಎರಡು ದೊಡ್ಡ ಕನಸುಗಳ ಸಮ್ಮಿಲನ’; ಮತ್ತೊಂದು ದೊಡ್ಡ ಹೆಜ್ಜೆ ಇಡಲು ಹೊಂಬಾಳೆ ಫಿಲ್ಮ್ಸ್ ರೆಡಿ
ಹೊಂಬಾಳೆ-ಆರ್​ಸಿಬಿ
TV9 Web
| Edited By: |

Updated on:Apr 09, 2022 | 6:01 PM

Share

‘ಹೊಂಬಾಳೆ ಫಿಲ್ಮ್ಸ್​’ (Hombale Films) ಚಿತ್ರರಂಗದಲ್ಲಿ ದೊಡ್ಡದೊಡ್ಡ ಹೆಜ್ಜೆಗಳನ್ನು ಇಟ್ಟು ಸಾಗುತ್ತಿದೆ. ‘ನಿನ್ನಿಂದಲೇ’ ಚಿತ್ರದ ಮೂಲಕ ಸಿನಿಮಾ ನಿರ್ಮಾಣ ಆರಂಭಿಸಿದ ಈ ಸಂಸ್ಥೆ ಈಗ ದೊಡ್ಡ ಮಟ್ಟದಲ್ಲಿ ಬೆಳೆದು ನಿಂತಿದೆ. ಕನ್ನಡದ ನಿರ್ಮಾಣ ಸಂಸ್ಥೆಯೊಂದು ತೆಲುಗಿನ ಸ್ಟಾರ್ ನಟ ಪ್ರಭಾಸ್ (Prabhas)​ ಚಿತ್ರಕ್ಕೆ ಬಂಡವಾಳ ಹೂಡುತ್ತಿರುವುದು ಇದೇ ಮೊದಲು. ಇನ್ನು, ‘ಕೆಜಿಎಫ್​ 2’ ಚಿತ್ರವನ್ನು (KGF Chapter 2) ವಿಶ್ವಮಟ್ಟದಲ್ಲಿ ದೊಡ್ಡದಾಗಿ ರಿಲೀಸ್​ ಮಾಡುವ ಕೆಲಸವನ್ನು ಚಾಲೆಂಜಿಂಗ್ ಆಗಿ ತೆಗೆದುಕೊಂಡಿದೆ. ಇಷ್ಟು ಎತ್ತರಕ್ಕೆ ಬೆಳೆದು ನಿಂತಿರುವ ಹೊಂಬಾಳೆ ಫಿಲ್ಮ್ಸ್’ ಈಗ ಮತ್ತೊಂದು  ದೊಡ್ಡ ಹೆಜ್ಜೆ ಇಡುತ್ತಿದೆ. ಈ ಬಗ್ಗೆ ಭಾನುವಾರ (ಏಪ್ರಿಲ್ 10) 11:45ಕ್ಕೆ ಘೋಷಣೆ ಮಾಡುವುದಾಗಿ ಸಂಸ್ಥೆ ತಿಳಿಸಿದೆ.

ವಿಜಯ್​ ಕಿರಗಂದೂರು ಅವರು ‘ಹೊಂಬಾಳೆ ಫಿಲ್ಮ್ಸ್​’ ಹುಟ್ಟು ಹಾಕಿದರು. 2014ರಲ್ಲಿ ತೆರೆಗೆ ಬಂದ ‘ನಿನ್ನಿಂದಲೇ’ ಈ ಸಂಸ್ಥೆಯ ಮೊದಲ ಸಿನಿಮಾ. ಇದಾದ ನಂತರ 2015ರಲ್ಲಿ ಅವರ ನಿರ್ಮಾಣದ ‘ಮಾಸ್ಟರ್​ಪೀಸ್​’ ತೆರೆಗೆ ಬಂತು. 2017ರಲ್ಲಿ ‘ರಾಜಕುಮಾರ’​ ಸಿನಿಮಾ ರಿಲೀಸ್​ ಆಯಿತು. ‘ಕೆಜಿಎಫ್​: ಚಾಪ್ಟರ್​ 1’ ನಿರ್ಮಾಣ ಮಾಡಿ 2018ರಲ್ಲಿ ಅದನ್ನು ರಿಲೀಸ್​ ಮಾಡಿತು ಹೊಂಬಾಳೆ ಫಿಲ್ಮ್ಸ್​. ಈ ಸಿನಿಮಾ ದೊಡ್ಡ ಯಶಸ್ಸು ಪಡೆಯಿತು. ಆ ಬಳಿಕ ‘ಯುವರತ್ನ’ ಸಿನಿಮಾ ರಿಲೀಸ್​ ಆಯಿತು. ಈಗ ‘ಕೆಜಿಎಫ್​ 2’ ತೆರೆಗೆ ಬರೋಕೆ ರೆಡಿ ಆಗಿದೆ. ಇವುಗಳ ಬೆನ್ನಲ್ಲೇ ‘ಹೊಂಬಾಳೆ ಫಿಲ್ಮ್ಸ್​’ ಹೊಸ ಘೋಷಣೆ ಮಾಡೋಕೆ ರೆಡಿ ಆಗಿದೆ

‘ಎರಡು ದೊಡ್ಡ ಕನಸುಗಳ ಸಮ್ಮಿಲನ. ಮನರಂಜನೆಯ ಹೊಸ ಯುಗಕ್ಕೆ ನಾಂದಿ’ ಎಂದು ಹೊಂಬಾಳೆ ಫಿಲ್ಮ್ಸ್ ಬರೆದುಕೊಂಡಿದ್ದು, ಈ ಬಗ್ಗೆ ಭಾನುವಾರ ಬೆಳಗ್ಗೆ 11:15ಕ್ಕೆ ಘೋಷಣೆ ಆಗಲಿದೆ. ವಿಶೇಷ ಎಂದರೆ, ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಕೂಡ ಇದೇ ಮಾದರಿಯ ಘೋಷಣೆ ಮಾಡಿದೆ. ‘ಎರಡು ಕನಸುಗಳ ಸಮ್ಮಿಲನ’ ಎನ್ನುವ ಕ್ಯಾಪ್ಶನ್​ ನೀಡಿ, ಭಾನುವಾರ ಬೆಳಗ್ಗೆ 11:15ಕ್ಕೆ ಘೋಷಣೆ ಎಂದು ಹೇಳಿದೆ. ಇದರಿಂದ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.

‘ಕೆಜಿಎಫ್​ 2’ ರಿಲೀಸ್ ದಿನಾಂಕ ಹತ್ತಿರವಾಗಿದೆ. ಹೀಗಾಗಿ, ಸಿನಿಮಾ ಪ್ರಚಾರಕ್ಕೆ ನಿರ್ಮಾಣ ಸಂಸ್ಥೆ ಈ ರೀತಿಯ ಪ್ಲ್ಯಾನ್ ರೂಪಿಸಿರಬಹುದು ಎಂಬುದು ಕೆಲವರ ಊಹೆ. ಆದರೆ, ಭಾನುವಾರ ಆಗುತ್ತಿರುವ ಘೋಷಣೆ ಸಿನಿಮಾಗೆ ಸಂಬಂಧಿಸಿದ್ದಲ್ಲ, ಬದಲಿಗೆ ಇಡೀ ಇಂಡಸ್ಟ್ರಿಗೆ ಸಂಬಂಧಿಸಿದ್ದು ಎನ್ನುತ್ತಿವೆ ಮೂಲಗಳು. ಈ ಎಲ್ಲಾ ಕುತೂಹಲಕ್ಕೆ ಭಾನುವಾರ ತೆರೆ ಬೀಳಲಿದೆ.

ಇದನ್ನೂ ಓದಿ: ಭಾನುವಾರದಿಂದ ಕರ್ನಾಟಕದಲ್ಲಿ ‘ಕೆಜಿಎಫ್​ ಚಾಪ್ಟರ್ 2’ ಟಿಕೆಟ್ ಬುಕಿಂಗ್​ ಓಪನ್​; ಎಷ್ಟು ಗಂಟೆಗೆ ಶೋ ಶುರು?

ಪುನೀತ್​ ಮಾಡಬೇಕಿದ್ದ ಚಿತ್ರದಲ್ಲಿ ಯುವ ರಾಜ್​ಕುಮಾರ್​? ‘ಹೊಂಬಾಳೆ ಫಿಲ್ಮ್ಸ್​’ ಬಗ್ಗೆ ಹಬ್ಬಿದೆ ಗುಸುಗುಸು

Published On - 5:59 pm, Sat, 9 April 22

Follow Us
Web contact
Web contact

TV9 Kannada

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್