AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ‘ಎರಡು ದೊಡ್ಡ ಕನಸುಗಳ ಸಮ್ಮಿಲನ’; ಮತ್ತೊಂದು ದೊಡ್ಡ ಹೆಜ್ಜೆ ಇಡಲು ಹೊಂಬಾಳೆ ಫಿಲ್ಮ್ಸ್ ರೆಡಿ

‘ಎರಡು ದೊಡ್ಡ ಕನಸುಗಳ ಸಮ್ಮಿಲನ. ಮನರಂಜನೆಯ ಹೊಸ ಯುಗಕ್ಕೆ ನಾಂದಿ’ ಎಂದು ಹೊಂಬಾಳೆ ಫಿಲ್ಮ್ಸ್ ಬರೆದುಕೊಂಡಿದ್ದು, ಈ ಬಗ್ಗೆ ಭಾನುವಾರ ಬೆಳಗ್ಗೆ 11:15ಕ್ಕೆ ಘೋಷಣೆ ಆಗಲಿದೆ.

 ‘ಎರಡು ದೊಡ್ಡ ಕನಸುಗಳ ಸಮ್ಮಿಲನ’; ಮತ್ತೊಂದು ದೊಡ್ಡ ಹೆಜ್ಜೆ ಇಡಲು ಹೊಂಬಾಳೆ ಫಿಲ್ಮ್ಸ್ ರೆಡಿ
ಹೊಂಬಾಳೆ-ಆರ್​ಸಿಬಿ
TV9 Web
| Edited By: |

Updated on:Apr 09, 2022 | 6:01 PM

Share

‘ಹೊಂಬಾಳೆ ಫಿಲ್ಮ್ಸ್​’ (Hombale Films) ಚಿತ್ರರಂಗದಲ್ಲಿ ದೊಡ್ಡದೊಡ್ಡ ಹೆಜ್ಜೆಗಳನ್ನು ಇಟ್ಟು ಸಾಗುತ್ತಿದೆ. ‘ನಿನ್ನಿಂದಲೇ’ ಚಿತ್ರದ ಮೂಲಕ ಸಿನಿಮಾ ನಿರ್ಮಾಣ ಆರಂಭಿಸಿದ ಈ ಸಂಸ್ಥೆ ಈಗ ದೊಡ್ಡ ಮಟ್ಟದಲ್ಲಿ ಬೆಳೆದು ನಿಂತಿದೆ. ಕನ್ನಡದ ನಿರ್ಮಾಣ ಸಂಸ್ಥೆಯೊಂದು ತೆಲುಗಿನ ಸ್ಟಾರ್ ನಟ ಪ್ರಭಾಸ್ (Prabhas)​ ಚಿತ್ರಕ್ಕೆ ಬಂಡವಾಳ ಹೂಡುತ್ತಿರುವುದು ಇದೇ ಮೊದಲು. ಇನ್ನು, ‘ಕೆಜಿಎಫ್​ 2’ ಚಿತ್ರವನ್ನು (KGF Chapter 2) ವಿಶ್ವಮಟ್ಟದಲ್ಲಿ ದೊಡ್ಡದಾಗಿ ರಿಲೀಸ್​ ಮಾಡುವ ಕೆಲಸವನ್ನು ಚಾಲೆಂಜಿಂಗ್ ಆಗಿ ತೆಗೆದುಕೊಂಡಿದೆ. ಇಷ್ಟು ಎತ್ತರಕ್ಕೆ ಬೆಳೆದು ನಿಂತಿರುವ ಹೊಂಬಾಳೆ ಫಿಲ್ಮ್ಸ್’ ಈಗ ಮತ್ತೊಂದು  ದೊಡ್ಡ ಹೆಜ್ಜೆ ಇಡುತ್ತಿದೆ. ಈ ಬಗ್ಗೆ ಭಾನುವಾರ (ಏಪ್ರಿಲ್ 10) 11:45ಕ್ಕೆ ಘೋಷಣೆ ಮಾಡುವುದಾಗಿ ಸಂಸ್ಥೆ ತಿಳಿಸಿದೆ.

ವಿಜಯ್​ ಕಿರಗಂದೂರು ಅವರು ‘ಹೊಂಬಾಳೆ ಫಿಲ್ಮ್ಸ್​’ ಹುಟ್ಟು ಹಾಕಿದರು. 2014ರಲ್ಲಿ ತೆರೆಗೆ ಬಂದ ‘ನಿನ್ನಿಂದಲೇ’ ಈ ಸಂಸ್ಥೆಯ ಮೊದಲ ಸಿನಿಮಾ. ಇದಾದ ನಂತರ 2015ರಲ್ಲಿ ಅವರ ನಿರ್ಮಾಣದ ‘ಮಾಸ್ಟರ್​ಪೀಸ್​’ ತೆರೆಗೆ ಬಂತು. 2017ರಲ್ಲಿ ‘ರಾಜಕುಮಾರ’​ ಸಿನಿಮಾ ರಿಲೀಸ್​ ಆಯಿತು. ‘ಕೆಜಿಎಫ್​: ಚಾಪ್ಟರ್​ 1’ ನಿರ್ಮಾಣ ಮಾಡಿ 2018ರಲ್ಲಿ ಅದನ್ನು ರಿಲೀಸ್​ ಮಾಡಿತು ಹೊಂಬಾಳೆ ಫಿಲ್ಮ್ಸ್​. ಈ ಸಿನಿಮಾ ದೊಡ್ಡ ಯಶಸ್ಸು ಪಡೆಯಿತು. ಆ ಬಳಿಕ ‘ಯುವರತ್ನ’ ಸಿನಿಮಾ ರಿಲೀಸ್​ ಆಯಿತು. ಈಗ ‘ಕೆಜಿಎಫ್​ 2’ ತೆರೆಗೆ ಬರೋಕೆ ರೆಡಿ ಆಗಿದೆ. ಇವುಗಳ ಬೆನ್ನಲ್ಲೇ ‘ಹೊಂಬಾಳೆ ಫಿಲ್ಮ್ಸ್​’ ಹೊಸ ಘೋಷಣೆ ಮಾಡೋಕೆ ರೆಡಿ ಆಗಿದೆ

‘ಎರಡು ದೊಡ್ಡ ಕನಸುಗಳ ಸಮ್ಮಿಲನ. ಮನರಂಜನೆಯ ಹೊಸ ಯುಗಕ್ಕೆ ನಾಂದಿ’ ಎಂದು ಹೊಂಬಾಳೆ ಫಿಲ್ಮ್ಸ್ ಬರೆದುಕೊಂಡಿದ್ದು, ಈ ಬಗ್ಗೆ ಭಾನುವಾರ ಬೆಳಗ್ಗೆ 11:15ಕ್ಕೆ ಘೋಷಣೆ ಆಗಲಿದೆ. ವಿಶೇಷ ಎಂದರೆ, ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಕೂಡ ಇದೇ ಮಾದರಿಯ ಘೋಷಣೆ ಮಾಡಿದೆ. ‘ಎರಡು ಕನಸುಗಳ ಸಮ್ಮಿಲನ’ ಎನ್ನುವ ಕ್ಯಾಪ್ಶನ್​ ನೀಡಿ, ಭಾನುವಾರ ಬೆಳಗ್ಗೆ 11:15ಕ್ಕೆ ಘೋಷಣೆ ಎಂದು ಹೇಳಿದೆ. ಇದರಿಂದ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.

‘ಕೆಜಿಎಫ್​ 2’ ರಿಲೀಸ್ ದಿನಾಂಕ ಹತ್ತಿರವಾಗಿದೆ. ಹೀಗಾಗಿ, ಸಿನಿಮಾ ಪ್ರಚಾರಕ್ಕೆ ನಿರ್ಮಾಣ ಸಂಸ್ಥೆ ಈ ರೀತಿಯ ಪ್ಲ್ಯಾನ್ ರೂಪಿಸಿರಬಹುದು ಎಂಬುದು ಕೆಲವರ ಊಹೆ. ಆದರೆ, ಭಾನುವಾರ ಆಗುತ್ತಿರುವ ಘೋಷಣೆ ಸಿನಿಮಾಗೆ ಸಂಬಂಧಿಸಿದ್ದಲ್ಲ, ಬದಲಿಗೆ ಇಡೀ ಇಂಡಸ್ಟ್ರಿಗೆ ಸಂಬಂಧಿಸಿದ್ದು ಎನ್ನುತ್ತಿವೆ ಮೂಲಗಳು. ಈ ಎಲ್ಲಾ ಕುತೂಹಲಕ್ಕೆ ಭಾನುವಾರ ತೆರೆ ಬೀಳಲಿದೆ.

ಇದನ್ನೂ ಓದಿ: ಭಾನುವಾರದಿಂದ ಕರ್ನಾಟಕದಲ್ಲಿ ‘ಕೆಜಿಎಫ್​ ಚಾಪ್ಟರ್ 2’ ಟಿಕೆಟ್ ಬುಕಿಂಗ್​ ಓಪನ್​; ಎಷ್ಟು ಗಂಟೆಗೆ ಶೋ ಶುರು?

ಪುನೀತ್​ ಮಾಡಬೇಕಿದ್ದ ಚಿತ್ರದಲ್ಲಿ ಯುವ ರಾಜ್​ಕುಮಾರ್​? ‘ಹೊಂಬಾಳೆ ಫಿಲ್ಮ್ಸ್​’ ಬಗ್ಗೆ ಹಬ್ಬಿದೆ ಗುಸುಗುಸು

Published On - 5:59 pm, Sat, 9 April 22

ಕೋಗಿಲು ಲೇಔಟ್ ಒತ್ತುವರಿದಾರರಿಗೆ ಭರ್ಜರಿ ಶಾಕ್​​: 80 ಅರ್ಜಿಗಳು ರಿಜೆಕ್ಟ್​
ಕೋಗಿಲು ಲೇಔಟ್ ಒತ್ತುವರಿದಾರರಿಗೆ ಭರ್ಜರಿ ಶಾಕ್​​: 80 ಅರ್ಜಿಗಳು ರಿಜೆಕ್ಟ್​
ಗಣರಾಜ್ಯೋತ್ಸವ 2026: ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳ ಉಪಹಾರ ವಿತರಣೆ
ಗಣರಾಜ್ಯೋತ್ಸವ 2026: ಕೈದಿಗಳು ತಯಾರಿಸಿದ ಬೇಕರಿ ಉತ್ಪನ್ನಗಳ ಉಪಹಾರ ವಿತರಣೆ
ರೈತರ ಪ್ರತಿಭಟನೆ ವೇಳೆ ಕುಮಾರಸ್ವಾಮಿ ಬಳಿ ಸೆರಗೊಡ್ಡಿ ಮಹಿಳೆ ಮನವಿ
ರೈತರ ಪ್ರತಿಭಟನೆ ವೇಳೆ ಕುಮಾರಸ್ವಾಮಿ ಬಳಿ ಸೆರಗೊಡ್ಡಿ ಮಹಿಳೆ ಮನವಿ
ಚೋರ್ಲಾ ಘಾಟ್‌ ರಾಬರಿ ರಹಸ್ಯ ಬಿಚ್ಚಿಟ್ಟ ಪೊಲೀಸ್​​ ವರಿಷ್ಠಾಧಿಕಾರಿ
ಚೋರ್ಲಾ ಘಾಟ್‌ ರಾಬರಿ ರಹಸ್ಯ ಬಿಚ್ಚಿಟ್ಟ ಪೊಲೀಸ್​​ ವರಿಷ್ಠಾಧಿಕಾರಿ
ಬಿಬಿಎಲ್​ನಲ್ಲಿ ದಾಖಲೆಯ 6ನೇ ಬಾರಿಗೆ ಪ್ರಶಸ್ತಿ ಗೆದ್ದ ಪರ್ತ್ ಸ್ಕಾರ್ಚರ್ಸ್
ಬಿಬಿಎಲ್​ನಲ್ಲಿ ದಾಖಲೆಯ 6ನೇ ಬಾರಿಗೆ ಪ್ರಶಸ್ತಿ ಗೆದ್ದ ಪರ್ತ್ ಸ್ಕಾರ್ಚರ್ಸ್
ನಾನು ಇರೋದೇ ಬೋಡ ಕಣೇ: ಬಾಲಕಿ ಜತೆ ರಾಜ್ ಬಿ. ಶೆಟ್ಟಿ ಕ್ಯೂಟ್ ಮಾತುಕಥೆ
ನಾನು ಇರೋದೇ ಬೋಡ ಕಣೇ: ಬಾಲಕಿ ಜತೆ ರಾಜ್ ಬಿ. ಶೆಟ್ಟಿ ಕ್ಯೂಟ್ ಮಾತುಕಥೆ
ರಾಜ್ಯಪಾಲರ ಭಾಷಣದ ಕುರಿತು ಸಿದ್ದರಾಮಯ್ಯ ರಿಯಾಕ್ಷನ್ ಹೀಗಿತ್ತು!
ರಾಜ್ಯಪಾಲರ ಭಾಷಣದ ಕುರಿತು ಸಿದ್ದರಾಮಯ್ಯ ರಿಯಾಕ್ಷನ್ ಹೀಗಿತ್ತು!
ಪೊಲೀಸರಿಗೆ ನೀಡಿದ್ದ ವಿಡಿಯೋ ಸೀಕ್ರೆಟ್ ಬಿಚ್ಚಿಟ್ಟ ಜನಾರ್ದನರೆಡ್ಡಿ
ಪೊಲೀಸರಿಗೆ ನೀಡಿದ್ದ ವಿಡಿಯೋ ಸೀಕ್ರೆಟ್ ಬಿಚ್ಚಿಟ್ಟ ಜನಾರ್ದನರೆಡ್ಡಿ
ಹೌಸ್​ಫುಲ್ ಪ್ರದರ್ಶನ ಕಂಡ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ
ಹೌಸ್​ಫುಲ್ ಪ್ರದರ್ಶನ ಕಂಡ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ
ಬೆಳಗಾವಿ ಗಡಿಯಲ್ಲಿ 400 ಕೋಟಿ ರೂ. ದರೋಡೆ; ಪರಮೇಶ್ವರ್ ಹೇಳಿದ್ದೇನು?
ಬೆಳಗಾವಿ ಗಡಿಯಲ್ಲಿ 400 ಕೋಟಿ ರೂ. ದರೋಡೆ; ಪರಮೇಶ್ವರ್ ಹೇಳಿದ್ದೇನು?