AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tyson: ಮಲಯಾಳಂ ಸ್ಟಾರ್ ನಟ ಪೃಥ್ವಿರಾಜ್​ ಜತೆ ಹೊಸ ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್​

‘ಟೈಸನ್​’ ಚಿತ್ರಕ್ಕೆ ಪೃಥ್ವಿರಾಜ್​ ಅವರೇ ನಿರ್ದೇಶನ ಮಾಡುತ್ತಿದ್ದಾರೆ. ಜತೆಗೆ ಅವರು ಸಿನಿಮಾದಲ್ಲಿ ಹೀರೋ ಆಗಿ ನಟಿಸುತ್ತಿದ್ದಾರೆ. ಇದು ಐಎಎಸ್​ ಅಧಿಕಾರಿಯ ಕಥೆ ಎಂಬುದನ್ನು ಪೋಸ್ಟರ್ ಹೇಳುತ್ತಿದೆ.

Tyson: ಮಲಯಾಳಂ ಸ್ಟಾರ್ ನಟ ಪೃಥ್ವಿರಾಜ್​ ಜತೆ ಹೊಸ ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್​
ಪೃಥ್ವಿರಾಜ್
TV9 Web
| Edited By: |

Updated on:Jun 10, 2022 | 8:58 PM

Share

‘ಕೆಜಿಎಫ್ 2’ ತೆರೆಕಂಡ ಬಳಿಕ ವಿಜಯ್ ಕಿರಗಂದೂರು (Vijay Kiragandur) ಒಡೆತನದ ‘ಹೊಂಬಾಳೆ ಫಿಲ್ಮ್ಸ್​’  (Hombale Films) ಖ್ಯಾತಿ ವಿಶ್ವ ಮಟ್ಟದಲ್ಲಿ ಹಬ್ಬಿದೆ. ಪರ ಭಾಷೆಯಲ್ಲೂ ಚಿತ್ರಗಳನ್ನು ನಿರ್ಮಾಣ ಮಾಡುವುದರಲ್ಲಿ ಹೊಂಬಾಳೆ ಫಿಲ್ಮ್ಸ್​ ಬ್ಯುಸಿ ಆಗಿದೆ. ಈಗ ಮಲಯಾಳಂ ಸ್ಟಾರ್ ನಟ ಪೃಥ್ವಿರಾಜ್​ ಸುಕುಮಾರನ್ ಜತೆ ಹೊಸ ಸಿನಿಮಾ ಘೋಷಿಸುವ ಮೂಲಕ ಈ ನಿರ್ಮಾಣ ಸಂಸ್ಥೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಈ ಚಿತ್ರಕ್ಕೆ ‘ಟೈಸನ್’ (Tyson) ಎನ್ನುವ ಶೀರ್ಷಿಕೆ ಇಡಲಾಗಿದೆ.

‘ಟೈಸನ್​’ ಚಿತ್ರಕ್ಕೆ ಪೃಥ್ವಿರಾಜ್​ ಅವರೇ ನಿರ್ದೇಶನ ಮಾಡುತ್ತಿದ್ದಾರೆ. ಜತೆಗೆ ಅವರು ಸಿನಿಮಾದಲ್ಲಿ ಹೀರೋ ಆಗಿ ನಟಿಸುತ್ತಿದ್ದಾರೆ. ಇದು ಐಎಎಸ್​ ಅಧಿಕಾರಿಯ ಕಥೆ ಎಂಬುದನ್ನು ಪೋಸ್ಟರ್ ಹೇಳುತ್ತಿದೆ. ‘ಹೊಂಬಾಳೆ ಫಿಲ್ಮ್ಸ್​’ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಯಶಸ್ಸು ಕಂಡಿದೆ. ಹೀಗಾಗಿ, ಈ ಚಿತ್ರ ಕೂಡ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಮಲಯಾಳಂ, ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿಯಲ್ಲಿ ಚಿತ್ರ ಸಿದ್ಧಗೊಳ್ಳಲಿದೆ.

ಇದನ್ನೂ ಓದಿ
Image
50ನೇ ದಿನ ‘ಕೆಜಿಎಫ್ 2’ ಎಷ್ಟು ಕಡೆಗಳಲ್ಲಿ ಪ್ರದರ್ಶನ ಕಾಣುತ್ತಿದೆ; ಇಲ್ಲಿದೆ ಮಾಹಿತಿ
Image
Srinidhi Shetty: ಗ್ಲಾಮರಸ್ ಲುಕ್​ನಲ್ಲಿ ‘ಕೆಜಿಎಫ್’ ಬೆಡಗಿ ಶ್ರೀನಿಧಿ ಶೆಟ್ಟಿ; ಫೋಟೋಗಳು ಇಲ್ಲಿವೆ
Image
ಮಧ್ಯರಾತ್ರಿ ಸಿನಿಮಾ ವೀಕ್ಷಿಸಿದ ಶ್ರೀನಿಧಿ ಶೆಟ್ಟಿ, ಗರುಡ, ವಿನಯ್ ರಾಜ್​ಕುಮಾರ್..; ಚಿತ್ರ ನೋಡಿ ಆಶಾ ಭಟ್ ಹೇಳಿದ್ದೇನು?
Image
Srinidhi Shetty: ‘ಕೆಜಿಎಫ್’ ಬೆಡಗಿ ಶ್ರೀನಿಧಿ ಶೆಟ್ಟಿ ಕ್ಯೂಟ್ ಫೋಟೋ ಗ್ಯಾಲರಿ

‘ಟೈಸನ್​’ ಪೋಸ್ಟರ್​ನಲ್ಲಿ ವ್ಯಕ್ತಿಯೋರ್ವ ಬೋರ್ಡ್​ಮೇಲೆ ಹೆಸರನ್ನು ಬರೆಯುತ್ತಿದ್ದಾನೆ. ರಂಜನ್ ಘೋಷ್ ಎಂಬ ಐಎಎಸ್ ಅಧಿಕಾರಿ 2022-2023ವರೆಗೆ ಸೇವೆ ಸಲ್ಲಿಸಿರುವಾಗಿ ಬರೆಯಲಾಗಿದೆ. ಹೀಗಾಗಿ, ಸಿನಿಮಾ 2023 ಅಥವಾ 2024ರಲ್ಲಿ ರಿಲೀಸ್ ಆಗಬಹುದು ಎಂದು ಅಂದಾಜಿಸಲಾಗುತ್ತಿದೆ.

ಏಪ್ರಿಲ್ 14ರಂದು ‘ಕೆಜಿಎಫ್ 2’ ಸಿನಿಮಾ ರಿಲೀಸ್ ಆಯಿತು. ಈ ಚಿತ್ರ ರಿಲೀಸ್ ಆಗಿ ಎರಡು ತಿಂಗಳು ಕಳೆಯುತ್ತಾ ಬಂದಿದೆ. ಈ ಸಿನಿಮಾ 1200 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಈ ಸಿನಿಮಾದಿಂದ ನಿರ್ಮಾಣ ಸಂಸ್ಥೆಗೆ ದುಡ್ಡಿನ ಹೊಳೆಯೇ ಹರಿದಿದೆ. ಮತ್ತಷ್ಟು ಚಿತ್ರಗಳನ್ನು ನಿರ್ಮಾಣ ಮಾಡಲು ಬಲ ಸಿಕ್ಕಂತೆ ಆಗಿದೆ. ಹೀಗಾಗಿ, ಹೊಸಹೊಸ ಪ್ರಾಜೆಕ್ಟ್​ಗಳನ್ನು ಘೋಷಣೆ ಮಾಡಲಾಗುತ್ತಿದೆ.

‘ನಿನ್ನಿಂದಲೇ’, ‘ಮಾಸ್ಟರ್​​ಪೀಸ್​’, ‘ರಾಜಕುಮಾರ’, ‘ಕೆಜಿಎಫ್: ಚಾಪ್ಟರ್ 1’, ‘ಯುವರತ್ನ’, ‘ಕೆಜಿಎಫ್: ಚಾಪ್ಟರ್​ 2’ ಚಿತ್ರಗಳನ್ನು ‘ಹೊಂಬಾಳೆ ಫಿಲ್ಮ್ಸ್​’ ಇಲ್ಲಿಯವರೆಗೆ ನಿರ್ಮಾಣ ಮಾಡಿದೆ. ‘ಕಾಂತಾರ’, ‘ರಾಘವೇಂದ್ರ ಸ್ಟೋರ್ಸ್​’, ‘ಸಲಾರ್’, ‘ಬಘೀರ’, ‘ರಿಚರ್ಡ್​ ಆ್ಯಂಟನಿ’ ಸಿನಿಮಾಗಳು ನಿರ್ಮಾಣ ಹಂತದಲ್ಲಿವೆ. ಈಗ ಇದಕ್ಕೆ ಹೊಸ ಸೇರ್ಪಡೆ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:38 pm, Fri, 10 June 22

Follow Us
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ