AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tyson: ಮಲಯಾಳಂ ಸ್ಟಾರ್ ನಟ ಪೃಥ್ವಿರಾಜ್​ ಜತೆ ಹೊಸ ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್​

ವಿಜಯ್ ಕಿರಗಂದೂರು ಒಡೆತನದ ‘ಹೊಂಬಾಳೆ ಫಿಲ್ಮ್ಸ್​’ ಖ್ಯಾತಿ ವಿಶ್ವ ಮಟ್ಟದಲ್ಲಿ ಹಬ್ಬಿದೆ. ಪರ ಭಾಷೆಯಲ್ಲೂ ಚಿತ್ರಗಳನ್ನು ನಿರ್ಮಾಣ ಮಾಡುವುದರಲ್ಲಿ ಹೊಂಬಾಳೆ ಫಿಲ್ಮ್ಸ್​ ಬ್ಯುಸಿ ಆಗಿದೆ. ‘ಟೈಸನ್​’ ಚಿತ್ರಕ್ಕೆ ಪೃಥ್ವಿರಾಜ್​ ಅವರೇ ನಿರ್ದೇಶನ ಮಾಡುತ್ತಿದ್ದಾರೆ. ಜತೆಗೆ ಅವರು ಸಿನಿಮಾದಲ್ಲಿ ಹೀರೋ ಆಗಿ ನಟಿಸುತ್ತಿದ್ದಾರೆ. ಇದು ಐಎಎಸ್​ ಅಧಿಕಾರಿಯ ಕಥೆ ಎಂಬುದನ್ನು ಪೋಸ್ಟರ್ ಹೇಳುತ್ತಿದೆ.

Tyson: ಮಲಯಾಳಂ ಸ್ಟಾರ್ ನಟ ಪೃಥ್ವಿರಾಜ್​ ಜತೆ ಹೊಸ ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್​
ಪೃಥ್ವಿರಾಜ್
ರಾಜೇಶ್ ದುಗ್ಗುಮನೆ
| Edited By: |

Updated on:Jul 05, 2026 | 3:10 PM

Share

‘ಕೆಜಿಎಫ್ 2’ ತೆರೆಕಂಡ ಬಳಿಕ ವಿಜಯ್ ಕಿರಗಂದೂರು (Vijay Kiragandur) ಒಡೆತನದ ‘ಹೊಂಬಾಳೆ ಫಿಲ್ಮ್ಸ್​’  (Hombale Films) ಖ್ಯಾತಿ ವಿಶ್ವ ಮಟ್ಟದಲ್ಲಿ ಹಬ್ಬಿದೆ. ಪರ ಭಾಷೆಯಲ್ಲೂ ಚಿತ್ರಗಳನ್ನು ನಿರ್ಮಾಣ ಮಾಡುವುದರಲ್ಲಿ ಹೊಂಬಾಳೆ ಫಿಲ್ಮ್ಸ್​ ಬ್ಯುಸಿ ಆಗಿದೆ. ಈಗ ಮಲಯಾಳಂ ಸ್ಟಾರ್ ನಟ ಪೃಥ್ವಿರಾಜ್​ ಸುಕುಮಾರನ್ ಜತೆ ಹೊಸ ಸಿನಿಮಾ ಘೋಷಿಸುವ ಮೂಲಕ ಈ ನಿರ್ಮಾಣ ಸಂಸ್ಥೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಈ ಚಿತ್ರಕ್ಕೆ ‘ಟೈಸನ್’ (Tyson) ಎನ್ನುವ ಶೀರ್ಷಿಕೆ ಇಡಲಾಗಿದೆ.

‘ಟೈಸನ್​’ ಚಿತ್ರಕ್ಕೆ ಪೃಥ್ವಿರಾಜ್​ ಅವರೇ ನಿರ್ದೇಶನ ಮಾಡುತ್ತಿದ್ದಾರೆ. ಜತೆಗೆ ಅವರು ಸಿನಿಮಾದಲ್ಲಿ ಹೀರೋ ಆಗಿ ನಟಿಸುತ್ತಿದ್ದಾರೆ. ಇದು ಐಎಎಸ್​ ಅಧಿಕಾರಿಯ ಕಥೆ ಎಂಬುದನ್ನು ಪೋಸ್ಟರ್ ಹೇಳುತ್ತಿದೆ. ‘ಹೊಂಬಾಳೆ ಫಿಲ್ಮ್ಸ್​’ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಯಶಸ್ಸು ಕಂಡಿದೆ. ಹೀಗಾಗಿ, ಈ ಚಿತ್ರ ಕೂಡ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಮಲಯಾಳಂ, ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿಯಲ್ಲಿ ಚಿತ್ರ ಸಿದ್ಧಗೊಳ್ಳಲಿದೆ.

ಇದನ್ನೂ ಓದಿ
Image
50ನೇ ದಿನ ‘ಕೆಜಿಎಫ್ 2’ ಎಷ್ಟು ಕಡೆಗಳಲ್ಲಿ ಪ್ರದರ್ಶನ ಕಾಣುತ್ತಿದೆ; ಇಲ್ಲಿದೆ ಮಾಹಿತಿ
Image
Srinidhi Shetty: ಗ್ಲಾಮರಸ್ ಲುಕ್​ನಲ್ಲಿ ‘ಕೆಜಿಎಫ್’ ಬೆಡಗಿ ಶ್ರೀನಿಧಿ ಶೆಟ್ಟಿ; ಫೋಟೋಗಳು ಇಲ್ಲಿವೆ
Image
ಮಧ್ಯರಾತ್ರಿ ಸಿನಿಮಾ ವೀಕ್ಷಿಸಿದ ಶ್ರೀನಿಧಿ ಶೆಟ್ಟಿ, ಗರುಡ, ವಿನಯ್ ರಾಜ್​ಕುಮಾರ್..; ಚಿತ್ರ ನೋಡಿ ಆಶಾ ಭಟ್ ಹೇಳಿದ್ದೇನು?
Image
Srinidhi Shetty: ‘ಕೆಜಿಎಫ್’ ಬೆಡಗಿ ಶ್ರೀನಿಧಿ ಶೆಟ್ಟಿ ಕ್ಯೂಟ್ ಫೋಟೋ ಗ್ಯಾಲರಿ

‘ಟೈಸನ್​’ ಪೋಸ್ಟರ್​ನಲ್ಲಿ ವ್ಯಕ್ತಿಯೋರ್ವ ಬೋರ್ಡ್​ಮೇಲೆ ಹೆಸರನ್ನು ಬರೆಯುತ್ತಿದ್ದಾನೆ. ರಂಜನ್ ಘೋಷ್ ಎಂಬ ಐಎಎಸ್ ಅಧಿಕಾರಿ 2022-2023ವರೆಗೆ ಸೇವೆ ಸಲ್ಲಿಸಿರುವಾಗಿ ಬರೆಯಲಾಗಿದೆ. ಹೀಗಾಗಿ, ಸಿನಿಮಾ 2023 ಅಥವಾ 2024ರಲ್ಲಿ ರಿಲೀಸ್ ಆಗಬಹುದು ಎಂದು ಅಂದಾಜಿಸಲಾಗುತ್ತಿದೆ.

ಏಪ್ರಿಲ್ 14ರಂದು ‘ಕೆಜಿಎಫ್ 2’ ಸಿನಿಮಾ ರಿಲೀಸ್ ಆಯಿತು. ಈ ಚಿತ್ರ ರಿಲೀಸ್ ಆಗಿ ಎರಡು ತಿಂಗಳು ಕಳೆಯುತ್ತಾ ಬಂದಿದೆ. ಈ ಸಿನಿಮಾ 1200 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಈ ಸಿನಿಮಾದಿಂದ ನಿರ್ಮಾಣ ಸಂಸ್ಥೆಗೆ ದುಡ್ಡಿನ ಹೊಳೆಯೇ ಹರಿದಿದೆ. ಮತ್ತಷ್ಟು ಚಿತ್ರಗಳನ್ನು ನಿರ್ಮಾಣ ಮಾಡಲು ಬಲ ಸಿಕ್ಕಂತೆ ಆಗಿದೆ. ಹೀಗಾಗಿ, ಹೊಸಹೊಸ ಪ್ರಾಜೆಕ್ಟ್​ಗಳನ್ನು ಘೋಷಣೆ ಮಾಡಲಾಗುತ್ತಿದೆ.

‘ನಿನ್ನಿಂದಲೇ’, ‘ಮಾಸ್ಟರ್​​ಪೀಸ್​’, ‘ರಾಜಕುಮಾರ’, ‘ಕೆಜಿಎಫ್: ಚಾಪ್ಟರ್ 1’, ‘ಯುವರತ್ನ’, ‘ಕೆಜಿಎಫ್: ಚಾಪ್ಟರ್​ 2’ ಚಿತ್ರಗಳನ್ನು ‘ಹೊಂಬಾಳೆ ಫಿಲ್ಮ್ಸ್​’ ಇಲ್ಲಿಯವರೆಗೆ ನಿರ್ಮಾಣ ಮಾಡಿದೆ. ‘ಕಾಂತಾರ’, ‘ರಾಘವೇಂದ್ರ ಸ್ಟೋರ್ಸ್​’, ‘ಸಲಾರ್’, ‘ಬಘೀರ’, ‘ರಿಚರ್ಡ್​ ಆ್ಯಂಟನಿ’ ಸಿನಿಮಾಗಳು ನಿರ್ಮಾಣ ಹಂತದಲ್ಲಿವೆ. ಈಗ ಇದಕ್ಕೆ ಹೊಸ ಸೇರ್ಪಡೆ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:38 pm, Fri, 10 June 22

Follow Us
ದಾವಣಗೆರೆ ಬಂದ್: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಬಸ್ ಸಂಚಾರಕ್ಕೆ ತಡೆ
ದಾವಣಗೆರೆ ಬಂದ್: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ, ಬಸ್ ಸಂಚಾರಕ್ಕೆ ತಡೆ
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಸಿಐಡಿ ಮುಂದೆ ತಪ್ಪೊಪ್ಪಿಕೊಂಡ 6 ಅಭ್ಯರ್ಥಿಗಳು!
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ