Tyson: ಮಲಯಾಳಂ ಸ್ಟಾರ್ ನಟ ಪೃಥ್ವಿರಾಜ್​ ಜತೆ ಹೊಸ ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್​

‘ಟೈಸನ್​’ ಚಿತ್ರಕ್ಕೆ ಪೃಥ್ವಿರಾಜ್​ ಅವರೇ ನಿರ್ದೇಶನ ಮಾಡುತ್ತಿದ್ದಾರೆ. ಜತೆಗೆ ಅವರು ಸಿನಿಮಾದಲ್ಲಿ ಹೀರೋ ಆಗಿ ನಟಿಸುತ್ತಿದ್ದಾರೆ. ಇದು ಐಎಎಸ್​ ಅಧಿಕಾರಿಯ ಕಥೆ ಎಂಬುದನ್ನು ಪೋಸ್ಟರ್ ಹೇಳುತ್ತಿದೆ.

Tyson: ಮಲಯಾಳಂ ಸ್ಟಾರ್ ನಟ ಪೃಥ್ವಿರಾಜ್​ ಜತೆ ಹೊಸ ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್​
ಪೃಥ್ವಿರಾಜ್
Follow us
| Updated By: ರಾಜೇಶ್ ದುಗ್ಗುಮನೆ

Updated on:Jun 10, 2022 | 8:58 PM

‘ಕೆಜಿಎಫ್ 2’ ತೆರೆಕಂಡ ಬಳಿಕ ವಿಜಯ್ ಕಿರಗಂದೂರು (Vijay Kiragandur) ಒಡೆತನದ ‘ಹೊಂಬಾಳೆ ಫಿಲ್ಮ್ಸ್​’  (Hombale Films) ಖ್ಯಾತಿ ವಿಶ್ವ ಮಟ್ಟದಲ್ಲಿ ಹಬ್ಬಿದೆ. ಪರ ಭಾಷೆಯಲ್ಲೂ ಚಿತ್ರಗಳನ್ನು ನಿರ್ಮಾಣ ಮಾಡುವುದರಲ್ಲಿ ಹೊಂಬಾಳೆ ಫಿಲ್ಮ್ಸ್​ ಬ್ಯುಸಿ ಆಗಿದೆ. ಈಗ ಮಲಯಾಳಂ ಸ್ಟಾರ್ ನಟ ಪೃಥ್ವಿರಾಜ್​ ಸುಕುಮಾರನ್ ಜತೆ ಹೊಸ ಸಿನಿಮಾ ಘೋಷಿಸುವ ಮೂಲಕ ಈ ನಿರ್ಮಾಣ ಸಂಸ್ಥೆ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಈ ಚಿತ್ರಕ್ಕೆ ‘ಟೈಸನ್’ (Tyson) ಎನ್ನುವ ಶೀರ್ಷಿಕೆ ಇಡಲಾಗಿದೆ.

‘ಟೈಸನ್​’ ಚಿತ್ರಕ್ಕೆ ಪೃಥ್ವಿರಾಜ್​ ಅವರೇ ನಿರ್ದೇಶನ ಮಾಡುತ್ತಿದ್ದಾರೆ. ಜತೆಗೆ ಅವರು ಸಿನಿಮಾದಲ್ಲಿ ಹೀರೋ ಆಗಿ ನಟಿಸುತ್ತಿದ್ದಾರೆ. ಇದು ಐಎಎಸ್​ ಅಧಿಕಾರಿಯ ಕಥೆ ಎಂಬುದನ್ನು ಪೋಸ್ಟರ್ ಹೇಳುತ್ತಿದೆ. ‘ಹೊಂಬಾಳೆ ಫಿಲ್ಮ್ಸ್​’ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಯಶಸ್ಸು ಕಂಡಿದೆ. ಹೀಗಾಗಿ, ಈ ಚಿತ್ರ ಕೂಡ ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಗುತ್ತಿದೆ. ಮಲಯಾಳಂ, ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿಯಲ್ಲಿ ಚಿತ್ರ ಸಿದ್ಧಗೊಳ್ಳಲಿದೆ.

ಇದನ್ನೂ ಓದಿ
Image
50ನೇ ದಿನ ‘ಕೆಜಿಎಫ್ 2’ ಎಷ್ಟು ಕಡೆಗಳಲ್ಲಿ ಪ್ರದರ್ಶನ ಕಾಣುತ್ತಿದೆ; ಇಲ್ಲಿದೆ ಮಾಹಿತಿ
Image
Srinidhi Shetty: ಗ್ಲಾಮರಸ್ ಲುಕ್​ನಲ್ಲಿ ‘ಕೆಜಿಎಫ್’ ಬೆಡಗಿ ಶ್ರೀನಿಧಿ ಶೆಟ್ಟಿ; ಫೋಟೋಗಳು ಇಲ್ಲಿವೆ
Image
ಮಧ್ಯರಾತ್ರಿ ಸಿನಿಮಾ ವೀಕ್ಷಿಸಿದ ಶ್ರೀನಿಧಿ ಶೆಟ್ಟಿ, ಗರುಡ, ವಿನಯ್ ರಾಜ್​ಕುಮಾರ್..; ಚಿತ್ರ ನೋಡಿ ಆಶಾ ಭಟ್ ಹೇಳಿದ್ದೇನು?
Image
Srinidhi Shetty: ‘ಕೆಜಿಎಫ್’ ಬೆಡಗಿ ಶ್ರೀನಿಧಿ ಶೆಟ್ಟಿ ಕ್ಯೂಟ್ ಫೋಟೋ ಗ್ಯಾಲರಿ

‘ಟೈಸನ್​’ ಪೋಸ್ಟರ್​ನಲ್ಲಿ ವ್ಯಕ್ತಿಯೋರ್ವ ಬೋರ್ಡ್​ಮೇಲೆ ಹೆಸರನ್ನು ಬರೆಯುತ್ತಿದ್ದಾನೆ. ರಂಜನ್ ಘೋಷ್ ಎಂಬ ಐಎಎಸ್ ಅಧಿಕಾರಿ 2022-2023ವರೆಗೆ ಸೇವೆ ಸಲ್ಲಿಸಿರುವಾಗಿ ಬರೆಯಲಾಗಿದೆ. ಹೀಗಾಗಿ, ಸಿನಿಮಾ 2023 ಅಥವಾ 2024ರಲ್ಲಿ ರಿಲೀಸ್ ಆಗಬಹುದು ಎಂದು ಅಂದಾಜಿಸಲಾಗುತ್ತಿದೆ.

ಏಪ್ರಿಲ್ 14ರಂದು ‘ಕೆಜಿಎಫ್ 2’ ಸಿನಿಮಾ ರಿಲೀಸ್ ಆಯಿತು. ಈ ಚಿತ್ರ ರಿಲೀಸ್ ಆಗಿ ಎರಡು ತಿಂಗಳು ಕಳೆಯುತ್ತಾ ಬಂದಿದೆ. ಈ ಸಿನಿಮಾ 1200 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಈ ಸಿನಿಮಾದಿಂದ ನಿರ್ಮಾಣ ಸಂಸ್ಥೆಗೆ ದುಡ್ಡಿನ ಹೊಳೆಯೇ ಹರಿದಿದೆ. ಮತ್ತಷ್ಟು ಚಿತ್ರಗಳನ್ನು ನಿರ್ಮಾಣ ಮಾಡಲು ಬಲ ಸಿಕ್ಕಂತೆ ಆಗಿದೆ. ಹೀಗಾಗಿ, ಹೊಸಹೊಸ ಪ್ರಾಜೆಕ್ಟ್​ಗಳನ್ನು ಘೋಷಣೆ ಮಾಡಲಾಗುತ್ತಿದೆ.

‘ನಿನ್ನಿಂದಲೇ’, ‘ಮಾಸ್ಟರ್​​ಪೀಸ್​’, ‘ರಾಜಕುಮಾರ’, ‘ಕೆಜಿಎಫ್: ಚಾಪ್ಟರ್ 1’, ‘ಯುವರತ್ನ’, ‘ಕೆಜಿಎಫ್: ಚಾಪ್ಟರ್​ 2’ ಚಿತ್ರಗಳನ್ನು ‘ಹೊಂಬಾಳೆ ಫಿಲ್ಮ್ಸ್​’ ಇಲ್ಲಿಯವರೆಗೆ ನಿರ್ಮಾಣ ಮಾಡಿದೆ. ‘ಕಾಂತಾರ’, ‘ರಾಘವೇಂದ್ರ ಸ್ಟೋರ್ಸ್​’, ‘ಸಲಾರ್’, ‘ಬಘೀರ’, ‘ರಿಚರ್ಡ್​ ಆ್ಯಂಟನಿ’ ಸಿನಿಮಾಗಳು ನಿರ್ಮಾಣ ಹಂತದಲ್ಲಿವೆ. ಈಗ ಇದಕ್ಕೆ ಹೊಸ ಸೇರ್ಪಡೆ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:38 pm, Fri, 10 June 22

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್