AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salaar: ‘ರಾಜಮನಾರ್’​ ಪರಿಚಯಿಸಲಿರುವ ‘ಸಲಾರ್’ ಚಿತ್ರತಂಡ; ಹಾಗಂದ್ರೆ ಏನು ಎಂದು ತಲೆಕೆಡಿಸಿಕೊಂಡ ಫ್ಯಾನ್ಸ್

Rajamanaar: ಸಲಾರ್ ಚಿತ್ರತಂಡ ಹೊಸ ಅಪ್ಡೇಟ್ ಘೋಷಿಸಿದೆ. ಆದರೆ ಇದರ ಹಿಂದು ಮುಂದು ತಿಳಿಯದೆ ಫ್ಯಾನ್ಸ್ ಗೊಂದಲಕ್ಕೆ ಬಿದ್ದಿದ್ದು, ಸಂಪೂರ್ಣ ಮಾಹಿತಿ ತಿಳಿಯಲು ನಾಳೆಗಾಗಿ ಕಾಯುತ್ತಿದ್ದಾರೆ.

Salaar: ‘ರಾಜಮನಾರ್’​ ಪರಿಚಯಿಸಲಿರುವ ‘ಸಲಾರ್’ ಚಿತ್ರತಂಡ; ಹಾಗಂದ್ರೆ ಏನು ಎಂದು ತಲೆಕೆಡಿಸಿಕೊಂಡ ಫ್ಯಾನ್ಸ್
ಸಲಾರ್ ಚಿತ್ರದಲ್ಲಿ ಪ್ರಭಾಸ್
TV9 Web
| Edited By: |

Updated on: Aug 22, 2021 | 11:08 AM

Share

ಪ್ರಭಾಸ್ ನಟನೆಯ ‘ಸಲಾರ್’ ಚಿತ್ರ ಹೊಸ ಅಪ್ಡೇಟ್​ ನೀಡಲು ಚಿತ್ರತಂಡ ಸಜ್ಜಾಗಿದೆ. ಈ ಕುರಿತು ನಿರ್ಮಾಣ ಸಂಸ್ಥೆಯಾದ ‘ಹೊಂಬಾಳೆ ಫಿಲ್ಮ್ಸ್’ ಮಾಹಿತಿ ನೀಡಿದೆ. ‘ಸಲಾರ್​’ನಲ್ಲಿರುವ ‘ರಾಜಮನಾರ್​’ನ ಪರಿಚಯವನ್ನು ನಾಳೆ ಬಿಡುಗಡೆ ಮಾಡಲಾಗುವುದು ಎಂದು ಟ್ವೀಟ್ ಮುಖಾಂತರ ಹೊಂಬಾಳೆ ಫಿಲ್ಮ್ಸ್ ತಿಳಿಸಿದೆ. ಇದರಿಂದ ಫ್ಯಾನ್ಸ್​ಗಳಿಗೆ ಸಂತಸವಾಗಿದ್ದು, ನಾಳೆಗಾಗಿ ಕಾಯುತ್ತಿದ್ದಾರೆ. ಆದರೆ ಇದೇ ವೇಳೆ ‘ರಾಜ್​ಮನಾರ್’ ಎಂದರೆ ಏನು ಎಂಬುದು ತಿಳಿಯದೇ ಫ್ಯಾನ್ಸ್ ತಲೆಕೆಡಿಸಿಕೊಂಡಿದ್ದಾರೆ.

ಪ್ರಭಾಸ್ ಹಾಗೂ ಶೃತಿ ಹಾಸನ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುವ ‘ಸಲಾರ್’ ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿವೆ. ಇತ್ತೀಚೆಗಷ್ಟೇ ಚಿತ್ರದ ಎರಡನೇ ಶೆಡ್ಯೂಲ್ ಮುಗಿಸಿದ ಪ್ರಭಾಸ್ ‘ಆದಿಪುರುಷ್’ ಚಿತ್ರದ ಶೂಟಿಂಗ್​ಗಾಗಿ ತೆರಳಿದ್ದಾರೆ. ಈ ನಡುವೆ ಚಿತ್ರತಂಡ ಹೊಸ ಅಪ್ಡೇಟ್ ನೀಡಿದ್ದು, ಅಭಿಮಾನಿಗಳು ಎಕ್ಸೈಟ್ ಆಗಿದ್ದಾರೆ.

ಹೊಂಬಾಳೆ ಫಿಲ್ಮ್ಸ್ ಹಂಚಿಕೊಂಡಿರುವ ಟ್ವೀಟ್:

‘ರಾಜಮನಾರ್’ ಅಂದರೇನು ಎಂದು ತಲೆಕೆಡಿಸಿಕೊಂಡ ಫ್ಯಾನ್ಸ್:

ಹೊಂಬಾಳೆ ಫಿಲ್ಮ್ಸ್ ಮಾಡಿರುವ ಟ್ವೀಟ್ ಅನ್ನು ಪ್ರಶಾಂತ್ ನೀಲ್ ಸೇರಿದಂತೆ ಚಿತ್ರತಂಡ ಹಂಚಿಕೊಂಡಿದೆ. ಆದರೆ ಚಿತ್ರತಂಡದ ಈ ಮಾಹಿತಿಯಿಂದ ಅಭಿಮಾನಿಗಳು ಗೊಂದಲಕ್ಕೆ ಬಿದ್ದಿದ್ದಾರೆ. ಅವರಿಗೆ ‘ರಾಜಮನಾರ್’ ಎಂಬುದು ಪಾತ್ರದ ಹೆಸರೋ, ಸ್ಥಳದ ಹೆಸರೋ ಎಂಬುದನ್ನು ಊಹಿಸಲು ಆಗುತ್ತಿಲ್ಲ. ಇದರಿಂದಾಗಿ ದಯವಿಟ್ಟು ಅದನ್ನು ಮೊದಲು ತಿಳಿಸಿ, ಕುತೂಹಲ ತಡೆಯಲು ಸಾಧ್ಯವಾಗುತ್ತಿಲ್ಲ ಎಂದು ಕೇಳಿಕೊಳ್ಳುತ್ತಿದ್ದಾರೆ.

ಕೆಲವರು ಇದನ್ನು ಅವರದೇ ನೆಲೆಯಲ್ಲಿ ಊಹಿಸಿಕೊಳ್ಳುತ್ತಿದ್ದು, ಅದು ಪ್ರಭಾಸ್ ತಂದೆಯ ಪಾತ್ರವೆಂದೋ, ಅಥವಾ ಮುಖ್ಯ ಪಾತ್ರವೆಂದೂ ಕಾಮೆಂಟ್ ಮಾಡುತ್ತಿದ್ದಾರೆ. ಆದರೆ ‘ರಾಜಮನಾರ್​’ನ ಅಸಲಿಯತ್ತು ತಿಳಿಯಬೇಕಾದರೆ ನಾಳೆಯವರೆಗೆ ಕಾಯದೇ ವಿಧಿಯಿಲ್ಲ. ಕಾರಣ, ನಾಳೆ ಅದರ ಸಂಪೂರ್ಣ ಚಿತ್ರಣ ತಿಳಿಸುವುದಾಗಿ ಚಿತ್ರತಂಡ ಘೋಷಿಸಿದೆ. ನಾಳೆ ಬೆಳಗ್ಗೆ 10.30ಕ್ಕೆ ಚಿತ್ರತಂಡ ಈ ಕುರಿತು ಅಪ್ಡೇಟ್ ನೀಡಲಿದ್ದು, ಅಭಿಮಾನಿಗಳು ಅದಕ್ಕಾಗಿ ತವಕದಿಂದ ಕಾಯುತ್ತಿದ್ದಾರೆ.

ಇದನ್ನೂ ಓದಿ:

Chiranjeevi Birthday: ಅಮಿತಾಭ್​ಗಿಂತಲೂ ಹೆಚ್ಚು ಸಂಭಾವನೆ ಪಡೆಯುತ್ತಿದ್ದ ಮೆಗಾಸ್ಟಾರ್; ಕುತೂಹಲಕರ ಸಂಗತಿಗಳು ಇಲ್ಲಿವೆ

Chiranjeevi Birthday: ಚಿರಂಜೀವಿ ಜನ್ಮದಿನಕ್ಕೆ 153ನೇ ಸಿನಿಮಾ ಟೈಟಲ್​ ಅನಾವರಣ; ಗಾಡ್​​ಫಾದರ್​ ಆದ ಮೆಗಾಸ್ಟಾರ್​

(Hombale Films will reveal Rajamanaar from Salaar on August 23rd)

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು