AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salaar: ‘ರಾಜಮನಾರ್’​ ಪರಿಚಯಿಸಲಿರುವ ‘ಸಲಾರ್’ ಚಿತ್ರತಂಡ; ಹಾಗಂದ್ರೆ ಏನು ಎಂದು ತಲೆಕೆಡಿಸಿಕೊಂಡ ಫ್ಯಾನ್ಸ್

Rajamanaar: ಸಲಾರ್ ಚಿತ್ರತಂಡ ಹೊಸ ಅಪ್ಡೇಟ್ ಘೋಷಿಸಿದೆ. ಆದರೆ ಇದರ ಹಿಂದು ಮುಂದು ತಿಳಿಯದೆ ಫ್ಯಾನ್ಸ್ ಗೊಂದಲಕ್ಕೆ ಬಿದ್ದಿದ್ದು, ಸಂಪೂರ್ಣ ಮಾಹಿತಿ ತಿಳಿಯಲು ನಾಳೆಗಾಗಿ ಕಾಯುತ್ತಿದ್ದಾರೆ.

Salaar: ‘ರಾಜಮನಾರ್’​ ಪರಿಚಯಿಸಲಿರುವ ‘ಸಲಾರ್’ ಚಿತ್ರತಂಡ; ಹಾಗಂದ್ರೆ ಏನು ಎಂದು ತಲೆಕೆಡಿಸಿಕೊಂಡ ಫ್ಯಾನ್ಸ್
ಸಲಾರ್ ಚಿತ್ರದಲ್ಲಿ ಪ್ರಭಾಸ್
TV9 Web
| Updated By: shivaprasad.hs|

Updated on: Aug 22, 2021 | 11:08 AM

Share

ಪ್ರಭಾಸ್ ನಟನೆಯ ‘ಸಲಾರ್’ ಚಿತ್ರ ಹೊಸ ಅಪ್ಡೇಟ್​ ನೀಡಲು ಚಿತ್ರತಂಡ ಸಜ್ಜಾಗಿದೆ. ಈ ಕುರಿತು ನಿರ್ಮಾಣ ಸಂಸ್ಥೆಯಾದ ‘ಹೊಂಬಾಳೆ ಫಿಲ್ಮ್ಸ್’ ಮಾಹಿತಿ ನೀಡಿದೆ. ‘ಸಲಾರ್​’ನಲ್ಲಿರುವ ‘ರಾಜಮನಾರ್​’ನ ಪರಿಚಯವನ್ನು ನಾಳೆ ಬಿಡುಗಡೆ ಮಾಡಲಾಗುವುದು ಎಂದು ಟ್ವೀಟ್ ಮುಖಾಂತರ ಹೊಂಬಾಳೆ ಫಿಲ್ಮ್ಸ್ ತಿಳಿಸಿದೆ. ಇದರಿಂದ ಫ್ಯಾನ್ಸ್​ಗಳಿಗೆ ಸಂತಸವಾಗಿದ್ದು, ನಾಳೆಗಾಗಿ ಕಾಯುತ್ತಿದ್ದಾರೆ. ಆದರೆ ಇದೇ ವೇಳೆ ‘ರಾಜ್​ಮನಾರ್’ ಎಂದರೆ ಏನು ಎಂಬುದು ತಿಳಿಯದೇ ಫ್ಯಾನ್ಸ್ ತಲೆಕೆಡಿಸಿಕೊಂಡಿದ್ದಾರೆ.

ಪ್ರಭಾಸ್ ಹಾಗೂ ಶೃತಿ ಹಾಸನ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುವ ‘ಸಲಾರ್’ ಚಿತ್ರದ ಕೆಲಸಗಳು ಭರದಿಂದ ಸಾಗುತ್ತಿವೆ. ಇತ್ತೀಚೆಗಷ್ಟೇ ಚಿತ್ರದ ಎರಡನೇ ಶೆಡ್ಯೂಲ್ ಮುಗಿಸಿದ ಪ್ರಭಾಸ್ ‘ಆದಿಪುರುಷ್’ ಚಿತ್ರದ ಶೂಟಿಂಗ್​ಗಾಗಿ ತೆರಳಿದ್ದಾರೆ. ಈ ನಡುವೆ ಚಿತ್ರತಂಡ ಹೊಸ ಅಪ್ಡೇಟ್ ನೀಡಿದ್ದು, ಅಭಿಮಾನಿಗಳು ಎಕ್ಸೈಟ್ ಆಗಿದ್ದಾರೆ.

ಹೊಂಬಾಳೆ ಫಿಲ್ಮ್ಸ್ ಹಂಚಿಕೊಂಡಿರುವ ಟ್ವೀಟ್:

‘ರಾಜಮನಾರ್’ ಅಂದರೇನು ಎಂದು ತಲೆಕೆಡಿಸಿಕೊಂಡ ಫ್ಯಾನ್ಸ್:

ಹೊಂಬಾಳೆ ಫಿಲ್ಮ್ಸ್ ಮಾಡಿರುವ ಟ್ವೀಟ್ ಅನ್ನು ಪ್ರಶಾಂತ್ ನೀಲ್ ಸೇರಿದಂತೆ ಚಿತ್ರತಂಡ ಹಂಚಿಕೊಂಡಿದೆ. ಆದರೆ ಚಿತ್ರತಂಡದ ಈ ಮಾಹಿತಿಯಿಂದ ಅಭಿಮಾನಿಗಳು ಗೊಂದಲಕ್ಕೆ ಬಿದ್ದಿದ್ದಾರೆ. ಅವರಿಗೆ ‘ರಾಜಮನಾರ್’ ಎಂಬುದು ಪಾತ್ರದ ಹೆಸರೋ, ಸ್ಥಳದ ಹೆಸರೋ ಎಂಬುದನ್ನು ಊಹಿಸಲು ಆಗುತ್ತಿಲ್ಲ. ಇದರಿಂದಾಗಿ ದಯವಿಟ್ಟು ಅದನ್ನು ಮೊದಲು ತಿಳಿಸಿ, ಕುತೂಹಲ ತಡೆಯಲು ಸಾಧ್ಯವಾಗುತ್ತಿಲ್ಲ ಎಂದು ಕೇಳಿಕೊಳ್ಳುತ್ತಿದ್ದಾರೆ.

ಕೆಲವರು ಇದನ್ನು ಅವರದೇ ನೆಲೆಯಲ್ಲಿ ಊಹಿಸಿಕೊಳ್ಳುತ್ತಿದ್ದು, ಅದು ಪ್ರಭಾಸ್ ತಂದೆಯ ಪಾತ್ರವೆಂದೋ, ಅಥವಾ ಮುಖ್ಯ ಪಾತ್ರವೆಂದೂ ಕಾಮೆಂಟ್ ಮಾಡುತ್ತಿದ್ದಾರೆ. ಆದರೆ ‘ರಾಜಮನಾರ್​’ನ ಅಸಲಿಯತ್ತು ತಿಳಿಯಬೇಕಾದರೆ ನಾಳೆಯವರೆಗೆ ಕಾಯದೇ ವಿಧಿಯಿಲ್ಲ. ಕಾರಣ, ನಾಳೆ ಅದರ ಸಂಪೂರ್ಣ ಚಿತ್ರಣ ತಿಳಿಸುವುದಾಗಿ ಚಿತ್ರತಂಡ ಘೋಷಿಸಿದೆ. ನಾಳೆ ಬೆಳಗ್ಗೆ 10.30ಕ್ಕೆ ಚಿತ್ರತಂಡ ಈ ಕುರಿತು ಅಪ್ಡೇಟ್ ನೀಡಲಿದ್ದು, ಅಭಿಮಾನಿಗಳು ಅದಕ್ಕಾಗಿ ತವಕದಿಂದ ಕಾಯುತ್ತಿದ್ದಾರೆ.

ಇದನ್ನೂ ಓದಿ:

Chiranjeevi Birthday: ಅಮಿತಾಭ್​ಗಿಂತಲೂ ಹೆಚ್ಚು ಸಂಭಾವನೆ ಪಡೆಯುತ್ತಿದ್ದ ಮೆಗಾಸ್ಟಾರ್; ಕುತೂಹಲಕರ ಸಂಗತಿಗಳು ಇಲ್ಲಿವೆ

Chiranjeevi Birthday: ಚಿರಂಜೀವಿ ಜನ್ಮದಿನಕ್ಕೆ 153ನೇ ಸಿನಿಮಾ ಟೈಟಲ್​ ಅನಾವರಣ; ಗಾಡ್​​ಫಾದರ್​ ಆದ ಮೆಗಾಸ್ಟಾರ್​

(Hombale Films will reveal Rajamanaar from Salaar on August 23rd)

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ