AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಚಿಕೆ ಸ್ವಭಾವದ ರೆಹಮಾನ್​ಗೆ ಸೈರಾ ಬಾನು ಸಿಕ್ಕಿದ್ದು ಹೇಗೆ?

AR Rahman: ಎಆರ್ ರೆಹಮಾನ್ ಮತ್ತು ಸಾಯಿರಾ ಬಾನು ತಮ್ಮ 29 ವರ್ಷದ ದಾಂಪತ್ಯ ಅಂತ್ಯಗೊಳಿಸಿದ್ದಾರೆ. ಸಂಕೋಚ ಸ್ವಭಾವದವರಾಗಿದ್ದ ಎಆರ್ ರೆಹಮಾನ್, ಸಾಯಿರಾ ಭಾನು ಒಂದಾಗಿದ್ದು ಹೇಗೆ?

ನಾಚಿಕೆ ಸ್ವಭಾವದ ರೆಹಮಾನ್​ಗೆ ಸೈರಾ ಬಾನು ಸಿಕ್ಕಿದ್ದು ಹೇಗೆ?
ಸೈರಾ-ರೆಹಮಾನ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Nov 20, 2024 | 10:56 AM

Share

ಎಆರ್ ರೆಹಮಾನ್ ಹಾಗೂ ಅವರ ಪತ್ನಿ ಸೈರಾ ಬಾನು ಬೇರೆ ಆಗಿದ್ದಾರೆ. ಇಬ್ಬರೂ 29 ವರ್ಷಗಳ ಕಾಲ ದಾಂಪತ್ಯ ಜೀವನ ನಡೆಸಿದ್ದರು. ಬೇರೆ ಆಗುವ ಬಗ್ಗೆ ಮಂಗಳವಾರ ಘೋಷಣೆ ಮಾಡಿದ್ದಾರೆ. ಈ ವಿಚಾರ ಅನೇಕರಿಗೆ ಶಾಕಿಂಗ್ ಎನಿಸಿದೆ. ಇಷ್ಟು ವರ್ಷಗಳ ಕಾಲ ಇವರು ಒಟ್ಟಾಗಿದ್ದು ಈಗ ಬೇರೆ ಆಗಿದ್ದು ಏಕೆ ಎಂಬ ಪ್ರಶ್ನೆ ಅನೇಕರಿಗೆ ಮೂಡಿದೆ. ಸದ್ಯ ರೆಹಮಾನ್ ಅವರ ಹಳೆಯ ಸಂದರ್ಶನ ಒಂದು ವೈರಲ್ ಆಗಿದೆ.

ರೆಹಮಾನ್ ಹಾಗೂ ಸೈರಾ ಬಾನು ಸುಮಾರು ಮೂರು ದಶಕ ಒಟ್ಟಾಗಿ ಇದ್ದರು. ಇಬ್ಬರ ಮಧ್ಯೆ ಪ್ರೀತಿ ಇತ್ತು, ಒಳ್ಳೆಯ ಹೊಂದಾಣಿಕೆ ಇತ್ತು. ಆದರೆ, ಈ ಹೊಂದಾಣಿಕೆ ಈಗ ಮುರಿದಿದೆ. ಇಬ್ಬರೂ ಬೇರೆ ಆಗುವ ನಿರ್ಧಾರಕ್ಕೆ ಬಂದಿದ್ದಾರೆ. ಅವರ ನಿರ್ಧಾರವನ್ನು ಅನೇಕರು ಒಪ್ಪಿದ್ದಾರೆ.

‘1994ರಲ್ಲಿ ನಾನು ಸುಮಾರು ಇಪ್ಪತ್ತೇಳು ವರ್ಷದವನಾಗಿದ್ದೆ. ನಾನು ಮದುವೆಯಾಗಲು ನಿರ್ಧರಿಸಿದೆ. ನನಗೆ ವಯಸ್ಸಾಯಿತು ಎಂದು ಅನಿಸುತ್ತಿತ್ತು. ನಾನು ಯಾವಾಗಲೂ ತುಂಬಾ ನಾಚಿಕೆಪಡುತ್ತಿದ್ದೆ ಮತ್ತು ಹುಡುಗಿಯರೊಂದಿಗೆ ಹೆಚ್ಚು ಮಾತನಾಡುತ್ತಿರಲಿಲ್ಲ. ನಾವು ಕೆಲಸ ಮಾಡುವಾಗ ನನ್ನ ಸ್ಟುಡಿಯೋದಲ್ಲಿ ನಾನು ಅನೇಕ ಯುವ ಮಹಿಳಾ ಗಾಯಿಕಿಯಕರನ್ನು ಭೇಟಿಯಾದೆ. ಅವರ ಬಗ್ಗೆ ನನಗೆ ಅಪಾರ ಗೌರವವಿತ್ತು. ಅಲ್ಲಿ ಇದ್ದ ಯಾರನ್ನೂ ಮದುವೆ ಆಗಬೇಕು ಎಂಬ ದೃಷ್ಟಿಯಿಂದ ನೋಡಿಲ್ಲ. ಹುಡುಗಿಯರ ಬಗ್ಗೆ ಯೋಚಿಸಲು ನನಗೆ ಸಮಯವಿರಲಿಲ್ಲ. ನಾನು ಹಗಲಿರುಳು ಕೆಲಸ ಮಾಡುತ್ತಿದ್ದೆ’ ಎಂದಿದ್ದರು ರೆಹಮಾನ್.

ಇದನ್ನೂ ಓದಿ:‘ನಾವು ಊಹಿಸದ ಅಂತ್ಯ ಸಿಕ್ಕಿದೆ’; ವಿಚ್ಛೇದನದ ಬಗ್ಗೆ ಎಆರ್ ರೆಹಮಾನ್ ಮಾತು

‘ಅವಳು ಸುಂದರ ಮತ್ತು ಸೌಮ್ಯವಾಗಿದ್ದಳು. ನಾವು ಮೊದಲ ಬಾರಿಗೆ 6 ಜನವರಿ 1995ರಂದು ನನ್ನ ಇಪ್ಪತ್ತೆಂಟನೇ ಹುಟ್ಟುಹಬ್ಬದಂದು ಭೇಟಿಯಾದೆವು. ಆ ಬಳಿಕ ನಾವು ಹೆಚ್ಚಾಗಿ ಫೋನ್‌ನಲ್ಲಿ ಮಾತನಾಡುತ್ತಿದ್ದೆವು. ನನ್ನನ್ನು ಮದುವೆಯಾಗಲು ಬಯಸುತ್ತೀರಾ ಎಂದು ನಾನು ಅವಳನ್ನು ಇಂಗ್ಲಿಷ್‌ನಲ್ಲಿ ಕೇಳಿದ್ದೆ. ಆ ದಿನಗಳಲ್ಲಿ ಸಾಯಿರಾ ತುಂಬಾ ಶಾಂತವಾಗಿದ್ದಳು. ಈಗಲೂ ಅವಳು ಸುಮ್ಮನಿರುತ್ತಾಳೆ’ ಎಂದಿದ್ದರು ರೆಹಮಾನ್.

ಈ ಜೋಡಿ 1995ರ ಮಾರ್ಚ್ 12ರಂದು ಮದುವೆ ಆಗಿತ್ತು. ಬಹುತೇಕ ಮೂರು ದಶಕಗಳ ಕಾಲ ಹೊಂದಾಣಿಕೆಯಿಂದ ಸಂಸಾರ ಮಾಡಿದ ಎ.ಆರ್. ರೆಹಮಾನ್ ಮತ್ತು ಸೈರಾ ಬಾನು ಅವರು ಹೀಗೆ ಏಕಾಏಕಿ ವಿಚ್ಛೇದನ ಘೋಷಿಸುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಸಂಗೀತ ನಿರ್ದೇಶಕನಾಗಿ ಮಾತ್ರವಲ್ಲದೇ ಗಾಯಕನಾಗಿಯೂ ಎ.ಆರ್. ರೆಹಮಾನ್ ಅವರಿಗೆ ಬೇಡಿಕೆ ಇದೆ. ತಮಿಳು, ತೆಲುಗು, ಹಿಂದಿ ಮುಂತಾದ ಭಾಷೆಯ ಸಿನಿಮಾಗಳಿಗೆ ರೆಹಮಾನ್ ಸಂಗೀತ ನೀಡುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ