AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಲ್ಕಿ 2898 ಎಡಿ’ ಚಿತ್ರದಲ್ಲಿ ನಟಿಸೋಕೆ ರಾಜಮೌಳಿ ಒಪ್ಪಿಸಿದ್ದು ಹೇಗೆ? ನಿರ್ದೇಶಕ ಹೇಳಿದ್ದು ಇಷ್ಟು  

‘ದೀಪಿಕಾ ಪಡುಕೋಣೆ ಸಿನಿಮಾದಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಸ್ಕ್ರಿಪ್ಟ್ ಬರೆಯುವಾಗ ಪ್ರತಿ ಪಾತ್ರದ ಬಗ್ಗೆ ಚರ್ಚೆ ಮಾಡಿದ್ದೇವೆ. ಯಾರ ಪಾತ್ರ ಇಲ್ಲದಿದ್ದರೆ ಸಿನಿಮಾ ಆಗುವುದಿಲ್ಲ ಎನ್ನುವ ಪ್ರಶ್ನೆ ಬಂತು. ಅದಕ್ಕೆ ಸಿಂಪಲ್ ಉತ್ತರ ದೀಪಿಕಾ ಪಡುಕೋಣೆ’ ಎಂದಿದ್ದಾರೆ ಅವರು.

‘ಕಲ್ಕಿ 2898 ಎಡಿ’ ಚಿತ್ರದಲ್ಲಿ ನಟಿಸೋಕೆ ರಾಜಮೌಳಿ ಒಪ್ಪಿಸಿದ್ದು ಹೇಗೆ? ನಿರ್ದೇಶಕ ಹೇಳಿದ್ದು ಇಷ್ಟು  
Prabhas
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on: Jul 27, 2024 | 8:52 AM

Share

ನಾಗ್ ಅಶ್ವಿನ್ ನಿರ್ದೇಶನದ ‘ಕಲ್ಕಿ 2898 ಎಡಿ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಯಶಸ್ಸು ಕಂಡಿದೆ. ಈ ಚಿತ್ರ ಒಟ್ಟಾರೆ 1100 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರಿದ ಕೆಲವೇ ಕೆಲವು ಭಾರತೀಯ ಚಿತ್ರಗಳಲ್ಲಿ ಇದು ಕೂಡ ಒಂದು ಎನಿಸಿಕೊಂಡಿದೆ. ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್, ಕಮಲ್ ಹಾಸನ್ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಇದರ ಜೊತೆಗೆ ರಾಜಮೌಳಿ, ರಾಮ್ ಗೋಪಾಲ್ ವರ್ಮಾ ಹಾಗೂ ದುಲ್ಖರ್ ಸಲ್ಮಾನ್ ಅವರು ಅತಿಥಿ ಪಾತ್ರ ಮಾಡಿದ್ದಾರೆ. ಅವರ ಬಗ್ಗೆ ನಾಗ್ ಅಶ್ವಿನ್ ಮಾತನಾಡಿದ್ದಾರೆ.

ಪ್ರಭಾಸ್​ ಅವರಿಗೆ ಅನೇಕ ಹೀರೋಗಳು, ನಿರ್ದೇಶಕರ ಜೊತೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ರಾಜಮೌಳಿ ವಿಚಾರದಲ್ಲಂತೂ ಕೇಳೋದೇ ಬೇಡ. ಅವರು ‘ಬಾಹುಬಲಿ’, ‘ಬಾಹುಬಲಿ 2’ ಸಿನಿಮಾಗಳಲ್ಲಿ ನಟಿಸಿದ್ದರು. ‘ರಾಜಮೌಳಿ ಹಾಗೂ ರಾಮ್ ಗೋಪಾಲ್ ವರ್ಮಾ ಅವರ ಮನ ಒಲಿಸಬೇಕಿತ್ತು. ಆದರೆ, ಅವರು ಸುಲಲಿತವಾಗಿ ಸಿನಿಮಾನ ಬೆಂಬಲಿಸಲು ಒಪ್ಪಿಕೊಂಡರು’ ಎಂದಿದ್ದಾರೆ ನಾಗ್ ಅಶ್ವಿನ್.

‘ನಾಲ್ಕು ಮುಖ್ಯಪಾತ್ರಧಾರಿಗಳು ಸಿನಿಮಾದಲ್ಲಿ ನಟಿಸೋದು ಎಲ್ಲರ ಆಸೆ ಆಗಿತ್ತು. ಅಮಿತಾಭ್ ಬಚ್ಚನ್ ಅವರು ಅಶ್ವತ್ಥಾಮನ ಪಾತ್ರ ಮಾಡಬೇಕು ಎಂಬುದು ನನ್ನದೇ ಆಯ್ಕೆ ಆಗಿತ್ತು. ಮಹಭಾರತದಲ್ಲಿ ಅವರನ್ನು ಗ್ರೇಟ್ ವಾರಿಯರ್ ಎಂದು ಕರೆಯಲಾಗುತ್ತದೆ. ಅಮಿತಾಭ್ ಹಾಗೂ ಪ್ರಭಾಸ್ ಮಧ್ಯೆ ಫೈಟ್ ನೋಡೋದು ಎಲ್ಲರ ಆಸೆ ಆಗಿತ್ತು’ ಎಂದಿದ್ದಾರೆ ನಾಗ್ ಅಶ್ವಿನ್.

‘ದೀಪಿಕಾ ಪಡುಕೋಣೆ ಸಿನಿಮಾದಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಸ್ಕ್ರಿಪ್ಟ್ ಬರೆಯುವಾಗ ಪ್ರತಿ ಪಾತ್ರದ ಬಗ್ಗೆ ಚರ್ಚೆ ಮಾಡಿದ್ದೇವೆ. ಯಾರ ಪಾತ್ರ ಇಲ್ಲದಿದ್ದರೆ ಸಿನಿಮಾ ಆಗುವುದಿಲ್ಲ ಎನ್ನುವ ಪ್ರಶ್ನೆ ಬಂತು. ಅದಕ್ಕೆ ಸಿಂಪಲ್ ಉತ್ತರ ದೀಪಿಕಾ ಪಡುಕೋಣೆ. ಅವರ ಪಾತ್ರ ಇಲ್ಲದೆ ಇದ್ದರೆ ಇಡೀ ಸಿನಿಮಾನೇ ಇಲ್ಲ’ ಎಂದಿದ್ದಾರೆ ಅವರು.

ಇದನ್ನೂ ಓದಿ: 1100 ಕೋಟಿ ರೂ. ಕ್ಲಬ್ ಸೇರಿದ ‘ಕಲ್ಕಿ 2898 ಎಡಿ’; ಆದರೂ ನಿರ್ಮಾಪಕರಿಗಾದ ಲಾಭ ಕಡಿಮೆ?

‘ಕಲ್ಕಿ 2898 ಎಡಿ’ ಚಿತ್ರ ಕಳೆದ ತಿಂಗಳು 27ರಂದು ರಿಲೀಸ್ ಆಯಿತು. ಈ ಸಿನಿಮಾ ರಿಲೀಸ್ ಆಗಿ ಸರಿಯಾಗಿ ಒಂದು ತಿಂಗಳು ಕಳೆದಿದೆ. ಈವರೆಗೆ ಚಿತ್ರ 1100 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಸದ್ಯ ಯಾವುದೇ ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಕಮಾಲ್ ಮಾಡುತ್ತಿಲ್ಲ. ಇದು ಚಿತ್ರತಂಡಕ್ಕೆ ಸಹಕಾರಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್