AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಲ್ಕಿ 2898 ಎಡಿ’ ಚಿತ್ರದಲ್ಲಿ ನಟಿಸೋಕೆ ರಾಜಮೌಳಿ ಒಪ್ಪಿಸಿದ್ದು ಹೇಗೆ? ನಿರ್ದೇಶಕ ಹೇಳಿದ್ದು ಇಷ್ಟು  

‘ದೀಪಿಕಾ ಪಡುಕೋಣೆ ಸಿನಿಮಾದಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಸ್ಕ್ರಿಪ್ಟ್ ಬರೆಯುವಾಗ ಪ್ರತಿ ಪಾತ್ರದ ಬಗ್ಗೆ ಚರ್ಚೆ ಮಾಡಿದ್ದೇವೆ. ಯಾರ ಪಾತ್ರ ಇಲ್ಲದಿದ್ದರೆ ಸಿನಿಮಾ ಆಗುವುದಿಲ್ಲ ಎನ್ನುವ ಪ್ರಶ್ನೆ ಬಂತು. ಅದಕ್ಕೆ ಸಿಂಪಲ್ ಉತ್ತರ ದೀಪಿಕಾ ಪಡುಕೋಣೆ’ ಎಂದಿದ್ದಾರೆ ಅವರು.

‘ಕಲ್ಕಿ 2898 ಎಡಿ’ ಚಿತ್ರದಲ್ಲಿ ನಟಿಸೋಕೆ ರಾಜಮೌಳಿ ಒಪ್ಪಿಸಿದ್ದು ಹೇಗೆ? ನಿರ್ದೇಶಕ ಹೇಳಿದ್ದು ಇಷ್ಟು  
Prabhas
 ಶ್ರೀಲಕ್ಷ್ಮೀ ಎಚ್
| Edited By: |

Updated on: Jul 27, 2024 | 8:52 AM

Share

ನಾಗ್ ಅಶ್ವಿನ್ ನಿರ್ದೇಶನದ ‘ಕಲ್ಕಿ 2898 ಎಡಿ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ದೊಡ್ಡ ಯಶಸ್ಸು ಕಂಡಿದೆ. ಈ ಚಿತ್ರ ಒಟ್ಟಾರೆ 1100 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರಿದ ಕೆಲವೇ ಕೆಲವು ಭಾರತೀಯ ಚಿತ್ರಗಳಲ್ಲಿ ಇದು ಕೂಡ ಒಂದು ಎನಿಸಿಕೊಂಡಿದೆ. ಪ್ರಭಾಸ್, ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್, ಕಮಲ್ ಹಾಸನ್ ಮೊದಲಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಇದರ ಜೊತೆಗೆ ರಾಜಮೌಳಿ, ರಾಮ್ ಗೋಪಾಲ್ ವರ್ಮಾ ಹಾಗೂ ದುಲ್ಖರ್ ಸಲ್ಮಾನ್ ಅವರು ಅತಿಥಿ ಪಾತ್ರ ಮಾಡಿದ್ದಾರೆ. ಅವರ ಬಗ್ಗೆ ನಾಗ್ ಅಶ್ವಿನ್ ಮಾತನಾಡಿದ್ದಾರೆ.

ಪ್ರಭಾಸ್​ ಅವರಿಗೆ ಅನೇಕ ಹೀರೋಗಳು, ನಿರ್ದೇಶಕರ ಜೊತೆ ಒಳ್ಳೆಯ ಫ್ರೆಂಡ್​ಶಿಪ್ ಇದೆ. ರಾಜಮೌಳಿ ವಿಚಾರದಲ್ಲಂತೂ ಕೇಳೋದೇ ಬೇಡ. ಅವರು ‘ಬಾಹುಬಲಿ’, ‘ಬಾಹುಬಲಿ 2’ ಸಿನಿಮಾಗಳಲ್ಲಿ ನಟಿಸಿದ್ದರು. ‘ರಾಜಮೌಳಿ ಹಾಗೂ ರಾಮ್ ಗೋಪಾಲ್ ವರ್ಮಾ ಅವರ ಮನ ಒಲಿಸಬೇಕಿತ್ತು. ಆದರೆ, ಅವರು ಸುಲಲಿತವಾಗಿ ಸಿನಿಮಾನ ಬೆಂಬಲಿಸಲು ಒಪ್ಪಿಕೊಂಡರು’ ಎಂದಿದ್ದಾರೆ ನಾಗ್ ಅಶ್ವಿನ್.

‘ನಾಲ್ಕು ಮುಖ್ಯಪಾತ್ರಧಾರಿಗಳು ಸಿನಿಮಾದಲ್ಲಿ ನಟಿಸೋದು ಎಲ್ಲರ ಆಸೆ ಆಗಿತ್ತು. ಅಮಿತಾಭ್ ಬಚ್ಚನ್ ಅವರು ಅಶ್ವತ್ಥಾಮನ ಪಾತ್ರ ಮಾಡಬೇಕು ಎಂಬುದು ನನ್ನದೇ ಆಯ್ಕೆ ಆಗಿತ್ತು. ಮಹಭಾರತದಲ್ಲಿ ಅವರನ್ನು ಗ್ರೇಟ್ ವಾರಿಯರ್ ಎಂದು ಕರೆಯಲಾಗುತ್ತದೆ. ಅಮಿತಾಭ್ ಹಾಗೂ ಪ್ರಭಾಸ್ ಮಧ್ಯೆ ಫೈಟ್ ನೋಡೋದು ಎಲ್ಲರ ಆಸೆ ಆಗಿತ್ತು’ ಎಂದಿದ್ದಾರೆ ನಾಗ್ ಅಶ್ವಿನ್.

‘ದೀಪಿಕಾ ಪಡುಕೋಣೆ ಸಿನಿಮಾದಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಸ್ಕ್ರಿಪ್ಟ್ ಬರೆಯುವಾಗ ಪ್ರತಿ ಪಾತ್ರದ ಬಗ್ಗೆ ಚರ್ಚೆ ಮಾಡಿದ್ದೇವೆ. ಯಾರ ಪಾತ್ರ ಇಲ್ಲದಿದ್ದರೆ ಸಿನಿಮಾ ಆಗುವುದಿಲ್ಲ ಎನ್ನುವ ಪ್ರಶ್ನೆ ಬಂತು. ಅದಕ್ಕೆ ಸಿಂಪಲ್ ಉತ್ತರ ದೀಪಿಕಾ ಪಡುಕೋಣೆ. ಅವರ ಪಾತ್ರ ಇಲ್ಲದೆ ಇದ್ದರೆ ಇಡೀ ಸಿನಿಮಾನೇ ಇಲ್ಲ’ ಎಂದಿದ್ದಾರೆ ಅವರು.

ಇದನ್ನೂ ಓದಿ: 1100 ಕೋಟಿ ರೂ. ಕ್ಲಬ್ ಸೇರಿದ ‘ಕಲ್ಕಿ 2898 ಎಡಿ’; ಆದರೂ ನಿರ್ಮಾಪಕರಿಗಾದ ಲಾಭ ಕಡಿಮೆ?

‘ಕಲ್ಕಿ 2898 ಎಡಿ’ ಚಿತ್ರ ಕಳೆದ ತಿಂಗಳು 27ರಂದು ರಿಲೀಸ್ ಆಯಿತು. ಈ ಸಿನಿಮಾ ರಿಲೀಸ್ ಆಗಿ ಸರಿಯಾಗಿ ಒಂದು ತಿಂಗಳು ಕಳೆದಿದೆ. ಈವರೆಗೆ ಚಿತ್ರ 1100 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಸದ್ಯ ಯಾವುದೇ ಸಿನಿಮಾಗಳು ದೊಡ್ಡ ಮಟ್ಟದಲ್ಲಿ ಕಮಾಲ್ ಮಾಡುತ್ತಿಲ್ಲ. ಇದು ಚಿತ್ರತಂಡಕ್ಕೆ ಸಹಕಾರಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?