AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶದಲ್ಲಿ ಊಟ, ವಸತಿಗಾಗಿ ಕುರಿ ಮೇಯಿಸಿ, ಕೃಷಿ ಮಾಡುತ್ತಿರುವ ಮೋಹನ್​ಲಾಲ್ ಪುತ್ರ ಪ್ರಣವ್

ಮಾಲಿವುಡ್​ನ ಸ್ಟಾರ್ ಹೀರೋ ಮೋಹನ್​ಲಾಲ್​ ಅವರ ಪುತ್ರ ಪ್ರಣವ್ ಕೂಡ ನಟನಾಗಿ ಗುರುತಿಸಿಕೊಂಡಿದ್ದಾರೆ. ತಂದೆ ಸೂಪರ್​ ಸ್ಟಾರ್​, ತಾಯಿ ನಿರ್ಮಾಪಕಿ ಆಗಿದ್ದರೂ ಕೂಡ ಪ್ರಣವ್ ಮೋಹನ್​ಲಾಲ್ ಅವರು ವಿದೇಶದಲ್ಲಿ ಊಟ ಮತ್ತು ವಸತಿಗಾಗಿ ಕೃಷಿ ಮಾಡುತ್ತಿದ್ದಾರೆ, ಕುರಿ ಮೇಯಿಸುತ್ತಿದ್ದಾರೆ. ಈ ಬಗ್ಗೆ ಸ್ವತಃ ಅವರ ತಾಯಿ ಸುಚಿತ್ರಾ ಮಾತನಾಡಿದ್ದಾರೆ.

ವಿದೇಶದಲ್ಲಿ ಊಟ, ವಸತಿಗಾಗಿ ಕುರಿ ಮೇಯಿಸಿ, ಕೃಷಿ ಮಾಡುತ್ತಿರುವ ಮೋಹನ್​ಲಾಲ್ ಪುತ್ರ ಪ್ರಣವ್
ಪ್ರಣವ್ ಮೋಹನ್​ಲಾಲ್​
ಮದನ್​ ಕುಮಾರ್​
|

Updated on: Nov 11, 2024 | 6:28 PM

Share

ನಟ ಪ್ರಣವ್ ಮೋಹನ್​ಲಾಲ್ ಅವರಿಗೆ ಈಗ 43 ವರ್ಷ ವಯಸ್ಸು. ಈಗಾಗಲೇ ಅವರು ಚಿತ್ರರಂಗದಲ್ಲಿ ಹೆಸರು ಮಾಡಿದ್ದಾರೆ. ಮಲಯಾಳಂನ ‘ಹೃದಯಂ’ ಸಿನಿಮಾದಿಂದ ಅವರಿಗೆ ಖ್ಯಾತಿ ಸಿಕ್ಕಿದೆ. ಬಾಲನಟನಾಗಿದ್ದಾಗಲೇ ಅವರು ಕೇರಳ ರಾಜ್ಯ ಪ್ರಶಸ್ತಿ ಪಡೆದುಕೊಂಡಿದ್ದರು. ತಂದೆ ಮೋಹನ್​ಲಾಲ್ ಅವರು ಸೂಪರ್​ ಸ್ಟಾರ್​ ಆಗಿರುವುದರಿಂದ ಪ್ರಣವ್ ಅವರಿಗೆ ಚಿತ್ರರಂಗದಲ್ಲಿ ಬದುಕು ಕಟ್ಟಿಕೊಳ್ಳುವುದು ಸುಲಭ. ಅವರ ತಾಯಿ ಸುಚಿತ್ರಾ ಅವರು ನಿರ್ಮಾಪಕಿ. ಇಷ್ಟೆಲ್ಲ ಸವಲತ್ತು ಇದ್ದರೂ ಕೂಡ ಪ್ರಣವ್ ಅವರು ಸ್ಪೇನ್​ನಲ್ಲಿ ಕೃಷಿ ಮಾಡುತ್ತಾ, ಕುರಿ, ಕುದುರೆಗಳನ್ನು ಮೇಯಿಸುತ್ತಿದ್ದಾರೆ!

ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸುಚಿತ್ರಾ ಮೋಹನ್​ಲಾಲ್ ಅವರು ಈ ವಿಚಾರಗಳ ಕುರಿತು ಮಾತನಾಡಿದ್ದಾರೆ. ಪ್ರಣವ್ ಮೋಹನ್​ಲಾಲ್ ಅವರಿಗೆ ವಿದೇಶ ಸುತ್ತುವುದು ಕ್ರೇಜ್​. ಅವರ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಇರುವ ಅನೇಕ ಫೋಟೋಗಳೇ ಅದಕ್ಕೆ ಸಾಕ್ಷಿ ಆಗಿವೆ. ಈಗ ಅವರು ಸ್ಪೇನ್​ನಲ್ಲಿ ಇದ್ದಾರೆ. ಅಲ್ಲಿ ಊಟ ಮತ್ತು ವಸತಿ ಸಲುವಾಗಿ ಅವರು ಬೇರೆಯವರ ಫಾರ್ಮ್​ನಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾರೆ.

ವಿದೇಶದಲ್ಲಿ ಊಟ ಮತ್ತು ವಸತಿಗಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡುವಷ್ಟು ಶ್ರೀಮಂತಿಕೆ ಪ್ರಣವ್ ಮೋಹನ್​ಲಾಲ್ ಅವರಿಗೆ ಇದೆ. ಆದರೆ ಹಣದ ಬಳಕೆ ಇಲ್ಲದೆಯೇ ಬದುಕಿನಲ್ಲಿ ಒಂದು ಅನುಭವ ಬೇಕು ಎಂಬ ಕಾರಣಕ್ಕಾಗಿ ಅವರು ಈ ರೀತಿ ಮಾಡುತ್ತಿದ್ದಾರೆ. ಸಿನಿಮಾಗಳಲ್ಲಿ ನಟಿಸುವ ಬಗ್ಗೆಯೂ ಅವರಿಗೆ ಆಸಕ್ತಿ ಇದೆ. ಆದರೆ ಅವಸರದಲ್ಲಿ ಅವರು ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿಲ್ಲ. 2 ವರ್ಷಕ್ಕೆ ಒಂದು ಸಿನಿಮಾ ಮಾಡುತ್ತಾ ಅವರು ಹಾಯಾಗಿ ಇದ್ದಾರೆ.

ಇದನ್ನೂ ಓದಿ: ಮಿಲಿಟರಿ ಸಮವಸ್ತ್ರದಲ್ಲಿ ವಯನಾಡಿಗೆ ಭೇಟಿ ಕೊಟ್ಟ ನಟ ಮೋಹನ್​ಲಾಲ್, 3 ಕೋಟಿ ನೆರವು

ಸಿನಿಮಾ ಮತ್ತು ವೈಯಕ್ತಿಕ ಜೀವನ ಎರಡನ್ನೂ ಸರಿದೂಗಿಸಿಕೊಂಡು ಹೋಗಬೇಕು ಎಂಬುದು ಪ್ರಣವ್ ಮೋಹನ್​ಲಾಲ್ ಅವರ ಲೆಕ್ಕಾಚಾರ. ಹಾಗಾಗಿ ಅವರು ಪ್ರವಾಸಕ್ಕೆ, ಜೀವನಾನುಭವಕ್ಕೆ ಮಹತ್ವ ನೀಡುತ್ತಿದ್ದಾರೆ. ಸದ್ಯಕ್ಕೆ ಸ್ಪೇನ್​ನಲ್ಲಿ ಅವರು ಖಚಿತವಾಗಿ ಯಾವ ಲೊಕೇಷನ್​ನಲ್ಲಿ ಇದ್ದಾರೆ ಎಂಬುದು ಕೂಡ ಅವರ ಮನೆಯವರಿಗೆ ತಿಳಿದಿಲ್ಲ! ‘ಮೋಹನ್​ಲಾಲ್​ ಹಾಗೂ ಪ್ರಣವ್ ಒಂದೇ ಸಿನಿಮಾದಲ್ಲಿ ನಟಿಸಲಿ ಎಂದು ನಾನು ಬಯಸುವುದಿಲ್ಲ. ಒಂದು ವೇಳೆ ನಟಿಸಿದರೆ ಜನರು ಹೋಲಿಕೆ ಮಾಡುತ್ತಾರೆ’ ಎಂದು ಸುಚಿತ್ರಾ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಮನೆ ಬಾಗಿಲಲ್ಲೇ ಮಲಗಿತ್ತು 10 ಅಡಿ ಕಾಳಿಂಗ ಸರ್ಪ!
ಮನೆ ಬಾಗಿಲಲ್ಲೇ ಮಲಗಿತ್ತು 10 ಅಡಿ ಕಾಳಿಂಗ ಸರ್ಪ!
ದುಬಾರೆ ಆನೆ ಶಿಬಿರ 2 ದಿನ ಬಂದ್: ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ
ದುಬಾರೆ ಆನೆ ಶಿಬಿರ 2 ದಿನ ಬಂದ್: ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ