AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದೇಶದಲ್ಲಿ ‘ಆರ್​ಆರ್​ಆರ್​’ ಚಿತ್ರಕ್ಕಿಂತಲೂ ಹೆಚ್ಚು ಬೇಡಿಕೆ ಸೃಷ್ಟಿಸಿಕೊಂಡ ‘ಸಲಾರ್​’; ಎಷ್ಟಾಯಿತು ಬಿಸ್ನೆಸ್​?

ಪ್ರಭಾಸ್​ ಮತ್ತು ಪ್ರಶಾಂತ್​ ನೀಲ್​ ಅವರ ಕಾಂಬಿನೇಷನ್​ ಎಂಬ ಕಾರಣದಿಂದ ‘ಸಲಾರ್​’ ಚಿತ್ರಕ್ಕೆ ಬೇಡಿಕೆ ಬಂದಿದೆ. ಬಿಡುಗಡೆಗೂ ಮುನ್ನ ಭರ್ಜರಿ ಬಿಸ್ನೆಸ್​ ಆಗುತ್ತಿದೆ.

ವಿದೇಶದಲ್ಲಿ ‘ಆರ್​ಆರ್​ಆರ್​’ ಚಿತ್ರಕ್ಕಿಂತಲೂ ಹೆಚ್ಚು ಬೇಡಿಕೆ ಸೃಷ್ಟಿಸಿಕೊಂಡ ‘ಸಲಾರ್​’; ಎಷ್ಟಾಯಿತು ಬಿಸ್ನೆಸ್​?
ಪ್ರಶಾಂತ್ ನೀಲ್
ಮದನ್​ ಕುಮಾರ್​
|

Updated on:Apr 02, 2023 | 9:53 AM

Share

ಭಾರತದ ಸಿನಿಮಾಗಳು ಈಗ ಹಾಲಿವುಡ್​ ಗುಣಮಟ್ಟದಲ್ಲಿ ಮೂಡಿಬರುತ್ತಿವೆ. ರಾಜಮೌಳಿ, ಪ್ರಶಾಂತ್​ ನೀಲ್​ (Prashanth Neel), ಶಂಕರ್​ ಅವರಂತಹ ನಿರ್ದೇಶಕರು ಅಂಥ ಸಾಧನೆ ಮಾಡಿ ತೋರಿಸಿದ್ದಾರೆ. ಆ ಕಾರಣದಿಂದ ವಿದೇಶದಲ್ಲಿ ಭಾರತದ ಸಿನಿಮಾಗಳಿಗೆ ಭಾರಿ ಬೇಡಿಕೆ ಬಂದಿದೆ. ಅದರಲ್ಲೂ ಸೌತ್​ ಸಿನಿಮಾಗಳು ಸಖತ್​ ಸೌಂಡು ಮಾಡುತ್ತಿವೆ. ಕಳೆದ ವರ್ಷ ‘ಕೆಜಿಎಫ್​ 2’ ಚಿತ್ರ ಮೋಡಿ ಮಾಡಿತ್ತು. ಈಗ ಪ್ರಶಾಂತ್​ ನೀಲ್​ ನಿರ್ದೇಶಿಸುತ್ತಿರುವ ಸಲಾರ್​’ (Salaar Movie) ಚಿತ್ರದ ಮೇಲೆ ಬೆಟ್ಟದಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ವಿದೇಶದಲ್ಲಿ ಈ ಚಿತ್ರವನ್ನು ವಿತರಣೆ ಮಾಡಲು ದೊಡ್ಡ ದೊಡ್ಡ ಕಂಪನಿಗಳು ಆಸಕ್ತಿ ತೋರಿಸಿವೆ. ಬರೋಬ್ಬರಿ 90ರಿಂದ 100 ಕೋಟಿ ರೂಪಾಯಿಗೆ ವಿತರಣೆ ಹಕ್ಕು ಸೇಲ್​ ಆಗಿದೆ ಎಂದು ಹೇಳಲಾಗುತ್ತಿದೆ.

2022ರಲ್ಲಿ ‘ಆರ್​ಆರ್​ಆರ್​’ ಸಿನಿಮಾದ ವಿದೇಶಿ ವಿತರಣೆ ಹಕ್ಕು 78 ಕೋಟಿ ರೂಪಾಯಿಗೆ ಮಾರಾಟ ಆಗಿತ್ತು. ಅದನ್ನು ಮೀರಿಸುವ ರೀತಿಯಲ್ಲಿ ಈಗ ‘ಸಲಾರ್​’ ಚಿತ್ರಕ್ಕೆ ಬೇಡಿಕೆ ಬಂದಿದೆ. ಇಷ್ಟು ಬೇಡಿಕೆ ಸೃಷ್ಟಿ ಆಗಲು ಪ್ರಭಾಸ್​ ಮತ್ತು ಪ್ರಶಾಂತ್​ ನೀಲ್​ ಅವರ ಕಾಂಬಿನೇಷನ್​ ಕಾರಣ ಎಂಬುದನ್ನು ಹೊಸದಾಗಿ ಹೇಳಬೇಕಾಗಿದ್ದಿಲ್ಲ. ವಿದೇಶಿ ಚಿತ್ರಮಂದಿರಗಳಲ್ಲಿ ‘ಸಲಾರ್​’ ಧೂಳೆಬ್ಬಿಸುವ ಸೂಚನೆ ಸಿಕ್ಕಿದೆ.

‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆ ಮೂಲಕ ‘ಸಲಾರ್​’ ಚಿತ್ರ ಸಿದ್ಧವಾಗುತ್ತಿದೆ. ಈ ಸಿನಿಮಾದ ಮೇಲೆ ಬಹುಕೋಟಿ ರೂಪಾಯಿ​ ಸುರಿಯಲಾಗಿದೆ. ಅದ್ದೂರಿ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ ಈ ಸಿನಿಮಾದಲ್ಲಿ ಪ್ರಭಾಸ್​ ಜೊತೆ ಶ್ರುತಿ ಹಾಸನ್​, ಪೃಥ್ವಿರಾಜ್​ ಸುಕುಮಾರನ್ ಮುಂತಾದ ಘಟಾನುಘಟಿ ಕಲಾವಿದರು ನಟಿಸುತ್ತಿದ್ದಾರೆ.

ಇದನ್ನೂ ಓದಿ
Image
Adipurush: ಪ್ರಭಾಸ್​ ಫ್ಯಾನ್ಸ್​ ಮನ ಗೆದ್ದ ‘ಆದಿಪುರುಷ್​’ ಟೀಸರ್​; ಇಲ್ಲಿದೆ ರಾಮ-ರಾವಣರ ಮುಖಾಮುಖಿ
Image
Adipurush Teaser: ‘ಆದಿಪುರುಷ್​’ ಟೀಸರ್​ ಬಿಡುಗಡೆ; ಅಯೋಧ್ಯೆಯಲ್ಲಿ ರಾಮನಾಗಿ ದರ್ಶನ ನೀಡಿದ ಪ್ರಭಾಸ್​
Image
Prabhas: ದೊಡ್ಡಪ್ಪನ ನಿಧನದ ನೋವಿಟ್ಟುಕೊಂಡು ಕೆಲಸಕ್ಕೆ ಬಂದ ಪ್ರಭಾಸ್​; ‘ಸಲಾರ್​’ ಶೂಟಿಂಗ್​ ಮತ್ತೆ ಶುರು
Image
Prabhas: ದೊಡ್ಡಪ್ಪನ ಅಂತ್ಯ ಸಂಸ್ಕಾರಕ್ಕೆ ಬಂದ ಫ್ಯಾನ್ಸ್​ಗೆ ಊಟದ ವ್ಯವಸ್ಥೆ ಮಾಡಿಸಿ ಕಾಳಜಿ ತೋರಿದ ಪ್ರಭಾಸ್​

‘ಸಲಾರ್​’ ಸಿನಿಮಾಗೆ ಸೀಕ್ವೆಲ್ ಬೇಕೋ ಅಥವಾ ಬೇಡವೋ ಎಂಬುದನ್ನು ನಿರ್ಧರಿಸಲಿದೆ ಈ ವಿಚಾರ

ಬಹುತೇಕ ‘ಕೆಜಿಎಫ್​: ಚಾಪ್ಟರ್​ 2’ ತಂಡದಲ್ಲಿ ಕೆಲಸ ಮಾಡಿದ್ದ ತಂತ್ರಜ್ಞರೇ ‘ಸಲಾರ್​’ ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದಾರೆ. ರವಿ ಬಸ್ರೂರು ಅವರ ಸಂಗೀತ, ಭುವನ್​ ಗೌಡ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಸೆಪ್ಟೆಂಬರ್​ 28ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಆಂಧ್ರ ಮತ್ತು ತೆಲಂಗಾಣದಲ್ಲಿ ‘ಸಲಾರ್​’ ವಿತರಣೆ ಹಕ್ಕುಗಳಿಗೆ ಬರೋಬ್ಬರಿ 200 ಕೋಟಿ ರೂಪಾಯಿ ಡಿಮ್ಯಾಂಡ್​ ಇದೆ ಎಂದು ಹೇಳಲಾಗುತ್ತಿದೆ. ಈ ವಿಚಾರಗಳ ಬಗ್ಗೆ ಚಿತ್ರತಂಡ ಅಧಿಕೃತವಾಗಿ ಏನನ್ನೂ ಬಹಿರಂಗಪಡಿಸಿಲ್ಲ. ಆದರೆ ಟಾಲಿವುಡ್​ ಅಂಗಳದಲ್ಲಿ ಈ ಸುದ್ದಿ ಹರಿದಾಡುತ್ತಿದೆ.

ಪ್ರಭಾಸ್​ ವರ್ಸಸ್​ ಪ್ರಭಾಸ್​: ‘ಸಲಾರ್​’ ಚಿತ್ರದಲ್ಲಿ ಡಬಲ್​ ರೋಲ್​ ಮಾಡಿಸುತ್ತಾರಾ ಪ್ರಶಾಂತ್​ ನೀಲ್​?

ಇದಲ್ಲದೇ, ಓಂ ರಾವತ್​ ನಿರ್ದೇಶನದ ‘ಆದಿಪುರುಷ್​’ ಸಿನಿಮಾದಲ್ಲೂ ಪ್ರಭಾಸ್​ ನಟಿಸಿದ್ದಾರೆ. ಜುಲೈ 16ರಂದು ಆ ಚಿತ್ರ ಬಿಡುಗಡೆ ಆಗಲಿದೆ. ‘ಆದಿಪುರುಷ್​’ ಗೆದ್ದರೆ ಅಭಿಮಾನಿಗಳ ವಲಯದಲ್ಲಿ ಪ್ರಭಾಸ್​ ಬಗ್ಗೆ ಕ್ರೇಜ್​ ಹೆಚ್ಚಾಗುತ್ತದೆ. ಅದರಿಂದ ‘ಸಲಾರ್​’ ಸಿನಿಮಾಗೆ ಲಾಭ ಆಗಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 9:22 am, Sun, 2 April 23

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?