AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್​ ಕೇಸ್​ನಲ್ಲಿ ನಟಿ ರಕುಲ್​ ಸಹೋದರ ಅಮನ್​ ಪ್ರೀತ್​ ಸಿಂಗ್​ ಬಂಧನ

199 ಗ್ರಾಂ ಮಾದಕ ವಸ್ತು, 2 ಪಾಸ್​ಪೋರ್ಟ್​, 2 ಬೈಕ್​ ಹಾಗೂ 10 ಮೊಬೈಲ್​ ಫೋನ್​ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದೇ ಕೇಸ್​ನಲ್ಲಿ ರಕುಲ್ ಪ್ರೀತ್​ ಸಿಂಗ್​ ಸಹೋದರ ಅಮನ್ ಪ್ರೀತ್​ ಸಿಂಗ್​ ಬಂಧನ ಆಗಿದೆ. ಅಮನ್ ಪ್ರೀತ್​ ಸಿಂಗ್​ ಕೊಕೇನ್​ ಸೇವಿಸಿರವುದು ದೃಢಪಟ್ಟಿದೆ. ಆದ್ದರಿಂದ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದೆ.

ಡ್ರಗ್ಸ್​ ಕೇಸ್​ನಲ್ಲಿ ನಟಿ ರಕುಲ್​ ಸಹೋದರ ಅಮನ್​ ಪ್ರೀತ್​ ಸಿಂಗ್​ ಬಂಧನ
ಅಮನ್​ ಪ್ರೀತ್​ ಸಿಂಗ್​, ರಕುಲ್​ ಪ್ರೀತ್​ ಸಿಂಗ್​
ಮದನ್​ ಕುಮಾರ್​
|

Updated on: Jul 15, 2024 | 5:57 PM

Share

ಖ್ಯಾತ ನಟಿ ರಕುಲ್​ ಪ್ರೀತ್​ ಸಿಂಗ್​ ಅವರ ಸಹೋದರ ಅಮನ್​ ಪ್ರೀತ್​ ಸಿಂಗ್​ ಅವರು ಡ್ರಗ್ಸ್​ ಕೇಸ್​ನಲ್ಲಿ ಅರೆಸ್ಟ್​ ಆಗಿದ್ದಾರೆ. ಹೈದರಾಬಾದ್​ನಲ್ಲಿ ಅವರನ್ನು ಬಂಧಿಸಲಾಗಿದೆ. ಸೋಮವಾರ (ಜುಲೈ 15) ಸಂಜೆ ಸುದ್ದಿಗೋಷ್ಠಿ ನಡೆಸಿದ ಹೈದರಾಬಾದ್​ ಪೊಲೀಸರು ಅಮನ್​ ಪ್ರೀತ್​ ಸಿಂಗ್​ ಬಂಧನದ ಬಗ್ಗೆ ಮಾಹಿತಿ ನೀಡಿದ್ದಾರೆ. ಇದರಿಂದಾಗಿ ಅಮನ್​ ಪ್ರೀತ್​ ಸಿಂಗ್​ಗೆ ಸಂಕಷ್ಟ ಎದುರಾಗಿದೆ. ಸದ್ಯದಲ್ಲೇ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಹೈದರಾಬಾದ್​ ಪೊಲೀಸರು 199 ಗ್ರಾಂ ಮಾದಕ ವಸ್ತು, 2 ಬೈಕ್​, 2 ಪಾಸ್​ಪೋರ್ಟ್​ ಮತ್ತು 10 ಮೊಬೈಲ್​ ಫೋನ್​ಗಳನ್ನು ವಶಕ್ಕೆ ಪಡೆದಿದ್ದಾರೆ. ಕೆಲವು ಆರೋಪಿಗಳು ತಲೆ ಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಇತ್ತೀಚೆಗೆ ಬೆಳಕಿಗೆ ಬಂದ ಡ್ರಗ್ಸ್ ಜಾಲದಲ್ಲಿ ಅಮನ್​ ಪ್ರೀತ್​ ಸಿಂಗ್​ ಕೂಡ ಭಾಗಿ ಆಗಿರುವುದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಅರೆಸ್ಟ್​ ಮಾಡಲಾಗಿದೆ. ಡ್ರಗ್ಸ್​ ಪೆಡ್ಲಿಂಗ್​ ಮಾಡಿದ ಆರೋಪದಲ್ಲಿ 5 ಜನರನ್ನು ಬಂಧಿಸಲಾಗಿದೆ. ಡ್ರಗ್ಸ್​ ಸೇವಿಸಿದ್ದಾರೆ ಎನ್ನಲಾದ ಒಟ್ಟು 13 ಜನರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅಮನ್​ ಅವರು ಮಾದಕ ವಸ್ತು ಸೇವಿಸಿರುವುದು ಖಚಿತವಾಗಿದೆ.

ಡ್ರಗ್ಸ್​ ಪ್ರಕರಣದ ತನಿಖೆ ತೀವ್ರಗೊಂಡಿದೆ. ಅಮನ್​ ಪ್ರೀತ್​ ಸಿಂಗ್​ ಅವರಿಗೆ ಬೇರೆ ಯಾವೆಲ್ಲ ವ್ಯಕ್ತಿಗಳ ಜೊತೆ ನಂಟು ಇದೆ ಎಂಬುದು ತನಿಖೆಯಲ್ಲಿ ಬಯಲಾಗಲಿದೆ. ಭಾರತೀಯರು ಮಾತ್ರವಲ್ಲದೇ ಕೆಲವು ನೈಜೀರಿಯನ್​ ಪ್ರಜೆಗಳು ಕೂಡ ಇದರಲ್ಲಿ ಭಾಗಿ ಆಗಿದ್ದಾರೆ. ಅವರಲ್ಲಿ ಕೆಲವರು ಪದೇ ಪದೇ ಅಪರಾಧ ಎಸಗಿರುವುದು ತಿಳಿದುಬಂದಿದೆ. ಅಮನ್​ ಪ್ರೀತ್​ ಸಿಂಗ್​ ಕೊಕೇನ್​ ಸೇವಿಸಿರುವುದು ಖಚಿತವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿರುವುದಾಗಿ ಮಾಧ್ಯಮಗಳಲ್ಲಿ ವರದಿ ಆಗಿದೆ.

ಇದನ್ನೂ ಓದಿ: ಡ್ರಗ್ಸ್​ ಪಾರ್ಟಿ ಕೇಸ್​ನಲ್ಲಿ ಅರೆಸ್ಟ್​ ಆಗುವಾಗ ಮಾಧ್ಯಮಗಳ ಮೇಲೆ ನಟಿ ಹೇಮಾ ಗರಂ

ಈ ಮೊದಲು ನಟಿ ರಕುಲ್​ ಪ್ರೀತ್​ ಸಿಂಗ್​ ಹೆಸರು ಕೂಡ ಡ್ರಗ್ಸ್​ ಪ್ರಕರಣದಲ್ಲಿ ತಳುಕುಹಾಕಿಕೊಂಡಿತ್ತು. ಡ್ರಗ್ಸ್​ ಕೇಸ್​ಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಆಗಿದ್ದಕ್ಕೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ರುಕುಲ್​ ಪ್ರೀತ್​ ಸಿಂಗ್​ ಅವರನ್ನು ವಿಚಾರಣೆಗೆ ಒಳಪಡಿಸಿದ್ದರು. ಆದರೆ ಈಗ ಅವರ ಹೆಸರು ಕೇಳಿಬಂದಿಲ್ಲ. ಕೇವಲ ಸಹೋದರ ಅಮನ್​ ಪ್ರೀತ್​ ಸಿಂಗ್​ ಮಾತ್ರ ಡ್ರಗ್ಸ್​ ಕೇಸ್​ನಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. ಅನಗತ್ಯವಾಗಿ ರಕುಲ್​ ಹೆಸರು ತರುವುದು ಬೇಡ ಎಂದು ಪೊಲೀಸರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ