Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ಚಿತ್ರರಂಗದಲ್ಲಿ ಅತಿಯಾದ ಡ್ರಗ್ಸ್ ಬಳಕೆಯಿದೆ: ಪೊಲೀಸ್ ಆಯುಕ್ತ

Tollywood: ತೆಲುಗು ಚಿತ್ರರಂಗವು ತನ್ನ ಅದ್ಧೂರಿ ಸಿನಿಮಾಗಳಿಂದ ದೇಶ-ವಿದೇಶಗಳಲ್ಲಿ ಹೆಸರು ಮಾಡಿದೆ. ಆದರೆ ಅದೇ ತೆಲುಗು ಚಿತ್ರರಂಗ ಡ್ರಗ್ಸ್ ಬಳಕೆಯಿಂದ ಕುಖ್ಯಾತಿಯನ್ನೂ ಗಳಿಸಿದೆ.

ತೆಲುಗು ಚಿತ್ರರಂಗದಲ್ಲಿ ಅತಿಯಾದ ಡ್ರಗ್ಸ್ ಬಳಕೆಯಿದೆ: ಪೊಲೀಸ್ ಆಯುಕ್ತ
ಪೊಲೀಸ್
Follow us
ಮಂಜುನಾಥ ಸಿ.
|

Updated on: Dec 13, 2023 | 7:58 PM

ತೆಲುಗು ಚಿತ್ರರಂಗ (Tollywood) ತನ್ನ ಅತ್ಯುತ್ತಮ ಸಿನಿಮಾಗಳಿಂದ ದೇಶ-ವಿದೇಶಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಹಿಂದೊಮ್ಮೆ ಪ್ರಧಾನಿ ಮೋದಿಯವರು ಹೈದರಾಬಾದ್​ಗೆ ಭೇಟಿ ನೀಡಿ ಮಾಡಿದ್ದ ಭಾಷಣದಲ್ಲಿಯೂ ತೆಲುಗು ಚಿತ್ರರಂಗದ ಗರಿಮೆಯನ್ನು ಕೊಂಡಾಡಿದ್ದರು. ಆದರೆ ಅದೇ ತೆಲುಗು ಚಿತ್ರರಂಗದಲ್ಲಿ ಡ್ರಗ್ಸ್ ಬಳಕೆ ವ್ಯಾಪಕವಾಗಿದೆ ಎಂದು ಹೈದರಾಬಾದ್ ಪೊಲೀಸ್ ಆಯುಕ್ತರು ಟೀಕಿಸಿದ್ದಾರೆ.

ಹೊಸದಾಗಿ ಹೈದರಾಬಾದ್ ಪೊಲೀಸ್ ಆಯುಕ್ತರಾಗಿ ನೇಮಕವಾಗಿರುವ ಶ್ರೀನಿವಾಸ ರೆಡ್ಡಿ, ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹೊಸ ಸಿಎಂ ಹೇಮಂತ್ ರೆಡ್ಡಿ ಅವರ ಆಶಯದಂತೆ ಹೈದರಾಬಾದ್ ಅನ್ನು ಮಾದಕ ವಸ್ತು ಮುಕ್ತ ನಗರವಾಗಿ ಬದಲಾಯಿಸುವ ಲಕ್ಷ್ಯದ ಕಡೆಗೆ ಕೆಲಸ ಮಾಡುವುದಾಗಿ ಹೇಳಿದ್ದಾರೆ. ಹೈದರಾಬಾದ್​ನಲ್ಲಿ ಡ್ರಗ್ಸ್ ಸೇವಿಸುವ ಯುವಕರ ಸಂಖ್ಯೆ ಹೆಚ್ಚಿದೆ ಎಂದಿರುವ ಶ್ರೀನಿವಾಸ ರೆಡ್ಡಿ, ತೆಲುಗು ಚಿತ್ರರಂಗದಲ್ಲಿ ಡ್ರಗ್ಸ್ ಬಳಕೆ ಹೆಚ್ಚಾಗಿದೆ ಎಂದಿದ್ದಾರೆ.

ಇದನ್ನೂ ಓದಿ:ರಮೇಶ್​ ಅರವಿಂದ್​ಗೆ ಅವಮಾನ: ‘ಒಬ್ಬ ಮಾಡಿದ ತಪ್ಪಿಗೆ ತೆಲುಗು ಚಿತ್ರರಂಗ ಹೊಣೆಯಲ್ಲ’: ಅಲ್ಲು ಅರ್ಜುನ್​ ತಂದೆ ಪ್ರತಿಕ್ರಿಯೆ

ತೆಲುಗು ಚಿತ್ರರಂಗದ ಒಳಗೂ ಸಾಕಷ್ಟು ಮಾದಕ ವಸ್ತು ಬಳಕೆ ಚಾಲ್ತಿಯಲ್ಲಿದೆ, ಇದನ್ನು ನಿಯಂತ್ರಿಸಲು ಶೀಘ್ರವೇ ತೆಲುಗು ಚಿತ್ರರಂಗದ ಹಿರಿಯರ ಸಭೆ ಕರೆದು ಚರ್ಚಿಸಲಾಗುವುದು, ಚಿತ್ರರಂಗದಲ್ಲಿನ ಡ್ರಗ್ಸ್ ಸಂಸ್ಕೃತಿಯನ್ನು ತೊಲಗಿಸುವ ಸಕಲ ಪ್ರಯತ್ನ ಮಾಡಲಾಗುವುದು ಎಂದಿದ್ದಾರೆ. ಪೊಲೀಸರು ಹೈದರಾಬಾದ್​ನ ಎಲ್ಲ ಪಬ್​, ಬಾರ್​ ಮತ್ತು ಅನುಮಾನಿತ ಪ್ರದೇಶಗಳ ಮೇಲೆ ನಿಗಾವಣೆ ಇಡಲಿದ್ದಾರೆ ಎಂದೂ ಸಹ ಆಯುಕ್ತರು ಹೇಳಿದ್ದಾರೆ.

ತೆಲುಗು ಚಿತ್ರರಂಗವು ಆಗಾಗ್ಗೆ ಡ್ರಗ್ಸ್ ವಿಷಯದಲ್ಲಿ ಸುದ್ದಿ ಆಗುತ್ತಲೇ ಇರುತ್ತದೆ. ಹಿಂದೊಮ್ಮೆ ದೊಡ್ಡ ನಟ, ನಟಿ ಹಾಗೂ ನಿರ್ದೇಶಕರ ಹೆಸರುಗಳು ಡ್ರಗ್ಸ್ ಪ್ರಕರಣದಲ್ಲಿ ಹೊರಬಂದಿತ್ತು. ನಿರ್ದೇಶಕ ಪುರಿ ಜಗನ್ನಾಥ್, ನಟಿ ಚಾರ್ಮಿ, ಮುಮೈತ್ ಖಾನ್, ನಟ ರವಿತೇಜ ಸಹೋದರ, ನಟ ನವದೀಪ್ ಇನ್ನೂ ಹಲವರು ವಿಚಾರಣೆ ಎದುರಿಸಿದರು. ಕೆಲವರ ಬಂಧನವೂ ಆಗಿತ್ತು. ಇತ್ತೀಚೆಗೆ ಸಹ ತೆಲುಗು ಚಿತ್ರರಂಗದ ನಟ ನವದೀಪ್ ವಿರುದ್ಧ ಮಾದಕ ವಸ್ತು ಪ್ರಕರಣ ದಾಖಲಾಗಿ, ವಿಚಾರಣೆಯನ್ನೂ ಸಹ ಎದುರಿಸಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Video: ಗಾಳಿ ಮಳೆಗೆ ಧರೆಗುರಳಿದ ಹುಸ್ಕೂರು ಮದ್ದೂರಮ್ಮ ಜಾತ್ರೆ ತೇರು
Video: ಗಾಳಿ ಮಳೆಗೆ ಧರೆಗುರಳಿದ ಹುಸ್ಕೂರು ಮದ್ದೂರಮ್ಮ ಜಾತ್ರೆ ತೇರು
ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್