AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ಚಿತ್ರರಂಗದಲ್ಲಿ ಅತಿಯಾದ ಡ್ರಗ್ಸ್ ಬಳಕೆಯಿದೆ: ಪೊಲೀಸ್ ಆಯುಕ್ತ

Tollywood: ತೆಲುಗು ಚಿತ್ರರಂಗವು ತನ್ನ ಅದ್ಧೂರಿ ಸಿನಿಮಾಗಳಿಂದ ದೇಶ-ವಿದೇಶಗಳಲ್ಲಿ ಹೆಸರು ಮಾಡಿದೆ. ಆದರೆ ಅದೇ ತೆಲುಗು ಚಿತ್ರರಂಗ ಡ್ರಗ್ಸ್ ಬಳಕೆಯಿಂದ ಕುಖ್ಯಾತಿಯನ್ನೂ ಗಳಿಸಿದೆ.

ತೆಲುಗು ಚಿತ್ರರಂಗದಲ್ಲಿ ಅತಿಯಾದ ಡ್ರಗ್ಸ್ ಬಳಕೆಯಿದೆ: ಪೊಲೀಸ್ ಆಯುಕ್ತ
ಪೊಲೀಸ್
ಮಂಜುನಾಥ ಸಿ.
|

Updated on: Dec 13, 2023 | 7:58 PM

Share

ತೆಲುಗು ಚಿತ್ರರಂಗ (Tollywood) ತನ್ನ ಅತ್ಯುತ್ತಮ ಸಿನಿಮಾಗಳಿಂದ ದೇಶ-ವಿದೇಶಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ಹಿಂದೊಮ್ಮೆ ಪ್ರಧಾನಿ ಮೋದಿಯವರು ಹೈದರಾಬಾದ್​ಗೆ ಭೇಟಿ ನೀಡಿ ಮಾಡಿದ್ದ ಭಾಷಣದಲ್ಲಿಯೂ ತೆಲುಗು ಚಿತ್ರರಂಗದ ಗರಿಮೆಯನ್ನು ಕೊಂಡಾಡಿದ್ದರು. ಆದರೆ ಅದೇ ತೆಲುಗು ಚಿತ್ರರಂಗದಲ್ಲಿ ಡ್ರಗ್ಸ್ ಬಳಕೆ ವ್ಯಾಪಕವಾಗಿದೆ ಎಂದು ಹೈದರಾಬಾದ್ ಪೊಲೀಸ್ ಆಯುಕ್ತರು ಟೀಕಿಸಿದ್ದಾರೆ.

ಹೊಸದಾಗಿ ಹೈದರಾಬಾದ್ ಪೊಲೀಸ್ ಆಯುಕ್ತರಾಗಿ ನೇಮಕವಾಗಿರುವ ಶ್ರೀನಿವಾಸ ರೆಡ್ಡಿ, ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹೊಸ ಸಿಎಂ ಹೇಮಂತ್ ರೆಡ್ಡಿ ಅವರ ಆಶಯದಂತೆ ಹೈದರಾಬಾದ್ ಅನ್ನು ಮಾದಕ ವಸ್ತು ಮುಕ್ತ ನಗರವಾಗಿ ಬದಲಾಯಿಸುವ ಲಕ್ಷ್ಯದ ಕಡೆಗೆ ಕೆಲಸ ಮಾಡುವುದಾಗಿ ಹೇಳಿದ್ದಾರೆ. ಹೈದರಾಬಾದ್​ನಲ್ಲಿ ಡ್ರಗ್ಸ್ ಸೇವಿಸುವ ಯುವಕರ ಸಂಖ್ಯೆ ಹೆಚ್ಚಿದೆ ಎಂದಿರುವ ಶ್ರೀನಿವಾಸ ರೆಡ್ಡಿ, ತೆಲುಗು ಚಿತ್ರರಂಗದಲ್ಲಿ ಡ್ರಗ್ಸ್ ಬಳಕೆ ಹೆಚ್ಚಾಗಿದೆ ಎಂದಿದ್ದಾರೆ.

ಇದನ್ನೂ ಓದಿ:ರಮೇಶ್​ ಅರವಿಂದ್​ಗೆ ಅವಮಾನ: ‘ಒಬ್ಬ ಮಾಡಿದ ತಪ್ಪಿಗೆ ತೆಲುಗು ಚಿತ್ರರಂಗ ಹೊಣೆಯಲ್ಲ’: ಅಲ್ಲು ಅರ್ಜುನ್​ ತಂದೆ ಪ್ರತಿಕ್ರಿಯೆ

ತೆಲುಗು ಚಿತ್ರರಂಗದ ಒಳಗೂ ಸಾಕಷ್ಟು ಮಾದಕ ವಸ್ತು ಬಳಕೆ ಚಾಲ್ತಿಯಲ್ಲಿದೆ, ಇದನ್ನು ನಿಯಂತ್ರಿಸಲು ಶೀಘ್ರವೇ ತೆಲುಗು ಚಿತ್ರರಂಗದ ಹಿರಿಯರ ಸಭೆ ಕರೆದು ಚರ್ಚಿಸಲಾಗುವುದು, ಚಿತ್ರರಂಗದಲ್ಲಿನ ಡ್ರಗ್ಸ್ ಸಂಸ್ಕೃತಿಯನ್ನು ತೊಲಗಿಸುವ ಸಕಲ ಪ್ರಯತ್ನ ಮಾಡಲಾಗುವುದು ಎಂದಿದ್ದಾರೆ. ಪೊಲೀಸರು ಹೈದರಾಬಾದ್​ನ ಎಲ್ಲ ಪಬ್​, ಬಾರ್​ ಮತ್ತು ಅನುಮಾನಿತ ಪ್ರದೇಶಗಳ ಮೇಲೆ ನಿಗಾವಣೆ ಇಡಲಿದ್ದಾರೆ ಎಂದೂ ಸಹ ಆಯುಕ್ತರು ಹೇಳಿದ್ದಾರೆ.

ತೆಲುಗು ಚಿತ್ರರಂಗವು ಆಗಾಗ್ಗೆ ಡ್ರಗ್ಸ್ ವಿಷಯದಲ್ಲಿ ಸುದ್ದಿ ಆಗುತ್ತಲೇ ಇರುತ್ತದೆ. ಹಿಂದೊಮ್ಮೆ ದೊಡ್ಡ ನಟ, ನಟಿ ಹಾಗೂ ನಿರ್ದೇಶಕರ ಹೆಸರುಗಳು ಡ್ರಗ್ಸ್ ಪ್ರಕರಣದಲ್ಲಿ ಹೊರಬಂದಿತ್ತು. ನಿರ್ದೇಶಕ ಪುರಿ ಜಗನ್ನಾಥ್, ನಟಿ ಚಾರ್ಮಿ, ಮುಮೈತ್ ಖಾನ್, ನಟ ರವಿತೇಜ ಸಹೋದರ, ನಟ ನವದೀಪ್ ಇನ್ನೂ ಹಲವರು ವಿಚಾರಣೆ ಎದುರಿಸಿದರು. ಕೆಲವರ ಬಂಧನವೂ ಆಗಿತ್ತು. ಇತ್ತೀಚೆಗೆ ಸಹ ತೆಲುಗು ಚಿತ್ರರಂಗದ ನಟ ನವದೀಪ್ ವಿರುದ್ಧ ಮಾದಕ ವಸ್ತು ಪ್ರಕರಣ ದಾಖಲಾಗಿ, ವಿಚಾರಣೆಯನ್ನೂ ಸಹ ಎದುರಿಸಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ವಿಡಿಯೋ ನೋಡಿ
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
7 ವರ್ಷಗಳ ಬಳಿಕ ಇರಾನ್​ನಿಂದ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹಡಗು!
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
‘ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಕಥೆ ಕದ್ದ ಆರೋಪಕ್ಕೆ ಡಾರ್ಲಿಂಗ್ ಕೃಷ್ಣ ಖಡಕ್ ತಿರುಗೇಟು: ಕಾನೂನು ಕ್ರಮ
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ಬಸ್ ಸೀಟ್ ಹಿಡಿಯುವ ಆತುರ ತಂದ ಆಪತ್ತು!
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ವಿಮಾನ ನಿಲ್ದಾಣದಲ್ಲಿ ಶ್ಲೋಕ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು
ಚಿನ್ನಸ್ವಾಮಿಯಲ್ಲಿ ಶಾಶ್ವತವಾಗಿ ಉಳಿಯಲಿದೆ ಅಗಲಿದ 11 ಜೀವಗಳ ನೆನಪು