Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಮುಂದೂಡಲ್ಪಡುತ್ತೆ ‘ಆರ್​ಆರ್​ಆರ್​’ ರಿಲೀಸ್ ದಿನಾಂಕ? ರಾಜಮೌಳಿ ತಂಡಕ್ಕೆ ಮೊದಲ ಹಿನ್ನಡೆ

‘ಆರ್​ಆರ್​ಆರ್​’ ಚಿತ್ರತಂಡ ಕರ್ನಾಟಕ, ಆಂಧ್ರ ಪ್ರದೇಶ, ತಮಿಳುನಾಡಿನಲ್ಲಿ ಪ್ರೀ ರಿಲೀಸ್​ ಕಾರ್ಯಕ್ರಮ ನಡೆಸಲು ನಿರ್ಧರಿಸಿದೆ. ಹೈದರಾಬಾದ್​ನ ಎಲ್​ಬಿ ಸ್ಟೇಡಿಯಂನಲ್ಲಿ ಡಿಸೆಂಬರ್​ 30ರಂದು ಪ್ರೀ-ರಿಲೀಸ್​ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿತ್ತು.

ಮತ್ತೆ ಮುಂದೂಡಲ್ಪಡುತ್ತೆ ‘ಆರ್​ಆರ್​ಆರ್​’ ರಿಲೀಸ್ ದಿನಾಂಕ? ರಾಜಮೌಳಿ ತಂಡಕ್ಕೆ ಮೊದಲ ಹಿನ್ನಡೆ
ಆರ್​ಆರ್​ಆರ್​ ತಂಡ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Dec 25, 2021 | 9:34 PM

ಜನವರಿ 7ರಂದು ‘ಆರ್​ಆರ್​ಆರ್​’ ಸಿನಿಮಾ ತೆರೆಗೆ ಬರುತ್ತಿದೆ. ಈಗಾಗಲೇ ಸಿನಿಮಾ ತಂಡ ಅಬ್ಬರದ ಪ್ರಚಾರ ಮಾಡುತ್ತಿದೆ. ದಕ್ಷಿಣ ಭಾರತ ಹಾಗೂ ಬಾಲಿವುಡ್​ನಲ್ಲಿ ಚಿತ್ರಕ್ಕೆ ಹೈಪ್​ ಕೊಡುವ ಕೆಲಸ ನಡೆಯುತ್ತಿದೆ. ಈಗ ಕೊವಿಡ್​ ಸಂಖ್ಯೆ ಹೆಚ್ಚುತ್ತಿದ್ದು ಮತ್ತೆ ಚಿತ್ರಮಂದಿರಗಳಲ್ಲಿ ಶೇ. 50 ಆಸನ ವ್ಯವಸ್ಥೆಗೆ ಸರ್ಕಾರ ಆದೇಶಿಸುವ ಸಾಧ್ಯತೆ ಇದೆ. ಹಾಗಾದಲ್ಲಿ ‘ಆರ್​ಆರ್​ಆರ್​’ ಸಿನಿಮಾ ರಿಲೀಸ್​ ದಿನಾಂಕ ಮುಂದೂಡಲ್ಪಡಲಿದೆ. ಈಗ ರಾಜಮೌಳಿ ತಂಡಕ್ಕೆ ಮೊದಲ ಹಿನ್ನಡೆ ಆಗಿದೆ.

‘ಆರ್​ಆರ್​ಆರ್​’ ಚಿತ್ರತಂಡ ಕರ್ನಾಟಕ, ಆಂಧ್ರ ಪ್ರದೇಶ, ತಮಿಳುನಾಡಿನಲ್ಲಿ ಪ್ರೀ ರಿಲೀಸ್​ ಕಾರ್ಯಕ್ರಮ ನಡೆಸಲು ನಿರ್ಧರಿಸಿದೆ. ಹೈದರಾಬಾದ್​ನ ಎಲ್​ಬಿ ಸ್ಟೇಡಿಯಂನಲ್ಲಿ ಡಿಸೆಂಬರ್​ 30ರಂದು ಪ್ರೀ-ರಿಲೀಸ್​ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿತ್ತು. ಇದಕ್ಕಾಗಿ ಭರ್ಜರಿ ಸಿದ್ಧತೆ ಮಾಡಿಕೊಳ್ಳಲು ಚಿತ್ರತಂಡ ಆಲೋಚಿಸಿತ್ತು. ಆದರೆ, ಈ ಕಾರ್ಯಕ್ರಮಕ್ಕೆ ಒಪ್ಪಿಗೆ ಸಿಕ್ಕಿಲ್ಲ. ಹೀಗಾಗಿ ಈ ಇವೆಂಟ್​ ಕ್ಯಾನ್ಸಲ್​ ಆಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇನ್ನು, ಡಿಸೆಂಬರ್​ 27ರಂದು ಚೆನ್ನೈನಲ್ಲಿ ‘ಆರ್​ಆರ್​ಆರ್​’ ಪ್ರೀ ರಿಲೀಸ್ ಕಾರ್ಯಕ್ರಮ ನಡೆಯುತ್ತಿದೆ. ಇದಕ್ಕೆ ಒಪ್ಪಿಗೆ ಸಿಕ್ಕಿದೆ ಎಂದು ವರದಿ ಆಗಿದೆ. ಆದರೆ, ಹೈದರಾಬಾದ್​ನಲ್ಲಿ ಈ ಕಾರ್ಯಕ್ರಮಕ್ಕೆ ಒಪ್ಪಿಗೆ ಸಿಗದೆ ಇರುವುದು ಚಿತ್ರತಂಡಕ್ಕೆ ಹಿನ್ನಡೆ ಆಗಿದೆ.  ಇತ್ತೀಚೆಗೆ ‘ಪುಷ್ಪ: ದಿ ರೈಸ್​’ ಸಕ್ಸಸ್​ ಮೀಟ್​ಅನ್ನು ಕಾಕಿನಾಡಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿತ್ತು. ಆದರೆ, ಇದಕ್ಕೆ ಒಪ್ಪಿಗೆ ಸಿಕ್ಕಿರಲಿಲ್ಲ.

‘ಆರ್​ಆರ್​ಆರ್​’ ತಂಡದವರ ಸಂಭಾವನೆ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. ರಾಮ್​ ಚರಣ್​, ಜ್ಯೂ. ಎನ್​ಟಿಆರ್​, ಅಜಯ್​ ದೇವಗನ್​, ಆಲಿಯಾ ಭಟ್​ (Alia Bhatt) ಮತ್ತು ರಾಜಮೌಳಿ ಇವರಲ್ಲಿ ಹೆಚ್ಚು ಸಂಭಾವನೆ ಪಡೆದವರು ಯಾರು ಎಂಬ ಪ್ರಶ್ನೆ ಎದ್ದಿದೆ. ಅದಕ್ಕೆ ಉತ್ತರ ಇಲ್ಲಿದೆ.

ಸಂಭಾವನೆ ವಿಚಾರವನ್ನು ಯಾರೂ ಬಹಿರಂಗವಾಗಿ ಮಾತನಾಡಿಲ್ಲ. ಆದರೆ ಮೂಲಗಳ ಪ್ರಕಾರ ರಾಮ್​ ಚರಣ್​ ಮತ್ತು ಜ್ಯೂ. ಎನ್​ಟಿಆರ್​ ಅವರು ಸಮನಾಗಿ ಸಂಭಾವನೆ ಪಡೆದಿದ್ದಾರೆ. ಅಂದರೆ ಇಬ್ಬರೂ ಕೂಡ ತಲಾ 45 ಕೋಟಿ ರೂಪಾಯಿ ಸಂಬಳ ಪಡೆದಿದ್ದಾರೆ ಎನ್ನಲಾಗಿದೆ. ಇನ್ನು, ಆಲಿಯಾ ಭಟ್​ ಅವರಿಗೆ 9 ಕೋಟಿ ರೂ. ನೀಡಲಾಗಿದೆ. ಅದೇ ರೀತಿ ಬಾಲಿವುಡ್​ ಕಲಾವಿದ ಅಜಯ್​ ದೇವಗನ್​ ಅವರು 25 ಕೋಟಿ ರೂ. ಸಂಭಾವನೆಯನ್ನು ಪಡೆದಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ.

ಬ್ಯಾಕ್​ ಟು ಬ್ಯಾಕ್​ ಸೂಪರ್​ ಹಿಟ್​ ಸಿನಿಮಾಗಳನ್ನು ನೀಡುತ್ತಿರುವ ರಾಜಮೌಳಿ ಅವರಿಗೆ ಭಾರತೀಯ ಚಿತ್ರರಂಗದಲ್ಲಿ ಸಖತ್​ ಬೇಡಿಕೆ ಇದೆ. ಅವರು ಈ ಸಿನಿಮಾದ ಲಾಭದಲ್ಲಿ ಶೇ.30ರಷ್ಟು ಪಾಲು ಪಡೆಯಲಿದ್ದಾರೆ ಎನ್ನಲಾಗಿದೆ. ಅದೇ ಅವರ ಸಂಭಾವನೆ ಆಗಿರಲಿದೆ. ಆದರೆ ಈ ಯಾವ ವಿಚಾರಗಳ ಬಗ್ಗೆಯೂ ಚಿತ್ರತಂಡ ಅಧಿಕೃತವಾಗಿ ಮಾತನಾಡಿಲ್ಲ. ಈ ಸಿನಿಮಾವನ್ನು ಡಿವಿವಿ ದಾನಯ್ಯ ನಿರ್ಮಾಣ ಮಾಡಿದ್ದಾರೆ.

ಇದನ್ನೂ ಓದಿ: RRR: ರಾಮ್​ ಚರಣ್​, ಜ್ಯೂ. ಎನ್​ಟಿಆರ್​, ರಾಜಮೌಳಿ, ಆಲಿಯಾ ಇವರಲ್ಲಿ ಹೆಚ್ಚು ಸಂಭಾವನೆ ಪಡೆದವರು ಯಾರು?

ಹಾಲಿವುಡ್​ ಆಫರ್​ ಬಗ್ಗೆ ಅಚ್ಚರಿಯ ಪ್ರತಿಕ್ರಿಯೆ ನೀಡಿದ ‘ಆರ್​ಆರ್​ಆರ್​’ ನಿರ್ದೇಶಕ ರಾಜಮೌಳಿ

Published On - 8:57 pm, Sat, 25 December 21

ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!