AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಹೈದರಾಬಾದ್ ಫಾರ್ಮ್​​ಹೌಸ್​ನಲ್ಲಿದ್ದೇನೆ’; ರೇವ್ ಪಾರ್ಟಿ ಬಗ್ಗೆ ಹೇಮಾ ಸ್ಪಷ್ಟನೆ

ಬರ್ತ್​ಡೇ ಹೆಸರಲ್ಲಿ ಇಲ್ಲಿ ಪಾರ್ಟಿ ನಡೆಯುತ್ತಿತ್ತು. ರಾತ್ರಿ 2 ಗಂಟೆಯಾದರೂ ಪಾರ್ಟಿ ಮುಗಿದಿರಲಿಲ್ಲ. ಆ ಬಳಿಕ ಸಿಸಿಬಿ ಅಧಿಕಾರಿಗಳಿಗೆ ಕೆಲವು ಅನುಮಾನ ಬಂದ ಕಾರಣ ಅವರು ದಾಳಿ ಮಾಡಿದ್ದಾರೆ. ಈ ಪಾರ್ಟಿಯಲ್ಲಿ ಹೇಮಾ ಕೂಡ ಇದ್ದರು ಎನ್ನಲಾಗಿದೆ. ಈಗ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

‘ನಾನು ಹೈದರಾಬಾದ್ ಫಾರ್ಮ್​​ಹೌಸ್​ನಲ್ಲಿದ್ದೇನೆ’; ರೇವ್ ಪಾರ್ಟಿ ಬಗ್ಗೆ ಹೇಮಾ ಸ್ಪಷ್ಟನೆ
ಹೇಮಾ
Shivaprasad B
| Edited By: |

Updated on: May 20, 2024 | 12:58 PM

Share

ಬೆಂಗಳೂರಿನ ಇಲೆಕ್ಟ್ರಾನಿಕ್ ಸಿಟಿ ಬಳಿ ಇರುವ ಜಿಆರ್​ ಫಾರ್ಮ್​​ಹೌಸ್​ನಲ್ಲಿ ರೇವ್ ಪಾರ್ಟಿ ನಡೆಯುತ್ತಿರುವ ಮಾಹಿತಿ ಆಧಾರದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇಂದು (ಮೇ 20) ಮುಂಜಾನೆ ಈ ದಾಳಿ ನಡೆದಿದೆ. ಈ ವೇಳೆ ಟಾಲಿವುಡ್​ ನಟಿ ಹೇಮಾ ಕೂಡ ಇದ್ದರು ಎನ್ನುವ ಸುದ್ದಿ ಹರಿದಾಡಿತ್ತು. ಇದಕ್ಕೆ ನಟಿ ಹೇಮಾ (Actress Hema) ಸ್ಪಷ್ಟನೆ ನೀಡಿದ್ದಾರೆ. ‘ನಾನು ಹೈದರಾಬಾದ್ ಫಾರ್ಮ್​ಹೌಸ್​ನಲ್ಲಿ ಆರಾಮಾಗಿ ಇದ್ದೇನೆ’ ಎಂದಿದ್ದಾರೆ. ಈ ಮೂಲಕ ಹರಿದಾಡುತ್ತಿರುವ ವದಂತಿಗೆ ತೆರೆ ಎಳೆದಿದ್ದಾರೆ.

ಜಿಆರ್​ ಫಾರ್ಮ್​ಹೌಸ್​ ‘ಕಾನ್ ಕಾರ್ಡ್’ ಮಾಲೀಕ ಗೋಪಾಲ ರೆಡ್ಡಿ ಎಂಬುವವರ ಹೆಸರಲ್ಲಿ ಇದೆ. ಬರ್ತ್​ಡೇ ಹೆಸರಲ್ಲಿ ಇಲ್ಲಿ ಪಾರ್ಟಿ ನಡೆಯುತ್ತಿತ್ತು. ರಾತ್ರಿ 2 ಗಂಟೆಯಾದರೂ ಪಾರ್ಟಿ ಮುಗಿದಿರಲಿಲ್ಲ. ಆ ಬಳಿಕ ಸಿಸಿಬಿ ಅಧಿಕಾರಿಗಳಿಗೆ ಕೆಲವು ಅನುಮಾನ ಬಂದ ಕಾರಣ ಅವರು ದಾಳಿ ಮಾಡಿದ್ದಾರೆ. ದಾಳಿ ವೇಳೆ ಡ್ರಗ್ಸ್ ಪತ್ತೆ ಆಗಿದೆ. ಹೈದರಾಬಾದ್ ಮೂಲದ ವಾಸು ಎಂಬುವವರು ಪಾರ್ಟಿ ಆಯೋಜನೆ ಮಾಡಿದ್ದರು. ಪಾರ್ಟಿಯಲ್ಲಿ ಕೆಲವು ತೆಲುಗು ನಟಿಯರೂ ಇದ್ದರು ಎನ್ನಲಾಗಿದೆ. ಈ ವೇಳೆ ನಟಿ ಹೇಮಾ ಹೆಸರು ಕೂಡ ಕೇಳಿ ಬಂದಿತ್ತು.

ಈಗ ಹೇಮಾ ಅವರು ತಮ್ಮ ಬಗ್ಗೆ ಕೇಳಿ ಬಂದ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ. ‘ನಾನು ಹೈದರಾಬಾದ್ ಫಾರ್ಮ್​ಹೌಸ್​ನಲ್ಲಿ ಆರಾಮಾಗಿ ಇದ್ದೇನೆ. ನನ್ನ ಬಗ್ಗೆ ಕೇಳಿ ಬಂದಿರೋದು ಫೇಕಸ್ ನ್ಯೂಸ್’ ಎಂದು ಹೇಳಿದ್ದಾರೆ. ಈ ಮೂಲಕ ದಾಳಿ ನಡೆದ ಜಾಗದಲ್ಲಿ ನಾನು ಇರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ತೆಲುಗು ನಟಿಯರು ಭಾಗಿಯಾಗಿದ್ದ ರೇವ್​​ಪಾರ್ಟಿ ಮೇಲೆ ಸಿಸಿಬಿ ದಾಳಿ; ಡ್ರಗ್ಸ್, ಕೊಕೇನ್ ಪತ್ತೆ

ದಾಳಿ ವೇಳೆ ಸಿಕ್ಕಿದ್ದೇನು?

ದಾಳಿಯ ವೇಳೆ 17 ಎಂಡಿಎಂಎ ಮಾತ್ರೆ, ಕೊಕೇನ್ ಪತ್ತೆಯಾಗಿದೆ. ಹಲವು ಐಷಾರಾಮಿ ಕಾರುಗಳು ಕೂಡ ಇದ್ದವು. ಈ ಪಾರ್ಟಿಯಲ್ಲಿ ಮಾಡೆಲ್​​ಗಳು ಹಾಗೂ ಟೆಕ್ಕಿಗಳು ಭಾಗಿಯಾಗಿದ್ದರು ಎನ್ನಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. 100ಕ್ಕೂ ಹೆಚ್ಚು ಜನರು ಇದರಲ್ಲಿ ಭಾಗಿ ಆಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ