AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಹೈದರಾಬಾದ್ ಫಾರ್ಮ್​​ಹೌಸ್​ನಲ್ಲಿದ್ದೇನೆ’; ರೇವ್ ಪಾರ್ಟಿ ಬಗ್ಗೆ ಹೇಮಾ ಸ್ಪಷ್ಟನೆ

ಬರ್ತ್​ಡೇ ಹೆಸರಲ್ಲಿ ಇಲ್ಲಿ ಪಾರ್ಟಿ ನಡೆಯುತ್ತಿತ್ತು. ರಾತ್ರಿ 2 ಗಂಟೆಯಾದರೂ ಪಾರ್ಟಿ ಮುಗಿದಿರಲಿಲ್ಲ. ಆ ಬಳಿಕ ಸಿಸಿಬಿ ಅಧಿಕಾರಿಗಳಿಗೆ ಕೆಲವು ಅನುಮಾನ ಬಂದ ಕಾರಣ ಅವರು ದಾಳಿ ಮಾಡಿದ್ದಾರೆ. ಈ ಪಾರ್ಟಿಯಲ್ಲಿ ಹೇಮಾ ಕೂಡ ಇದ್ದರು ಎನ್ನಲಾಗಿದೆ. ಈಗ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

‘ನಾನು ಹೈದರಾಬಾದ್ ಫಾರ್ಮ್​​ಹೌಸ್​ನಲ್ಲಿದ್ದೇನೆ’; ರೇವ್ ಪಾರ್ಟಿ ಬಗ್ಗೆ ಹೇಮಾ ಸ್ಪಷ್ಟನೆ
ಹೇಮಾ
Shivaprasad B
| Edited By: |

Updated on: May 20, 2024 | 12:58 PM

Share

ಬೆಂಗಳೂರಿನ ಇಲೆಕ್ಟ್ರಾನಿಕ್ ಸಿಟಿ ಬಳಿ ಇರುವ ಜಿಆರ್​ ಫಾರ್ಮ್​​ಹೌಸ್​ನಲ್ಲಿ ರೇವ್ ಪಾರ್ಟಿ ನಡೆಯುತ್ತಿರುವ ಮಾಹಿತಿ ಆಧಾರದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇಂದು (ಮೇ 20) ಮುಂಜಾನೆ ಈ ದಾಳಿ ನಡೆದಿದೆ. ಈ ವೇಳೆ ಟಾಲಿವುಡ್​ ನಟಿ ಹೇಮಾ ಕೂಡ ಇದ್ದರು ಎನ್ನುವ ಸುದ್ದಿ ಹರಿದಾಡಿತ್ತು. ಇದಕ್ಕೆ ನಟಿ ಹೇಮಾ (Actress Hema) ಸ್ಪಷ್ಟನೆ ನೀಡಿದ್ದಾರೆ. ‘ನಾನು ಹೈದರಾಬಾದ್ ಫಾರ್ಮ್​ಹೌಸ್​ನಲ್ಲಿ ಆರಾಮಾಗಿ ಇದ್ದೇನೆ’ ಎಂದಿದ್ದಾರೆ. ಈ ಮೂಲಕ ಹರಿದಾಡುತ್ತಿರುವ ವದಂತಿಗೆ ತೆರೆ ಎಳೆದಿದ್ದಾರೆ.

ಜಿಆರ್​ ಫಾರ್ಮ್​ಹೌಸ್​ ‘ಕಾನ್ ಕಾರ್ಡ್’ ಮಾಲೀಕ ಗೋಪಾಲ ರೆಡ್ಡಿ ಎಂಬುವವರ ಹೆಸರಲ್ಲಿ ಇದೆ. ಬರ್ತ್​ಡೇ ಹೆಸರಲ್ಲಿ ಇಲ್ಲಿ ಪಾರ್ಟಿ ನಡೆಯುತ್ತಿತ್ತು. ರಾತ್ರಿ 2 ಗಂಟೆಯಾದರೂ ಪಾರ್ಟಿ ಮುಗಿದಿರಲಿಲ್ಲ. ಆ ಬಳಿಕ ಸಿಸಿಬಿ ಅಧಿಕಾರಿಗಳಿಗೆ ಕೆಲವು ಅನುಮಾನ ಬಂದ ಕಾರಣ ಅವರು ದಾಳಿ ಮಾಡಿದ್ದಾರೆ. ದಾಳಿ ವೇಳೆ ಡ್ರಗ್ಸ್ ಪತ್ತೆ ಆಗಿದೆ. ಹೈದರಾಬಾದ್ ಮೂಲದ ವಾಸು ಎಂಬುವವರು ಪಾರ್ಟಿ ಆಯೋಜನೆ ಮಾಡಿದ್ದರು. ಪಾರ್ಟಿಯಲ್ಲಿ ಕೆಲವು ತೆಲುಗು ನಟಿಯರೂ ಇದ್ದರು ಎನ್ನಲಾಗಿದೆ. ಈ ವೇಳೆ ನಟಿ ಹೇಮಾ ಹೆಸರು ಕೂಡ ಕೇಳಿ ಬಂದಿತ್ತು.

ಈಗ ಹೇಮಾ ಅವರು ತಮ್ಮ ಬಗ್ಗೆ ಕೇಳಿ ಬಂದ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ. ‘ನಾನು ಹೈದರಾಬಾದ್ ಫಾರ್ಮ್​ಹೌಸ್​ನಲ್ಲಿ ಆರಾಮಾಗಿ ಇದ್ದೇನೆ. ನನ್ನ ಬಗ್ಗೆ ಕೇಳಿ ಬಂದಿರೋದು ಫೇಕಸ್ ನ್ಯೂಸ್’ ಎಂದು ಹೇಳಿದ್ದಾರೆ. ಈ ಮೂಲಕ ದಾಳಿ ನಡೆದ ಜಾಗದಲ್ಲಿ ನಾನು ಇರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ತೆಲುಗು ನಟಿಯರು ಭಾಗಿಯಾಗಿದ್ದ ರೇವ್​​ಪಾರ್ಟಿ ಮೇಲೆ ಸಿಸಿಬಿ ದಾಳಿ; ಡ್ರಗ್ಸ್, ಕೊಕೇನ್ ಪತ್ತೆ

ದಾಳಿ ವೇಳೆ ಸಿಕ್ಕಿದ್ದೇನು?

ದಾಳಿಯ ವೇಳೆ 17 ಎಂಡಿಎಂಎ ಮಾತ್ರೆ, ಕೊಕೇನ್ ಪತ್ತೆಯಾಗಿದೆ. ಹಲವು ಐಷಾರಾಮಿ ಕಾರುಗಳು ಕೂಡ ಇದ್ದವು. ಈ ಪಾರ್ಟಿಯಲ್ಲಿ ಮಾಡೆಲ್​​ಗಳು ಹಾಗೂ ಟೆಕ್ಕಿಗಳು ಭಾಗಿಯಾಗಿದ್ದರು ಎನ್ನಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. 100ಕ್ಕೂ ಹೆಚ್ಚು ಜನರು ಇದರಲ್ಲಿ ಭಾಗಿ ಆಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?