AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಹೈದರಾಬಾದ್ ಫಾರ್ಮ್​​ಹೌಸ್​ನಲ್ಲಿದ್ದೇನೆ’; ರೇವ್ ಪಾರ್ಟಿ ಬಗ್ಗೆ ಹೇಮಾ ಸ್ಪಷ್ಟನೆ

ಬರ್ತ್​ಡೇ ಹೆಸರಲ್ಲಿ ಇಲ್ಲಿ ಪಾರ್ಟಿ ನಡೆಯುತ್ತಿತ್ತು. ರಾತ್ರಿ 2 ಗಂಟೆಯಾದರೂ ಪಾರ್ಟಿ ಮುಗಿದಿರಲಿಲ್ಲ. ಆ ಬಳಿಕ ಸಿಸಿಬಿ ಅಧಿಕಾರಿಗಳಿಗೆ ಕೆಲವು ಅನುಮಾನ ಬಂದ ಕಾರಣ ಅವರು ದಾಳಿ ಮಾಡಿದ್ದಾರೆ. ಈ ಪಾರ್ಟಿಯಲ್ಲಿ ಹೇಮಾ ಕೂಡ ಇದ್ದರು ಎನ್ನಲಾಗಿದೆ. ಈಗ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

‘ನಾನು ಹೈದರಾಬಾದ್ ಫಾರ್ಮ್​​ಹೌಸ್​ನಲ್ಲಿದ್ದೇನೆ’; ರೇವ್ ಪಾರ್ಟಿ ಬಗ್ಗೆ ಹೇಮಾ ಸ್ಪಷ್ಟನೆ
ಹೇಮಾ
ಶಿವಪ್ರಸಾದ್​ ಬಿ.
| Edited By: |

Updated on: May 20, 2024 | 12:58 PM

Share

ಬೆಂಗಳೂರಿನ ಇಲೆಕ್ಟ್ರಾನಿಕ್ ಸಿಟಿ ಬಳಿ ಇರುವ ಜಿಆರ್​ ಫಾರ್ಮ್​​ಹೌಸ್​ನಲ್ಲಿ ರೇವ್ ಪಾರ್ಟಿ ನಡೆಯುತ್ತಿರುವ ಮಾಹಿತಿ ಆಧಾರದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇಂದು (ಮೇ 20) ಮುಂಜಾನೆ ಈ ದಾಳಿ ನಡೆದಿದೆ. ಈ ವೇಳೆ ಟಾಲಿವುಡ್​ ನಟಿ ಹೇಮಾ ಕೂಡ ಇದ್ದರು ಎನ್ನುವ ಸುದ್ದಿ ಹರಿದಾಡಿತ್ತು. ಇದಕ್ಕೆ ನಟಿ ಹೇಮಾ (Actress Hema) ಸ್ಪಷ್ಟನೆ ನೀಡಿದ್ದಾರೆ. ‘ನಾನು ಹೈದರಾಬಾದ್ ಫಾರ್ಮ್​ಹೌಸ್​ನಲ್ಲಿ ಆರಾಮಾಗಿ ಇದ್ದೇನೆ’ ಎಂದಿದ್ದಾರೆ. ಈ ಮೂಲಕ ಹರಿದಾಡುತ್ತಿರುವ ವದಂತಿಗೆ ತೆರೆ ಎಳೆದಿದ್ದಾರೆ.

ಜಿಆರ್​ ಫಾರ್ಮ್​ಹೌಸ್​ ‘ಕಾನ್ ಕಾರ್ಡ್’ ಮಾಲೀಕ ಗೋಪಾಲ ರೆಡ್ಡಿ ಎಂಬುವವರ ಹೆಸರಲ್ಲಿ ಇದೆ. ಬರ್ತ್​ಡೇ ಹೆಸರಲ್ಲಿ ಇಲ್ಲಿ ಪಾರ್ಟಿ ನಡೆಯುತ್ತಿತ್ತು. ರಾತ್ರಿ 2 ಗಂಟೆಯಾದರೂ ಪಾರ್ಟಿ ಮುಗಿದಿರಲಿಲ್ಲ. ಆ ಬಳಿಕ ಸಿಸಿಬಿ ಅಧಿಕಾರಿಗಳಿಗೆ ಕೆಲವು ಅನುಮಾನ ಬಂದ ಕಾರಣ ಅವರು ದಾಳಿ ಮಾಡಿದ್ದಾರೆ. ದಾಳಿ ವೇಳೆ ಡ್ರಗ್ಸ್ ಪತ್ತೆ ಆಗಿದೆ. ಹೈದರಾಬಾದ್ ಮೂಲದ ವಾಸು ಎಂಬುವವರು ಪಾರ್ಟಿ ಆಯೋಜನೆ ಮಾಡಿದ್ದರು. ಪಾರ್ಟಿಯಲ್ಲಿ ಕೆಲವು ತೆಲುಗು ನಟಿಯರೂ ಇದ್ದರು ಎನ್ನಲಾಗಿದೆ. ಈ ವೇಳೆ ನಟಿ ಹೇಮಾ ಹೆಸರು ಕೂಡ ಕೇಳಿ ಬಂದಿತ್ತು.

ಈಗ ಹೇಮಾ ಅವರು ತಮ್ಮ ಬಗ್ಗೆ ಕೇಳಿ ಬಂದ ಆರೋಪಕ್ಕೆ ಸ್ಪಷ್ಟನೆ ನೀಡಿದ್ದಾರೆ. ‘ನಾನು ಹೈದರಾಬಾದ್ ಫಾರ್ಮ್​ಹೌಸ್​ನಲ್ಲಿ ಆರಾಮಾಗಿ ಇದ್ದೇನೆ. ನನ್ನ ಬಗ್ಗೆ ಕೇಳಿ ಬಂದಿರೋದು ಫೇಕಸ್ ನ್ಯೂಸ್’ ಎಂದು ಹೇಳಿದ್ದಾರೆ. ಈ ಮೂಲಕ ದಾಳಿ ನಡೆದ ಜಾಗದಲ್ಲಿ ನಾನು ಇರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ತೆಲುಗು ನಟಿಯರು ಭಾಗಿಯಾಗಿದ್ದ ರೇವ್​​ಪಾರ್ಟಿ ಮೇಲೆ ಸಿಸಿಬಿ ದಾಳಿ; ಡ್ರಗ್ಸ್, ಕೊಕೇನ್ ಪತ್ತೆ

ದಾಳಿ ವೇಳೆ ಸಿಕ್ಕಿದ್ದೇನು?

ದಾಳಿಯ ವೇಳೆ 17 ಎಂಡಿಎಂಎ ಮಾತ್ರೆ, ಕೊಕೇನ್ ಪತ್ತೆಯಾಗಿದೆ. ಹಲವು ಐಷಾರಾಮಿ ಕಾರುಗಳು ಕೂಡ ಇದ್ದವು. ಈ ಪಾರ್ಟಿಯಲ್ಲಿ ಮಾಡೆಲ್​​ಗಳು ಹಾಗೂ ಟೆಕ್ಕಿಗಳು ಭಾಗಿಯಾಗಿದ್ದರು ಎನ್ನಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. 100ಕ್ಕೂ ಹೆಚ್ಚು ಜನರು ಇದರಲ್ಲಿ ಭಾಗಿ ಆಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ತಮ್ಮನಾಗಲು ಯೋಗ್ಯತೆಗಳಿರಬೇಕು: ಅಣ್ಣ ಎಂದ ಮಂಜನಿಗೆ ಗುನ್ನಾ ಇಟ್ಟ ಕಿಚ್ಚ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ವಂದೇ ಮಾತರಂ ಎರಡೇ ಚರಣ ಹಾಡಿದ್ದಕ್ಕೆ ಬಿಜೆಪಿ ಶಾಸಕ ಅಸಮಾಧಾನ
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಬಳ್ಳಾರಿ: 2 ತಿಂಗಳಿನಿಂದ ವೇತನವಿಲ್ಲದೆ ಬಿಸಿಯೂಟ ಕಾರ್ಯಕರ್ತರ ಪರದಾಟ!
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ
ಭಾರತೀಯ ವಾಯುಪಡೆಗೆ ಹೆಚ್ಎಎಲ್ ನಿರ್ಮಿತ ಯುದ್ಧ ವಿಮಾನಗಳ ಹಸ್ತಾಂತರ
ಅವಕಾಶ ಕೊಟ್ಟ ವೇದಿಕೆಗೆ ಅಗೌರವ; ಕಿಚ್ಚನ ಕ್ಲಾಸ್ ಹೇಗಿದೆ ನೋಡಿ
ಅವಕಾಶ ಕೊಟ್ಟ ವೇದಿಕೆಗೆ ಅಗೌರವ; ಕಿಚ್ಚನ ಕ್ಲಾಸ್ ಹೇಗಿದೆ ನೋಡಿ