AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನನ್ನು ದೂರ ಇಟ್ಟಿದ್ದಾರೆ’; ರಾಜಕೀಯ ನಿಲುವುಗಳಿಂದ ಪ್ರಕಾಶ್ ರಾಜ್​​ಗೆ ತಪ್ಪುತ್ತಿದೆ ಸಿನಿಮಾ ಆಫರ್

ಕೆಲವರು ಸರ್ಕಾರ ಮಾಡುವ ತಪ್ಪಿನ ವಿರುದ್ಧ ಧ್ವನಿ ಎತ್ತಿದರೆ ಇನ್ನೂ ಕೆಲವರು ಸುಮ್ಮನಿರುತ್ತಾರೆ. ಪ್ರಕಾಶ್ ರಾಜ್ ಅವರು ಧ್ವನಿ ಎತ್ತುವ ಕೆಲಸವನ್ನು ಮುಂದುವರಿಸಲಿದ್ದಾರಂತೆ.

‘ನನ್ನನ್ನು ದೂರ ಇಟ್ಟಿದ್ದಾರೆ’; ರಾಜಕೀಯ ನಿಲುವುಗಳಿಂದ ಪ್ರಕಾಶ್ ರಾಜ್​​ಗೆ ತಪ್ಪುತ್ತಿದೆ ಸಿನಿಮಾ ಆಫರ್
ಪ್ರಕಾಶ್ ರೈ
TV9 Web
| Edited By: |

Updated on: Nov 15, 2022 | 6:10 PM

Share

ನಟ ಪ್ರಕಾಶ್ ರಾಜ್ (Prakash Raj) ಅವರು ಹಲವು ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದಾರೆ. ಎಂತಹ ಪಾತ್ರ ನೀಡಿದರೂ ಅವರು ಮಾಡಿ ತೋರಿಸುತ್ತಾರೆ. ನಟನೆ ಜತೆಗೆ ಅವರು ತಮ್ಮ ರಾಜಕೀಯ ನಿಲುವುಗಳ ಮೂಲಕವೂ ಸುದ್ದಿ ಆಗುತ್ತಾರೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ನೇತೃತ್ವದ ಕೇಂದ್ರ ಸರ್ಕಾರವನ್ನು ಅವರು ಟೀಕಿಸುತ್ತಲೇ ಬಂದಿದ್ದಾರೆ. ಸರ್ಕಾರವನ್ನು ಟೀಕಿಸುವುದರಲ್ಲಿ ಅವರು ಎಂದಿಗೂ ಹಿಂಜರಿದಿಲ್ಲ. ಇದು ಅವರ ವೃತ್ತಿ ಜೀವನದ ಮೇಲೆ ಪ್ರಭಾವ ಬೀರಿದೆ. ಅನೇಕರು ಪ್ರಕಾಶ್ ರೈ ಜತೆ ಕೆಲಸ ಮಾಡಲು ನಿರಾಕರಿಸುತ್ತಿದ್ದಾರಂತೆ.

‘ನನ್ನ ರಾಜಕೀಯ ನಿಲುವುಗಳು ನನ್ನ ವೃತ್ತಿ ಜೀವನದ ಮೇಲೆ ಪ್ರಭಾವ ಬೀರುತ್ತಿದೆ. ಕೆಲವರು ನನ್ನ ಜತೆ ಸಿನಿಮಾ ಮಾಡುತ್ತಿಲ್ಲ. ನನ್ನನ್ನು ದೂರ ಇಟ್ಟಿದ್ದಾರೆ. ನನ್ನ ಜತೆ ಸಿನಿಮಾ ಮಾಡಬೇಡಿ ಎಂದು ಅವರಿಗೆ ಯಾರೂ ಹೇಳಿಲ್ಲ. ಆದರೆ, ನನ್ನ ಜತೆ ಕೆಲಸ ಮಾಡಿದರೆ ಕೆಲವರು ಅವರನ್ನು ಒಪ್ಪದೆ ಇದ್ದರೆ ಎನ್ನುವ ಭಯ ಅಷ್ಟೇ. ನಾನು ಅಂತಹ ಆಫರ್​ಗಳನ್ನು ಬಿಡುವಷ್ಟು ಬಲಶಾಲಿ ಹಾಗೂ ಶ್ರೀಮಂತನಾಗಿದ್ದೇನೆ. ನನ್ನ ಭಯವೇ ಮತ್ತೊಬ್ಬರ ಶಕ್ತಿ ಆಗಬಹುದು’ ಎಂದು ಪ್ರಕಾಶ್ ರೈ ಹಿಂದುಸ್ತಾನ್ ಟೈಮ್ಸ್ ಜತೆ ಮಾತನಾಡಿದ್ದಾರೆ.

ಕೆಲವರು ಸರ್ಕಾರ ಮಾಡುವ ತಪ್ಪಿನ ವಿರುದ್ಧ ಧ್ವನಿ ಎತ್ತಿದರೆ ಇನ್ನೂ ಕೆಲವರು ಸುಮ್ಮನಿರುತ್ತಾರೆ. ಪ್ರಕಾಶ್ ರಾಜ್ ಅವರು ಧ್ವನಿ ಎತ್ತುವ ಕೆಲಸವನ್ನು ಮುಂದುವರಿಸಲಿದ್ದಾರಂತೆ. ‘ಕೆಲ ಕಲಾವಿದರು ಸೈಲೆಂಟ್ ಆಗಿದ್ದಾರೆ. ನಾನು ಅವರನ್ನು ದೂರುವುದಿಲ್ಲ. ಬಹುಶಃ ಅವರು ಅದನ್ನು ಭರಿಸಲಾರರು. ನಾನು ಟೀಕೆಯನ್ನು ಮುಂದುವರಿಸುತ್ತೇನೆ’ ಎಂದಿದ್ದಾರೆ ಪ್ರಕಾಶ್ ರೈ.

ಇದನ್ನೂ ಓದಿ
Image
‘ಗಂಧದ ಗುಡಿ’ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ
Image
Puneetha Parva: ‘ಮಿಸ್​ ಯೂ ಅಪ್ಪು’: ಪುನೀತ ಪರ್ವ ವೇದಿಕೆಯಲ್ಲಿ ‘ಪವರ್​ ಸ್ಟಾರ್​’ಗೆ ನುಡಿ ನಮನ ಸಲ್ಲಿಸಿದ ಗಣ್ಯರು
Image
‘ನಾನಿರುವವರೆಗೂ ಈ ಹಾಡು ನನ್ನ ಜತೆ ಇರುತ್ತದೆ’; ‘ಪುನೀತ ಪರ್ವ’ ವೇದಿಕೆ ಮೇಲೆ ರಾಘಣ್ಣ ಭಾವುಕ ನುಡಿ
Image
Puneetha Parva: ‘ಪುನೀತ ಪರ್ವ’ ಲೈವ್​ ನೋಡಲು ಇಲ್ಲಿ ಕ್ಲಿಕ್​ ಮಾಡಿ; ಅರಮನೆ ಮೈದಾನದಲ್ಲಿ ತಾರೆಯರ ಸಂಗಮ

ಈ ಮೊದಲು ಕೂಡ ಪ್ರಕಾಶ್ ರಾಜ್ ಅವರು ಇದೇ ರೀತಿಯ ಹೇಳಿಕೆ ನೀಡಿದ್ದರು. ರಾಜಕೀಯ ಹಿನ್ನಲೆಯನ್ನು ಗಮನಿಸಿ ಬಾಲಿವುಡ್​ನವರು ತಮ್ಮ ಜತೆ ಕೆಲಸ ಮಾಡಲು ಹಿಂದೇಟು ಹಾಕಿದ್ದರು ಎಂಬುದಾಗಿ ಪ್ರಕಾಶ್ ರಾಜ್ ಹೇಳಿಕೆ ನೀಡಿದ್ದರು.

ಇದನ್ನೂ ಓದಿ: Prakash Raj: ಸ್ಟಾರ್ ನಟರೇ ಮತದಾನ ಮಾಡಲಿಲ್ಲ; ಚುನಾವಣೆಯಲ್ಲಿ ಪ್ರಕಾಶ್ ರಾಜ್ ಪಡೆದ ಮತಗಳೆಷ್ಟು?

ಪ್ರಕಾಶ್ ರಾಜ್ ಅವರು ಕೊನೆಯದಾಗಿ ಕಾಣಿಸಿಕೊಂಡಿದ್ದು ಮಣಿರತ್ನಂ ಅವರ ಸೂಪರ್ ಹಿಟ್ ಸಿನಿಮಾ ‘ಪೊನ್ನಿಯಿನ್ ಸೆಲ್ವನ್ 1’ ಚಿತ್ರದಲ್ಲಿ. ಅವರು ಪ್ರಮುಖ ಪಾತ್ರ ಮಾಡಿದ್ದರು. ‘ಮುಖ್ಬಿರ್: ದಿ ಸ್ಟೋರಿ ಆಫ್ ಸ್ಪೈ’ ಸೀರಿಸ್​ನಲ್ಲೂ ಪ್ರಕಾಶ್ ಕಾಣಿಸಿಕೊಂಡಿದ್ದಾರೆ. ನಟನಾಗಿ ಅವರು ಅನೇಕರಿಗೆ ಇಷ್ಟವಾದರೂ ರಾಜಕೀಯ ನಿಲುವುಗಳಿಂದ ಅನೇಕರ ದ್ವೇಷ ಕಟ್ಟಿಕೊಂಡಿದ್ದಾರೆ. ಈ ಮೊದಲು ರಾಜಕೀಯದಲ್ಲಿ ಅವರು ಗೆಲ್ಲುವ ಪ್ರಯತ್ನ ಮಾಡಿದ್ದರು. ಆದರೆ, ಸಾಧ್ಯವಾಗಿಲ್ಲ.

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ