AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಲ್ಲರನ್ನೂ ಖುಷಿಪಡಿಸಲು ನಾನು ಬಿರಿಯಾನಿ ಅಲ್ಲ’; ‘ಬೇಬಿ’ ವಿವಾದಕ್ಕೆ ವಿಶ್ವಕ್ ​ಸೇನ್ ಪ್ರತಿಕ್ರಿಯೆ

 ಸಾಯಿ ರಾಜೇಶ್​ಗೂ ನಟ ವಿಶ್ವಕ್ ಸೇನ್ ಮಧ್ಯೆ ಮುಸುಕಿನ ಗುದ್ದಾಟ ನಡೆದಿದೆ. ಇಬ್ಬರೂ ಪರೋಕ್ಷವಾಗಿ ತಿರುಗೇಟು ಕೊಟ್ಟುಕೊಳ್ಳುತ್ತಿದ್ದಾರೆ.

‘ಎಲ್ಲರನ್ನೂ ಖುಷಿಪಡಿಸಲು ನಾನು ಬಿರಿಯಾನಿ ಅಲ್ಲ’; ‘ಬೇಬಿ’ ವಿವಾದಕ್ಕೆ ವಿಶ್ವಕ್ ​ಸೇನ್ ಪ್ರತಿಕ್ರಿಯೆ
ಬೇಬಿ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Jul 27, 2023 | 7:12 AM

Share

ಆನಂದ್ ದೇವರಕೊಂಡ ನಟನೆಯ ‘ಬೇಬಿ’ ಸಿನಿಮಾ (Baby Movie) ಸೂಪರ್ ಹಿಟ್ ಆಗಿದೆ. ಈ ಚಿತ್ರ ನೋಡಿದ ಪ್ರೇಕ್ಷಕರು ಮೆಚ್ಚುಗೆ ಸೂಚಿಸಿದ್ದಾರೆ. ಈ ಚಿತ್ರದ ಮೂಲಕ ಸಾಯಿ ರಾಜೇಶ್ ಅವರು ಗೆದ್ದು ಬೀಗಿದ್ದಾರೆ. ಈಗ  ಸಾಯಿ ರಾಜೇಶ್​ಗೂ ನಟ ವಿಶ್ವಕ್ ಸೇನ್ (Vishwak Sen) ಮಧ್ಯೆ ಮುಸುಕಿನ ಗುದ್ದಾಟ ನಡೆದಿದೆ. ಇಬ್ಬರೂ ಪರೋಕ್ಷವಾಗಿ ತಿರುಗೇಟು ಕೊಟ್ಟುಕೊಳ್ಳುತ್ತಿದ್ದಾರೆ. ಅಷ್ಟಕ್ಕೂ ಏನಿದು ವಿವಾದ? ಯಾರಿಂದ ಈ ವಿವಾದ ಶುರುವಾಯಿತು ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

‘ಬೇಬಿ’ ಸಿನಿಮಾ ಸಕ್ಸಸ್ ಬಳಿಕ ಮಾತನಾಡಿದ್ದ ರಾಜೇಶ್, ‘ನಾನು ಕಥೆ ಹೇಳುತ್ತೇನೆ ಎಂದಾಗ ಯುವ ಹೀರೋ ನಿರಾಕರಿಸಿದ್ದರು’ ಎಂದು ಹೇಳಿಕೊಂಡಿದ್ದರು. ಇದು ವಿಶ್ವಕ್ ಸೇನ್ ಬಗ್ಗೆ ಆಡಿದ ಮಾತು ಎಂಬುದು ಅನೇಕರಿಗೆ ಗೊತ್ತಾಗಿತ್ತು. ಈ ವೇಳೆ ಟ್ವೀಟ್ ಮಾಡಿದ್ದ ವಿಶ್ವಕ್​, ‘ನೋ ಎಂದರೆ ನೋ. ಇದು ಪುರುಷರಿಗೂ ಅನ್ವಯ ಆಗುತ್ತದೆ. ಶಾಂತವಾಗಿರೋಣ ಮತ್ತು ಕೂಗುವುದನ್ನು ತಡೆಯೋಣ. ರಿಲ್ಯಾಕ್ಸ್ ಆಗೋಣ’ ಎಂದು ಬರೆದುಕೊಂಡಿದ್ದರು.

ಸಾಯಿ ರಾಜೇಶ್ ಕೂಡ ಟ್ವೀಟ್ ಮಾಡಿ, ‘ನಾನು ನಿಮ್ಮ ಟ್ವೀಟ್​ಗಳನ್ನು ಓದುತ್ತಿದ್ದೇನೆ’ ಎಂದು ಬರೆದುಕೊಂಡಿದ್ದರು.  ಇತ್ತೀಚೆಗೆ ನಡೆದ ಕಾರ್ಯಕ್ರಮ ಒಂದರಲ್ಲಿ ವಿಶ್ವಕ್ ಸೇನ್ ಅವರು ಈ ಬಗ್ಗೆ ಮಾತನಾಡಿದ್ದಾರೆ. ‘ನಾವು ಏನು ಮಾಡುತ್ತಿದ್ದೇವೆ ಎಂಬ ಸ್ಪಷ್ಟತೆ ಇದ್ದಾಗ ನಾವು ಇತರರ ಸಮಯವನ್ನು ವ್ಯರ್ಥ ಮಾಡುವುದಿಲ್ಲ. ಒಂದು ಗಂಟೆ ಕಥೆ ಕೇಳಿ ಆ ಬಳಿಕ ಇಲ್ಲ ಎಂದು ಹೇಳಲು ನನಗೆ ಇಷ್ಟವಿರಲಿಲ್ಲ. ಅದು ನನ್ನ ವೈಯಕ್ತಿಕ ಆಯ್ಕೆ. ಕೆಲವರು ಇದರ ಬಗ್ಗೆ ಕೆಟ್ಟ ಭಾವನೆ ಹೊಂದಿದ್ದಾರೆ.  ನಿರೂಪಣೆಯನ್ನು ಕೇಳಲಿಲ್ಲ ಎಂದು ಟೀಕಿಸಲು ಪ್ರಾರಂಭಿಸಿದ್ದಾರೆ’ ಎಂದು ಪರೋಕ್ಷವಾಗಿ ಸಾಯಿ ರಾಜೇಶ್​ಗೆ ತಿರುಗೇಟು ನೀಡಿದ್ದಾರೆ ವಿಶ್ವಕ್​.

ಇದನ್ನೂ ಓದಿ: ವಿವಾದದಲ್ಲಿ ಅರ್ಜುನ್ ಸರ್ಜಾ ಸಿನಿಮಾ; ತಿರುಗೇಟು ಕೊಟ್ಟ ವಿಶ್ವಕ್ ಸೇನ್; ಹೊಸ ಹೀರೋಗೆ ಮಣೆ?

‘ಎಲ್ಲರನ್ನು ಸಂತೋಷಪಡಿಸಲು ನಾನು ಬಿರಿಯಾನಿ ಅಲ್ಲ. ಸಿನಿಮಾ ಹಿಟ್​ ಆದರೆ ಬೇರೆಯವರನ್ನು ಟೀಕಿಸುವ ಬದಲು ಸಕ್ಸಸ್​​ನ ಸಂಭ್ರಮಿಸಬೇಕು. ಒಂದು ಸಿನಿಮಾ ಯಶಸ್ವಿಯಾದರೆ ಇಂಡಸ್ಟ್ರಿಯಲ್ಲಿ ಎಲ್ಲರೂ ಖುಷಿ ಪಡುತ್ತಾರೆ. ಚಿತ್ರದ ಟ್ರೇಲರ್ ನೋಡಿದ ನಂತರ ಖುಷಿಪಟ್ಟವರಲ್ಲಿ ನಾನೂ ಒಬ್ಬ’ ಎಂದು ಹೇಳುವ ಮೂಲಕ ಅವರು ಯಾವುದೇ ಬೇಸರ ಇಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಇದಕ್ಕೆ ಸಾಯಿ ರಾಜೇಶ್ ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ