‘ಕಾಂತಾರಾ ಪ್ರೀಕ್ವೆಲ್​ನಲ್ಲಿ ನಾನಿರಲ್ಲ, ನನ್ನ ಜಾಗಕ್ಕೆ ಬೇರೆಯವರು ಬಂದಿದ್ದಾರೆ’; ಸಪ್ತಮಿ ಗೌಡ

| Updated By: ರಾಜೇಶ್ ದುಗ್ಗುಮನೆ

Updated on: Apr 15, 2024 | 8:49 AM

ಯುವ ರಾಜ್​ಕುಮಾರ್ ನಟನೆಯ ‘ಯುವ’ ಸಿನಿಮಾದಲ್ಲಿ ಸಪ್ತಮಿ ಗೌಡ ಅವರು ನಟಿಸಿದ್ದಾರೆ. ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಈ ಸಿನಿಮಾ ಯಶಸ್ಸು ಕಂಡಿದೆ. ಈ ಚಿತ್ರದ ಸಕ್ಸಸ್​ ಮೀಟ್​ನಲ್ಲಿ ಸಪ್ತಮಿ ಗೌಡ ಅವರು ಮಾತಿಗೆ ಸಿಕ್ಕರು. ಈ ವೇಳೆ ತಾವು ‘ಕಾಂತಾರಾ: ಚಾಪ್ಟರ್ 1’ ಸಿನಿಮಾದಲ್ಲಿ ನಟಿಸಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

‘ಕಾಂತಾರಾ ಪ್ರೀಕ್ವೆಲ್​ನಲ್ಲಿ ನಾನಿರಲ್ಲ, ನನ್ನ ಜಾಗಕ್ಕೆ ಬೇರೆಯವರು ಬಂದಿದ್ದಾರೆ’; ಸಪ್ತಮಿ ಗೌಡ
ಸಪ್ತಮಿ
Follow us on

ನಟಿ ಸಪ್ತಮಿ ಗೌಡ ಅವರು ‘ಕಾಂತಾರ’ (Kantara Movie) ಸಿನಿಮಾದಲ್ಲಿ ನಟಿಸಿದ್ದರು. ಈ ಚಿತ್ರ ಸೂಪರ್ ಹಿಟ್ ಆಯಿತು. ಈಗ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಸೆಟ್ಟೇರುತ್ತಿದೆ. ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ನಟಿಸೋದು ಖಚಿತವಾಗಿದೆ. ಅವರೇ ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದ ಪಾತ್ರವರ್ಗದ ಬಗ್ಗೆ ಹೆಚ್ಚಿನ ಮಾಹಿತಿ ರಿವೀಲ್ ಆಗಿಲ್ಲ. ‘ಕಾಂತಾರ’ದಲ್ಲಿ ಲೀಲಾ ಹೆಸರಿನ ಪಾತ್ರ ಮಾಡಿದ್ದ ಸಪ್ತಮಿ ಗೌಡ ಅವರು ‘ಕಾಂತಾರ: ಚಾಪ್ಟರ್ 1’ನಲ್ಲಿ ನಟಿಸುತ್ತಿದ್ದಾರೆಯೇ ಎನ್ನುವ ಪ್ರಶ್ನೆ ಅಭಿಮಾನಿಗಳಿಗೆ ಮೂಡಿದೆ. ಇದಕ್ಕೆ ಸಪ್ತಮಿ ಗೌಡ ಅವರೇ ಸ್ಪಷ್ಟನೆ ನೀಡಿದ್ದಾರೆ.

ಯುವ ರಾಜ್​ಕುಮಾರ್ ನಟನೆಯ ‘ಯುವ’ ಸಿನಿಮಾದಲ್ಲಿ ಸಪ್ತಮಿ ಗೌಡ ಅವರು ನಟಿಸಿದ್ದಾರೆ. ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಈ ಸಿನಿಮಾ ಯಶಸ್ಸು ಕಂಡಿದೆ. ಈ ಚಿತ್ರದ ಸಕ್ಸಸ್​ ಮೀಟ್​ನಲ್ಲಿ ಸಪ್ತಮಿ ಗೌಡ ಅವರು ಮಾತಿಗೆ ಸಿಕ್ಕರು. ಈ ವೇಳೆ ತಾವು ‘ಕಾಂತಾರಾ: ಚಾಪ್ಟರ್ 1’ ಸಿನಿಮಾದಲ್ಲಿ ನಟಿಸಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಇದಕ್ಕೆ ಕಾರಣವನ್ನೂ ಅವರು ನೀಡಿದ್ದಾರೆ.

‘ನಾನು ನಟಿಸುತ್ತಿಲ್ಲ. ಆ ಪಾತ್ರಕ್ಕೆ ಬೇರೆಯವರು ಬಂದಿದ್ದಾರೆ. ಈಗ ಸಿದ್ಧವಾಗುತ್ತಿರುವುದು ಪ್ರೀಕ್ವೆಲ್. ಆ ಪಾತ್ರವೇ ಇಲ್ಲ ಎಂದಾಗ ನಾನು ನಟಿಸೋದು ಹೇಗೆ’ ಎಂದು ಕೇಳಿದ್ದಾರೆ ಸಪ್ತಮಿ ಗೌಡ. ‘ನನಗೆ ಏನೇ ಸಿಕ್ಕಿದ್ದರೂ ಅದು ಕಾಂತಾರದಿಂದ. ಸಿನಿಮಾ ರಿಲೀಸ್ ಆಗಿ ಎರಡು ವರ್ಷ ಕಳೆದರೂ ಈಗಲೂ ಅದರ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ಆ ಸಿನಿಮಾದ ಶೂಟಿಂಗ್ ಇನ್ನೇನು ಶುರುವಾಗುತ್ತದೆ ಕಾಂತಾರ ಪ್ರೀಕ್ವೆಲ್ ನಿಮಗೆ ಇಷ್ಟ ಆಗುತ್ತದೆ’ ಎಂದಿದ್ದಾರೆ ಸಪ್ತಮಿ ಗೌಡ.

ಸಪ್ತಮಿ ಗೌಡ ಅವರು ‘ಕಾಂತಾರಾ: ಚಾಪ್ಟರ್ 1’ ಸಿನಿಮಾದಲ್ಲಿ ನಟಿಸುತ್ತಿಲ್ಲ. ಆದರೂ ಸಿನಿಮಾ ಬಗ್ಗೆ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅವರು ಸಿನಿಮಾ ಬಗ್ಗೆ ಸಖತ್ ಎಗ್ಸೈಟ್ ಆಗಿದ್ದಾರೆ. ಅದು ನಮ್ಮ ತಂಡ ಎನ್ನುವ ಭಾವನೆ ಅವರಿಗೆ ಇದೆ.

ಇದನ್ನೂ ಓದಿ: ಕಿರುತೆರೆಗೆ ಪ್ರವೇಶಿಸಿದ ‘ಕಾಂತಾರ’ ಚೆಲುವೆ ಸಪ್ತಮಿ ಗೌಡ

ಸಪ್ತಮಿ ಅವರು ಕನ್ನಡ ಮಾತ್ರವಲ್ಲದೆ ಹಿಂದಿಯಲ್ಲೂ ನಟಿಸಿದ್ದಾರೆ. ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ‘ದಿ ವ್ಯಾಕ್ಸಿನ್ ವಾರ್’ ಸಿನಿಮಾದಲ್ಲಿ ಅವರು ವಿಜ್ಞಾನಿಯ ಪಾತ್ರ ಮಾಡಿದ್ದರು. ಈ ಮೂಲಕ ಗಮನ ಸೆಳೆಯುವ ಪ್ರಯತ್ನ ಮಾಡಿದ್ದರು. ದಕ್ಷಿಣ ಹಾಗೂ ಬಾಲಿವುಡ್ ಎನ್ನುವ ಚರ್ಚೆ ಮೊದಲಿನಿಂದಲೂ ಇದೆ. ಆದರೆ, ಅವರಿಗೆ ಯಾವುದೇ ವ್ಯತ್ಯಾಸ ಕಾಣಿಸಿಲ್ಲವಂತೆ. ಈ ಬಗ್ಗೆ ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ‘ಹೊಂಬಾಳೆ ಫಿಲ್ಮ್ಸ್ ಜೊತೆ ಕೆಲಸ ಮಾಡಿದ ಅನುಭವ ಹೋಲಿಸಿದರೆ ಎಲ್ಲದಕ್ಕೂ ಸಮ. ಬಾಲಿವುಡ್​ ಸ್ಟ್ಯಾಂಡರ್ಡ್​​ನಲ್ಲೇ ಅವರು ಕೆಲಸ ಮಾಡುತ್ತಾರೆ’ ಎಂದಿದ್ದಾರೆ ಸಪ್ತಮಿ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:26 am, Sun, 14 April 24