AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನಲ್ಲ, ಕೊರೊನಾ ಬಳಲುತ್ತಿದೆ; ಅಚ್ಚರಿಯ ಟ್ವೀಟ್​ ಮಾಡಿದ ಸೋನು ಸೂದ್

ಇದಾದ ಬೆನ್ನಲ್ಲೇ ಅನೇಕರು ಸೋನು ಸೂದ್​ ಆರೋಗ್ಯ ಹೇಗಿದೆ ಎಂದು ಅನೇಕರು ಕೇಳಿದ್ದರು. ಸಾಕಷ್ಟು ಜನರು ಕಾಳಜಿ ತೋರಿದ್ದರು. ಈ ಬಗ್ಗೆ ಸೂನು ಸೂದು ಟ್ವೀಟ್​ ಮಾಡಿದ್ದಾರೆ.

ನಾನಲ್ಲ, ಕೊರೊನಾ ಬಳಲುತ್ತಿದೆ; ಅಚ್ಚರಿಯ ಟ್ವೀಟ್​ ಮಾಡಿದ ಸೋನು ಸೂದ್
ನಟ ಸೋನು ಸೂದ್
ರಾಜೇಶ್ ದುಗ್ಗುಮನೆ
|

Updated on: Apr 19, 2021 | 6:07 PM

Share

ಕಳೆದ ವರ್ಷ ಲಾಕ್​ಡೌನ್​ ಸಂದರ್ಭದಲ್ಲಿ ಅನೇಕರಿಗೆ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದ ನಟ ಸೋನು ಸೂದ್​ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ಟ್ವೀಟ್​ ನೋಡಿದ ಅನೇಕರು ಸೋನು ಸೂದ್ ಬಗ್ಗೆ​ ಕಳವಳ ವ್ಯಕ್ತಪಡಿಸಿದ್ದರು. ಈಗ ಸೋನು ಸೂದ್ ಅಚ್ಚರಿಯ ಟ್ವೀಟ್​ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಅಷ್ಟೇ ಅಲ್ಲ, ಅವರ ಪಾಸಿಟಿವಿಟಿ ನೋಡಿ ಸಾಕಷ್ಟು ಮಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೊವಿಡ್​ ಪಾಸಿಟಿವ್​ ಆಗಿದೆ. ಆದರೆ ಮನಸ್ಸು ಮತ್ತು ಉತ್ಸಾಹ ಸೂಪರ್​ ಪಾಸಿಟಿವ್​ ಆಗಿದೆ. ಎಲ್ಲರಿಗೂ ಹಾಯ್​. ಇಂದು ಬೆಳಗ್ಗೆ ನನಗೆ ಕೊವಿಡ್​-19 ಪಾಸಿಟಿವ್​ ಆಗಿದೆ ಎಂಬುದನ್ನು ತಿಳಿಸುತ್ತಿದ್ದೇನೆ. ಮುನ್ನೆಚ್ಚರಿಕೆ ಕ್ರಮವಾಗಿ ನಾನು ಕ್ವಾರಂಟೈನ್​ ಆಗಿದ್ದೇನೆ. ಹೆಚ್ಚಿನ ಕಾಳಜಿ ವಹಿಸುತ್ತಿದ್ದೇನೆ. ಆದರೆ ಚಿಂತೆ ಮಾಡುವುದು ಬೇಡ. ನಿಮ್ಮೆಲ್ಲರ ಸಮಸ್ಯೆಯನ್ನು ಪರಿಹರಿಸಲು ನನಗೆ ಇದರಿಂದ ಹೆಚ್ಚಿನ ಸಮಯ ಸಿಗಲಿದೆ. ನಿಮಗಾಗಿ ನಾನು ಸದಾ ಇರುತ್ತೇನೆ ಎಂಬುದನ್ನು ನೆನಪಿಡಿ’ ಎಂದು ಸೋಶಿಯಲ್​ ಮೀಡಿಯಾ ಮೂಲಕ ಸೋನು ಸೂದ್​​ ಬರೆದುಕೊಂಡಿದ್ದರು.

ಇದಾದ ಬೆನ್ನಲ್ಲೇ  ಆರೋಗ್ಯ ಹೇಗಿದೆ ಎಂದು ಅಭಿಮಾನಿಗಳು ಟ್ವೀಟ್​ ಮಾಡಿ ಕೇಳಿದ್ದರು. ಸಾಕಷ್ಟು ಜನರು ಕಾಳಜಿ ತೋರಿದ್ದರು.ಇದಕ್ಕೆ ಸೋನು ಸೂದ್​ ಉತ್ತರಿಸಿದ್ದಾರೆ. ಜನರು ನೀವು ಹೇಗಿದ್ದೀರಿ ಎಂದು ಕೇಳುತ್ತಾರೆ. ಇದಕ್ಕೆ ನಾನು ಹೇಳೋದು, ನಾನು ಆರಾಮಾಗಿದ್ದೇನೆ. ಕೊರೊನಾ ಬಳಲುತ್ತಿದೆ ಎಂದು ಬರೆದುಕೊಂಡಿದ್ದಾರೆ.

2020ರಲ್ಲಿ ಕಠಿಣ ಲಾಕ್​ಡೌನ್​ ಜಾರಿಯಾಗಿದ್ದಾಗ ಸಾವಿರಾರು ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ಕಷ್ಟಪಡುತ್ತಿದ್ದರು. ಎಷ್ಟೋ ಜನರು ಕಾಲ್ನಡಿಗೆಯಲ್ಲೇ ನೂರಾರು ಕಿಲೋ ಮೀಟರ್​ ಪ್ರಯಾಣ ಮಾಡಿದರು. ಆ ವೇಳೆ ಸೋನು ಸೂದ್​ ರಿಯಲ್​ ಹೀರೋ ರೀತಿಯಲ್ಲಿ ಬಡಜನರ ಸಹಾಯಕ್ಕೆ ಧಾವಿಸಿದ್ದರು. ವಿದೇಶದಲ್ಲಿ ಸಿಲುಕಿಕೊಂಡಿದ್ದವರನ್ನು ಭಾರತಕ್ಕೆ ಕರೆತರಲು ಸೋನು ಸೂದ್​ ಶ್ರಮಿಸಿದ್ದರು. ಕಾರ್ಮಿಕರನ್ನು ವಿಮಾನದ ಮೂಲಕ ಅವರವರ ಊರುಗಳಿಗೆ ತಲುಪಿಸುವ ಮೂಲಕ ಜಾಗತಿಕ ಮಟ್ಟದಲ್ಲಿ ಸೋನು ಸೂದ್​ ಗಮನ ಸೆಳೆದಿದ್ದರು.

ಇದನ್ನೂ ಓದಿ: Sonu Sood Corona Positive: ಸೋನು ಸೂದ್​ಗೆ ಕೊರೊನಾ ಪಾಸಿಟಿವ್​; ಬಡವರ ಪಾಲಿನ ರಿಯಲ್​ ಹೀರೋಗೆ ಈಗ ಕಷ್ಟಕಾಲ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ