Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನಲ್ಲ, ಕೊರೊನಾ ಬಳಲುತ್ತಿದೆ; ಅಚ್ಚರಿಯ ಟ್ವೀಟ್​ ಮಾಡಿದ ಸೋನು ಸೂದ್

ಇದಾದ ಬೆನ್ನಲ್ಲೇ ಅನೇಕರು ಸೋನು ಸೂದ್​ ಆರೋಗ್ಯ ಹೇಗಿದೆ ಎಂದು ಅನೇಕರು ಕೇಳಿದ್ದರು. ಸಾಕಷ್ಟು ಜನರು ಕಾಳಜಿ ತೋರಿದ್ದರು. ಈ ಬಗ್ಗೆ ಸೂನು ಸೂದು ಟ್ವೀಟ್​ ಮಾಡಿದ್ದಾರೆ.

ನಾನಲ್ಲ, ಕೊರೊನಾ ಬಳಲುತ್ತಿದೆ; ಅಚ್ಚರಿಯ ಟ್ವೀಟ್​ ಮಾಡಿದ ಸೋನು ಸೂದ್
ನಟ ಸೋನು ಸೂದ್
Follow us
ರಾಜೇಶ್ ದುಗ್ಗುಮನೆ
|

Updated on: Apr 19, 2021 | 6:07 PM

ಕಳೆದ ವರ್ಷ ಲಾಕ್​ಡೌನ್​ ಸಂದರ್ಭದಲ್ಲಿ ಅನೇಕರಿಗೆ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದ ನಟ ಸೋನು ಸೂದ್​ ಅವರಿಗೆ ಕೊರೊನಾ ಸೋಂಕು ತಗುಲಿತ್ತು. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ಟ್ವೀಟ್​ ನೋಡಿದ ಅನೇಕರು ಸೋನು ಸೂದ್ ಬಗ್ಗೆ​ ಕಳವಳ ವ್ಯಕ್ತಪಡಿಸಿದ್ದರು. ಈಗ ಸೋನು ಸೂದ್ ಅಚ್ಚರಿಯ ಟ್ವೀಟ್​ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಅಷ್ಟೇ ಅಲ್ಲ, ಅವರ ಪಾಸಿಟಿವಿಟಿ ನೋಡಿ ಸಾಕಷ್ಟು ಮಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೊವಿಡ್​ ಪಾಸಿಟಿವ್​ ಆಗಿದೆ. ಆದರೆ ಮನಸ್ಸು ಮತ್ತು ಉತ್ಸಾಹ ಸೂಪರ್​ ಪಾಸಿಟಿವ್​ ಆಗಿದೆ. ಎಲ್ಲರಿಗೂ ಹಾಯ್​. ಇಂದು ಬೆಳಗ್ಗೆ ನನಗೆ ಕೊವಿಡ್​-19 ಪಾಸಿಟಿವ್​ ಆಗಿದೆ ಎಂಬುದನ್ನು ತಿಳಿಸುತ್ತಿದ್ದೇನೆ. ಮುನ್ನೆಚ್ಚರಿಕೆ ಕ್ರಮವಾಗಿ ನಾನು ಕ್ವಾರಂಟೈನ್​ ಆಗಿದ್ದೇನೆ. ಹೆಚ್ಚಿನ ಕಾಳಜಿ ವಹಿಸುತ್ತಿದ್ದೇನೆ. ಆದರೆ ಚಿಂತೆ ಮಾಡುವುದು ಬೇಡ. ನಿಮ್ಮೆಲ್ಲರ ಸಮಸ್ಯೆಯನ್ನು ಪರಿಹರಿಸಲು ನನಗೆ ಇದರಿಂದ ಹೆಚ್ಚಿನ ಸಮಯ ಸಿಗಲಿದೆ. ನಿಮಗಾಗಿ ನಾನು ಸದಾ ಇರುತ್ತೇನೆ ಎಂಬುದನ್ನು ನೆನಪಿಡಿ’ ಎಂದು ಸೋಶಿಯಲ್​ ಮೀಡಿಯಾ ಮೂಲಕ ಸೋನು ಸೂದ್​​ ಬರೆದುಕೊಂಡಿದ್ದರು.

ಇದಾದ ಬೆನ್ನಲ್ಲೇ  ಆರೋಗ್ಯ ಹೇಗಿದೆ ಎಂದು ಅಭಿಮಾನಿಗಳು ಟ್ವೀಟ್​ ಮಾಡಿ ಕೇಳಿದ್ದರು. ಸಾಕಷ್ಟು ಜನರು ಕಾಳಜಿ ತೋರಿದ್ದರು.ಇದಕ್ಕೆ ಸೋನು ಸೂದ್​ ಉತ್ತರಿಸಿದ್ದಾರೆ. ಜನರು ನೀವು ಹೇಗಿದ್ದೀರಿ ಎಂದು ಕೇಳುತ್ತಾರೆ. ಇದಕ್ಕೆ ನಾನು ಹೇಳೋದು, ನಾನು ಆರಾಮಾಗಿದ್ದೇನೆ. ಕೊರೊನಾ ಬಳಲುತ್ತಿದೆ ಎಂದು ಬರೆದುಕೊಂಡಿದ್ದಾರೆ.

2020ರಲ್ಲಿ ಕಠಿಣ ಲಾಕ್​ಡೌನ್​ ಜಾರಿಯಾಗಿದ್ದಾಗ ಸಾವಿರಾರು ವಲಸೆ ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ತೆರಳಲು ಕಷ್ಟಪಡುತ್ತಿದ್ದರು. ಎಷ್ಟೋ ಜನರು ಕಾಲ್ನಡಿಗೆಯಲ್ಲೇ ನೂರಾರು ಕಿಲೋ ಮೀಟರ್​ ಪ್ರಯಾಣ ಮಾಡಿದರು. ಆ ವೇಳೆ ಸೋನು ಸೂದ್​ ರಿಯಲ್​ ಹೀರೋ ರೀತಿಯಲ್ಲಿ ಬಡಜನರ ಸಹಾಯಕ್ಕೆ ಧಾವಿಸಿದ್ದರು. ವಿದೇಶದಲ್ಲಿ ಸಿಲುಕಿಕೊಂಡಿದ್ದವರನ್ನು ಭಾರತಕ್ಕೆ ಕರೆತರಲು ಸೋನು ಸೂದ್​ ಶ್ರಮಿಸಿದ್ದರು. ಕಾರ್ಮಿಕರನ್ನು ವಿಮಾನದ ಮೂಲಕ ಅವರವರ ಊರುಗಳಿಗೆ ತಲುಪಿಸುವ ಮೂಲಕ ಜಾಗತಿಕ ಮಟ್ಟದಲ್ಲಿ ಸೋನು ಸೂದ್​ ಗಮನ ಸೆಳೆದಿದ್ದರು.

ಇದನ್ನೂ ಓದಿ: Sonu Sood Corona Positive: ಸೋನು ಸೂದ್​ಗೆ ಕೊರೊನಾ ಪಾಸಿಟಿವ್​; ಬಡವರ ಪಾಲಿನ ರಿಯಲ್​ ಹೀರೋಗೆ ಈಗ ಕಷ್ಟಕಾಲ

ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ