AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸತ್ತ ಬಳಿಕ ನನ್ನ ಆಸ್ತಿ ಯಾರಿಗೆ ಸೇರಬೇಕೆಂದರೆ..’; ವಿಲ್ ಬರೆದು ಮಾಹಿತಿ ನೀಡಿದ ಅಮಿತಾಭ್

ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯಾ ರೈ ವಿಚ್ಛೇದನ ವಿಚಾರ ಈ ಮೊದಲಿನಿಂದಲೂ ಚರ್ಚೆ ಆಗುತ್ತಿರುವ ವಿಚಾರ. ಇವರು ದೂರ ಆಗದೇ ಇರಲಿ ಎಂದು ಅವರ ಫ್ಯಾನ್ಸ್ ಕೋರಿಕೊಳ್ಳುತ್ತಿದ್ದಾರೆ. ಹೀಗಿರುವಾಗ ಅಮಿತಾಭ್ ಬಚ್ಚನ್ ಅವರು ಈ ಮೊದಲು ನೀಡಿದ್ದ ಆಸ್ತಿ ಹಂಚಿಕೆ ವಿಚಾರ ಈಗ ಚರ್ಚೆ ಆಗಿದೆ.

‘ಸತ್ತ ಬಳಿಕ ನನ್ನ ಆಸ್ತಿ ಯಾರಿಗೆ ಸೇರಬೇಕೆಂದರೆ..’; ವಿಲ್ ಬರೆದು ಮಾಹಿತಿ ನೀಡಿದ ಅಮಿತಾಭ್
‘ಸತ್ತ ಬಳಿಕ ನನ್ನ ಆಸ್ತಿ ಯಾರಿಗೆ ಸೇರಬೇಕೆಂದರೆ..’; ವಿಲ್ ಬರೆದು ಮಾಹಿತಿ ನೀಡಿದ ಅಮಿತಾಭ್
ರಾಜೇಶ್ ದುಗ್ಗುಮನೆ
|

Updated on:Sep 05, 2024 | 6:59 AM

Share

ಅಮಿತಾಭ್ ಬಚ್ಚನ್ ಅವರಿಗೆ ಈಗ 81 ವರ್ಷ ವಯಸ್ಸು. ಅಕ್ಟೋಬರ್​ನಲ್ಲಿ ಅವರಿಗೆ 82 ವರ್ಷ ತುಂಬಲಿದೆ. ಅವರಿಗೆ ಅನೇಕ ಕಾಯಿಲೆಗಳು ಇವೆ. ಆದರೆ, ಅವರು ಸಿನಿಮಾ ಕೃಷಿ ನಿಲ್ಲಿಸಿಲ್ಲ. ಮೃತಪಟ್ಟ ಬಳಿಕ ತಮ್ಮ ಆಸ್ತಿ ಯಾರಿಗೆ ಸೇರಬೇಕು ಎನ್ನವು ಬಗ್ಗೆ ಅವರು ವಿಲ್ ಕೂಡ ಬರೆದಿಟ್ಟಿದ್ದಾರೆ. ಈ ಮೊದಲು ನೀಡಿದ ಸಂದರ್ಶನದಲ್ಲಿ ಅವರು ಈ ಬಗ್ಗೆ ಮಾತನಾಡಿದ್ದರು. ಇಬ್ಬರು ಮಕ್ಕಳಿಗೆ ಸರಿಯಾಗಿ ಆಸ್ತಿ ಹಂಚಿಕೆ ಮಾಡೋದಾಗಿ ಅವರು ಹೇಳಿದ್ದರು.

ಅಮಿತಾಭ್ ಹಾಗೂ ಜಯಾ ಬಚ್ಚನ್ ದಂಪತಿ​ಗೆ ಶ್ವೇತಾ ಹಾಗೂ ಅಭಿಷೇಕ್ ಹೆಸರಿನ ಮಕ್ಕಳಿದ್ದಾರೆ. ಮಗಳು ಮದುವೆ ಆಗಿ ಬೇರೆ ಕುಟುಂಬಕ್ಕೆ ಹೋಗುತ್ತಾರೆ ಎನ್ನುವ ಕಾರಣಕ್ಕೆ ಆಸ್ತಿಯನ್ನು ಮಗನ ಹೆಸರಿಗೆ ಬರೆಯೋ ಪದ್ಧತಿ ಇದೆ. ಆದರೆ, ಅಮಿತಾಭ್ ಅವರಿಗೆ ಈ ಆಲೋಚನೆ ಇಲ್ಲ. ‘ನಾನು ಒಂದು ವಿಚಾರ ನಿರ್ಧರಿಸಿದ್ದೇನೆ. ಮಕ್ಕಳ ಮಧ್ಯೆ ನಾನು ವ್ಯತ್ಯಾಸ ಮಾಡುವುದಿಲ್ಲ’ ಎಂದು ಅಮಿತಾಭ್ ಬಚ್ಚನ್ ಅವರು ಹೇಳಿದ್ದರು. ಈ ಸಂಬಂಧ ಅವರು ವಿಲ್ ಕೂಡ ಬರೆದಿದ್ದಾರೆ ಎನ್ನಲಾಗಿದೆ.

‘ನಾನು ಮೃತಪಟ್ಟ ಬಳಿಕ ನಾನು ಏನೇ ಹೊಂದಿದ್ದರೂ ಅದನ್ನು ನನ್ನ ಮಗಳು ಹಾಗೂ ಮಗನಿಗೆ ಸರಿಯಾಗಿ ಹಂಚುತ್ತೇನೆ. ಅದರಲ್ಲಿ ಯಾವುದೇ ವ್ಯತ್ಯಾಸ ಮಾಡುವುದಿಲ್ಲ. ಇದನ್ನು ನಾನು ಹಾಗೂ ಜಯಾ ಈ ಮೊದಲೇ ನಿರ್ಧಾರ ಮಾಡಿದ್ದೆವು. ಮದುವೆ ಆದ ಬಳಿಕ ಮಗಳು ಬೇರೆಯವರ ಮನೆಗೆ ಹೋಗುತ್ತಾರೆ. ಆದರೆ, ನಮ್ಮ ದೃಷ್ಟಿಯಲ್ಲಿ ಅವರು ಮಗಳೇ. ಅಭಿಷೇಕ್​ಗೆ ಇರುವಷ್ಟೇ ಹಕ್ಕು ಶ್ವೇತಾಗೂ ಇದೆ’ ಎಂದಿದ್ದರು ಅವರು.

ಇದನ್ನೂ ಓದಿ: ದುಬೈನಲ್ಲಿ ಒಟ್ಟಾಗಿ ಸುತ್ತಾಡಿದ್ರಾ ಐಶ್ವರ್ಯಾ-ಅಭಿಷೇಕ್? ವೈರಲ್ ಆಯ್ತು ವಿಡಿಯೋ 

ಕಳೆದ ವರ್ಷ ಅಭಿಷೇಕ್ ಬಚ್ಚನ್ ಅವರು ತಮ್ಮ ಬಂಗಲೆಯನ್ನು ಶ್ವೇತಾಗೆ ಗಿಫ್ಟ್ ಮಾಡಿದ್ದರು. 50 ಕೋಟಿ ರೂಪಾಯಿ ಬೆಲೆ ಬಾಳುವ ಆಸ್ತಿ ಇದಾಗಿತ್ತು. ಆ ಸಂದರ್ಭದಲ್ಲಿ ಬಚ್ಚನ್ ಹಾಗೂ ಐಶ್ವರ್ಯಾ ಮಧ್ಯೆ ಎಲ್ಲವೂ ಸರಿಯೇ ಇತ್ತು. ಆದಾಗ್ಯೂ ಅವರು ಸೊಸೆಗೆ ಏನನ್ನಾದರೂ ನೀಡುವ ಬಗ್ಗೆ ಮಾತನಾಡಿರಲಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:55 am, Thu, 5 September 24

ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಕಾವೇರಿ ನದಿ ತವರಲ್ಲೇ ಹನಿ ನೀರಿಗೂ ಹಾಹಾಕಾರ: ಕುಡಿಯಲು ಕೊಳಚೆ ನೀರೇ ಗತಿ!
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಇಬ್ಬಲೂರು ಜಂಕ್ಷನ್​ನಲ್ಲಿ ನಿರ್ಮಾಣವಾಗಲಿದೆ ಹೊಸ ಫ್ಲೈಓವರ್
ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ
ಅಕ್ರಮ ವಲಸಿಗರಿಗೆ ನಡುಕ ಶುರು: ರಾಜ್ಯ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ
ಬಯಲಾಯ್ತು ಕಲಬುರಗಿ ಆರ್​ಟಿಒ ಕಚೇರಿ ಬ್ರಹ್ಮಾಂಡ ಭ್ರಷ್ಟಾಚಾರ
ಬಯಲಾಯ್ತು ಕಲಬುರಗಿ ಆರ್​ಟಿಒ ಕಚೇರಿ ಬ್ರಹ್ಮಾಂಡ ಭ್ರಷ್ಟಾಚಾರ
Video: ಒಡಿಶಾದಲ್ಲಿ ಹಳಿ ತಪ್ಪಿದ ಚೆನ್ನೈ ಸೆಂಟ್ರಲ್ ಎಕ್ಸ್​​​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಚೆನ್ನೈ ಸೆಂಟ್ರಲ್ ಎಕ್ಸ್​​​ಪ್ರೆಸ್ ರೈಲು
ದತ್ತಪೀಠದಲ್ಲಿ ಹೊಸ ವಿವಾದ: ಕಲಮೆ ತಯ್ಯಬಾಗೆ ಹಿಂದೂ ಸಂಘಟನೆಗಳ ಆಕ್ರೋಶ
ದತ್ತಪೀಠದಲ್ಲಿ ಹೊಸ ವಿವಾದ: ಕಲಮೆ ತಯ್ಯಬಾಗೆ ಹಿಂದೂ ಸಂಘಟನೆಗಳ ಆಕ್ರೋಶ
ಆಕ್ಸಿಜನ್ ಸಿಲಿಂಡರ್ ಹಿಡ್ಕೊಂಡೇ ಮಾಯಕ್ಕಾ ದೇವಿ ದರ್ಶನ!
ಆಕ್ಸಿಜನ್ ಸಿಲಿಂಡರ್ ಹಿಡ್ಕೊಂಡೇ ಮಾಯಕ್ಕಾ ದೇವಿ ದರ್ಶನ!
ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಆರಂಭಿಕ ಜೋಡಿ ಕನ್ಫರ್ಮ್
ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾದ ಆರಂಭಿಕ ಜೋಡಿ ಕನ್ಫರ್ಮ್
ಮಹಿಳೆಯ ಮನೆಯಲ್ಲಿ ಸಿಕ್ಕಿಬಿದ್ದ ಕಾಂಗ್ರೆಸ್​​ ಮುಖಂಡ
ಮಹಿಳೆಯ ಮನೆಯಲ್ಲಿ ಸಿಕ್ಕಿಬಿದ್ದ ಕಾಂಗ್ರೆಸ್​​ ಮುಖಂಡ
ಮಂಚದ ಪೆಟ್ಟಿಗೆಯಲ್ಲಿ 13 ವರ್ಷದ ಬಾಲಕಿಯನ್ನು ಅಡಗಿಸಿಟ್ಟಿದ್ದ ಮನೆ ಮಾಲೀಕ
ಮಂಚದ ಪೆಟ್ಟಿಗೆಯಲ್ಲಿ 13 ವರ್ಷದ ಬಾಲಕಿಯನ್ನು ಅಡಗಿಸಿಟ್ಟಿದ್ದ ಮನೆ ಮಾಲೀಕ