‘ನನ್ನ ಮಗನಿಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಂತೆ ಅನಿಸುತ್ತಿದೆ’; ಪ್ರಕಾಶ್ ರಾಜ್ ಹೀಗೆ ಹೇಳಿದ್ದು ಏಕೆ?

ಅಲ್ಲು ಅರ್ಜುನ್, ದೇವಿ ಶ್ರೀ ಪ್ರಸಾದ್ ರಾಷ್ಟ್ರಪ್ರಶಸ್ತಿ ಗೆದ್ದಿದ್ದಾರೆ. ಇವರಿಗೆ ಗೌರವ ಸಲ್ಲಿಸಲು ಮೈತ್ರಿ ಮೂವೀ ಮೇಕರ್ಸ್​ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಇಲ್ಲಿ ಅವರು ಮಾತನಾಡಿದ್ದಾರೆ. ಅಲ್ಲು ಅರ್ಜುನ್ ಅವರನ್ನು ಹೊಗಳಿದ್ದಾರೆ.

‘ನನ್ನ ಮಗನಿಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಂತೆ ಅನಿಸುತ್ತಿದೆ’; ಪ್ರಕಾಶ್ ರಾಜ್ ಹೀಗೆ ಹೇಳಿದ್ದು ಏಕೆ?
ಪ್ರಕಾಶ್ ರಾಜ್
Follow us
|

Updated on: Oct 23, 2023 | 7:07 AM

ನಟ ಪ್ರಕಾಶ್ ರಾಜ್ (Prakash Raj) ಅವರಿಗೆ ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇದೆ. ತಂದೆಯಾಗಿ, ವಿಲನ್ ಆಗಿ ಹೀಗೆ ಹಲವು ರೀತಿಯ ಪಾತ್ರಗಳನ್ನು ಮಾಡಿ ಅವರು ಗಮನ ಸೆಳೆದಿದ್ದಾರೆ. ಕೆಲವು ವಿವಾದಗಳ ಮೂಲಕವೂ ಅವರು ಸುದ್ದಿ ಆಗಿದ್ದಾರೆ. ಅವರಿಗೆ ಐದು ರಾಷ್ಟ್ರ ಪ್ರಶಸ್ತಿಗಳು ಸಿಕ್ಕಿವೆ. ಈಗ ಅವರು ಕೆಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಓರ್ವ ಹೀರೋ ಅವಾರ್ಡ್ ಗೆದ್ದರೆ ಎಲ್ಲರೂ ಅವರನ್ನು ಅಭಿನಂದಿಸಬೇಕು. ಆದರೆ, ಆ ರೀತಿಯ ಕೆಲಸ ಆಗುತ್ತಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಅಲ್ಲು ಅರ್ಜುನ್, ದೇವಿ ಶ್ರೀ ಪ್ರಸಾದ್ ರಾಷ್ಟ್ರಪ್ರಶಸ್ತಿ ಗೆದ್ದಿದ್ದಾರೆ. ಇವರಿಗೆ ಗೌರವ ಸಲ್ಲಿಸಲು ಮೈತ್ರಿ ಮೂವೀ ಮೇಕರ್ಸ್​ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಇಲ್ಲಿ ಅವರು ಮಾತನಾಡಿದ್ದಾರೆ. ‘ರಾಷ್ಟ್ರ ಪ್ರಶಸ್ತಿ ಪಡೆದ ಅಲ್ಲು ಅರ್ಜುನ್‌ ಅವರಂಥವರನ್ನು ಸನ್ಮಾನಿಸಲು ಸಿನಿಮಾ ಇಂಡಸ್ಟ್ರಿ ಏಕೆ ಒಗ್ಗೂಡುತ್ತದೆ? ಅವರು ರಾಷ್ಟ್ರಪ್ರಶಸ್ತಿ ಪಡೆದರೆ ಅದು ಎಲ್ಲ ನಟರಿಗೂ ಹೆಮ್ಮೆಯ ವಿಷಯ. ರಾಜಮೌಳಿ ಆಸ್ಕರ್‌ ವಿನ್ ಆದರೆ ಅದು ತೆಲುಗು ಇಂಡಸ್ಟ್ರಿಗೆ ಮತ್ತು ತೆಲುಗು ಜನರಿಗೆ ಹೆಮ್ಮೆಯ ವಿಷಯ’ ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ.

‘ನನ್ನ ನಟನೆಯನ್ನು ರೆಕಾರ್ಡ್ ಮಾಡಲು ಸಣ್ಣ ಕ್ಯಾಮೆರಾದೊಂದಿಗೆ ಬರುತ್ತಿದ್ದ ಅಲ್ಲು ಅರ್ಜುನ್ ಅವರನ್ನು ನೋಡಿದ್ದೇನೆ. ಈ ಬಾಲಕ ಸಾಧನೆ ಮಾಡುತ್ತಾನೆ ಎಂದು ನಾನು ಭವಿಷ್ಯ ನುಡಿದಿದ್ದೆ. ಏನಾದರು ಮಾಡಬೇಕು ಎಂಬ ಹಸಿವಿನಿಂದ ಅವರು ಈ ಹಂತಕ್ಕೆ ತಲುಪಿದ್ದಾರೆ. ಇವತ್ತು ನನ್ನ ಮಗನಿಗೆ ರಾಷ್ಟ್ರಪ್ರಶಸ್ತಿ ಸಿಕ್ಕಂತೆ ಅನಿಸುತ್ತಿದೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ತಮಿಳು ನಟ ಸಿದ್ದಾರ್ಥ್ ಬಳಿ ‘ಕನ್ನಡಿಗರ ಪರವಾಗಿ ಕ್ಷಮಿಸಿ’ ಎಂದ ಪ್ರಕಾಶ್ ರಾಜ್

‘ಇತಿಹಾಸ ನೋಡಿದರೆ ರಾಷ್ಟ್ರ ಪ್ರಶಸ್ತಿಗಳ ವಿಚಾರದಲ್ಲಿ ತೆಲುಗು ಸಿನಿಮಾ ದೊಡ್ಡ ಸಾಧನೆ ಮಾಡಿಲ್ಲ. ಆದರೆ ಈಗ ರಾಷ್ಟ್ರದ ಅತ್ಯುತ್ತಮ ನಟ ತೆಲುಗಿನವರು, ಸಂಗೀತ ನಿರ್ದೇಶಕರು ತೆಲುಗಿನವರು ಮತ್ತು ನಿರ್ದೇಶಕರು ತೆಲುಗಿನವರು. ಇಂದು ನಾವು ಅವರ ಸಾಧನೆಯ ಬಗ್ಗೆ ಹೆಮ್ಮೆ ಪಡಬೇಕಾಗಿದೆ. ಇಲ್ಲಿ ಯುವ ನಿರ್ದೇಶಕರು ಇದ್ದಾರೆ, ಆದರೆ ದೊಡ್ಡ ದೊಡ್ಡ ನಿರ್ದೇಶಕರು ಎಲ್ಲಿದ್ದಾರೆ? ತೆಲುಗು ಚಿತ್ರರಂಗ ಸಾಧನೆ ಮಾಡುತ್ತಿರುವಾಗ ನಮ್ಮದೇ ಕುಟುಂಬದವರು ಮೊದಲು ಅವರನ್ನು ಗೌರವಿಸಬೇಕು’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!