AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಮಾಡಿರುವ ಹಲವು ಸಿನಿಮಾಗಳನ್ನು ಜನರು ನೋಡಿಯೇ ಇಲ್ಲ; ಪ್ರಿಯಾಂಕಾ ಚೋಪ್ರಾ

Priyanka Chopra: ಪ್ರಿಯಾಂಕಾ ಚೋಪ್ರಾ ಯಾವುದೇ ಹಿನ್ನೆಲೆ ಇದ್ದು ಚಿತ್ರರಂಗಕ್ಕೆ ಬಂದವರಲ್ಲ. ಅವರಿಗೆ ಯಾವುದೇ ಗಾಡ್​ ಫಾದರ್​ ಇರಲಿಲ್ಲ. ಆದಾಗ್ಯೂ ಬಾಲಿವುಡ್​ನಲ್ಲಿ ನೆಲೆ ಕಂಡುಕೊಂಡರು. ಸಾಕಷ್ಟು ಹಿಟ್​ ಚಿತ್ರಗಳನ್ನು ನೀಡಿ ಹಾಲಿವುಡ್​ಗೆ ಕಾಲಿಟ್ಟರು.

ನಾನು ಮಾಡಿರುವ ಹಲವು ಸಿನಿಮಾಗಳನ್ನು ಜನರು ನೋಡಿಯೇ ಇಲ್ಲ; ಪ್ರಿಯಾಂಕಾ ಚೋಪ್ರಾ
ಪ್ರಿಯಾಂಕಾ ಚೋಪ್ರಾ
Follow us
ರಾಜೇಶ್ ದುಗ್ಗುಮನೆ
|

Updated on: May 27, 2021 | 5:48 PM

ಗ್ಲೋಬಲ್​ ಸ್ಟಾರ್​ ಪ್ರಿಯಾಂಕಾ ಚೋಪ್ರಾ ಬಾಲಿವುಡ್​ ಹಾಗೂ ಹಾಲಿವುಡ್​ನಲ್ಲಿ ಮಿಂಚಿದ್ದಾರೆ. ಅಮೆರಿಕ ಗಾಯಕ ನಿಕ್​ ಜೋನಸ್​ ಅವರನ್ನು ವರಿಸುವ ಮೂಲಕ ಎಲ್ಲರಲ್ಲೂ ಅವರು ಅಚ್ಚರಿ ಮೂಡಿಸಿದ್ದರು. ಈಗ ಪ್ರಿಯಾಂಕಾ ತಮ್ಮ ಏಳುಬೀಳುಗಳ ಜೀವನದ ಬಗ್ಗೆ ಹೇಳಿಕೊಂಡಿದ್ದಾರೆ. ನಾನು ಮಾಡಿರುವ ಸಾಕಷ್ಟು ಚಿತ್ರಗಳನ್ನು ಜನರು ನೋಡೆ ಇಲ್ಲ ಎಂದಿದ್ದಾರೆ.

ಪ್ರಿಯಾಂಕಾ ಚೋಪ್ರಾ ಯಾವುದೇ ಹಿನ್ನೆಲೆ ಇದ್ದು ಚಿತ್ರರಂಗಕ್ಕೆ ಬಂದವರಲ್ಲ. ಅವರಿಗೆ ಯಾವುದೇ ಗಾಡ್​ ಫಾದರ್​ ಇರಲಿಲ್ಲ. ಆದಾಗ್ಯೂ ಬಾಲಿವುಡ್​ನಲ್ಲಿ ನೆಲೆ ಕಂಡುಕೊಂಡರು. ಸಾಕಷ್ಟು ಹಿಟ್​ ಚಿತ್ರಗಳನ್ನು ನೀಡಿ ಹಾಲಿವುಡ್​ಗೆ ಕಾಲಿಟ್ಟರು. ಆದರೆ, ಈ ಜರ್ನಿ ಅವರಿಗೆ ಅಷ್ಟು ಸುಲಭದ್ದು ಆಗಿರಲೇ ಇಲ್ಲ.

ಹಾಲಿವುಡ್​ಗೆ ಕಾಲಿಡುವುದಕ್ಕೂ ಮೊದಲು ಪ್ರಿಯಾಂಕಾ ಸಾಕಷ್ಟು ಬಾಲಿವುಡ್​ ಸಿನಿಮಾಗಳಲ್ಲಿ ನಟಿಸಿದ್ದರು. ಹಲವು ಚಿತ್ರಗಳು ಸೋತಿತ್ತು ಕೂಡ. ಈ ಬಗ್ಗೆ ಅವರು ಮಾತನಾಡಿದ್ದಾರೆ. ‘ಯಾರೂ ಕೇವಲ ಜಯವೊಂದನ್ನೇ ಗಳಿಸುವುದಿಲ್ಲ. ನಾನು ಸಾಕಷ್ಟು ಹೋರಾಟಗಳನ್ನು ಸೋತಿದ್ದೇನೆ. ನಾನು ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದೇನೆ. ಅದನ್ನು ಯಾರೊಬ್ಬರೂ ವೀಕ್ಷಣೆ ಮಾಡಿಯೇ ಇಲ್ಲ’ ಎಂದಿದ್ದಾರೆ.

‘ನೀವು ಎಲ್ಲಿಗೆ ಹೋಗುತ್ತೀರೋ ಅಲ್ಲಿಗೆ ತಲುಪಲು ಎಲ್ಲರಿಗಿಂತ ವೇಗವಾಗಿ ಓಡಬೇಕು ಎಂದು ಏಷ್ಯನ್ನರಾದ ನಾವು ಕಲಿತಿದ್ದೇವೆ. ನಾನು ಲೀಡ್​ರೋಲ್​ನಲ್ಲಿ ನಟಿಸಬೇಕು ಎಂದು ಕನಸು ಕಂಡೆ. ಇದಕ್ಕೆ 10 ವರ್ಷಗಳೇ ಹಿಡಿದವು. ಮುಂದಿನ ಜನರೇಷನ್​ನವರು ಅಷ್ಟು ಸಮಯ ತೆಗೆದುಕೊಳ್ಳಲೇಬಾರದು’ ಎಂದು ಪ್ರಿಯಾಂಕಾ ಅಭಿಪ್ರಾಯಪಟ್ಟಿದ್ದಾರೆ.

ಕೊವಿಡ್​ ಸಂಕಷ್ಟದ ಸಂದರ್ಭದಲ್ಲಿ ಪ್ರಿಯಾಂಕಾ ಚೋಪ್ರಾ ಭಾರತೀಯರ ಸಹಾಯಕ್ಕೆ ನಿಂತಿದ್ದಾರೆ. ದೇಶದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಜಾಸ್ತಿ ಆಗುತ್ತಿದೆ. ಆದರೆ ಅದಕ್ಕೆ ತಕ್ಕಂತೆ ಯಾವುದೇ ವೈದ್ಯಕೀಯ ಸೌಲಭ್ಯ ಸರಿಯಾಗಿ ಸಿಗುತ್ತಿಲ್ಲ. ಆಕ್ಸಿಜನ್​ ಸಿಲಿಂಡರ್​ಗಳಿಗಾಗಿ ರೋಗಿಗಳು ಪರದಾಡುವಂತಾಗಿದೆ. ಈ ಸಂದರ್ಭದಲ್ಲಿ ಪ್ರಿಯಾಂಕಾ ಹಾಗೂ ನಿಕ್​ ಜೋನಸ್​ ಅವರು ಭಾರತಕ್ಕಾಗಿ ಮಿಡಿದಿದ್ದರು. ಭಾರತದಲ್ಲಿನ ಕೊವಿಡ್​ ಸೋಂಕಿತರಿಗೆ ಸಹಾಯ ಮಾಡಲು ಅವರು ಮುಂದೆ ಬಂದಿದ್ದರು.

ಇದನ್ನೂ ಒದಿ: ಶೋ ಶೂಟಿಂಗ್​ ವೇಳೆ ಪ್ರಿಯಾಂಕಾ ಪತಿ ನಿಕ್​ ಜೋನಸ್​ಗೆ ಗಾಯ, ಆಸ್ಪತ್ರೆಗೆ ದಾಖಲು

ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ