AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಮಾಡಿರುವ ಹಲವು ಸಿನಿಮಾಗಳನ್ನು ಜನರು ನೋಡಿಯೇ ಇಲ್ಲ; ಪ್ರಿಯಾಂಕಾ ಚೋಪ್ರಾ

Priyanka Chopra: ಪ್ರಿಯಾಂಕಾ ಚೋಪ್ರಾ ಯಾವುದೇ ಹಿನ್ನೆಲೆ ಇದ್ದು ಚಿತ್ರರಂಗಕ್ಕೆ ಬಂದವರಲ್ಲ. ಅವರಿಗೆ ಯಾವುದೇ ಗಾಡ್​ ಫಾದರ್​ ಇರಲಿಲ್ಲ. ಆದಾಗ್ಯೂ ಬಾಲಿವುಡ್​ನಲ್ಲಿ ನೆಲೆ ಕಂಡುಕೊಂಡರು. ಸಾಕಷ್ಟು ಹಿಟ್​ ಚಿತ್ರಗಳನ್ನು ನೀಡಿ ಹಾಲಿವುಡ್​ಗೆ ಕಾಲಿಟ್ಟರು.

ನಾನು ಮಾಡಿರುವ ಹಲವು ಸಿನಿಮಾಗಳನ್ನು ಜನರು ನೋಡಿಯೇ ಇಲ್ಲ; ಪ್ರಿಯಾಂಕಾ ಚೋಪ್ರಾ
ಪ್ರಿಯಾಂಕಾ ಚೋಪ್ರಾ
ರಾಜೇಶ್ ದುಗ್ಗುಮನೆ
|

Updated on: May 27, 2021 | 5:48 PM

Share

ಗ್ಲೋಬಲ್​ ಸ್ಟಾರ್​ ಪ್ರಿಯಾಂಕಾ ಚೋಪ್ರಾ ಬಾಲಿವುಡ್​ ಹಾಗೂ ಹಾಲಿವುಡ್​ನಲ್ಲಿ ಮಿಂಚಿದ್ದಾರೆ. ಅಮೆರಿಕ ಗಾಯಕ ನಿಕ್​ ಜೋನಸ್​ ಅವರನ್ನು ವರಿಸುವ ಮೂಲಕ ಎಲ್ಲರಲ್ಲೂ ಅವರು ಅಚ್ಚರಿ ಮೂಡಿಸಿದ್ದರು. ಈಗ ಪ್ರಿಯಾಂಕಾ ತಮ್ಮ ಏಳುಬೀಳುಗಳ ಜೀವನದ ಬಗ್ಗೆ ಹೇಳಿಕೊಂಡಿದ್ದಾರೆ. ನಾನು ಮಾಡಿರುವ ಸಾಕಷ್ಟು ಚಿತ್ರಗಳನ್ನು ಜನರು ನೋಡೆ ಇಲ್ಲ ಎಂದಿದ್ದಾರೆ.

ಪ್ರಿಯಾಂಕಾ ಚೋಪ್ರಾ ಯಾವುದೇ ಹಿನ್ನೆಲೆ ಇದ್ದು ಚಿತ್ರರಂಗಕ್ಕೆ ಬಂದವರಲ್ಲ. ಅವರಿಗೆ ಯಾವುದೇ ಗಾಡ್​ ಫಾದರ್​ ಇರಲಿಲ್ಲ. ಆದಾಗ್ಯೂ ಬಾಲಿವುಡ್​ನಲ್ಲಿ ನೆಲೆ ಕಂಡುಕೊಂಡರು. ಸಾಕಷ್ಟು ಹಿಟ್​ ಚಿತ್ರಗಳನ್ನು ನೀಡಿ ಹಾಲಿವುಡ್​ಗೆ ಕಾಲಿಟ್ಟರು. ಆದರೆ, ಈ ಜರ್ನಿ ಅವರಿಗೆ ಅಷ್ಟು ಸುಲಭದ್ದು ಆಗಿರಲೇ ಇಲ್ಲ.

ಹಾಲಿವುಡ್​ಗೆ ಕಾಲಿಡುವುದಕ್ಕೂ ಮೊದಲು ಪ್ರಿಯಾಂಕಾ ಸಾಕಷ್ಟು ಬಾಲಿವುಡ್​ ಸಿನಿಮಾಗಳಲ್ಲಿ ನಟಿಸಿದ್ದರು. ಹಲವು ಚಿತ್ರಗಳು ಸೋತಿತ್ತು ಕೂಡ. ಈ ಬಗ್ಗೆ ಅವರು ಮಾತನಾಡಿದ್ದಾರೆ. ‘ಯಾರೂ ಕೇವಲ ಜಯವೊಂದನ್ನೇ ಗಳಿಸುವುದಿಲ್ಲ. ನಾನು ಸಾಕಷ್ಟು ಹೋರಾಟಗಳನ್ನು ಸೋತಿದ್ದೇನೆ. ನಾನು ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದೇನೆ. ಅದನ್ನು ಯಾರೊಬ್ಬರೂ ವೀಕ್ಷಣೆ ಮಾಡಿಯೇ ಇಲ್ಲ’ ಎಂದಿದ್ದಾರೆ.

‘ನೀವು ಎಲ್ಲಿಗೆ ಹೋಗುತ್ತೀರೋ ಅಲ್ಲಿಗೆ ತಲುಪಲು ಎಲ್ಲರಿಗಿಂತ ವೇಗವಾಗಿ ಓಡಬೇಕು ಎಂದು ಏಷ್ಯನ್ನರಾದ ನಾವು ಕಲಿತಿದ್ದೇವೆ. ನಾನು ಲೀಡ್​ರೋಲ್​ನಲ್ಲಿ ನಟಿಸಬೇಕು ಎಂದು ಕನಸು ಕಂಡೆ. ಇದಕ್ಕೆ 10 ವರ್ಷಗಳೇ ಹಿಡಿದವು. ಮುಂದಿನ ಜನರೇಷನ್​ನವರು ಅಷ್ಟು ಸಮಯ ತೆಗೆದುಕೊಳ್ಳಲೇಬಾರದು’ ಎಂದು ಪ್ರಿಯಾಂಕಾ ಅಭಿಪ್ರಾಯಪಟ್ಟಿದ್ದಾರೆ.

ಕೊವಿಡ್​ ಸಂಕಷ್ಟದ ಸಂದರ್ಭದಲ್ಲಿ ಪ್ರಿಯಾಂಕಾ ಚೋಪ್ರಾ ಭಾರತೀಯರ ಸಹಾಯಕ್ಕೆ ನಿಂತಿದ್ದಾರೆ. ದೇಶದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಜಾಸ್ತಿ ಆಗುತ್ತಿದೆ. ಆದರೆ ಅದಕ್ಕೆ ತಕ್ಕಂತೆ ಯಾವುದೇ ವೈದ್ಯಕೀಯ ಸೌಲಭ್ಯ ಸರಿಯಾಗಿ ಸಿಗುತ್ತಿಲ್ಲ. ಆಕ್ಸಿಜನ್​ ಸಿಲಿಂಡರ್​ಗಳಿಗಾಗಿ ರೋಗಿಗಳು ಪರದಾಡುವಂತಾಗಿದೆ. ಈ ಸಂದರ್ಭದಲ್ಲಿ ಪ್ರಿಯಾಂಕಾ ಹಾಗೂ ನಿಕ್​ ಜೋನಸ್​ ಅವರು ಭಾರತಕ್ಕಾಗಿ ಮಿಡಿದಿದ್ದರು. ಭಾರತದಲ್ಲಿನ ಕೊವಿಡ್​ ಸೋಂಕಿತರಿಗೆ ಸಹಾಯ ಮಾಡಲು ಅವರು ಮುಂದೆ ಬಂದಿದ್ದರು.

ಇದನ್ನೂ ಒದಿ: ಶೋ ಶೂಟಿಂಗ್​ ವೇಳೆ ಪ್ರಿಯಾಂಕಾ ಪತಿ ನಿಕ್​ ಜೋನಸ್​ಗೆ ಗಾಯ, ಆಸ್ಪತ್ರೆಗೆ ದಾಖಲು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!