AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್ ನಟನೆಯ ‘ಕಲ್ಕಿ 2898-ಎಡಿ’ ಚಿತ್ರದ ಬಗ್ಗೆ ರಾಜಮೌಳಿಗೆ ಮೂಡಿದೇ ಒಂದೇ ಪ್ರಶ್ನೆ; ಓಪನ್ ಆಗಿ ಕೇಳಿದ ನಿರ್ದೇಶಕ

ನಿರ್ದೇಶಕ ರಾಜಮೌಳಿ ಅವರು ಯಾವುದಾದರೂ ಟೀಸರ್ ನೋಡಿ ಮೆಚ್ಚಿದರು ಎಂದರೆ ಅದರಲ್ಲೊಂದು ವಿಶೇಷತೆ ಇದೆ ಎಂದೇ ಅರ್ಥ. ಅದೇ ರೀತಿ ಅವರಿಗೆ ‘ಕಲ್ಕಿ 2898-ಎಡಿ’ ಚಿತ್ರದ ಮೊದಲ ಗ್ಲಿಂಪ್ಸ್ ಇಷ್ಟವಾಗಿದೆ.

ಪ್ರಭಾಸ್ ನಟನೆಯ ‘ಕಲ್ಕಿ 2898-ಎಡಿ’ ಚಿತ್ರದ ಬಗ್ಗೆ ರಾಜಮೌಳಿಗೆ ಮೂಡಿದೇ ಒಂದೇ ಪ್ರಶ್ನೆ; ಓಪನ್ ಆಗಿ ಕೇಳಿದ ನಿರ್ದೇಶಕ
ಪ್ರಭಾಸ್-ರಾಜಮೌಳಿ
ರಾಜೇಶ್ ದುಗ್ಗುಮನೆ
|

Updated on: Jul 22, 2023 | 7:43 AM

Share

ಪ್ರಭಾಸ್ ನಟನೆಯ, ನಾಗ್ ಅಶ್ವಿನ್ (Nag Ashwin) ನಿರ್ದೇಶನದ ಹೊಸ ಚಿತ್ರಕ್ಕೆ ‘ಪ್ರಾಜೆಕ್ಟ್ ಕೆ’ ಎಂದು ತಾತ್ಕಾಲಿಕವಾಗಿ ಶೀರ್ಷಿಕೆ ಇಡಲಾಗಿತ್ತು. ಈ ಚಿತ್ರದ ಹೆಸರು ಏನು ಎಂಬುದನ್ನು ತಂಡ ರಿವೀಲ್ ಮಾಡಿದೆ. ಮೊದಲ ಗ್ಲಿಂಪ್ಸ್ ರಿಲೀಸ್ ಮಾಡಿ, ‘ಕಲ್ಕಿ 2898-ಎಡಿ’ ಶೀರ್ಷಿಕೆ ರಿವೀಲ್ ಮಾಡಲಾಗಿದೆ. ಮೊದಲ ಗ್ಲಿಂಪ್ಸ್ ನೋಡಿದ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡಲಿದೆ ಎಂದು ಎಲ್ಲರೂ ಭಾವಿಸಿದ್ದಾರೆ. ಈ ವಿಡಿಯೋ ಬಗ್ಗೆ ರಾಜಮೌಳಿ ಕೂಡ ಮೆಚ್ಚುಗೆ ಸೂಚಿಸಿದ್ದಾರೆ.

ನಿರ್ದೇಶಕ ರಾಜಮೌಳಿ ಅವರಿಗೆ ಚಿತ್ರರಂಗದಲ್ಲಿ ಅಪಾರ ಅನುಭವ ಇದೆ. ಅವರು ಯಾವುದಾದರೂ ಟೀಸರ್ ನೋಡಿ ಮೆಚ್ಚಿದರು ಎಂದರೆ ಅದರಲ್ಲೊಂದು ವಿಶೇಷತೆ ಇದೆ ಎಂದೇ ಅರ್ಥ. ಅದೇ ರೀತಿ ಅವರಿಗೆ ‘ಕಲ್ಕಿ 2898-ಎಡಿ’ ಚಿತ್ರದ ಮೊದಲ ಗ್ಲಿಂಪ್ಸ್ ಇಷ್ಟವಾಗಿದೆ. ಈ ವಿಚಾರವನ್ನು ಸ್ವತಃ ರಾಜಮೌಳಿ ಟ್ವಿಟರ್ ಮೂಲಕ ಹಂಚಿಕೊಂಡಿದ್ದಾರೆ. ಜೊತೆಗೆ ತಮಗೆ ಮೂಡಿರುವ ಒಂದು ಪ್ರಶ್ನೆಯೂ ಬಗ್ಗೆಯೂ ಅವರು ಕೇಳಿದ್ದಾರೆ.

‘ನಾಗ್ ಅಶ್ವಿನ್ ಹಾಗೂ ವೈಜಯಂತಿ ಮೂವೀಸ್​ ನಿಜಕ್ಕೂ ನೀವು ಅದ್ಭುತ ಕೆಲಸ ಮಾಡಿದ್ದೀರಿ. ಭವಿಷ್ಯದ ಕಥೆ ಇಟ್ಟುಕೊಂಡು ಸಿನಿಮಾ ಮಾಡುವುದು ತುಂಬಾ ಕಷ್ಟಕರವಾದ ಕೆಲಸ. ಅದನ್ನು ನೀವು ಸಾಧ್ಯವಾಗಿಸಿದ್ದೀರಿ. ಡಾರ್ಲಿಂಗ್ ಸ್ಮಾಶಿಂಗ್ ಆಗಿ ಕಾಣಿಸುತ್ತಿದ್ದಾರೆ. ರಿಲೀಸ್​ ಡೇಟ್ ಯಾವಾಗ ಎಂಬ ಒಂದು ಪ್ರಶ್ನೆ ಮಾತ್ರ ಉಳಿದುಕೊಂಡಿದೆ’ ಎಂದು ರಾಜಮೌಳಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Kalki 2898 AD: ‘ಕಲ್ಕಿ 2898 ಎಡಿ’ ಅಲಿಯಾಸ್​ ‘ಪ್ರಾಜೆಕ್ಟ್​ ಕೆ’ ಚಿತ್ರದ ಪ್ರಚಾರ ಮಾಡಲು ದೀಪಿಕಾ ಪಡುಕೋಣೆ ನಕಾರ; ಮೂಡಿತು ಅನುಮಾನ

‘ಪ್ರಾಜೆಕ್ಟ್​ ಕೆ’ ಚಿತ್ರವನ್ನು ಮುಂದಿನ ಜನವರಿ 12ರಂದು ರಿಲೀಸ್ ಮಾಡುವುದಾಗಿ ತಂಡ ಹೇಳಿಕೊಂಡಿತ್ತು. ಆದರೆ, ಅದು ಸಾಧ್ಯವಾಗುತ್ತಿಲ್ಲ. ಚಿತ್ರದ ಗ್ರಾಫಿಕ್ಸ್​ ಕೆಲಸಗಳು ಬಾಕಿ ಇವೆ. ಈ ಕಾರಣಕ್ಕೆ ಸಿನಿಮಾ ಜನವರಿ ತಿಂಗಳಲ್ಲಿ ರಿಲೀಸ್ ಆಗುತ್ತಿಲ್ಲ. ಈ ವಿಚಾರವನ್ನು ತಂಡದವರು ಅಧಿಕೃತ ಮಾಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ