AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್ ನಟನೆಯ ‘ಕಲ್ಕಿ 2898-ಎಡಿ’ ಚಿತ್ರದ ಬಗ್ಗೆ ರಾಜಮೌಳಿಗೆ ಮೂಡಿದೇ ಒಂದೇ ಪ್ರಶ್ನೆ; ಓಪನ್ ಆಗಿ ಕೇಳಿದ ನಿರ್ದೇಶಕ

ನಿರ್ದೇಶಕ ರಾಜಮೌಳಿ ಅವರು ಯಾವುದಾದರೂ ಟೀಸರ್ ನೋಡಿ ಮೆಚ್ಚಿದರು ಎಂದರೆ ಅದರಲ್ಲೊಂದು ವಿಶೇಷತೆ ಇದೆ ಎಂದೇ ಅರ್ಥ. ಅದೇ ರೀತಿ ಅವರಿಗೆ ‘ಕಲ್ಕಿ 2898-ಎಡಿ’ ಚಿತ್ರದ ಮೊದಲ ಗ್ಲಿಂಪ್ಸ್ ಇಷ್ಟವಾಗಿದೆ.

ಪ್ರಭಾಸ್ ನಟನೆಯ ‘ಕಲ್ಕಿ 2898-ಎಡಿ’ ಚಿತ್ರದ ಬಗ್ಗೆ ರಾಜಮೌಳಿಗೆ ಮೂಡಿದೇ ಒಂದೇ ಪ್ರಶ್ನೆ; ಓಪನ್ ಆಗಿ ಕೇಳಿದ ನಿರ್ದೇಶಕ
ಪ್ರಭಾಸ್-ರಾಜಮೌಳಿ
ರಾಜೇಶ್ ದುಗ್ಗುಮನೆ
|

Updated on: Jul 22, 2023 | 7:43 AM

Share

ಪ್ರಭಾಸ್ ನಟನೆಯ, ನಾಗ್ ಅಶ್ವಿನ್ (Nag Ashwin) ನಿರ್ದೇಶನದ ಹೊಸ ಚಿತ್ರಕ್ಕೆ ‘ಪ್ರಾಜೆಕ್ಟ್ ಕೆ’ ಎಂದು ತಾತ್ಕಾಲಿಕವಾಗಿ ಶೀರ್ಷಿಕೆ ಇಡಲಾಗಿತ್ತು. ಈ ಚಿತ್ರದ ಹೆಸರು ಏನು ಎಂಬುದನ್ನು ತಂಡ ರಿವೀಲ್ ಮಾಡಿದೆ. ಮೊದಲ ಗ್ಲಿಂಪ್ಸ್ ರಿಲೀಸ್ ಮಾಡಿ, ‘ಕಲ್ಕಿ 2898-ಎಡಿ’ ಶೀರ್ಷಿಕೆ ರಿವೀಲ್ ಮಾಡಲಾಗಿದೆ. ಮೊದಲ ಗ್ಲಿಂಪ್ಸ್ ನೋಡಿದ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡಲಿದೆ ಎಂದು ಎಲ್ಲರೂ ಭಾವಿಸಿದ್ದಾರೆ. ಈ ವಿಡಿಯೋ ಬಗ್ಗೆ ರಾಜಮೌಳಿ ಕೂಡ ಮೆಚ್ಚುಗೆ ಸೂಚಿಸಿದ್ದಾರೆ.

ನಿರ್ದೇಶಕ ರಾಜಮೌಳಿ ಅವರಿಗೆ ಚಿತ್ರರಂಗದಲ್ಲಿ ಅಪಾರ ಅನುಭವ ಇದೆ. ಅವರು ಯಾವುದಾದರೂ ಟೀಸರ್ ನೋಡಿ ಮೆಚ್ಚಿದರು ಎಂದರೆ ಅದರಲ್ಲೊಂದು ವಿಶೇಷತೆ ಇದೆ ಎಂದೇ ಅರ್ಥ. ಅದೇ ರೀತಿ ಅವರಿಗೆ ‘ಕಲ್ಕಿ 2898-ಎಡಿ’ ಚಿತ್ರದ ಮೊದಲ ಗ್ಲಿಂಪ್ಸ್ ಇಷ್ಟವಾಗಿದೆ. ಈ ವಿಚಾರವನ್ನು ಸ್ವತಃ ರಾಜಮೌಳಿ ಟ್ವಿಟರ್ ಮೂಲಕ ಹಂಚಿಕೊಂಡಿದ್ದಾರೆ. ಜೊತೆಗೆ ತಮಗೆ ಮೂಡಿರುವ ಒಂದು ಪ್ರಶ್ನೆಯೂ ಬಗ್ಗೆಯೂ ಅವರು ಕೇಳಿದ್ದಾರೆ.

‘ನಾಗ್ ಅಶ್ವಿನ್ ಹಾಗೂ ವೈಜಯಂತಿ ಮೂವೀಸ್​ ನಿಜಕ್ಕೂ ನೀವು ಅದ್ಭುತ ಕೆಲಸ ಮಾಡಿದ್ದೀರಿ. ಭವಿಷ್ಯದ ಕಥೆ ಇಟ್ಟುಕೊಂಡು ಸಿನಿಮಾ ಮಾಡುವುದು ತುಂಬಾ ಕಷ್ಟಕರವಾದ ಕೆಲಸ. ಅದನ್ನು ನೀವು ಸಾಧ್ಯವಾಗಿಸಿದ್ದೀರಿ. ಡಾರ್ಲಿಂಗ್ ಸ್ಮಾಶಿಂಗ್ ಆಗಿ ಕಾಣಿಸುತ್ತಿದ್ದಾರೆ. ರಿಲೀಸ್​ ಡೇಟ್ ಯಾವಾಗ ಎಂಬ ಒಂದು ಪ್ರಶ್ನೆ ಮಾತ್ರ ಉಳಿದುಕೊಂಡಿದೆ’ ಎಂದು ರಾಜಮೌಳಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Kalki 2898 AD: ‘ಕಲ್ಕಿ 2898 ಎಡಿ’ ಅಲಿಯಾಸ್​ ‘ಪ್ರಾಜೆಕ್ಟ್​ ಕೆ’ ಚಿತ್ರದ ಪ್ರಚಾರ ಮಾಡಲು ದೀಪಿಕಾ ಪಡುಕೋಣೆ ನಕಾರ; ಮೂಡಿತು ಅನುಮಾನ

‘ಪ್ರಾಜೆಕ್ಟ್​ ಕೆ’ ಚಿತ್ರವನ್ನು ಮುಂದಿನ ಜನವರಿ 12ರಂದು ರಿಲೀಸ್ ಮಾಡುವುದಾಗಿ ತಂಡ ಹೇಳಿಕೊಂಡಿತ್ತು. ಆದರೆ, ಅದು ಸಾಧ್ಯವಾಗುತ್ತಿಲ್ಲ. ಚಿತ್ರದ ಗ್ರಾಫಿಕ್ಸ್​ ಕೆಲಸಗಳು ಬಾಕಿ ಇವೆ. ಈ ಕಾರಣಕ್ಕೆ ಸಿನಿಮಾ ಜನವರಿ ತಿಂಗಳಲ್ಲಿ ರಿಲೀಸ್ ಆಗುತ್ತಿಲ್ಲ. ಈ ವಿಚಾರವನ್ನು ತಂಡದವರು ಅಧಿಕೃತ ಮಾಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!