ಪ್ರಭಾಸ್ ನಟನೆಯ ‘ಕಲ್ಕಿ 2898-ಎಡಿ’ ಚಿತ್ರದ ಬಗ್ಗೆ ರಾಜಮೌಳಿಗೆ ಮೂಡಿದೇ ಒಂದೇ ಪ್ರಶ್ನೆ; ಓಪನ್ ಆಗಿ ಕೇಳಿದ ನಿರ್ದೇಶಕ

ನಿರ್ದೇಶಕ ರಾಜಮೌಳಿ ಅವರು ಯಾವುದಾದರೂ ಟೀಸರ್ ನೋಡಿ ಮೆಚ್ಚಿದರು ಎಂದರೆ ಅದರಲ್ಲೊಂದು ವಿಶೇಷತೆ ಇದೆ ಎಂದೇ ಅರ್ಥ. ಅದೇ ರೀತಿ ಅವರಿಗೆ ‘ಕಲ್ಕಿ 2898-ಎಡಿ’ ಚಿತ್ರದ ಮೊದಲ ಗ್ಲಿಂಪ್ಸ್ ಇಷ್ಟವಾಗಿದೆ.

ಪ್ರಭಾಸ್ ನಟನೆಯ ‘ಕಲ್ಕಿ 2898-ಎಡಿ’ ಚಿತ್ರದ ಬಗ್ಗೆ ರಾಜಮೌಳಿಗೆ ಮೂಡಿದೇ ಒಂದೇ ಪ್ರಶ್ನೆ; ಓಪನ್ ಆಗಿ ಕೇಳಿದ ನಿರ್ದೇಶಕ
ಪ್ರಭಾಸ್-ರಾಜಮೌಳಿ
Follow us
|

Updated on: Jul 22, 2023 | 7:43 AM

ಪ್ರಭಾಸ್ ನಟನೆಯ, ನಾಗ್ ಅಶ್ವಿನ್ (Nag Ashwin) ನಿರ್ದೇಶನದ ಹೊಸ ಚಿತ್ರಕ್ಕೆ ‘ಪ್ರಾಜೆಕ್ಟ್ ಕೆ’ ಎಂದು ತಾತ್ಕಾಲಿಕವಾಗಿ ಶೀರ್ಷಿಕೆ ಇಡಲಾಗಿತ್ತು. ಈ ಚಿತ್ರದ ಹೆಸರು ಏನು ಎಂಬುದನ್ನು ತಂಡ ರಿವೀಲ್ ಮಾಡಿದೆ. ಮೊದಲ ಗ್ಲಿಂಪ್ಸ್ ರಿಲೀಸ್ ಮಾಡಿ, ‘ಕಲ್ಕಿ 2898-ಎಡಿ’ ಶೀರ್ಷಿಕೆ ರಿವೀಲ್ ಮಾಡಲಾಗಿದೆ. ಮೊದಲ ಗ್ಲಿಂಪ್ಸ್ ನೋಡಿದ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡಲಿದೆ ಎಂದು ಎಲ್ಲರೂ ಭಾವಿಸಿದ್ದಾರೆ. ಈ ವಿಡಿಯೋ ಬಗ್ಗೆ ರಾಜಮೌಳಿ ಕೂಡ ಮೆಚ್ಚುಗೆ ಸೂಚಿಸಿದ್ದಾರೆ.

ನಿರ್ದೇಶಕ ರಾಜಮೌಳಿ ಅವರಿಗೆ ಚಿತ್ರರಂಗದಲ್ಲಿ ಅಪಾರ ಅನುಭವ ಇದೆ. ಅವರು ಯಾವುದಾದರೂ ಟೀಸರ್ ನೋಡಿ ಮೆಚ್ಚಿದರು ಎಂದರೆ ಅದರಲ್ಲೊಂದು ವಿಶೇಷತೆ ಇದೆ ಎಂದೇ ಅರ್ಥ. ಅದೇ ರೀತಿ ಅವರಿಗೆ ‘ಕಲ್ಕಿ 2898-ಎಡಿ’ ಚಿತ್ರದ ಮೊದಲ ಗ್ಲಿಂಪ್ಸ್ ಇಷ್ಟವಾಗಿದೆ. ಈ ವಿಚಾರವನ್ನು ಸ್ವತಃ ರಾಜಮೌಳಿ ಟ್ವಿಟರ್ ಮೂಲಕ ಹಂಚಿಕೊಂಡಿದ್ದಾರೆ. ಜೊತೆಗೆ ತಮಗೆ ಮೂಡಿರುವ ಒಂದು ಪ್ರಶ್ನೆಯೂ ಬಗ್ಗೆಯೂ ಅವರು ಕೇಳಿದ್ದಾರೆ.

‘ನಾಗ್ ಅಶ್ವಿನ್ ಹಾಗೂ ವೈಜಯಂತಿ ಮೂವೀಸ್​ ನಿಜಕ್ಕೂ ನೀವು ಅದ್ಭುತ ಕೆಲಸ ಮಾಡಿದ್ದೀರಿ. ಭವಿಷ್ಯದ ಕಥೆ ಇಟ್ಟುಕೊಂಡು ಸಿನಿಮಾ ಮಾಡುವುದು ತುಂಬಾ ಕಷ್ಟಕರವಾದ ಕೆಲಸ. ಅದನ್ನು ನೀವು ಸಾಧ್ಯವಾಗಿಸಿದ್ದೀರಿ. ಡಾರ್ಲಿಂಗ್ ಸ್ಮಾಶಿಂಗ್ ಆಗಿ ಕಾಣಿಸುತ್ತಿದ್ದಾರೆ. ರಿಲೀಸ್​ ಡೇಟ್ ಯಾವಾಗ ಎಂಬ ಒಂದು ಪ್ರಶ್ನೆ ಮಾತ್ರ ಉಳಿದುಕೊಂಡಿದೆ’ ಎಂದು ರಾಜಮೌಳಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Kalki 2898 AD: ‘ಕಲ್ಕಿ 2898 ಎಡಿ’ ಅಲಿಯಾಸ್​ ‘ಪ್ರಾಜೆಕ್ಟ್​ ಕೆ’ ಚಿತ್ರದ ಪ್ರಚಾರ ಮಾಡಲು ದೀಪಿಕಾ ಪಡುಕೋಣೆ ನಕಾರ; ಮೂಡಿತು ಅನುಮಾನ

‘ಪ್ರಾಜೆಕ್ಟ್​ ಕೆ’ ಚಿತ್ರವನ್ನು ಮುಂದಿನ ಜನವರಿ 12ರಂದು ರಿಲೀಸ್ ಮಾಡುವುದಾಗಿ ತಂಡ ಹೇಳಿಕೊಂಡಿತ್ತು. ಆದರೆ, ಅದು ಸಾಧ್ಯವಾಗುತ್ತಿಲ್ಲ. ಚಿತ್ರದ ಗ್ರಾಫಿಕ್ಸ್​ ಕೆಲಸಗಳು ಬಾಕಿ ಇವೆ. ಈ ಕಾರಣಕ್ಕೆ ಸಿನಿಮಾ ಜನವರಿ ತಿಂಗಳಲ್ಲಿ ರಿಲೀಸ್ ಆಗುತ್ತಿಲ್ಲ. ಈ ವಿಚಾರವನ್ನು ತಂಡದವರು ಅಧಿಕೃತ ಮಾಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ