AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಸ್ ನಟನೆಯ ‘ಕಲ್ಕಿ 2898-ಎಡಿ’ ಚಿತ್ರದ ಬಗ್ಗೆ ರಾಜಮೌಳಿಗೆ ಮೂಡಿದೇ ಒಂದೇ ಪ್ರಶ್ನೆ; ಓಪನ್ ಆಗಿ ಕೇಳಿದ ನಿರ್ದೇಶಕ

ನಿರ್ದೇಶಕ ರಾಜಮೌಳಿ ಅವರು ಯಾವುದಾದರೂ ಟೀಸರ್ ನೋಡಿ ಮೆಚ್ಚಿದರು ಎಂದರೆ ಅದರಲ್ಲೊಂದು ವಿಶೇಷತೆ ಇದೆ ಎಂದೇ ಅರ್ಥ. ಅದೇ ರೀತಿ ಅವರಿಗೆ ‘ಕಲ್ಕಿ 2898-ಎಡಿ’ ಚಿತ್ರದ ಮೊದಲ ಗ್ಲಿಂಪ್ಸ್ ಇಷ್ಟವಾಗಿದೆ.

ಪ್ರಭಾಸ್ ನಟನೆಯ ‘ಕಲ್ಕಿ 2898-ಎಡಿ’ ಚಿತ್ರದ ಬಗ್ಗೆ ರಾಜಮೌಳಿಗೆ ಮೂಡಿದೇ ಒಂದೇ ಪ್ರಶ್ನೆ; ಓಪನ್ ಆಗಿ ಕೇಳಿದ ನಿರ್ದೇಶಕ
ಪ್ರಭಾಸ್-ರಾಜಮೌಳಿ
ರಾಜೇಶ್ ದುಗ್ಗುಮನೆ
|

Updated on: Jul 22, 2023 | 7:43 AM

Share

ಪ್ರಭಾಸ್ ನಟನೆಯ, ನಾಗ್ ಅಶ್ವಿನ್ (Nag Ashwin) ನಿರ್ದೇಶನದ ಹೊಸ ಚಿತ್ರಕ್ಕೆ ‘ಪ್ರಾಜೆಕ್ಟ್ ಕೆ’ ಎಂದು ತಾತ್ಕಾಲಿಕವಾಗಿ ಶೀರ್ಷಿಕೆ ಇಡಲಾಗಿತ್ತು. ಈ ಚಿತ್ರದ ಹೆಸರು ಏನು ಎಂಬುದನ್ನು ತಂಡ ರಿವೀಲ್ ಮಾಡಿದೆ. ಮೊದಲ ಗ್ಲಿಂಪ್ಸ್ ರಿಲೀಸ್ ಮಾಡಿ, ‘ಕಲ್ಕಿ 2898-ಎಡಿ’ ಶೀರ್ಷಿಕೆ ರಿವೀಲ್ ಮಾಡಲಾಗಿದೆ. ಮೊದಲ ಗ್ಲಿಂಪ್ಸ್ ನೋಡಿದ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡಲಿದೆ ಎಂದು ಎಲ್ಲರೂ ಭಾವಿಸಿದ್ದಾರೆ. ಈ ವಿಡಿಯೋ ಬಗ್ಗೆ ರಾಜಮೌಳಿ ಕೂಡ ಮೆಚ್ಚುಗೆ ಸೂಚಿಸಿದ್ದಾರೆ.

ನಿರ್ದೇಶಕ ರಾಜಮೌಳಿ ಅವರಿಗೆ ಚಿತ್ರರಂಗದಲ್ಲಿ ಅಪಾರ ಅನುಭವ ಇದೆ. ಅವರು ಯಾವುದಾದರೂ ಟೀಸರ್ ನೋಡಿ ಮೆಚ್ಚಿದರು ಎಂದರೆ ಅದರಲ್ಲೊಂದು ವಿಶೇಷತೆ ಇದೆ ಎಂದೇ ಅರ್ಥ. ಅದೇ ರೀತಿ ಅವರಿಗೆ ‘ಕಲ್ಕಿ 2898-ಎಡಿ’ ಚಿತ್ರದ ಮೊದಲ ಗ್ಲಿಂಪ್ಸ್ ಇಷ್ಟವಾಗಿದೆ. ಈ ವಿಚಾರವನ್ನು ಸ್ವತಃ ರಾಜಮೌಳಿ ಟ್ವಿಟರ್ ಮೂಲಕ ಹಂಚಿಕೊಂಡಿದ್ದಾರೆ. ಜೊತೆಗೆ ತಮಗೆ ಮೂಡಿರುವ ಒಂದು ಪ್ರಶ್ನೆಯೂ ಬಗ್ಗೆಯೂ ಅವರು ಕೇಳಿದ್ದಾರೆ.

‘ನಾಗ್ ಅಶ್ವಿನ್ ಹಾಗೂ ವೈಜಯಂತಿ ಮೂವೀಸ್​ ನಿಜಕ್ಕೂ ನೀವು ಅದ್ಭುತ ಕೆಲಸ ಮಾಡಿದ್ದೀರಿ. ಭವಿಷ್ಯದ ಕಥೆ ಇಟ್ಟುಕೊಂಡು ಸಿನಿಮಾ ಮಾಡುವುದು ತುಂಬಾ ಕಷ್ಟಕರವಾದ ಕೆಲಸ. ಅದನ್ನು ನೀವು ಸಾಧ್ಯವಾಗಿಸಿದ್ದೀರಿ. ಡಾರ್ಲಿಂಗ್ ಸ್ಮಾಶಿಂಗ್ ಆಗಿ ಕಾಣಿಸುತ್ತಿದ್ದಾರೆ. ರಿಲೀಸ್​ ಡೇಟ್ ಯಾವಾಗ ಎಂಬ ಒಂದು ಪ್ರಶ್ನೆ ಮಾತ್ರ ಉಳಿದುಕೊಂಡಿದೆ’ ಎಂದು ರಾಜಮೌಳಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Kalki 2898 AD: ‘ಕಲ್ಕಿ 2898 ಎಡಿ’ ಅಲಿಯಾಸ್​ ‘ಪ್ರಾಜೆಕ್ಟ್​ ಕೆ’ ಚಿತ್ರದ ಪ್ರಚಾರ ಮಾಡಲು ದೀಪಿಕಾ ಪಡುಕೋಣೆ ನಕಾರ; ಮೂಡಿತು ಅನುಮಾನ

‘ಪ್ರಾಜೆಕ್ಟ್​ ಕೆ’ ಚಿತ್ರವನ್ನು ಮುಂದಿನ ಜನವರಿ 12ರಂದು ರಿಲೀಸ್ ಮಾಡುವುದಾಗಿ ತಂಡ ಹೇಳಿಕೊಂಡಿತ್ತು. ಆದರೆ, ಅದು ಸಾಧ್ಯವಾಗುತ್ತಿಲ್ಲ. ಚಿತ್ರದ ಗ್ರಾಫಿಕ್ಸ್​ ಕೆಲಸಗಳು ಬಾಕಿ ಇವೆ. ಈ ಕಾರಣಕ್ಕೆ ಸಿನಿಮಾ ಜನವರಿ ತಿಂಗಳಲ್ಲಿ ರಿಲೀಸ್ ಆಗುತ್ತಿಲ್ಲ. ಈ ವಿಚಾರವನ್ನು ತಂಡದವರು ಅಧಿಕೃತ ಮಾಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!