Sign In

By signing in or creating an account, you agree with Associated Broadcasting Company's Terms & Conditions and Privacy Policy.

Pawan Kalyan: ಪವನ್ ಕಲ್ಯಾಣ್​ನಿಂದಾಗಿ ಆಫರ್​ ಕಳೆದುಕೊಂಡಿದ್ದೇನೆ ಎಂದ ಪೊಸಾನಿ

ಪವನ್ ಕಲ್ಯಾಣ್ ವಿರುದ್ಧ ಪೊಸಾನಿ ಆಗಾಗ ಗುಡುಗುತ್ತಾರೆ. ಅವರ ವಿರುದ್ಧ ಸಾಕಷ್ಟು ಆರೋಪಗಳನ್ನು ಅವರು ಮಾಡುತ್ತಾರೆ. ಇತ್ತೀಚೆಗೆ ಅವರು ಪವನ್ ಕಲ್ಯಾಣ್ ಬಗ್ಗೆ ಕೆಲ ಆರೋಪ ಮಾಡಿದ್ದಾರೆ.

Pawan Kalyan: ಪವನ್ ಕಲ್ಯಾಣ್​ನಿಂದಾಗಿ ಆಫರ್​ ಕಳೆದುಕೊಂಡಿದ್ದೇನೆ ಎಂದ ಪೊಸಾನಿ
ಪವನ್ ಕಲ್ಯಾಣ್
Follow us
ರಾಜೇಶ್ ದುಗ್ಗುಮನೆ
|

Updated on: Jun 27, 2023 | 7:54 AM

ತೆಲುಗು ಚಿತ್ರರಂಗದ ಪ್ರತಿಭಾನ್ವಿತ ನಟರಲ್ಲಿ ಪೊಸಾನಿ ಕೃಷ್ಣ ಮುರಳಿ (Posani Murali Krishna) ಕೂಡ ಒಬ್ಬರು. ಹಲವು ವರ್ಷಗಳಿಂದ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರು ಆಗಾಗ ವಿವಾದದ ಮೂಲಕ ಸುದ್ದಿ ಆಗುತ್ತಾರೆ. ತೆಲುಗು ನಟ ಪವನ್​ ಕಲ್ಯಾಣ್ (Pawan Kalyan)​ ಬಗ್ಗೆ ಅನೇಕ ಆರೋಪಗಳನ್ನು ಅವರು ಮಾಡುತ್ತಾ ಇರುತ್ತಾರೆ. ಈಗ ಅವರು ಹೊಸ ಆರೋಪ ಮಾಡಿದ್ದಾರೆ. ‘ನನಗೆ ಬರಬೇಕಿದ್ದ ಆಫರ್​ಗಳು​​​ ಕಳೆದು ಹೋಗೋಕೆ ಪವನ್ ಕಲ್ಯಾಣ್ ಕಾರಣ’ ಎಂದು ಪೊಸಾನಿ ಕೃಷ್ಣ ಮುರಳಿ ಇತ್ತೀಚೆಗೆ ಹೇಳಿದ್ದಾರೆ.

ಪವನ್ ಕಲ್ಯಾಣ್ ವಿರುದ್ಧ ಪೊಸಾನಿ ಆಗಾಗ ಗುಡುಗುತ್ತಾರೆ. ಅವರ ವಿರುದ್ಧ ಸಾಕಷ್ಟು ಆರೋಪಗಳನ್ನು ಅವರು ಮಾಡುತ್ತಾರೆ. ಇತ್ತೀಚೆಗೆ ಅವರು ಪವನ್ ಕಲ್ಯಾಣ್ ಬಗ್ಗೆ ಕೆಲ ಆರೋಪ ಮಾಡಿದ್ದಾರೆ. ಪೊಸಾನಿಗೆ ಇತ್ತೀಚೆಗೆ ಸಿನಿಮಾಗಳಲ್ಲಿ ಸಾಕಷ್ಟು ಆಫರ್​ಗಳು ಬರುತ್ತಿಲ್ಲ. ಇದಕ್ಕೆ ಪವನ್ ಕಲ್ಯಾಣ್ ಕಾರಣ ಎಂದಿದ್ದಾರೆ ಅವರು. ‘ನನಗೆ ಹೆಚ್ಚಿನ ಆಫರ್ ಬರುತ್ತಿಲ್ಲ. ಇದಕ್ಕೆ ಪವನ್ ಕಲ್ಯಾಣ್ ಕಾರಣ. ಆದರೆ, ಈ ಬಗ್ಗೆ ನಾನು ಹೆಚ್ಚು ತಲೆಕೆಡಿಸಿಕೊಂಡಿಲ್ಲ’ ಎಂದಿದ್ದಾರೆ ಅವರು.

ಇದನ್ನೂ ಓದಿ: ‘ಆ ನಟನಿಗೆ ಕೆಟ್ಟ ಸಾವು ಬರುತ್ತೆ’; ಪೊಸಾನಿಗೆ ಬಂಡ್ಲ ಗಣೇಶ್​ ಶಾಪ: ಪವನ್​ ಕಲ್ಯಾಣ್​ ಬಗ್ಗೆ ಮಾತಾಡಿದ್ದೇ ತಪ್ಪಾಯ್ತು

ಪೊಸಾನಿ ಕೃಷ್ಣ ಮುರಳಿ ಅವರು ತೆಲುಗಿನ ಜನಪ್ರಿಯ ಪೋಷಕ ನಟ. ಅವರು ವೈಎಸ್​ಆರ್ ಕಾಂಗ್ರೆಸ್ ಪಕ್ಷದ ಸದಸ್ಯ ಕೂಡ ಹೌದು. ಈ ಹಿಂದೆಯೂ ಪವನ್ ಕಲ್ಯಾಣ್ ಹಾಗೂ ಸಿಎಂ ಜಗನ್ ವಿರುದ್ಧ ಗುಡುಗಿದ್ದರು. ಪವನ್ ಕಲ್ಯಾಣ್​ ಅವರರ ಖಾಸಗಿ ಜೀವನದ ಬಗ್ಗೆ, ಅವರ ಪತ್ನಿಯ ಬಗ್ಗೆ ಅವಾಚ್ಯವಾಗಿ ಬೈದಿದ್ದರು ಪೊಸಾನಿ. ಅವರ ಮೇಲೆ ಪವನ್ ಫ್ಯಾನ್ಸ್ ಹಲ್ಲೆ ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
VIDEO: ರಾಕೆಟ್ ರಾಕೆಟ್ ರಾಕೆಟ್: ಒಂದೇ ಕೈಯಲ್ಲಿ ಧೋನಿಯ ರಾಕೆಟ್ ಸಿಕ್ಸ್
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ವೇದಿಕೆಯಲ್ಲೇ ಸಚಿವ ಖಂಡ್ರೆ, ಶಾಸಕ ಶೈಲೇಂದ್ರ ಬೆಲ್ದಾಳೆ ಮಾತಿನ ಚಕಮಕಿ
ಬುರ್ಖಾ ತೆಗೆ, ಹೆಸರೇನು ಹೇಳು: ಬೆಂಗಳೂರಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ
ಬುರ್ಖಾ ತೆಗೆ, ಹೆಸರೇನು ಹೇಳು: ಬೆಂಗಳೂರಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ
ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ
ರಾಯಚೂರಿನ ಆರ್​ಟಿಪಿಎಸ್ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಅಗ್ನಿ ಅವಘಡ
VIDEO: ಧೋನಿ ಚಮತ್ಕಾರ... ಹೀಗೂ ರನೌಟ್ ಮಾಡಬಹುದು!
VIDEO: ಧೋನಿ ಚಮತ್ಕಾರ... ಹೀಗೂ ರನೌಟ್ ಮಾಡಬಹುದು!
ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ
ಆಸ್ಪತ್ರೆಯಲ್ಲಿ ಅಗ್ನಿ ಅವಘಡ, ಓರ್ವ ರೋಗಿ ಸಾವು, ಹಲವರಿಗೆ ಗಾಯ
ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್