AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಮಂದಣ್ಣ ಮೇಲೆ ಕ್ರಶ್ ಇದೆ ಎಂದು ಈಗ ಉಲ್ಟಾ ಹೊಡೆದ ಕ್ರಿಕೆಟರ್ ಶುಬ್​ಮನ್ ಗಿಲ್​

Rashmika Mandanna: ‘ರಶ್ಮಿಕಾ ಮಂದಣ್ಣ ಮೇಲೆ ನನಗೆ ಕ್ರಶ್ ಇದೆ’ ಎಂದು ಶುಬ್​ಮನ್​ ಗಿಲ್ ಅವರು ಹೇಳಿಕೊಂಡಿರುವುದಾಗಿ ಇತ್ತೀಚೆಗೆ ವರದಿ ಆಗಿತ್ತು. ಇದಾದ ಬೆನ್ನಲ್ಲೇ ಟ್ರೋಲ್​ ಪೇಜ್​ಗಳು ಹಬ್ಬ ಮಾಡಿದ್ದವು.

ರಶ್ಮಿಕಾ ಮಂದಣ್ಣ ಮೇಲೆ ಕ್ರಶ್ ಇದೆ ಎಂದು ಈಗ ಉಲ್ಟಾ ಹೊಡೆದ ಕ್ರಿಕೆಟರ್ ಶುಬ್​ಮನ್ ಗಿಲ್​
ಶುಬ್​ಮನ್​ ಗಿಲ್​-ರಶ್ಮಿಕಾ ಮಂದಣ್ಣ
ರಾಜೇಶ್ ದುಗ್ಗುಮನೆ
|

Updated on:Mar 08, 2023 | 7:25 AM

Share

ಕ್ರಿಕೆಟರ್ ಶುಬ್​ಮನ್​ ಗಿಲ್  (Shubman Gill) ಕಳೆದ ಕೆಲ ಸಮಯದಿಂದ ಹುಡುಗಿಯರ ವಿಚಾರಕ್ಕೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಅವರ ಬ್ಯಾಟ್​ನಿಂದ ಶತಕ ಸಿಡಿದಷ್ಟೇ ವೇಗದಲ್ಲಿ ವದಂತಿಗಳು ಕೂಡ ಸಿಡಿಯುತ್ತಿವೆ. ಅವರ ಹೆಸರು ಸಾರಾ ತೆಂಡೂಲ್ಕರ್, ಸಾರಾ ಅಲಿ ಖಾನ್ ಜೊತೆ ತಳಕು ಹಾಕಿಕೊಳ್ಳುತ್ತಿದೆ. ಈಗ ಶುಬ್​ಮನ್ ಗಿಲ್ ಅವರ ಹೆಸರು ರಶ್ಮಿಕಾ ಜೊತೆ ಸೇರಿಕೊಂಡಿತ್ತು. ‘ರಶ್ಮಿಕಾ ಮಂದಣ್ಣ (Rashmika Mandanna) ಮೇಲೆ ಕ್ರಶ್ ಇದೆ’ ಎಂದು ಅವರು ಹೇಳಿಕೊಂಡಿರುವುದಾಗಿ ವರದಿ ಆಗಿತ್ತು. ಆದರೆ, ಈಗ ಶುಬ್​ಮನ್​ ಉಲ್ಟಾ ಹೊಡೆದಿದ್ದಾರೆ. ನಾನು ಆ ರೀತಿ ಹೇಳಿಯೇ ಇಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ. ಇದರಿಂದ ಯಾವುದು ನಿಜ ಯಾವುದು ಸುಳ್ಳು ಎಂಬ ಗೊಂದಲ ಮೂಡಿದೆ.

‘ರಶ್ಮಿಕಾ ಮಂದಣ್ಣ ಮೇಲೆ ನನಗೆ ಕ್ರಶ್ ಇದೆ’ ಎಂದು ಶುಬ್​ಮನ್​ ಗಿಲ್ ಅವರು ಹೇಳಿಕೊಂಡಿರುವುದಾಗಿ ಇತ್ತೀಚೆಗೆ ವರದಿ ಆಗಿತ್ತು. ಇದಾದ ಬೆನ್ನಲ್ಲೇ ಟ್ರೋಲ್​ ಪೇಜ್​ಗಳು ಹಬ್ಬ ಮಾಡಿದ್ದವು. ಶುಬ್​ಮನ್ ಗಿಲ್​ ಹಾಗೂ ರಶ್ಮಿಕಾ ಫೋಟೋಗಳನ್ನು ಎಡಿಟ್ ಮಾಡಿ ಪೋಸ್ಟ್ ಮಾಡೋಕೆ ಆರಂಭಿಸಿದ್ದವು. ಸಾಲು ಸಾಲು ಪೋಸ್ಟ್​ಗಳು ಸೋಶಿಯಲ್ ಮೀಡಿಯಾದಲ್ಲಿ ರಾರಾಜಿಸಿದ್ದವು. ಇದು ಶುಬ್​ಮನ್ ಗಿಲ್ ಕಣ್ಣಿಗೂ ಬಿದ್ದಿದೆ. ಅವರು ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ
Image
Rashmika Mandanna: ಅವಾರ್ಡ್ ಫಂಕ್ಷನ್​ಗೆ ಚಿಕ್ಕ ಡ್ರೆಸ್ ಹಾಕಿ ಬಂದ ರಶ್ಮಿಕಾ ಮಂದಣ್ಣ; ಟ್ರೋಲ್ ಮಂದಿಗೆ ಹಬ್ಬ
Image
Rashmika Mandanna: ಮಿಲಾನ್ ಫ್ಯಾಷನ್​ ವೀಕ್​​ನಲ್ಲಿ ಬಿಟಿಎಸ್​ ನಾಯಕನ ಭೇಟಿ ಮಾಡಲಿದ್ದಾರೆ ರಶ್ಮಿಕಾ ಮಂದಣ್ಣ?
Image
Rashmika Mandanna: ಮಿಲಾನ್​ಗೆ ಹಾರುವ ಮುನ್ನ ತಮ್ಮ ಸೌಂದರ್ಯದ ಗುಟ್ಟು ರಟ್ಟು ಮಾಡಿದ ರಶ್ಮಿಕಾ ಮಂದಣ್ಣ

ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಮೇಲಿನ ಪ್ರೀತಿ ಬಹಿರಂಗಪಡಿಸಿದ ಸ್ಟಾರ್ ಕ್ರಿಕೆಟಿಗ

ವೆಬ್​ಸೈಟ್ ಒಂದು ವರದಿ ಮಾಡಿರುವ ಪೋಸ್ಟ್​ಗೆ ಕಮೆಂಟ್ ಮಾಡಿರುವ ಶುಬ್​ಮನ್ ಗಿಲ್​, ‘ಅದು ಯಾವ ಮಾಧ್ಯಮ ಜೊತೆಗಿನ ಸಂದರ್ಶನ? ನನಗೆ ಆ ಬಗ್ಗೆ ಗೊತ್ತಿಲ್ಲ’ ಎಂದು ಗಿಲ್ ಹೇಳಿದ್ದಾರೆ. ಮೊದಲು ಹೇಳಿಕೆ ನೀಡಿ ಅದು ವೈರಲ್ ಆದ ಬಳಿಕ ಶುಬ್​ಮನ್​ ಈ ರೀತಿ ಹೇಳಿದರಾ ಎನ್ನುವ ಪ್ರಶ್ನೆಯೂ ಮೂಡಿದೆ.

ಇದನ್ನೂ ಓದಿ: 3 ಪಂದ್ಯದಲ್ಲಿ 205 ಬಾರಿಸಿದರೂ ಶುಭ್​ಮನ್ ಗಿಲ್​ಗೆ ಭಾರತದ ಬಿ ತಂಡದಲ್ಲೂ ಇಲ್ಲ ಭದ್ರ ಸ್ಥಾನ

ಶುಬ್​ಮನ್ ಗಿಲ್ ಹಾಗೂ ಸಚಿನ್ ಮಗಳು ಸಾರಾ ತೆಂಡೂಲ್ಕರ್ ನಡುವೆ ಏನೋ ನಡೆಯುತ್ತಿದೆ ಎಂಬುದು ಕೆಲವರ ಅಭಿಪ್ರಾಯ. ಕೆಲವೇ ಕೆಲವು ಕಮೆಂಟ್​ಗಳ ಮೂಲಕ ಈ ರೀತಿಯ ಊಹೆ ಸೃಷ್ಟಿ ಆಗಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಮ್ಯಾಚ್ ನಡೆಯುವಾಗ ಶುಬ್​ಮನ್ ಗಿಲ್​ ಫೀಲ್ಡಿಂಗ್ ಮಾಡುತ್ತಿದ್ದರು. ಆಗ ನೆರೆದಿದ್ದ ಪ್ರೇಕ್ಷಕರು ‘ಸಾರಾ ಸಾರಾ’ ಎಂದು ಕೂಗಿದ್ದರು. ಇದನ್ನು ವಿರಾಟ್ ಕೊಹ್ಲಿ ಎಂಜಾಯ್ ಮಾಡಿದ್ದರು. ಈ ಮೊದಲು ನಟಿ ಸಾರಾ ಅಲಿ ಖಾನ್ ಜೊತೆ ಶುಬ್​ಮನ್ ಕಾಣಿಸಿಕೊಂಡಿದ್ದ ಫೋಟೋ ವೈರಲ್ ಆಗಿ ಸಾಕಷ್ಟು ಅಚ್ಚರಿಗೆ ಕಾರಣ ಆಗಿತ್ತು.

ರಶ್ಮಿಕಾ ಮಂದಣ್ಣ ಅವರು ಈ ವರ್ಷದ ಆರಂಭದಲ್ಲೇ ಎರಡು ಯಶಸ್ಸು ಕಂಡಿದ್ದಾರೆ. ‘ವಾರಿಸು’ ಸಿನಿಮಾ ಯಶಸ್ಸು ಕಂಡಿದೆ. ತಮಿಳಿನಲ್ಲಿ ತೆರೆಗೆ ಬಂದ ಈ ಚಿತ್ರದಲ್ಲಿ ದಳಪತಿ ವಿಜಯ್​ಗೆ ಜೊತೆಯಾಗಿ ರಶ್ಮಿಕಾ ಕಾಣಿಸಿಕೊಂಡಿದ್ದಾರೆ. ‘ಮಿಷನ್ ಮಜ್ನು’ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆದುಕೊಂಡಿತು. ‘ಅನಿಮಲ್​’ ಹಾಗೂ ‘ಪುಷ್ಪ 2’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:16 am, Wed, 8 March 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?