AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಶ್ಮಿಕಾ ಮಂದಣ್ಣ ಮೇಲೆ ಕ್ರಶ್ ಇದೆ ಎಂದು ಈಗ ಉಲ್ಟಾ ಹೊಡೆದ ಕ್ರಿಕೆಟರ್ ಶುಬ್​ಮನ್ ಗಿಲ್​

Rashmika Mandanna: ‘ರಶ್ಮಿಕಾ ಮಂದಣ್ಣ ಮೇಲೆ ನನಗೆ ಕ್ರಶ್ ಇದೆ’ ಎಂದು ಶುಬ್​ಮನ್​ ಗಿಲ್ ಅವರು ಹೇಳಿಕೊಂಡಿರುವುದಾಗಿ ಇತ್ತೀಚೆಗೆ ವರದಿ ಆಗಿತ್ತು. ಇದಾದ ಬೆನ್ನಲ್ಲೇ ಟ್ರೋಲ್​ ಪೇಜ್​ಗಳು ಹಬ್ಬ ಮಾಡಿದ್ದವು.

ರಶ್ಮಿಕಾ ಮಂದಣ್ಣ ಮೇಲೆ ಕ್ರಶ್ ಇದೆ ಎಂದು ಈಗ ಉಲ್ಟಾ ಹೊಡೆದ ಕ್ರಿಕೆಟರ್ ಶುಬ್​ಮನ್ ಗಿಲ್​
ಶುಬ್​ಮನ್​ ಗಿಲ್​-ರಶ್ಮಿಕಾ ಮಂದಣ್ಣ
ರಾಜೇಶ್ ದುಗ್ಗುಮನೆ
|

Updated on:Mar 08, 2023 | 7:25 AM

Share

ಕ್ರಿಕೆಟರ್ ಶುಬ್​ಮನ್​ ಗಿಲ್  (Shubman Gill) ಕಳೆದ ಕೆಲ ಸಮಯದಿಂದ ಹುಡುಗಿಯರ ವಿಚಾರಕ್ಕೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಅವರ ಬ್ಯಾಟ್​ನಿಂದ ಶತಕ ಸಿಡಿದಷ್ಟೇ ವೇಗದಲ್ಲಿ ವದಂತಿಗಳು ಕೂಡ ಸಿಡಿಯುತ್ತಿವೆ. ಅವರ ಹೆಸರು ಸಾರಾ ತೆಂಡೂಲ್ಕರ್, ಸಾರಾ ಅಲಿ ಖಾನ್ ಜೊತೆ ತಳಕು ಹಾಕಿಕೊಳ್ಳುತ್ತಿದೆ. ಈಗ ಶುಬ್​ಮನ್ ಗಿಲ್ ಅವರ ಹೆಸರು ರಶ್ಮಿಕಾ ಜೊತೆ ಸೇರಿಕೊಂಡಿತ್ತು. ‘ರಶ್ಮಿಕಾ ಮಂದಣ್ಣ (Rashmika Mandanna) ಮೇಲೆ ಕ್ರಶ್ ಇದೆ’ ಎಂದು ಅವರು ಹೇಳಿಕೊಂಡಿರುವುದಾಗಿ ವರದಿ ಆಗಿತ್ತು. ಆದರೆ, ಈಗ ಶುಬ್​ಮನ್​ ಉಲ್ಟಾ ಹೊಡೆದಿದ್ದಾರೆ. ನಾನು ಆ ರೀತಿ ಹೇಳಿಯೇ ಇಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ. ಇದರಿಂದ ಯಾವುದು ನಿಜ ಯಾವುದು ಸುಳ್ಳು ಎಂಬ ಗೊಂದಲ ಮೂಡಿದೆ.

‘ರಶ್ಮಿಕಾ ಮಂದಣ್ಣ ಮೇಲೆ ನನಗೆ ಕ್ರಶ್ ಇದೆ’ ಎಂದು ಶುಬ್​ಮನ್​ ಗಿಲ್ ಅವರು ಹೇಳಿಕೊಂಡಿರುವುದಾಗಿ ಇತ್ತೀಚೆಗೆ ವರದಿ ಆಗಿತ್ತು. ಇದಾದ ಬೆನ್ನಲ್ಲೇ ಟ್ರೋಲ್​ ಪೇಜ್​ಗಳು ಹಬ್ಬ ಮಾಡಿದ್ದವು. ಶುಬ್​ಮನ್ ಗಿಲ್​ ಹಾಗೂ ರಶ್ಮಿಕಾ ಫೋಟೋಗಳನ್ನು ಎಡಿಟ್ ಮಾಡಿ ಪೋಸ್ಟ್ ಮಾಡೋಕೆ ಆರಂಭಿಸಿದ್ದವು. ಸಾಲು ಸಾಲು ಪೋಸ್ಟ್​ಗಳು ಸೋಶಿಯಲ್ ಮೀಡಿಯಾದಲ್ಲಿ ರಾರಾಜಿಸಿದ್ದವು. ಇದು ಶುಬ್​ಮನ್ ಗಿಲ್ ಕಣ್ಣಿಗೂ ಬಿದ್ದಿದೆ. ಅವರು ಈ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ
Image
Rashmika Mandanna: ಅವಾರ್ಡ್ ಫಂಕ್ಷನ್​ಗೆ ಚಿಕ್ಕ ಡ್ರೆಸ್ ಹಾಕಿ ಬಂದ ರಶ್ಮಿಕಾ ಮಂದಣ್ಣ; ಟ್ರೋಲ್ ಮಂದಿಗೆ ಹಬ್ಬ
Image
Rashmika Mandanna: ಮಿಲಾನ್ ಫ್ಯಾಷನ್​ ವೀಕ್​​ನಲ್ಲಿ ಬಿಟಿಎಸ್​ ನಾಯಕನ ಭೇಟಿ ಮಾಡಲಿದ್ದಾರೆ ರಶ್ಮಿಕಾ ಮಂದಣ್ಣ?
Image
Rashmika Mandanna: ಮಿಲಾನ್​ಗೆ ಹಾರುವ ಮುನ್ನ ತಮ್ಮ ಸೌಂದರ್ಯದ ಗುಟ್ಟು ರಟ್ಟು ಮಾಡಿದ ರಶ್ಮಿಕಾ ಮಂದಣ್ಣ

ಇದನ್ನೂ ಓದಿ: ರಶ್ಮಿಕಾ ಮಂದಣ್ಣ ಮೇಲಿನ ಪ್ರೀತಿ ಬಹಿರಂಗಪಡಿಸಿದ ಸ್ಟಾರ್ ಕ್ರಿಕೆಟಿಗ

ವೆಬ್​ಸೈಟ್ ಒಂದು ವರದಿ ಮಾಡಿರುವ ಪೋಸ್ಟ್​ಗೆ ಕಮೆಂಟ್ ಮಾಡಿರುವ ಶುಬ್​ಮನ್ ಗಿಲ್​, ‘ಅದು ಯಾವ ಮಾಧ್ಯಮ ಜೊತೆಗಿನ ಸಂದರ್ಶನ? ನನಗೆ ಆ ಬಗ್ಗೆ ಗೊತ್ತಿಲ್ಲ’ ಎಂದು ಗಿಲ್ ಹೇಳಿದ್ದಾರೆ. ಮೊದಲು ಹೇಳಿಕೆ ನೀಡಿ ಅದು ವೈರಲ್ ಆದ ಬಳಿಕ ಶುಬ್​ಮನ್​ ಈ ರೀತಿ ಹೇಳಿದರಾ ಎನ್ನುವ ಪ್ರಶ್ನೆಯೂ ಮೂಡಿದೆ.

ಇದನ್ನೂ ಓದಿ: 3 ಪಂದ್ಯದಲ್ಲಿ 205 ಬಾರಿಸಿದರೂ ಶುಭ್​ಮನ್ ಗಿಲ್​ಗೆ ಭಾರತದ ಬಿ ತಂಡದಲ್ಲೂ ಇಲ್ಲ ಭದ್ರ ಸ್ಥಾನ

ಶುಬ್​ಮನ್ ಗಿಲ್ ಹಾಗೂ ಸಚಿನ್ ಮಗಳು ಸಾರಾ ತೆಂಡೂಲ್ಕರ್ ನಡುವೆ ಏನೋ ನಡೆಯುತ್ತಿದೆ ಎಂಬುದು ಕೆಲವರ ಅಭಿಪ್ರಾಯ. ಕೆಲವೇ ಕೆಲವು ಕಮೆಂಟ್​ಗಳ ಮೂಲಕ ಈ ರೀತಿಯ ಊಹೆ ಸೃಷ್ಟಿ ಆಗಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಮ್ಯಾಚ್ ನಡೆಯುವಾಗ ಶುಬ್​ಮನ್ ಗಿಲ್​ ಫೀಲ್ಡಿಂಗ್ ಮಾಡುತ್ತಿದ್ದರು. ಆಗ ನೆರೆದಿದ್ದ ಪ್ರೇಕ್ಷಕರು ‘ಸಾರಾ ಸಾರಾ’ ಎಂದು ಕೂಗಿದ್ದರು. ಇದನ್ನು ವಿರಾಟ್ ಕೊಹ್ಲಿ ಎಂಜಾಯ್ ಮಾಡಿದ್ದರು. ಈ ಮೊದಲು ನಟಿ ಸಾರಾ ಅಲಿ ಖಾನ್ ಜೊತೆ ಶುಬ್​ಮನ್ ಕಾಣಿಸಿಕೊಂಡಿದ್ದ ಫೋಟೋ ವೈರಲ್ ಆಗಿ ಸಾಕಷ್ಟು ಅಚ್ಚರಿಗೆ ಕಾರಣ ಆಗಿತ್ತು.

ರಶ್ಮಿಕಾ ಮಂದಣ್ಣ ಅವರು ಈ ವರ್ಷದ ಆರಂಭದಲ್ಲೇ ಎರಡು ಯಶಸ್ಸು ಕಂಡಿದ್ದಾರೆ. ‘ವಾರಿಸು’ ಸಿನಿಮಾ ಯಶಸ್ಸು ಕಂಡಿದೆ. ತಮಿಳಿನಲ್ಲಿ ತೆರೆಗೆ ಬಂದ ಈ ಚಿತ್ರದಲ್ಲಿ ದಳಪತಿ ವಿಜಯ್​ಗೆ ಜೊತೆಯಾಗಿ ರಶ್ಮಿಕಾ ಕಾಣಿಸಿಕೊಂಡಿದ್ದಾರೆ. ‘ಮಿಷನ್ ಮಜ್ನು’ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಿ ಮೆಚ್ಚುಗೆ ಪಡೆದುಕೊಂಡಿತು. ‘ಅನಿಮಲ್​’ ಹಾಗೂ ‘ಪುಷ್ಪ 2’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:16 am, Wed, 8 March 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ