AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್​ ಖಾನ್​ ಕೆರಿಯರ್​ ನಾಶ ಮಾಡಿ ಬೀದಿಗೆ ತರುತ್ತೇನೆ; ಪ್ರತಿಜ್ಞೆ ಮಾಡಿದ ಕಮಾಲ್ ಖಾನ್​

‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್’​ ಚಿತ್ರದ ಬಗ್ಗೆ ಕೆಟ್ಟದಾಗಿ ವಿಮರ್ಶೆ ನೀಡಿದ ಆರೋಪ ಹೊರಿಸಿ ಕಮಾಲ್​ ಖಾನ್​ ವಿರುದ್ಧ ಸಲ್ಲು ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಸಲ್ಮಾನ್​ ಖಾನ್​ ಕೆರಿಯರ್​ ನಾಶ ಮಾಡಿ ಬೀದಿಗೆ ತರುತ್ತೇನೆ; ಪ್ರತಿಜ್ಞೆ ಮಾಡಿದ ಕಮಾಲ್ ಖಾನ್​
ಸಲ್ಮಾನ್​ ಖಾನ್​, ಕಮಾಲ್​ ಆರ್​. ಖಾನ್​
ರಾಜೇಶ್ ದುಗ್ಗುಮನೆ
|

Updated on:May 31, 2021 | 8:00 PM

Share

ಸಲ್ಮಾನ್​ ಖಾನ್​ ಹಾಗೂ ಕಮಾಲ್​ ಖಾನ್​ ನಡುವೆ ಹೊತ್ತಿಕೊಂಡಿರುವ ದ್ವೇಷದ ಜ್ವಾಲೆ ಸದ್ಯಕ್ಕೆ ಆರುವ ರೀತಿ ಕಾಣುತ್ತಿಲ್ಲ. ‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್’​ ಚಿತ್ರದ ಬಗ್ಗೆ ಕೆಟ್ಟದಾಗಿ ವಿಮರ್ಶೆ ನೀಡಿದ ಆರೋಪ ಹೊರಿಸಿ ಕಮಾಲ್​ ಖಾನ್​ ವಿರುದ್ಧ ಸಲ್ಲು ಮಾನನಷ್ಟ ಮೊಕದ್ದಮೆ ಹೂಡಿದ್ದರು ಎನ್ನಲಾಗಿತ್ತು. ಈಗ ಸಲ್ಲು ಕೆರಿಯರ್​ ನಾಶ ಮಾಡುವ ಪ್ರತಿಜ್ಞೆಯನ್ನು ಕಮಾಲ್​ ಮಾಡಿದ್ದಾರೆ.

ಇತ್ತೀಚೆಗೆ ಟ್ವೀಟ್​ ಒಂದನ್ನು ಮಾಡಿದ್ದ ಕಮಾಲ್​, ‘ಅವರು ಅನೇಕರ ಕೆರಿಯರ್​ ನಾಶ ಮಾಡಿದ್ದಾರೆ ಎಂದು ಕೇಳಲ್ಪಟ್ಟಿದ್ದೇನೆ. ಯಾರಾದರೂ ಅವರ ವಿರುದ್ಧ ಮಾತನಾಡಿದರೆ ಅಂಥವರ ವೃತ್ತಿಜೀವನ ಕೊನೆಯಾದಂತೆ. ಈ ಬಾರಿ ಹಾಗಲ್ಲ. ನಾನೇ ಸಲ್ಮಾನ್​ ಖಾನ್​ ಕೆರಿಯರ್​ ನಾಶ ಮಾಡುತ್ತೇನೆ ಮತ್ತು ಅವರನ್ನು ಬೀದಿಗೆ ತರುತ್ತೇನೆ’ ಎಂದು ಹೇಳಿದ್ದಾರೆ.

ಇಂದು, ಕಮಾಲ್​ ಮತ್ತೊಂದು ಟ್ವೀಟ್​ ಮಾಡಿದ್ದಾರೆ. ಬಾಲಿವುಡ್​ ಗೂಂಡಾ ನಿಮಗೆ ಫೈಟ್​ ಮಾಡುವ ತಾಕತ್ತಿದ್ದರೆ ಎದುರು ಬಂದು ಮಾಡಿ. ಸಣ್ಣಪುಟ್ಟ ಸಿಂಗರ್​ ಹಾಗೂ ಕಷ್ಟಪಡುತ್ತಿರುವ ನಟಿಯರ ಹಿಂದೆ ನಿಂತು ಹೋರಾಡ ಬೇಡಿ. ನಾನು ನಿಮ್ಮ ಕೆರಿಯರ್​ ನಾಶ ಮಾಡಿ ಟಿವಿ ಆ್ಯಕ್ಟರ್​ ಆಗಿ ಮಾಡುತ್ತೇನೆ ಎಂದು ಅವರು ಬರೆದುಕೊಂಡಿದ್ದಾರೆ.

ಇದು ಅಸಾಧ್ಯವಾದ ಮಾತು ಎಂದು ಅನೇಕರು ಹೇಳಿಕೊಂಡಿದ್ದಾರೆ. ಸಲ್ಮಾನ್​ ಖಾನ್​ ಎಂಬುದು ಬಾಲಿವುಡ್​ನಲ್ಲಿ ಬ್ರ್ಯಾಂಡ್​ ಆಗಿದೆ. ಇನ್ನು ಹಲವು ವರ್ಷ ಕಳೆದರೂ ಸಲ್ಮಾನ್​ ಖಾನ್​ ಚಿತ್ರಕ್ಕೆ ಹಣ ಹೂಡೋಕೆ ನಿರ್ಮಾಪಕರು ಮುಂದೆ ಬರುತ್ತಾರೆ. ಹೀಗಾಗಿ, ಕಮಾಲ್​ ಹಾಕುವ ಧಮ್ಕಿಗಳು ಕೆಲಸ ಮಾಡುವುದಿಲ್ಲ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಇತ್ತೀಚೆಗೆ ಟ್ವೀಟ್​ ಮಾಡಿದ್ದ ಕಮಾಲ್, ‘ಒಂದೊಮ್ಮೆ ನಿರ್ಮಾಪಕರು ಹಾಗೂ ನಟರು ತಮ್ಮ ಸಿನಿಮಾಗಳ ವಿಮರ್ಶೆ ಮಾಡಬೇಡಿ ಎಂದು ಹೇಳಿದರೆ ಅಂಥ ಸಿನಿಮಾವನ್ನು ನಾನೆಂದೂ ವಿಮರ್ಶೆ ಮಾಡಿಲ್ಲ. ಆದರೆ, ಇಂದಿನಿಂದ ಈ ವ್ಯಕ್ತಿ ನನ್ನನ್ನು ಕೇಳಿಕೊಳ್ಳಲಿ ಅಥವಾ ಕಾಲಿಗೇ ಬೀಳಲಿ. ನಾನು ಅವರ ಸಿನಿಮಾ ವಿಮರ್ಶೆ ಮಾಡಿಯೇ ಮಾಡುತ್ತೇನೆ’ ಎಂದಿದ್ದಾರೆ. ಈ ಮೂಲಕ ಸಲ್ಲು ವಿರುದ್ಧ ಕಮಾಲ್​ ಜಿದ್ದಿಗೆ ಬಿದ್ದಿದ್ದರು.

ಇದನ್ನೂ ಓದಿ: ಕಮಾಲ್​ ಖಾನ್​ ಮೇಲೆ ಸಲ್ಲು ಮಾನನಷ್ಟ ಮೊಕದ್ದಮೆ ಹಾಕಲು ರಾಧೆ ವಿಮರ್ಶೆ ಕಾರಣವಲ್ಲ; ಮತ್ತೇನು?

 

Published On - 7:46 pm, Mon, 31 May 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!