AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್​ ಖಾನ್​ ಕೆರಿಯರ್​ ನಾಶ ಮಾಡಿ ಬೀದಿಗೆ ತರುತ್ತೇನೆ; ಪ್ರತಿಜ್ಞೆ ಮಾಡಿದ ಕಮಾಲ್ ಖಾನ್​

‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್’​ ಚಿತ್ರದ ಬಗ್ಗೆ ಕೆಟ್ಟದಾಗಿ ವಿಮರ್ಶೆ ನೀಡಿದ ಆರೋಪ ಹೊರಿಸಿ ಕಮಾಲ್​ ಖಾನ್​ ವಿರುದ್ಧ ಸಲ್ಲು ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಸಲ್ಮಾನ್​ ಖಾನ್​ ಕೆರಿಯರ್​ ನಾಶ ಮಾಡಿ ಬೀದಿಗೆ ತರುತ್ತೇನೆ; ಪ್ರತಿಜ್ಞೆ ಮಾಡಿದ ಕಮಾಲ್ ಖಾನ್​
ಸಲ್ಮಾನ್​ ಖಾನ್​, ಕಮಾಲ್​ ಆರ್​. ಖಾನ್​
ರಾಜೇಶ್ ದುಗ್ಗುಮನೆ
|

Updated on:May 31, 2021 | 8:00 PM

Share

ಸಲ್ಮಾನ್​ ಖಾನ್​ ಹಾಗೂ ಕಮಾಲ್​ ಖಾನ್​ ನಡುವೆ ಹೊತ್ತಿಕೊಂಡಿರುವ ದ್ವೇಷದ ಜ್ವಾಲೆ ಸದ್ಯಕ್ಕೆ ಆರುವ ರೀತಿ ಕಾಣುತ್ತಿಲ್ಲ. ‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್’​ ಚಿತ್ರದ ಬಗ್ಗೆ ಕೆಟ್ಟದಾಗಿ ವಿಮರ್ಶೆ ನೀಡಿದ ಆರೋಪ ಹೊರಿಸಿ ಕಮಾಲ್​ ಖಾನ್​ ವಿರುದ್ಧ ಸಲ್ಲು ಮಾನನಷ್ಟ ಮೊಕದ್ದಮೆ ಹೂಡಿದ್ದರು ಎನ್ನಲಾಗಿತ್ತು. ಈಗ ಸಲ್ಲು ಕೆರಿಯರ್​ ನಾಶ ಮಾಡುವ ಪ್ರತಿಜ್ಞೆಯನ್ನು ಕಮಾಲ್​ ಮಾಡಿದ್ದಾರೆ.

ಇತ್ತೀಚೆಗೆ ಟ್ವೀಟ್​ ಒಂದನ್ನು ಮಾಡಿದ್ದ ಕಮಾಲ್​, ‘ಅವರು ಅನೇಕರ ಕೆರಿಯರ್​ ನಾಶ ಮಾಡಿದ್ದಾರೆ ಎಂದು ಕೇಳಲ್ಪಟ್ಟಿದ್ದೇನೆ. ಯಾರಾದರೂ ಅವರ ವಿರುದ್ಧ ಮಾತನಾಡಿದರೆ ಅಂಥವರ ವೃತ್ತಿಜೀವನ ಕೊನೆಯಾದಂತೆ. ಈ ಬಾರಿ ಹಾಗಲ್ಲ. ನಾನೇ ಸಲ್ಮಾನ್​ ಖಾನ್​ ಕೆರಿಯರ್​ ನಾಶ ಮಾಡುತ್ತೇನೆ ಮತ್ತು ಅವರನ್ನು ಬೀದಿಗೆ ತರುತ್ತೇನೆ’ ಎಂದು ಹೇಳಿದ್ದಾರೆ.

ಇಂದು, ಕಮಾಲ್​ ಮತ್ತೊಂದು ಟ್ವೀಟ್​ ಮಾಡಿದ್ದಾರೆ. ಬಾಲಿವುಡ್​ ಗೂಂಡಾ ನಿಮಗೆ ಫೈಟ್​ ಮಾಡುವ ತಾಕತ್ತಿದ್ದರೆ ಎದುರು ಬಂದು ಮಾಡಿ. ಸಣ್ಣಪುಟ್ಟ ಸಿಂಗರ್​ ಹಾಗೂ ಕಷ್ಟಪಡುತ್ತಿರುವ ನಟಿಯರ ಹಿಂದೆ ನಿಂತು ಹೋರಾಡ ಬೇಡಿ. ನಾನು ನಿಮ್ಮ ಕೆರಿಯರ್​ ನಾಶ ಮಾಡಿ ಟಿವಿ ಆ್ಯಕ್ಟರ್​ ಆಗಿ ಮಾಡುತ್ತೇನೆ ಎಂದು ಅವರು ಬರೆದುಕೊಂಡಿದ್ದಾರೆ.

ಇದು ಅಸಾಧ್ಯವಾದ ಮಾತು ಎಂದು ಅನೇಕರು ಹೇಳಿಕೊಂಡಿದ್ದಾರೆ. ಸಲ್ಮಾನ್​ ಖಾನ್​ ಎಂಬುದು ಬಾಲಿವುಡ್​ನಲ್ಲಿ ಬ್ರ್ಯಾಂಡ್​ ಆಗಿದೆ. ಇನ್ನು ಹಲವು ವರ್ಷ ಕಳೆದರೂ ಸಲ್ಮಾನ್​ ಖಾನ್​ ಚಿತ್ರಕ್ಕೆ ಹಣ ಹೂಡೋಕೆ ನಿರ್ಮಾಪಕರು ಮುಂದೆ ಬರುತ್ತಾರೆ. ಹೀಗಾಗಿ, ಕಮಾಲ್​ ಹಾಕುವ ಧಮ್ಕಿಗಳು ಕೆಲಸ ಮಾಡುವುದಿಲ್ಲ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಇತ್ತೀಚೆಗೆ ಟ್ವೀಟ್​ ಮಾಡಿದ್ದ ಕಮಾಲ್, ‘ಒಂದೊಮ್ಮೆ ನಿರ್ಮಾಪಕರು ಹಾಗೂ ನಟರು ತಮ್ಮ ಸಿನಿಮಾಗಳ ವಿಮರ್ಶೆ ಮಾಡಬೇಡಿ ಎಂದು ಹೇಳಿದರೆ ಅಂಥ ಸಿನಿಮಾವನ್ನು ನಾನೆಂದೂ ವಿಮರ್ಶೆ ಮಾಡಿಲ್ಲ. ಆದರೆ, ಇಂದಿನಿಂದ ಈ ವ್ಯಕ್ತಿ ನನ್ನನ್ನು ಕೇಳಿಕೊಳ್ಳಲಿ ಅಥವಾ ಕಾಲಿಗೇ ಬೀಳಲಿ. ನಾನು ಅವರ ಸಿನಿಮಾ ವಿಮರ್ಶೆ ಮಾಡಿಯೇ ಮಾಡುತ್ತೇನೆ’ ಎಂದಿದ್ದಾರೆ. ಈ ಮೂಲಕ ಸಲ್ಲು ವಿರುದ್ಧ ಕಮಾಲ್​ ಜಿದ್ದಿಗೆ ಬಿದ್ದಿದ್ದರು.

ಇದನ್ನೂ ಓದಿ: ಕಮಾಲ್​ ಖಾನ್​ ಮೇಲೆ ಸಲ್ಲು ಮಾನನಷ್ಟ ಮೊಕದ್ದಮೆ ಹಾಕಲು ರಾಧೆ ವಿಮರ್ಶೆ ಕಾರಣವಲ್ಲ; ಮತ್ತೇನು?

 

Published On - 7:46 pm, Mon, 31 May 21

ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು
ನಿರ್ಮಾಣವಾಗುತ್ತಿರುವ ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು