AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್​ ಖಾನ್​ ಕೆರಿಯರ್​ ನಾಶ ಮಾಡಿ ಬೀದಿಗೆ ತರುತ್ತೇನೆ; ಪ್ರತಿಜ್ಞೆ ಮಾಡಿದ ಕಮಾಲ್ ಖಾನ್​

‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್’​ ಚಿತ್ರದ ಬಗ್ಗೆ ಕೆಟ್ಟದಾಗಿ ವಿಮರ್ಶೆ ನೀಡಿದ ಆರೋಪ ಹೊರಿಸಿ ಕಮಾಲ್​ ಖಾನ್​ ವಿರುದ್ಧ ಸಲ್ಲು ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಸಲ್ಮಾನ್​ ಖಾನ್​ ಕೆರಿಯರ್​ ನಾಶ ಮಾಡಿ ಬೀದಿಗೆ ತರುತ್ತೇನೆ; ಪ್ರತಿಜ್ಞೆ ಮಾಡಿದ ಕಮಾಲ್ ಖಾನ್​
ಸಲ್ಮಾನ್​ ಖಾನ್​, ಕಮಾಲ್​ ಆರ್​. ಖಾನ್​
ರಾಜೇಶ್ ದುಗ್ಗುಮನೆ
|

Updated on:May 31, 2021 | 8:00 PM

Share

ಸಲ್ಮಾನ್​ ಖಾನ್​ ಹಾಗೂ ಕಮಾಲ್​ ಖಾನ್​ ನಡುವೆ ಹೊತ್ತಿಕೊಂಡಿರುವ ದ್ವೇಷದ ಜ್ವಾಲೆ ಸದ್ಯಕ್ಕೆ ಆರುವ ರೀತಿ ಕಾಣುತ್ತಿಲ್ಲ. ‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್’​ ಚಿತ್ರದ ಬಗ್ಗೆ ಕೆಟ್ಟದಾಗಿ ವಿಮರ್ಶೆ ನೀಡಿದ ಆರೋಪ ಹೊರಿಸಿ ಕಮಾಲ್​ ಖಾನ್​ ವಿರುದ್ಧ ಸಲ್ಲು ಮಾನನಷ್ಟ ಮೊಕದ್ದಮೆ ಹೂಡಿದ್ದರು ಎನ್ನಲಾಗಿತ್ತು. ಈಗ ಸಲ್ಲು ಕೆರಿಯರ್​ ನಾಶ ಮಾಡುವ ಪ್ರತಿಜ್ಞೆಯನ್ನು ಕಮಾಲ್​ ಮಾಡಿದ್ದಾರೆ.

ಇತ್ತೀಚೆಗೆ ಟ್ವೀಟ್​ ಒಂದನ್ನು ಮಾಡಿದ್ದ ಕಮಾಲ್​, ‘ಅವರು ಅನೇಕರ ಕೆರಿಯರ್​ ನಾಶ ಮಾಡಿದ್ದಾರೆ ಎಂದು ಕೇಳಲ್ಪಟ್ಟಿದ್ದೇನೆ. ಯಾರಾದರೂ ಅವರ ವಿರುದ್ಧ ಮಾತನಾಡಿದರೆ ಅಂಥವರ ವೃತ್ತಿಜೀವನ ಕೊನೆಯಾದಂತೆ. ಈ ಬಾರಿ ಹಾಗಲ್ಲ. ನಾನೇ ಸಲ್ಮಾನ್​ ಖಾನ್​ ಕೆರಿಯರ್​ ನಾಶ ಮಾಡುತ್ತೇನೆ ಮತ್ತು ಅವರನ್ನು ಬೀದಿಗೆ ತರುತ್ತೇನೆ’ ಎಂದು ಹೇಳಿದ್ದಾರೆ.

ಇಂದು, ಕಮಾಲ್​ ಮತ್ತೊಂದು ಟ್ವೀಟ್​ ಮಾಡಿದ್ದಾರೆ. ಬಾಲಿವುಡ್​ ಗೂಂಡಾ ನಿಮಗೆ ಫೈಟ್​ ಮಾಡುವ ತಾಕತ್ತಿದ್ದರೆ ಎದುರು ಬಂದು ಮಾಡಿ. ಸಣ್ಣಪುಟ್ಟ ಸಿಂಗರ್​ ಹಾಗೂ ಕಷ್ಟಪಡುತ್ತಿರುವ ನಟಿಯರ ಹಿಂದೆ ನಿಂತು ಹೋರಾಡ ಬೇಡಿ. ನಾನು ನಿಮ್ಮ ಕೆರಿಯರ್​ ನಾಶ ಮಾಡಿ ಟಿವಿ ಆ್ಯಕ್ಟರ್​ ಆಗಿ ಮಾಡುತ್ತೇನೆ ಎಂದು ಅವರು ಬರೆದುಕೊಂಡಿದ್ದಾರೆ.

ಇದು ಅಸಾಧ್ಯವಾದ ಮಾತು ಎಂದು ಅನೇಕರು ಹೇಳಿಕೊಂಡಿದ್ದಾರೆ. ಸಲ್ಮಾನ್​ ಖಾನ್​ ಎಂಬುದು ಬಾಲಿವುಡ್​ನಲ್ಲಿ ಬ್ರ್ಯಾಂಡ್​ ಆಗಿದೆ. ಇನ್ನು ಹಲವು ವರ್ಷ ಕಳೆದರೂ ಸಲ್ಮಾನ್​ ಖಾನ್​ ಚಿತ್ರಕ್ಕೆ ಹಣ ಹೂಡೋಕೆ ನಿರ್ಮಾಪಕರು ಮುಂದೆ ಬರುತ್ತಾರೆ. ಹೀಗಾಗಿ, ಕಮಾಲ್​ ಹಾಕುವ ಧಮ್ಕಿಗಳು ಕೆಲಸ ಮಾಡುವುದಿಲ್ಲ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಇತ್ತೀಚೆಗೆ ಟ್ವೀಟ್​ ಮಾಡಿದ್ದ ಕಮಾಲ್, ‘ಒಂದೊಮ್ಮೆ ನಿರ್ಮಾಪಕರು ಹಾಗೂ ನಟರು ತಮ್ಮ ಸಿನಿಮಾಗಳ ವಿಮರ್ಶೆ ಮಾಡಬೇಡಿ ಎಂದು ಹೇಳಿದರೆ ಅಂಥ ಸಿನಿಮಾವನ್ನು ನಾನೆಂದೂ ವಿಮರ್ಶೆ ಮಾಡಿಲ್ಲ. ಆದರೆ, ಇಂದಿನಿಂದ ಈ ವ್ಯಕ್ತಿ ನನ್ನನ್ನು ಕೇಳಿಕೊಳ್ಳಲಿ ಅಥವಾ ಕಾಲಿಗೇ ಬೀಳಲಿ. ನಾನು ಅವರ ಸಿನಿಮಾ ವಿಮರ್ಶೆ ಮಾಡಿಯೇ ಮಾಡುತ್ತೇನೆ’ ಎಂದಿದ್ದಾರೆ. ಈ ಮೂಲಕ ಸಲ್ಲು ವಿರುದ್ಧ ಕಮಾಲ್​ ಜಿದ್ದಿಗೆ ಬಿದ್ದಿದ್ದರು.

ಇದನ್ನೂ ಓದಿ: ಕಮಾಲ್​ ಖಾನ್​ ಮೇಲೆ ಸಲ್ಲು ಮಾನನಷ್ಟ ಮೊಕದ್ದಮೆ ಹಾಕಲು ರಾಧೆ ವಿಮರ್ಶೆ ಕಾರಣವಲ್ಲ; ಮತ್ತೇನು?

 

Published On - 7:46 pm, Mon, 31 May 21

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?