AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್​ ಖಾನ್​ ಕೆರಿಯರ್​ ನಾಶ ಮಾಡಿ ಬೀದಿಗೆ ತರುತ್ತೇನೆ; ಪ್ರತಿಜ್ಞೆ ಮಾಡಿದ ಕಮಾಲ್ ಖಾನ್​

‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್’​ ಚಿತ್ರದ ಬಗ್ಗೆ ಕೆಟ್ಟದಾಗಿ ವಿಮರ್ಶೆ ನೀಡಿದ ಆರೋಪ ಹೊರಿಸಿ ಕಮಾಲ್​ ಖಾನ್​ ವಿರುದ್ಧ ಸಲ್ಲು ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಸಲ್ಮಾನ್​ ಖಾನ್​ ಕೆರಿಯರ್​ ನಾಶ ಮಾಡಿ ಬೀದಿಗೆ ತರುತ್ತೇನೆ; ಪ್ರತಿಜ್ಞೆ ಮಾಡಿದ ಕಮಾಲ್ ಖಾನ್​
ಸಲ್ಮಾನ್​ ಖಾನ್​, ಕಮಾಲ್​ ಆರ್​. ಖಾನ್​
ರಾಜೇಶ್ ದುಗ್ಗುಮನೆ
|

Updated on:May 31, 2021 | 8:00 PM

Share

ಸಲ್ಮಾನ್​ ಖಾನ್​ ಹಾಗೂ ಕಮಾಲ್​ ಖಾನ್​ ನಡುವೆ ಹೊತ್ತಿಕೊಂಡಿರುವ ದ್ವೇಷದ ಜ್ವಾಲೆ ಸದ್ಯಕ್ಕೆ ಆರುವ ರೀತಿ ಕಾಣುತ್ತಿಲ್ಲ. ‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್’​ ಚಿತ್ರದ ಬಗ್ಗೆ ಕೆಟ್ಟದಾಗಿ ವಿಮರ್ಶೆ ನೀಡಿದ ಆರೋಪ ಹೊರಿಸಿ ಕಮಾಲ್​ ಖಾನ್​ ವಿರುದ್ಧ ಸಲ್ಲು ಮಾನನಷ್ಟ ಮೊಕದ್ದಮೆ ಹೂಡಿದ್ದರು ಎನ್ನಲಾಗಿತ್ತು. ಈಗ ಸಲ್ಲು ಕೆರಿಯರ್​ ನಾಶ ಮಾಡುವ ಪ್ರತಿಜ್ಞೆಯನ್ನು ಕಮಾಲ್​ ಮಾಡಿದ್ದಾರೆ.

ಇತ್ತೀಚೆಗೆ ಟ್ವೀಟ್​ ಒಂದನ್ನು ಮಾಡಿದ್ದ ಕಮಾಲ್​, ‘ಅವರು ಅನೇಕರ ಕೆರಿಯರ್​ ನಾಶ ಮಾಡಿದ್ದಾರೆ ಎಂದು ಕೇಳಲ್ಪಟ್ಟಿದ್ದೇನೆ. ಯಾರಾದರೂ ಅವರ ವಿರುದ್ಧ ಮಾತನಾಡಿದರೆ ಅಂಥವರ ವೃತ್ತಿಜೀವನ ಕೊನೆಯಾದಂತೆ. ಈ ಬಾರಿ ಹಾಗಲ್ಲ. ನಾನೇ ಸಲ್ಮಾನ್​ ಖಾನ್​ ಕೆರಿಯರ್​ ನಾಶ ಮಾಡುತ್ತೇನೆ ಮತ್ತು ಅವರನ್ನು ಬೀದಿಗೆ ತರುತ್ತೇನೆ’ ಎಂದು ಹೇಳಿದ್ದಾರೆ.

ಇಂದು, ಕಮಾಲ್​ ಮತ್ತೊಂದು ಟ್ವೀಟ್​ ಮಾಡಿದ್ದಾರೆ. ಬಾಲಿವುಡ್​ ಗೂಂಡಾ ನಿಮಗೆ ಫೈಟ್​ ಮಾಡುವ ತಾಕತ್ತಿದ್ದರೆ ಎದುರು ಬಂದು ಮಾಡಿ. ಸಣ್ಣಪುಟ್ಟ ಸಿಂಗರ್​ ಹಾಗೂ ಕಷ್ಟಪಡುತ್ತಿರುವ ನಟಿಯರ ಹಿಂದೆ ನಿಂತು ಹೋರಾಡ ಬೇಡಿ. ನಾನು ನಿಮ್ಮ ಕೆರಿಯರ್​ ನಾಶ ಮಾಡಿ ಟಿವಿ ಆ್ಯಕ್ಟರ್​ ಆಗಿ ಮಾಡುತ್ತೇನೆ ಎಂದು ಅವರು ಬರೆದುಕೊಂಡಿದ್ದಾರೆ.

ಇದು ಅಸಾಧ್ಯವಾದ ಮಾತು ಎಂದು ಅನೇಕರು ಹೇಳಿಕೊಂಡಿದ್ದಾರೆ. ಸಲ್ಮಾನ್​ ಖಾನ್​ ಎಂಬುದು ಬಾಲಿವುಡ್​ನಲ್ಲಿ ಬ್ರ್ಯಾಂಡ್​ ಆಗಿದೆ. ಇನ್ನು ಹಲವು ವರ್ಷ ಕಳೆದರೂ ಸಲ್ಮಾನ್​ ಖಾನ್​ ಚಿತ್ರಕ್ಕೆ ಹಣ ಹೂಡೋಕೆ ನಿರ್ಮಾಪಕರು ಮುಂದೆ ಬರುತ್ತಾರೆ. ಹೀಗಾಗಿ, ಕಮಾಲ್​ ಹಾಕುವ ಧಮ್ಕಿಗಳು ಕೆಲಸ ಮಾಡುವುದಿಲ್ಲ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಇತ್ತೀಚೆಗೆ ಟ್ವೀಟ್​ ಮಾಡಿದ್ದ ಕಮಾಲ್, ‘ಒಂದೊಮ್ಮೆ ನಿರ್ಮಾಪಕರು ಹಾಗೂ ನಟರು ತಮ್ಮ ಸಿನಿಮಾಗಳ ವಿಮರ್ಶೆ ಮಾಡಬೇಡಿ ಎಂದು ಹೇಳಿದರೆ ಅಂಥ ಸಿನಿಮಾವನ್ನು ನಾನೆಂದೂ ವಿಮರ್ಶೆ ಮಾಡಿಲ್ಲ. ಆದರೆ, ಇಂದಿನಿಂದ ಈ ವ್ಯಕ್ತಿ ನನ್ನನ್ನು ಕೇಳಿಕೊಳ್ಳಲಿ ಅಥವಾ ಕಾಲಿಗೇ ಬೀಳಲಿ. ನಾನು ಅವರ ಸಿನಿಮಾ ವಿಮರ್ಶೆ ಮಾಡಿಯೇ ಮಾಡುತ್ತೇನೆ’ ಎಂದಿದ್ದಾರೆ. ಈ ಮೂಲಕ ಸಲ್ಲು ವಿರುದ್ಧ ಕಮಾಲ್​ ಜಿದ್ದಿಗೆ ಬಿದ್ದಿದ್ದರು.

ಇದನ್ನೂ ಓದಿ: ಕಮಾಲ್​ ಖಾನ್​ ಮೇಲೆ ಸಲ್ಲು ಮಾನನಷ್ಟ ಮೊಕದ್ದಮೆ ಹಾಕಲು ರಾಧೆ ವಿಮರ್ಶೆ ಕಾರಣವಲ್ಲ; ಮತ್ತೇನು?

 

Published On - 7:46 pm, Mon, 31 May 21

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ