AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ್-ತ್ರಿಶಾ ಒಂದೇ ಹೋಟೆಲ್​​​ನಲ್ಲಿ ಇದ್ದಿದ್ದ ನೋಡಿದ ಆ ವ್ಯಕ್ತಿ; ಮುಂದೇನಾಯ್ತು?

ದಳಪತಿ ವಿಜಯ್ ಹಾಗೂ ತ್ರಿಷಾ ನಡುವೆ ಅಫೇರ್ ಕುರಿತು ಬಿಸಿಬಿಸಿ ಚರ್ಚೆ ನಡೆಯುತ್ತಿದೆ. ವಿಜಯ್ ಪತ್ನಿ ಸಂಗೀತಾ ಅವರ ಆರೋಪದ ಬೆನ್ನಲ್ಲೇ, ವಿಜಯ್-ತ್ರಿಷಾ ಒಟ್ಟಿಗೆ ಕಾಣಿಸಿಕೊಂಡು ವದಂತಿಗಳನ್ನು ಮತ್ತಷ್ಟು ಹೆಚ್ಚಿಸಿದ್ದಾರೆ. ರಾಜಕೀಯ ವಿಮರ್ಶಕ ತಿರುಚಿ ಸೂರ್ಯ ಅವರು ವಿಜಯ್-ತ್ರಿಷಾ ಅವರನ್ನು ಹೋಟೆಲ್‌ನಲ್ಲಿ ನೋಡಿದ್ದೇನೆಂದು ಹೇಳಿದ್ದಾರೆ.

ವಿಜಯ್-ತ್ರಿಶಾ ಒಂದೇ ಹೋಟೆಲ್​​​ನಲ್ಲಿ ಇದ್ದಿದ್ದ ನೋಡಿದ ಆ ವ್ಯಕ್ತಿ; ಮುಂದೇನಾಯ್ತು?
ವಿಜಯ್-ತ್ರಿಷಾ
ರಾಜೇಶ್ ದುಗ್ಗುಮನೆ
|

Updated on:Mar 06, 2026 | 1:04 PM

Share

ದಳಪತಿ ವಿಜಯ್ ಹಾಗೂ ತ್ರಿಷಾ (Trisha) ನಡುವೆ ಸಂಬಂಧ ಇದೆ, ಈ ಕಾರಣದಿಂದ ವಿಜಯ್ ಅವರು ಪತ್ನಿಯಿಂದ ದೂರ ಆಗುತ್ತಿದ್ದಾರೆ ಎಂಬ ಮಾತು ಜೋರಾಗಿದೆ. ವಿಜಯ್ ಪತ್ನಿ ಸಂಗೀತಾ ಅವರು ಖುದ್ದು, ‘ವಿಜಯ್​ಗೆ ನಟಿಯ ಜೊತೆ ಸಂಬಂಧ ಇದೆ’ ಎಂದು ಆರೋಪಿಸಿದ್ದಾರೆ. ಈ ಬೆನ್ನಲ್ಲೇ ವಿಜಯ್ ಹಾಗೂ ತ್ರಿಷಾ ಅವರು ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ವಿವಾಹ ಕಾರ್ಯಕ್ರಮ ಒಂದಕ್ಕೆ, ಒಂದೇ ಕಾರಲ್ಲಿ ಇವರು ಆಗಮಿಸಿದರು. ಈ ಬೆನ್ನಲ್ಲೇ ವ್ಯಕ್ತಿಯೋರ್ವ ನೀಡಿದ ಹೇಳಿಕೆ ಚರ್ಚೆಗೆ ಕಾರಣ ಆಗಿದೆ.

ರಾಜಕೀಯ ವಿಮರ್ಶಕ ತಿರುಚಿ ಸೂರ್ಯ ಅವರು ಸಂದರ್ಶನ ಒಂದರಲ್ಲಿ ಮಾತನಾಡಿದ್ದರು. ಅವರು ಹೋಟೆಲ್ ಒಂದರಲ್ಲಿ ತ್ರಿಷಾ ಅವರನ್ನು ನೋಡಿದ್ದಾರಂತೆ. ಅವರ ಹೇಳಿಕೆಯನ್ನು ಚರ್ಚೆಯನ್ನು ಹುಟ್ಟುಹಾಕಿದೆ. ಹೋಟೆಲ್​​ನಲ್ಲಿ ನೋಡಿದ ಬಳಿಕ ಅವರು ಸುಮ್ಮನೆ ಇರಲಿಲ್ಲ. ಅದನ್ನು ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಅಲ್ಲದೆ, ಚಾಲೆಂಜ್ ಕೂಡ ಮಾಡಿದ್ದಾರೆ.

‘ನಾನು ವಿಜಯ್ ಹಾಗೂ ತ್ರಿಷಾ ಅವರನ್ನು ಒಂದೇ ಹೋಟೆಲ್​​​ನಲ್ಲಿ ನೋಡಿದ್ದೇನೆ. ಈ ಹೇಳಿಕೆ ಬಳಿಕ ವಿಜಯ್ ಹಾಗೂ ತ್ರಿಷಾ ಅವರು ನನ್ನ ವಿರುದ್ಧ ಮಾನ ನಷ್ಟ ಮೊಕದ್ದಮೆ ಹೂಡಬಹುದು. ನಾನು ಅವರನ್ನು ಎಲ್ಲಿ ನೋಡಿದ್ದೇನೆ ಎಂಬುದಕ್ಕೆ ನನ್ನ ಬಳಿ ಸಾಕ್ಷಿ ಇದೆ. ನಾನು ಅದನ್ನು ಕೋರ್ಟ್​​ಗೆ ನೀಡುತ್ತೇನೆ’ ಎಂದು ಚಾಲೆಂಜ್ ಮಾಡಿದ್ದಾರೆ.

ಇದನ್ನೂ ಓದಿ: ‘ಪತ್ನಿ ಜೊತೆ ಬಂದು ಸ್ಪಷ್ಟನೆ ಕೊಡಬೇಕು, ಸಂಬಂಧ ಇಟ್ಟುಕೊಂಡವರ ಜೊತೆಯಲ್ಲ’ ಸಾಮಾನ್ಯವಾಗಿ ಈ ರೀತಿಯ ಅಫೇರ್ ವಿಷಯ ಪ್ರಸ್ತಾಪ ಆದಾಗ ಆ ನಟ-ನಟಿ ದೂರ ಇರಲು ಪ್ರಯತ್ನಿಸುತ್ತಾರೆ. ಸಾರ್ವಜನಿಕವಾಗಿ ಒಟ್ಟಿಗೆ ಕಾಣಿಸಿಕೊಳ್ಳುವುದನ್ನು ತಪ್ಪಿಸಿಕೊಳ್ಳುತ್ತಾರೆ. ಆದರೆ, ವಿಜಯ್ ಹಾಗೂ ತ್ರಿಷಾ ಆ ರೀತಿ ಮಾಡಿಲ್ಲ. ಇವರು ಒಟ್ಟಿಗೆ ಕಾಣಿಸಿಕೊಳ್ಳುವುದರ ಮೂಲಕ ಚರ್ಚೆ ಹುಟ್ಟುಹಾಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:00 pm, Fri, 6 March 26

Follow Us
ಕರ್ನಾಟಕದ ಒಟ್ಟು ಸಾಲ ಎಷ್ಟು? ಬಜೆಟ್​ನಲ್ಲಿ ಸಿಎಂ ಕೊಟ್ಟ ಮಾಹಿತಿ ಇಲ್ಲಿದೆ
ಕರ್ನಾಟಕದ ಒಟ್ಟು ಸಾಲ ಎಷ್ಟು? ಬಜೆಟ್​ನಲ್ಲಿ ಸಿಎಂ ಕೊಟ್ಟ ಮಾಹಿತಿ ಇಲ್ಲಿದೆ
ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಗುಡ್​​​​​ ನ್ಯೂಸ್
ರಾಜ್ಯ ಸರ್ಕಾರದಿಂದ ನಿರುದ್ಯೋಗಿಗಳಿಗೆ ಗುಡ್​​​​​ ನ್ಯೂಸ್
ದಾಖಲೆಯ 17ನೇ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ
ದಾಖಲೆಯ 17ನೇ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ
‘ಹಾಸ್ಯ ಪಾತ್ರ ಮಾಡಿಕೊಂಡಿದ್ದವನಿಗೆ ಗಂಭೀರ ಕ್ಯಾರೆಕ್ಟರ್ ಕೊಟ್ಟಿದ್ದಾರೆ’
‘ಹಾಸ್ಯ ಪಾತ್ರ ಮಾಡಿಕೊಂಡಿದ್ದವನಿಗೆ ಗಂಭೀರ ಕ್ಯಾರೆಕ್ಟರ್ ಕೊಟ್ಟಿದ್ದಾರೆ’
ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನ
ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋರಿ 2’ ಉಚಿತ ಪ್ರದರ್ಶನ
VIDEO: ಅದು ಔಟ್ ಅಲ್ಲಮ್ಮ... ಹೆಂಡ್ತಿ ಕುಣಿಯುವುದನ್ನು ತಡೆದ ಧೋನಿ
VIDEO: ಅದು ಔಟ್ ಅಲ್ಲಮ್ಮ... ಹೆಂಡ್ತಿ ಕುಣಿಯುವುದನ್ನು ತಡೆದ ಧೋನಿ
ಭಾರತದೊಂದಿಗಿನ ಸಂಬಂಧ ಹಾಳಾಗಲು ಬಿಡುವುದಿಲ್ಲ: ಅಬ್ದುಲ್ ಮಜೀದ್ ಹಕಿಮೆಲಾಹಿ
ಭಾರತದೊಂದಿಗಿನ ಸಂಬಂಧ ಹಾಳಾಗಲು ಬಿಡುವುದಿಲ್ಲ: ಅಬ್ದುಲ್ ಮಜೀದ್ ಹಕಿಮೆಲಾಹಿ
ಅತಿವೇಗವಾಗಿ ಬಂದು ಪಲ್ಟಿಯಾದ ಕ್ಯಾಂಟರ್ ಲಾರಿ, ಬೆಚ್ಚಿಬೀಳಿಸುವ ವಿಡಿಯೋ ವೈರಲ
ಅತಿವೇಗವಾಗಿ ಬಂದು ಪಲ್ಟಿಯಾದ ಕ್ಯಾಂಟರ್ ಲಾರಿ, ಬೆಚ್ಚಿಬೀಳಿಸುವ ವಿಡಿಯೋ ವೈರಲ
ಅಯ್ಯಯ್ಯೋ.. ಕುರ್ಚಿಯಿಂದ ಜಾರಿ ಬಿದ್ದ ನಾಗ ಚೈತನ್ಯ; ಪೆಟ್ಟಾಯ್ತಾ?
ಅಯ್ಯಯ್ಯೋ.. ಕುರ್ಚಿಯಿಂದ ಜಾರಿ ಬಿದ್ದ ನಾಗ ಚೈತನ್ಯ; ಪೆಟ್ಟಾಯ್ತಾ?
ಮಹಿಳೆಯರು ಶನಿವಾರದಂದು ತವರು ಮನೆಗೆ ಬರಬಹುದಾ?
ಮಹಿಳೆಯರು ಶನಿವಾರದಂದು ತವರು ಮನೆಗೆ ಬರಬಹುದಾ?