Vijayendra Prasad: ‘ನಾನು ಕಥೆ ಕದಿಯುತ್ತೇನೆ’; ಯಶಸ್ಸಿನ ರಹಸ್ಯ ಬಿಚ್ಚಿಟ್ಟ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್​

IFFI Goa: ಸಿನಿಮಾ ಕ್ಷೇತ್ರದಲ್ಲಿ ಬರಹಗಾರರಾಗಿ ತೊಡಗಿಸಿಕೊಳ್ಳಬೇಕು ಎಂಬ ಆಸೆ ಅನೇಕರಿಗೆ ಇದೆ. ಅಂಥವರಿಗೆಲ್ಲ ವಿಜಯೇಂದ್ರ ಪ್ರಸಾದ್​ ಅವರು ಸ್ಫೂರ್ತಿ ಆಗಿದ್ದಾರೆ.

Vijayendra Prasad: ‘ನಾನು ಕಥೆ ಕದಿಯುತ್ತೇನೆ’; ಯಶಸ್ಸಿನ ರಹಸ್ಯ ಬಿಚ್ಚಿಟ್ಟ ರಾಜಮೌಳಿ ತಂದೆ ವಿಜಯೇಂದ್ರ ಪ್ರಸಾದ್​
ವಿಜಯೇಂದ್ರ ಪ್ರಸಾದ್
Follow us
| Updated By: ಮದನ್​ ಕುಮಾರ್​

Updated on: Nov 22, 2022 | 10:50 AM

ಖ್ಯಾತ ನಿರ್ದೇಶಕ ರಾಜಮೌಳಿ (SS Rajamouli) ಅವರ ಯಶಸ್ಸಿನ ಹಿಂದೆ ಅವರ ಕುಟುಂಬದವರ ಕೊಡುಗೆ ಸಾಕಷ್ಟಿದೆ. ಅದರಲ್ಲೂ ಅವರ ತಂದೆ ವಿಜಯೇಂದ್ರ ಪ್ರಸಾದ್​ ಅವರು ಬರೆದ ಕಥೆಗಳಿಂದಾಗಿ ಹಲವು ಚಿತ್ರಗಳು ಸೂಪರ್​ ಹಿಟ್​ ಆಗಿವೆ. ‘ಬಾಹುಬಲಿ’, ‘ಮಗಧೀರ’, ‘ಸಿಂಹಾದ್ರಿ’, ‘ವಿಕ್ರಮಾರ್ಕುಡು’, ‘ಆರ್​ಆರ್​ಆರ್​’ (RRR) ಸೇರಿದಂತೆ ಹಲವು ಚಿತ್ರಗಳಿಗೆ ಕಥೆ ಬರೆದಿದ್ದು ವಿಜಯೇಂದ್ರ ಪ್ರಸಾದ್​ ಅವರೇ. ಸಲ್ಮಾನ್​ ಖಾನ್​ ನಟನೆಯ ಸೂಪರ್​ ಹಿಟ್​ ಚಿತ್ರ ‘ಬಜರಂಗಿ ಭಾಯಿಜಾನ್​’ ಚಿತ್ರದ ಕಥೆ ಕೂಡ ವಿಜಯೇಂದ್ರ ಪ್ರಸಾದ್​ (Vijayendra Prasad) ಅವರ ಬತ್ತಳಿಕೆಯಿಂದ ಬಂದಿದ್ದು. ಇಂಥ ರೂಚಕ ಕಥೆಗಳ ಸೀಕ್ರೆಟ್​ ಏನು ಎಂಬುದನ್ನು ಅವರು ತಿಳಿಸಿದ್ದಾರೆ. ‘ನಾನು ಕಥೆ ಕದಿಯುತ್ತೇನೆ’ ಎಂದು ಅವರು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಗೋವಾದಲ್ಲಿ ನ.20ರಿಂದ ಅಂತಾರಾಷ್ಟ್ರೀಯ ಭಾರತೀಯ ಸಿನಿಮೋತ್ಸವ ನಡೆಯುತ್ತಿದೆ. ಇದರಲ್ಲಿನ ಒಂದು ಸಂವಾದ ಕಾರ್ಯಕ್ರಮದಲ್ಲಿ ವಿಜಯೇಂದ್ರ ಪ್ರಸಾದ್​ ಅವರು ಭಾಗವಹಿಸಿದ್ದಾರೆ. ಈ ವೇಳೆ ಅವರು ಸಿನಿಮಾಗಾಗಿ ಕಥೆ ಬರೆಯುವ ಪ್ರಕ್ರಿಯೆಯ ಬಗ್ಗೆ ಮಾತನಾಡಿದ್ದಾರೆ.

‘ನಾನು ಕಥೆ ಬರೆಯುವುದಿಲ್ಲ. ಕಥೆ ಕದಿಯುತ್ತೇನೆ. ನಿಮ್ಮ ನಡುವೆ ಇರುವ ಕಥೆಯನ್ನೇ ಕದಿಯುತ್ತೇನೆ. ರಾಮಾಯಣ, ಮಹಾಭಾರತದಂತಹ ಮಹಾಕಾವ್ಯಗಳಾಗಿರಲಿ ಅಥವಾ ನಿಜ ಜೀವನದ ಘಟನೆಗಳೇ ಆಗಿರಲಿ.. ಎಲ್ಲ ಕಡೆಗಳಲ್ಲಿ ಕಥೆಗಳಿವೆ. ಅದನ್ನು ನೀವು ನಿಮ್ಮದೇ ಆದಂತಹ ವಿಶೇಷ ಶೈಲಿಯಲ್ಲಿ ಪ್ರಸ್ತುತ ಪಡಿಸಬೇಕು’ ಎಂದು ವಿಜಯೇಂದ್ರ ಪ್ರಸಾದ್​ ಹೇಳಿದ್ದಾರೆ.

ಇದನ್ನೂ ಓದಿ
Image
‘ಆರ್​ಆರ್​ಆರ್​’ ಸಿನಿಮಾ ಹೊಸ ದಾಖಲೆ; ಹಾಲಿವುಡ್ ಅವಾರ್ಡ್​ ಕಾರ್ಯಕ್ರಮದಲ್ಲಿ ರನ್ನರ್ ಅಪ್ ಆದ ರಾಜಮೌಳಿ ಚಿತ್ರ
Image
ಪವನ್​​ ಕಲ್ಯಾಣ್​ ಜತೆ ಸಿನಿಮಾ ಮಾಡಲಿದ್ದಾರೆ ರಾಜಮೌಳಿ; ಸೆಟ್ಟೇರೋದು ಯಾವಾಗ?
Image
ರಾಜಮೌಳಿ ಜತೆ ಕೆಲಸ ಮಾಡಿದ್ದಕ್ಕೆ ರಾಮ್​ಚರಣ್ ಹೊಸ​ ಚಿತ್ರಕ್ಕೆ ಸೋಲು?; ಆತಂಕದಲ್ಲಿ ಜ್ಯೂ.ಎನ್​ಟಿಆರ್​ ಫ್ಯಾನ್ಸ್
Image
‘ಆರ್​ಆರ್​ಆರ್​’ ನಿರ್ದೇಶಕ ರಾಜಮೌಳಿ ಮನೆಗೆ ಬಂತು ಹೊಸ ಕಾರು; ಇದರ ಬೆಲೆ ಎಷ್ಟು?

ಸಿನಿಮಾ ಕ್ಷೇತ್ರದಲ್ಲಿ ಬರಹಗಾರರಾಗಿ ತೊಡಗಿಸಿಕೊಳ್ಳಬೇಕು ಎಂಬ ಆಸೆ ಅನೇಕರಿಗೆ ಇದೆ. ಅಂಥವರಿಗೆಲ್ಲ ವಿಜಯೇಂದ್ರ ಪ್ರಸಾದ್​ ಅವರು ಸ್ಫೂರ್ತಿ ಆಗಿದ್ದಾರೆ. ಅವರು ಕಥೆ ಬರೆದ ‘ಆರ್​ಆರ್​ಆರ್​’ ಸಿನಿಮಾ ಈ ವರ್ಷದ ಬ್ಲಾಕ್​ ಬಸ್ಟರ್​ ಚಿತ್ರಗಳಲ್ಲಿ ಒಂದಾಯಿತು. ಸಾವಿರಾರು ಕೋಟಿ ರೂಪಾಯಿ ಕಮಾಯಿ ಮಾಡಿತು. ಈಗ ಅದರ ಸೀಕ್ವೆಲ್​ಗಾಗಿ ಸಿದ್ಧತೆ ನಡೆಯುತ್ತಿದೆ.

‘ಆರ್​ಆರ್​ಆರ್​’ ಸಿನಿಮಾ ನೋಡಿ ವಿದೇಶದಲ್ಲಿನ ಪ್ರೇಕ್ಷಕರು ಕೂಡ ಮೆಚ್ಚಿಕೊಂಡಿದ್ದಾರೆ. ಈ ಚಿತ್ರಕ್ಕೆ ಎರಡನೇ ಪಾರ್ಟ್​ ಮೂಡಿಬರುತ್ತಿದೆ ಎಂಬುದನ್ನು ಇತ್ತೀಚೆಗೆ ಬಹಿರಂಗ ಪಡಿಸಲಾಗಿದೆ. ಅದಕ್ಕಾಗಿ ತಾವು ಕಥೆ ಬರೆಯುತ್ತಿರುವುದು ನಿಜ ಎಂದು ವಿಜಯೇಂದ್ರ ಪ್ರಸಾದ್​ ಖಚಿತ ಪಡಿಸಿದ್ದಾರೆ.

‘ಕಥೆ ಬರೆಯುವುದು ಎಂದರೆ ಶೂನ್ಯದಿಂದ ಏನನ್ನಾದರೂ ಸೃಷ್ಟಿಸುವುದು. ಒಂದು ಸುಳ್ಳನ್ನು ಸತ್ಯ ಎಂಬಂತೆ ಪ್ರಸ್ತುತ ಪಡಿಸಬೇಕು. ಉತ್ತಮವಾಗಿ ಸುಳ್ಳುಗಳನ್ನು ಹೇಳಬಲ್ಲಂತಹ ವ್ಯಕ್ತಿ ಉತ್ತಮ ಕಥೆಗಾರನಾಗಬಲ್ಲ’ ಎಂದು ವಿಜಯೇಂದ್ರ ಪ್ರಸಾದ್​ ಹೇಳಿದ್ದಾರೆ.

ಕಥೆಗಾರನಾಗಿ ವಿಜಯೇಂದ್ರ ಪ್ರಸಾದ್​ ಅವರಿಗೆ ಸಾಕಷ್ಟು ಬೇಡಿಕೆ ಇದೆ. ಭಾರತೀಯ ಚಿತ್ರರಂಗದಲ್ಲಿ ಅವರು ಸಖತ್​ ಬ್ಯುಸಿ ಕಥೆಗಾರನಾಗಿದ್ದಾರೆ. ಕಥೆ ಬರೆದಿದ್ದಕ್ಕಾಗಿ ಅವರು ಕೈ ತುಂಬ ಸಂಭಾವನೆ ಪಡೆಯುತ್ತಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್